ಮಂಗಳೂರು: ಬೀದಿ ನಾಯಿಗಳ ಆಶ್ರಯದಾತೆಯಾಗಿರುವ ಮಂಗಳೂರಿನ ರಜನಿ ಶೆಟ್ಟಿ (Rajani Shetty) ಮೇಲೆ ನೆರೆಮನೆಯವರಿಂದಲೇ ಹಲ್ಲೆ ನಡೆದಿದೆ. ಗಾಯಗೊಂಡಿರುವ ಅವರು ನಗರದ ವೆನ್ಲಾಕ್ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಪ್ರತಿ ನಿತ್ಯ ಅಸಂಖ್ಯಾತ ಬೀದಿ ನಾಯಿಗಳಿಗೆ (Dog) ಆಹಾರ ನೀಡುವ ರಜನಿ ಶೆಟ್ಟಿ ಹಾಗೂ ನೆರೆಮನೆಯ ಮಂಜುಳಾ ನಡುವೆ ನಾಯಿಗಳ ವಿಚಾರವಾಗಿಯೇ ಪದೇ ಪದೇ ಜಗಳವಾಗುತ್ತಿತ್ತು. ಸೋಮವಾರ ಮಂಜುಳಾ ರಜನಿ ಅವರ ಮೇಲೆ ಕಲ್ಲಿನಿಂದ ಹೊಡೆದು ಹಲ್ಲೆ ನಡೆಸಿದ್ದಾರೆ. ಇದನ್ನೂ ಓದಿ: ನಿಗದಿಗಿಂತ ಚುನಾವಣೆಯಲ್ಲಿ ಅಧಿಕ ವೆಚ್ಚ – ಇಬ್ಬರೂ ಬಿಜೆಪಿ ನಾಯಕರಿಗೆ ನೋಟಿಸ್
ಘಟನೆಯಿಂದ ರಜನಿ ಶೆಟ್ಟಿ ಅವರ ಕೈಗೆ ಗಾಯಗಳಾಗಿವೆ. ಈ ಹಿನ್ನೆಲೆ ಅವರು ನಗರದ ವೆನ್ಲಾಕ್ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಘಟನೆ ಬಗ್ಗೆ ರಜನಿ ಶೆಟ್ಟಿ ಮಂಜುಳಾ ವಿರುದ್ಧ ಬರ್ಕೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯ ಸರ್ಕಾರದಿಂದ ಸಿಂಡಿಕೇಟ್ ವರ್ಗಾವಣೆ ದಂಧೆ: ಕುಮಾರಸ್ವಾಮಿ ಬಾಂಬ್
Web Stories