ಮಂಗಳೂರು: ಬಿಜೆಪಿ ಸರ್ಕಾರದ ಸಾಧನೆಗಳನ್ನು ತನ್ನ ಸಾಧನೆಯೆಂದು ಬಿಂಬಿಸಿ ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ, ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಜೆಆರ್ ಲೋಬೋ ಮತ್ತೆ ನಗೆಪಾಟಲಿಗೀಡಾಗಿದ್ದಾರೆ.
ಚುನಾವಣಾ ಹಿನ್ನೆಲೆಯಲ್ಲಿ ಸಾಧನೆಯ ಹಾದಿಯಲ್ಲಿ ಎಂಬ ಅಭಿವೃದ್ಧಿ ಯೋಜನೆಗಳ ಕುರಿತ ಪುಸ್ತಕವನ್ನು ಜೆಆರ್ ಲೋಬೋ ಬಿಡುಗಡೆ ಮಾಡಿದ್ದು, ಪುಸ್ತಕದಲ್ಲಿ ಬಿಜೆಪಿ ಸರ್ಕಾರದ ಕಾಲಾವಧಿಯಲ್ಲಿ ಆದಂತಹ ಯೋಜನೆಗಳನ್ನು ಸೇರಿಸಿಕೊಂಡಿದ್ದಾರೆ.
- Advertisement 2
- Advertisement 3
ಮಂಗಳೂರಿನ ಬಿಜೈ ಮಾರ್ಕೆಟ್ ನಿರ್ಮಾಣ, ಪಂಪ್ವಲ್ ಜಂಕ್ಷನ್ ಬಳಿ ಸೇತುವೆ ನಿರ್ಮಾಣ, ಗಣಪತಿ ಹೈ ಸ್ಕೂಲ್ ರಸ್ತೆ ಅಭಿವೃದ್ಧಿ, ಮಿನಿವಿಧಾನಸೌಧ ಕಟ್ಟಡ ರಚನೆ, ಲೋಕಾಯುಕ್ತ ಕಚೇರಿ ಉದ್ಘಾಟನೆ ಸೇರಿದಂತೆ ಬಿಜೆಪಿ ಸರ್ಕಾರದಲ್ಲಿ ಅನುಷ್ಠಾನಗೊಂಡ ಯೋಜನೆಗಳನ್ನು ಪುಸ್ತಕದಲ್ಲಿ ಅಳವಡಿಸಿದ್ದಾರೆ.
- Advertisement 4
ಈ ವಿಚಾರ ತಿಳಿಯುತ್ತಿದ್ದಂತೆ ಬಿಜೆಪಿ ಶಾಸಕ ಲೋಬೋ ವಿರುದ್ಧ ಟೀಕಾ ಪ್ರಹಾರವನ್ನೇ ನಡೆಸಿದ್ದು, ಚುನಾವಣೆಯಲ್ಲಿ ಸೋಲುವ ಭೀತಿಯಿಂದ ಜೆಆರ್ ಲೋಬೋ ಸುಳ್ಳಿನ ಮಾರ್ಗವನ್ನು ಹಿಡಿದಿದ್ದಾರೆ. ಈ ಮೂಲಕ ಜನರ ಮನಗೆಲ್ಲಲು ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದೆ.