ಬೆಂಗಳೂರು/ಮಂಗಳೂರು: ಕೆಫೆ ಕಾಫಿ ಡೇ ಸಂಸ್ಥಾಪಕ ವಿ.ಜಿ. ಸಿದ್ಧಾರ್ಥ್ ಸಾವಿನ ಕುರಿತು ಎಲ್ಲ ಆಯಾಮಗಳಿಂದ ತನಿಖೆ ನಡೆಸಲಾಗುತ್ತಿದೆ. ಮರಣೋತ್ತರ ಪರೀಕ್ಷೆಯ ವರದಿ ಇಂದು ಸಲ್ಲಿಕೆಯಾಗುವ ಸಾಧ್ಯತೆಗಳಿವೆ.
ಪೋಸ್ಟ್ ಮಾರ್ಟಂ ವರದಿ ಆಧರಿಸಿ ತನಿಖೆ ಮುಂದುವರಿಸಲಾಗುತ್ತಿದ್ದು, ಸಿದ್ಧಾರ್ಥ್ ಅವರ ಮೃತದೇಹದ ಕತ್ತು, ಮುಖದ ಭಾಗದಲ್ಲಿ ಗಾಯಗಳಾಗಿವೆಯಾ ಇಲ್ಲವೋ, ದೇಹದ ಮೇಲೆ ಯಾವುದೇ ಗಾಯದ ಗುರುತು ಇದೆಯಾ ಇಲ್ವಾ ಹಾಗೂ ಸಿದ್ದಾರ್ಥ್ ಧರಿಸಿದ್ದ ಟೀಶರ್ಟ್ ಏನಾಯ್ತು ಅಲ್ಲದೆ ಸಿದ್ದಾರ್ಥ್ ಸಾವು ಸಹಜವೋ? ಅಸಹಜವೋ? ಎಂಬ ಪ್ರಶ್ನೆಗಳಿಗೆ ಇಂದು ಉತ್ತರ ಸಿಗುವ ನಿರೀಕ್ಷೆಯಿದೆ.
- Advertisement 2
- Advertisement 3
ಸಿದ್ಧಾರ್ಥ್ ತಮ್ಮ ಕಂಪನಿಯ ಆಡಳಿತ ಮಂಡಳಿ ನಿರ್ದೇಶಕರಿಗೆ ಬರೆದಿರುವ ಪತ್ರದ ಖಚಿತತೆಯನ್ನು ದೃಢಪಡಿಸಿಕೊಳ್ಳುವ ನಿಟ್ಟಿನಲ್ಲಿ ತನಿಖೆ ನಡೆಯುತ್ತಿದೆ. ತನಿಖೆಗಾಗಿ ಬೆಂಗಳೂರಿಗೆ ತೆರಳಿರುವ ಒಂದು ತಂಡ, ಈಗಾಗಲೇ ಕೆಫೆ ಕಾಫಿ ಡೇ ಕಚೇರಿಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದೆ. ಸಂಸ್ಥೆಯ ಕೆಲವು ಅಧಿಕಾರಿಗಳು ವಿದೇಶಕ್ಕೆ ತೆರಳಿದ್ದು, ಅವರ ಹೇಳಿಕೆಗಳನ್ನು ಪಡೆದ ಬಳಿಕವೇ ಪತ್ರದ ಖಚಿತತೆಯ ಕುರಿತು ಸ್ಪಷ್ಟತೆ ಸಿಗುವ ಸಾಧ್ಯತೆಗಳಿವೆ.
- Advertisement 4
ನಗರ ಪೊಲೀಸರು, ಅಸಹಜ ಸಾವಿನ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಸಾಮಾನ್ಯವಾಗಿ ಅಸಹಜ ಸಾವಿನ ಪ್ರಕರಣಗಳನ್ನು ಇನ್ಸ್ ಪೆಕ್ಟರ್ ದರ್ಜೆಯ ಅಧಿಕಾರಿಗಳು ತನಿಖೆ ಮಾಡುತ್ತಿದ್ದು, ಈ ಪ್ರಕರಣದಲ್ಲಿ ಎಸಿಪಿ ದರ್ಜೆಯ ಅಧಿಕಾರಿಗೆ ತನಿಖೆಯ ಹೊಣೆ ವಹಿಸಲಾಗಿದೆ. ಮಂಗಳೂರು ದಕ್ಷಿಣ ಉಪವಿಭಾಗದ ಎಸಿಪಿ ಟಿ. ಕೋದಂಡರಾಮ್ ಅವರಿಗೆ ತನಿಖೆಯ ಜವಾಬ್ದಾರಿ ವಹಿಸಲಾಗಿದ್ದು, ವಿಶೇಷ ತಂಡಗಳು ಅವರಿಗೆ ವರದಿ ಸಲ್ಲಿಸಲಿವೆ.
https://www.youtube.com/watch?v=numNLY1ATRs