Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Dakshina Kannada

ಗ್ರಾಮಗಳು ಅಭಿವೃದ್ಧಿಗೊಂಡಾಗ ದೇಶದ ಅಭಿವೃದ್ಧಿ ಸಾಧ್ಯ: ಸಿಂಧೂ ರೂಪೇಶ್

Public TV
Last updated: January 7, 2020 6:42 pm
Public TV
Share
2 Min Read
MNG 2 1
SHARE

– ಮಡಪ್ಪಾಡಿಯಲ್ಲಿ ಪತ್ರಕರ್ತರ ಗ್ರಾಮವಾಸ್ತವ್ಯ

ಮಂಗಳೂರು: ಕೆಳ ಹಂತಗಳಲ್ಲಿ ಬದಲಾವಣೆಗಳು ಆಗಬೇಕು. ಒಂದೊಂದು ಗ್ರಾಮಗಳು ಅಭಿವೃದ್ಧಿಗೊಂಡಾಗ ದೇಶದ ಅಭಿವೃದ್ಧಿ ಸಾಧ್ಯ ಎಂದು ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಹೇಳಿದ್ದಾರೆ.

ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ದ.ಕ ಜಿಲ್ಲಾ ಆಡಳಿತ, ಪೊಲೀಸ್ ಇಲಾಖೆ, ಜಿಲ್ಲಾ ಪಂಚಾಯತ್, ಸುಳ್ಯ ತಾಲೂಕು ಪಂಚಾಯತ್ ಹಾಗೂ ಮಡಪ್ಪಾಡಿ ಗ್ರಾಮ ಪಂಚಾಯತ್ ಸಹಭಾಗಿತ್ವದಲ್ಲಿ ನಡೆದ ಪತ್ರಕರ್ತರ ಗ್ರಾಮವಾಸ್ತವ್ಯ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಜನಸಾಮಾನ್ಯರು ಪತ್ರಕರ್ತರಲ್ಲಿ ಎಲ್ಲ ಸಮಸ್ಯೆಗಳನ್ನು ಹೇಳಿಕೊಳ್ಳುತ್ತಾರೆ. ಹೀಗಾಗಿ ಅವರ ಮೂಲಕ ಇಂಥ ಕಾರ್ಯಕ್ರಮಗಳು ನಡೆಯುತ್ತಿರುವುದು ಔಚಿತ್ಯಪೂರ್ಣ ಎಂದು ಅವರು ಅಭಿಪ್ರಾಯಪಟ್ಟರು. ಹಾಗೆಯೇ ಮಂಗಳೂರಿನಲ್ಲಿ ನಡೆದ ಗಲಭೆ, ಹಿಂಸಾಚಾರ ಘಟನೆಯ ಸಂದರ್ಭ ಮಾಧ್ಯಮಗಳು ಜವಾಬ್ದಾರಿ ಮಾಧ್ಯಮವಾಗಿ ಕೆಲಸ ಮಾಡಿದ್ದೀರಿ ಎಂದು ಅವರು ಪ್ರಶಂಸಿಸಿದರು.

ವೈದ್ಯಕೀಯ ಶಿಬಿರವನ್ನು ಸುಳ್ಯ ಶಾಸಕ ಎಸ್.ಅಂಗಾರ ಉದ್ಘಾಟಿಸಿದರು. ಕಳೆದ ವರ್ಷ ಕುತ್ಲೂರಿನಲ್ಲಿ ನಡೆದ ಗ್ರಾಮ ವಾಸ್ತವ್ಯದ ಮಾಹಿತಿ ಪತ್ರವನ್ನೂ ಅವರು ಬಿಡುಗಡೆಗೊಳಿಸಿದರು. ಮೂಲಭೂತ ಅಗತ್ಯಗಳಿಗೆ ಸಮರ್ಪಕವಾಗಿ ಯೋಜನೆಗಳನ್ನು ಮಾಡದಿರುವುದೇ ಕೆಲಸ ಪೂರ್ಣಗೊಳ್ಳದಿರಲು ಕಾರಣ. ಗ್ರಾಮಾಭಿವೃದ್ದಿಯ ಮೂಲಕ ದೇಶದ ಅಭಿವೃದ್ದಿ ಸಾಧ್ಯವಾಗಲಿ ಎಂದು ಆಶಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ವಹಿಸಿದ್ದರು. ಗ್ರಾಮ ವಾಸ್ತವ್ಯದಲ್ಲಿ ಬಂದ ಮನವಿಗಳನ್ನು ವಿಶೇಷ ಪ್ರಕರಣ ಎಂದು ಭಾವಿಸಿ ಕಾಲಮಿತಿಯಲ್ಲಿ ಪೂರ್ಣಗೊಳಿಸಲು ಅಧಿಕಾರಿಗಳು ಆಸಕ್ತಿ ವಹಿಸಬೇಕು ಎಂದು ಅವರು ಹೇಳಿದರು.

MNG 1 1

ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಸೆಲ್ವಮಣಿ, ತಾಲೂಕು ಪಂಚಾಯತ್ ಅಧ್ಯಕ್ಷ ಚನಿಯ ಕಲ್ತಡ್ಕ, ಮಡಪ್ಪಾಡಿ ಗ್ರಾ.ಪಂ. ಅಧ್ಯಕ್ಷೆ ಶಕುಂತಲಾ ಕೇವಳ, ಉಪಾಧ್ಯಕ್ಷ ಎಂಟಿ. ಹೊನ್ನಪ್ಪ, ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ವಿಕ್ರಂ ಅಮ್ಟೆ, ಸಹಾಯಕ ಕಮೀಷನರ್ ಡಾ.ಯತೀಶ್ ಉಳ್ಳಾಲ್,ಸುಳ್ಯ ತಹಶೀಲ್ದಾರ್ ಎನ್.ಎ.ಕುಂಞ ಮಹಮ್ಮದ್, ಜಿ. ಪಂ.ಸದಸ್ಯರಾದ ಆಶಾ ತಿಮ್ಮಪ್ಪ, ಪುಷ್ಪಾವತಿ ಬಾಳಿಲ, ಎಸ್.ಎನ್.ಮನ್ಮಥ, ತಾ.ಪಂ.ಉಪಾಧ್ಯಕ್ಷೆ ಶುಭದಾ ರೈ, ತಾ.ಪಂ.ಸದಸ್ಯ ಉದಯಕುಮಾರ್ ಕೊಪ್ಪಡ್ಕ, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಭವಾನಿಶಂಕರ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ರಾಮಕೃಷ್ಣ, ಎ.ಪಿ.ಎಂ.ಸಿ. ನಿರ್ದೇಶಕ ವಿನಯಕುಮಾರ್ ಮುಳುಗಾಡು, ಮಡಪ್ಪಾಡಿ ಸೊಸೈಟಿ ಅಧ್ಯಕ್ಷ ಪಿ.ಸಿ.ಜಯರಾಂ ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಮುರಳೀಧರ ಅಡ್ಡನಪಾರೆ, ಕಾರ್ಯದರ್ಶಿ ಗಿರೀಶ್ ಅಡ್ಪಂಗಾಯ ಮೊದಲಾದವರು ಉಪಸ್ಥಿತರಿದ್ದರು. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯಕಾರಿಣಿ ಸಮಿತಿ ಸದಸ್ಯ ಗಂಗಾಧರ ಕಲ್ಲಪಳ್ಳಿ ಸ್ವಾಗತಿಸಿದರು.

ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಆಶಯ ಭಾಷಣ ಮಾಡಿದರು. ಈ ಕಾರ್ಯಕ್ರಮದ ಮೂಲಕ ಮಡಪ್ಪಾಡಿಯಲ್ಲಿ ಅಂತರ್ಜಲ ಸಂರಕ್ಷಣೆ, ಪ್ಲಾಸ್ಟಿಕ್ ಮುಕ್ತ ಗ್ರಾಮವನ್ನಾಗಿ ಮಾಡುವ ಯೋಜನೆ ಇದೆ ಎಂದು ಅವರು ಹೇಳಿದರು.

ಜಿಲ್ಲಾ ಕಾರ್ಯಕಾರಣಿ ಸದಸ್ಯ ಲೋಕೇಶ್ ಪೆರ್ಲಂಪಾಡಿ ಕಾರ್ಯಕ್ರಮ ನಿರೂಪಿಸಿದರು. ಜಿಲ್ಲಾ ಪತ್ರಕರ್ತರ ಸಂಘದ ಸಂಘದ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ವಂದಿಸಿದರು. ಕಳೆದ ಬಾರಿ ಗ್ರಾಮವಾಸ್ತವ್ಯ ನಡೆದ ಕುತ್ಲೂರಿನ ಶಾಲಾ ಎಸ್.ಡಿ.ಎಂ.ಸಿ.ಅಧ್ಯಕ್ಷ ರಾಮಚಂದ್ರ ಭಟ್, ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಮನೋಹರ ಬಳಂಜ ಅವರನ್ನು ಗೌರವಿಸಲಾಯಿತು. ರಾಮಚಂದ್ರ ಭಟ್ ಅನುಭವ ವ್ಯಕ್ತಪಡಿಸಿದರು.

TAGGED:journalistMangaluruPublic TVಗ್ರಾಮವಾಸ್ತವ್ಯಪತ್ರಕರ್ತಪಬ್ಲಿಕ್ ಟಿವಿಮಂಗಳೂರು
Share This Article
Facebook Whatsapp Whatsapp Telegram

Cinema Updates

ram charan sukumar
ಹೊಸ ವರ್ಷಕ್ಕೆ ಪುಷ್ಪಾ ಡೈರೆಕ್ಟರ್ ಜೊತೆ ರಾಮ್‌ಚರಣ್ ಸಿನಿಮಾ..!?
Cinema Latest South cinema Top Stories
vijay deverakonda 4
ದಿಢೀರ್‌ ಆಸ್ಪತ್ರೆಗೆ ದಾಖಲಾದ ನಟ ವಿಜಯ್‌ ದೇವರಕೊಂಡ
Cinema Latest National South cinema Top Stories
vishnuvardhan karnataka ratna
ನಟ ವಿಷ್ಣುವರ್ಧನ್‌ಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನಕ್ಕೆ ಮನವಿ
Cinema Latest Main Post Sandalwood
Thalaivan Thalaivii 03
ತಲೈವಾನ್ ತಲೈವಿ ಟ್ರೈಲರ್‌ ರಿಲೀಸ್ – ವಿಜಯ್ ಸೇತುಪತಿ-ನಿತ್ಯಾ ಮಸ್ತ್ ಮಸ್ತ್..!
Cinema Latest South cinema
Vinod Prabhakar
ಬಲರಾಮನ ದಿನಗಳು – ಮತ್ತೊಂದು ಸಿನಿಮಾ ಶೂಟಿಂಗ್ ಮುಗಿಸಿದ ವಿನೋದ್‌ ಪ್ರಭಾಕರ್
Cinema Latest Sandalwood

You Might Also Like

03 5
Big Bulletin

ಬಿಗ್‌ ಬುಲೆಟಿನ್‌ 17 July 2025 ಭಾಗ-3

Public TV
By Public TV
42 minutes ago
02 5
Big Bulletin

ಬಿಗ್‌ ಬುಲೆಟಿನ್‌ 17 July 2025 ಭಾಗ-2

Public TV
By Public TV
42 minutes ago
01 8
Big Bulletin

ಬಿಗ್‌ ಬುಲೆಟಿನ್‌ 17 July 2025 ಭಾಗ-1

Public TV
By Public TV
43 minutes ago
Yadgir DYSP
Dakshina Kannada

ಡಿವೈಎಸ್‌ಪಿ ವಿಜಯಕ್ರಾಂತಿ ವರ್ಗಾವಣೆಯಲ್ಲಿ ಬದಲಾವಣೆ – ಮಂಗಳೂರು ದಕ್ಷಿಣಕ್ಕೆ ಟ್ರಾನ್ಸ್‌ಫರ್‌

Public TV
By Public TV
56 minutes ago
Robert Vadra
Crime

ಶಿಕೋಹ್‌ಪುರ ಭೂ ವ್ಯವಹಾರ ಕೇಸ್‌ – ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್ ವಾದ್ರಾ ವಿರುದ್ಧ ED ಚಾರ್ಜ್‌ಶೀಟ್

Public TV
By Public TV
1 hour ago
sunil kumar with his father
Latest

ಸಂಘದ ಶಾಖೆಗೆ ಕರೆದೊಯ್ದು ಸಂಸ್ಕಾರ ಕಲಿಸಿದ್ರು ನನ್ನಪ್ಪ: ಅಗಲಿದ ತಂದೆ ನೆನೆದು ಶಾಸಕ ಸುನಿಲ್‌ ಕುಮಾರ್‌ ಭಾವುಕ ಪತ್ರ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?