ದಕ್ಷಿಣ ಕನ್ನಡದ ತೀರ್ಥ ಕ್ಷೇತ್ರಕ್ಕೆ ಸಾಧ್ವಿ ಪ್ರಜ್ಞಾ ಸಿಂಗ್ ಭೇಟಿ

Public TV
1 Min Read
mng Sadhvi Pragya

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ತೀರ್ಥ ಕ್ಷೇತ್ರಕ್ಕೆ ಮಧ್ಯಪ್ರದೇಶದ ಭೋಪಾಲ್‍ನ ಸಂಸದೆ ಸ್ವಾಧ್ವಿ ಪ್ರಜ್ಞಾ ಸಿಂಗ್ ಅವರು ಭೇಟಿ ನಿಡಿದ್ದಾರೆ.

ವಿರಾಟ್ ಹಿಂದೂ ಸಮಾಜೋತ್ಸವದಲ್ಲಿ ಪಾಲ್ಗೊಳ್ಳಲು ಸಾಧ್ವಿ ಪ್ರಜ್ಞಾ ಸಿಂಗ್ ಶನಿವಾರ ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಿದ್ದರು. ಹಿಂದೂ ಸಮಾಜೋತ್ಸವ ಮುಂದೂಡಿದ ಹಿನ್ನೆಲೆಯಲ್ಲಿ ಇಂದು ಜಿಲ್ಲೆಯ ಪುತ್ತೂರು ಲಕ್ಷ್ಮಿದೇವಿ ಬೆಟ್ಟದ ಮಹಾಲಕ್ಷ್ಮಿ ಕ್ಷೇತ್ರದಲ್ಲಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ್ದರು.

Sadhvi Pragya

ಕೊರೊನಾ ವೈರಸ್ ಹರಡದಂತೆ ರಾಜ್ಯ ಸರ್ಕಾರ ಸಾರ್ವಜನಿಕವಾಗಿ ಯಾವುದೇ ಸಭೆ, ಸಮಾರಂಭಗಳನ್ನು ನಡೆಸದಂತೆ ಆದೇಶ ನೀಡಿದೆ. ಈ ಹಿನ್ನೆಲೆಯಲ್ಲಿ ನಾಳೆ ವಿಶ್ವ ಹಿಂದೂ ಪರಿಷತ್ ಭಜರಂಗ ದಳದ ವತಿಯಿಂದ ದಕ್ಷಿಣ ಕನ್ನಡದ ವಿಟ್ಲದ ಪಂಚಲಿಂಗೇಶ್ವರ ದೇವರ ರಥದ ಗದ್ದೆಯಲ್ಲಿ ಇಂದು ನಡೆಯಬೇಕಿದ್ದ ವಿರಾಟ್ ಹಿಂದೂ ಸಮಾಜೋತ್ಸವ ಕಾರ್ಯಕ್ರಮವನ್ನು ಸಂಘಟಕರು ಮುಂದೂಡಿದ್ದರು. ಆದರೆ ನಿಗದಿಯಂತೆ ಶನಿವಾರವೇ ಮಂಗಳೂರಿಗೆ ಆಗಮಿಸಿರುವ ಸಾಧ್ವಿ ಪ್ರಜ್ಞಾಸಿಂಗ್ ಜಿಲ್ಲೆಯ ಹಲವು ದೇವಸ್ಥಾನಗಳಿವೆ ಹೋಗಿ ದೇವರ ದರ್ಶನ ಪಡೆಯುತ್ತಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *