Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಸಿಡಿಯ ಸತ್ಯಾಸತ್ಯತೆ ಬಗ್ಗೆ ತಜ್ಞರಿಂದ ವರದಿ ತರಿಸಿಕೊಳ್ಳುವ ಧೈರ್ಯ ನಿಮಗಿದೆಯೇ? ಹೆಚ್‍ಡಿಕೆ ಸವಾಲ್

Public TV
Last updated: January 11, 2020 2:55 pm
Public TV
Share
3 Min Read
mng hdk
SHARE

ಬೆಂಗಳೂರು: ಮಂಗಳೂರು ಗೋಲಿಬಾರ್ ಗೆ ಸಂಬಂಧಿಸಿದಂತೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಶುಕ್ರವಾರ ಕೆಲ ವಿಡಿಯೋಗಳನ್ನು ಬಿಡುಗಡೆಗೊಳಿಸಿದ್ದರು. ಈ ಸಿಡಿಗೆ ಸಂಬಂಧಿಸಿದಂತೆ ಸಿಎಂ ಯಡಿಯೂರಪ್ಪ, ಅದೆಲ್ಲಾ ಕಟ್ ಆಂಡ್ ಪೇಸ್ಟ್ ವೀಡಿಯೋ ಎಂದಿದ್ದಾರೆ. ಸಿಎಂ ಹೇಳಿಕೆ ಉತ್ತರ ನೀಡಿರುವ ಮಾಜಿ ಸಿಎಂ, ಸಿ.ಡಿ.ಯ ಸತ್ಯಾಸತ್ಯತೆ ಬಗ್ಗೆ ತಜ್ಞರಿಂದ ವರದಿ ತರಿಸಿಕೊಳ್ಳುವ ಧೈರ್ಯ ನಿಮಗಿದೆಯೇ ಎಂದು ಪ್ರಶ್ನಿಸಿದ್ದಾರೆ.

ಇಂದು ಟ್ವಿಟ್ಟರ್ ನಲ್ಲಿ ಸಾಲು ಸಾಲು ಟ್ವೀಟ್ ಗಳ ಮೂಲಕ ಹೆಚ್.ಡಿ.ಕುಮಾರಸ್ವಾಮಿ, ಬಿಜೆಪಿ ನಾಯಕರನ್ನು ಪ್ರಶ್ನಿಸಿದ್ದಾರೆ.

“ಅದಕ್ಕೆಲ್ಲಾ ಅರ್ಥ ಇದ್ಯೇನ್ರೀ, ಅದೆಲ್ಲಾ ಕಟ್ ಆಂಡ್ ಪೇಸ್ಟ್ ವೀಡಿಯೋ” ಎಂದಿದ್ದಾರೆ ಸಿಎಂ. ಸಿ.ಡಿ. ಬಿಡುಗಡೆ ವೇಳೆಯೇ ಇಂತಹ ಬಾಲಿಶತನದ ಪ್ರತಿಕ್ರಿಯೆ ಬಿಟ್ಟು ಮತ್ತೇನು ಬಿಜೆಪಿ ನಾಯಕರಿಂದ ನಿರೀಕ್ಷಿಸಲು ಸಾಧ್ಯ? ಎಂದಿದ್ದೆ. ಅದನ್ನು ರುಜುವಾತುಪಡಿಸಿದಿರಿ. ಸಿ.ಡಿ.ಯ ಸತ್ಯಾಸತ್ಯತೆ ಬಗ್ಗೆ ತಜ್ಞರಿಂದ ವರದಿ ತರಿಸಿಕೊಳ್ಳುವ ಧೈರ್ಯ ನಿಮಗಿದೆಯೇ? ಅದಕ್ಕೂ ಮಿಗಿಲಾಗಿ ನಿಮ್ಮ ಆತ್ಮಸಾಕ್ಷಿಯನ್ನು ಪ್ರಶ್ನಿಸಿಕೊಳ್ಳಿ. ನಾನು ಬಿಡುಗಡೆ ಮಾಡಿರುವ ‘ಸಿಡಿ’ಯನ್ನು ನೀವು ಸೃಷ್ಟಿಸಿಕೊಂಡಂತೆ ‘ಕಟ್ ಅಂಡ್ ಪೇಸ್ಟ್’ ಬಿಜೆಪಿ ಸರ್ಕಾರ ಎಂದುಕೊಂಡಿರಾ?

ಸಮುದ್ರ ತೀರದ ಜಗತ್ತಿನ ಹಲವು ಪ್ರದೇಶಗಳು ವಾಣಿಜ್ಯ ನಗರಿಗಳಾಗಿವೆ. ಅಷ್ಟೇ ಏಕೆ, ಮುಂಬೈ, ಚೆನ್ನೈ, ಕೊಚ್ಚಿ ನಮ್ಮ ದೇಶದ ಉದಾಹರಣೆಗಳು. ಮಂಗಳೂರಿಗೂ ಅಂಥದ್ದೇ ಅವಕಾಶಗಳಿದ್ದವು, ಇದೆ. ದೇಶಕ್ಕೆ ದೊಡ್ಡ ಬ್ಯಾಂಕ್ಗಳನ್ನು ಕೊಟ್ಟದ್ದು ಇದೇ ಕರಾವಳಿ. ಆದರೆ ನಿಮ್ಮ ಚಿಲ್ಲರೆ ರಾಜಕಾರಣ ಮಂಗಳೂರಿನ ವಾಣಿಜ್ಯಿಕ ಬೆಳವಣಿಗೆಗೆ ಅಡ್ಡಗಾಲಾಗಿದೆ.
10/12

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) January 11, 2020

ಉಪ ಚುನಾವಣೆಯಲ್ಲಿ ಸೋತ ಹತಾಶೆಯಿಂದ ಸ್ಥಿಮಿತ ಕಳೆದುಕೊಂಡ ಕುಮಾರಸ್ವಾಮಿ ಮಂಗಳೂರು ಗಲಭೆ ವಿಡಿಯೊ ಬಿಡುಗಡೆ ಮಾಡಿದ್ದಾರೆ ಎಂದು ಡಿಸಿಎಂ ಲಕ್ಮಣ ಸವದಿ ಆರೋಪಿಸಿದ್ದಾರೆ. ಸರಿ. ಹಾಗಾದರೆ ಸವದಿ ಅದ್ಯಾವ ಸ್ಥಿಮಿತ ಕಳೆದುಕೊಂಡು ಸದನದಲ್ಲಿ ನೀಲಿ ಚಿತ್ರ ನೋಡಿದರು? ಈ ಬಾರಿ ಅವರು ಯಾವ ಚುನಾವಣೆ ಗೆದ್ದಿದ್ದಾರೆ? ಸ್ಥಿಮಿತ ಉಳಿದಿದೆಯೇ? ಪೊಲೀಸರು ಗಲಭೆ ಮಾಡುವುದಿಲ್ಲ, ನಿಯಂತ್ರಿಸುತ್ತಾರೆ. ಕುಮಾರಸ್ವಾಮಿ ಕಾಲದಲ್ಲೂ ಅದೇ ಪೋಲೀಸರೇ ಇದ್ದರು ಎಂದಿದ್ದಾರೆ ಗೃಹ ಸಚಿವ. ಬೊಮ್ಮಾಯಿ ಅವರೇ ಅದು ನನ್ನ ಕಾಲ. ಶಾಂತಿ-ಸುವ್ಯವಸ್ಥೆಗಷ್ಟೇ ಪೊಲೀಸರ ಸೇವೆ ಪಡೆಯುತ್ತಿದ್ದೆವು. ಇದು ನಿಮ್ಮ ಕಾಲ. ಗಲಭೆ, ಗುಂಡೇಟಿಗೆ ನೀವು ಪೊಲೀಸರನ್ನು ಬಳಸಿಕೊಳ್ಳುತ್ತಿದ್ದೀರಿ.

ಮೆಕ್ಕಾಕ್ಕೆ ಹೋದಾಗ ಮುಸಲ್ಮಾನರು ಸೈತಾನನಿಗೆ ಕಲ್ಲು ಹೊಡೆಯುತ್ತಾರೆ. ಪೊಲೀಸರ ಮೇಲೆ ಕಲ್ಲು ತೂರಲು ಅವರೇನು ಸೈತಾನರೇ ಎಂದು ಸೋದರಿ ಶೋಭಾ ಪ್ರಶ್ನೆ ಮಾಡಿದ್ದಾರೆ. ಹಾಗಾದರೆ ಪೊಲೀಸರು ಕಲ್ಲು ತೂರಾಟ ಮಾಡಿದರಲ್ಲ… ಹೋರಾಟಗಾರರೇನು ಸೈತಾನರೇ? ಉತ್ತರಿಸುವಿರಾ ಶೋಭಾ ಅವರೇ?
8/12

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) January 11, 2020

ನನ್ನ ಕಾಲದಲ್ಲೂ ಇದೇ ಪೊಲೀಸರಿದ್ದರು. ಹೌದು. ಆದರೆ ನನ್ನ ಕಾಲದಲ್ಲಿ ಗಲಭೆಗಳು ಯಾಕೆ ಆಗಲಿಲ್ಲ? ಗೋಲಿಬಾರ್ ಗಳು ಯಾಕೆ ಆಗಲಿಲ್ಲ? ಇದಕ್ಕೆ ನೀವು ಉತ್ತರಿಸುವಿರಾ? ಗಲಭೆಯ ಸಿಡಿ ಬಿಡುಗಡೆ ಮಾಡಿದ್ದಕ್ಕೆ ಸದಾನಂದಗೌಡ ವ್ಯಂಗ್ಯವಾಡಿದ್ದಾರೆ. ಸಿಡಿ ಹಲವರಿಗೆ ರಾಜಕೀಯ ಅಸ್ತಿತ್ವದ ಸ್ವತ್ತು ಎಂದಿದ್ದಾರೆ. ಬಿಜೆಪಿಯಲ್ಲಿ ಸದ್ದು ಮಾಡಿದ ಸಿಡಿಗಳ ಸಂಖ್ಯೆ ಒಂದೆರಡೇ? ಎಲ್ಲ ಸಿಡಿಗಳು ಬಯಲಾದರೆ ಬಿಜೆಪಿಗರು ಬೆತ್ತಲಾಗುತ್ತಾರಷ್ಟೇ. ಸಿಡಿಗಳು ಬಿಜೆಪಿಯ ಸ್ವತ್ತು. ಸಿಡಿ ಬಗ್ಗೆ ಮಾತಾಡುವಾಗ ಸದಾನಂದಗೌಡ ಎಚ್ಚರವಾಗಿರಲಿ.

ನನ್ನ ಕಾಲದಲ್ಲೂ ಇದೇ ಪೊಲೀಸರಿದ್ದರು. ಹೌದು. ಆದರೆ ನನ್ನ ಕಾಲದಲ್ಲಿ ಗಲಭೆಗಳು ಯಾಕೆ ಆಗಲಿಲ್ಲ? ಗೋಲಿಬಾರ್ಗಳು ಯಾಕೆ ಆಗಲಿಲ್ಲ? ಇದಕ್ಕೆ ನೀವು ಉತ್ತರಿಸುವಿರಾ?
5/12

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) January 11, 2020

ಮಂಗಳೂರು ಶಾಂತಿಯಿಂದಿದೆ, ಮರಳಿ ಗಲಭೆ ಎಬ್ಬಿಸಿ ಅಲ್ಲಿ ಅಸ್ತಿತ್ವವೇ ಇಲ್ಲದ ತಮ್ಮ ಪಕ್ಷಕ್ಕೆ ನೆಲೆ ಕಲ್ಪಿಸಲು ಕುಮಾರಸ್ವಾಮಿ ಪ್ರಯತ್ನಿಸುತ್ತಿದ್ದಾರೆ ಎಂದು ಸೋದರಿ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಮಂಗಳೂರಿನ ಭಿನ್ನ ಧ್ವನಿಗಳ ಕೊರಳು ಬಿಗಿ ಹಿಡಿದು, ಉಸಿರುಗಟ್ಟಿಸಿ, ಸದ್ದು ಬಾರದಂತೆ ಮಾಡಿರುವುದು ನಿಮ್ಮ ಪ್ರಕಾರ ‘ಶಾಂತಿ’ಯೇ? ಮೆಕ್ಕಾಕ್ಕೆ ಹೋದಾಗ ಮುಸಲ್ಮಾನರು ಸೈತಾನನಿಗೆ ಕಲ್ಲು ಹೊಡೆಯುತ್ತಾರೆ. ಪೊಲೀಸರ ಮೇಲೆ ಕಲ್ಲು ತೂರಲು ಅವರೇನು ಸೈತಾನರೇ ಎಂದು ಸೋದರಿ ಶೋಭಾ ಪ್ರಶ್ನೆ ಮಾಡಿದ್ದಾರೆ. ಹಾಗಾದರೆ ಪೊಲೀಸರು ಕಲ್ಲು ತೂರಾಟ ಮಾಡಿದರಲ್ಲ. ಹೋರಾಟಗಾರರೇನು ಸೈತಾನರೇ? ಉತ್ತರಿಸುವಿರಾ ಶೋಭಾ ಅವರೇ?

ಸಿ.ಡಿ.ಯ ಸತ್ಯಾಸತ್ಯತೆ ಬಗ್ಗೆ ತಜ್ಞರಿಂದ ವರದಿ ತರಿಸಿ ಕೊಳ್ಳುವ ಧೈರ್ಯ ನಿಮಗಿದೆಯೇ?
ಅದಕ್ಕೂ ಮಿಗಿಲಾಗಿ ನಿಮ್ಮ ಆತ್ಮಸಾಕ್ಷಿಯನ್ನು ಪ್ರಶ್ನಿಸಿಕೊಳ್ಳಿ. ನಾನು ಬಿಡುಗಡೆ ಮಾಡಿರುವ 'ಸಿಡಿ'ಯನ್ನು ನೀವು ಸೃಷ್ಟಿಸಿಕೊಂಡಂತೆ 'ಕಟ್ ಅಂಡ್ ಪೇಸ್ಟ್' ಬಿಜೆಪಿ ಸರ್ಕಾರ ಎಂದುಕೊಂಡಿರಾ?
2/12

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) January 11, 2020

ಮಂಗಳೂರಿನಲ್ಲಿ ನಾನು ರಾಜಕಾರಣ ಮಾಡಬೇಕಿಲ್ಲ. ಅಲ್ಲಿ ರಾಜಕಾರಣ ಮಾಡುತ್ತಿರುವುದು ನೀವು. ಅಲ್ಲಿ ಕೋಮು ಗಲಭೆ ಉಂಟು ಮಾಡುತ್ತಿರುವುದು ನೀವು. ವಾಣಿಜ್ಯ ನಗರಿಯಾಗಬೇಕಿದ್ದ ಮಂಗಳೂರು ಕೋಮು ರಾಜಕಾರಣದ ಕಣವಾಗಿದ್ದು ಬಿಜೆಪಿಯಿಂದ. ಸಮುದ್ರ ತೀರದ ಜಗತ್ತಿನ ಹಲವು ಪ್ರದೇಶಗಳು ವಾಣಿಜ್ಯ ನಗರಿಗಳಾಗಿವೆ. ಅಷ್ಟೇ ಏಕೆ, ಮುಂಬೈ, ಚೆನ್ನೈ, ಕೊಚ್ಚಿ ನಮ್ಮ ದೇಶದ ಉದಾಹರಣೆಗಳು. ಮಂಗಳೂರಿಗೂ ಅಂಥದ್ದೇ ಅವಕಾಶಗಳಿದ್ದವು, ಇದೆ. ದೇಶಕ್ಕೆ ದೊಡ್ಡ ಬ್ಯಾಂಕ್ ಗಳನ್ನು ಕೊಟ್ಟದ್ದು ಇದೇ ಕರಾವಳಿ. ಆದರೆ ನಿಮ್ಮ ಚಿಲ್ಲರೆ ರಾಜಕಾರಣ ಮಂಗಳೂರಿನ ವಾಣಿಜ್ಯಿಕ ಬೆಳವಣಿಗೆಗೆ ಅಡ್ಡಗಾಲಾಗಿದೆ.

"ಅದಕ್ಕೆಲ್ಲಾ ಅರ್ಥ ಇದ್ಯೇನ್ರೀ, ಅದೆಲ್ಲಾ ಕಟ್ ಆಂಡ್ ಪೇಸ್ಟ್ ವೀಡಿಯೋ" ಎಂದಿದ್ದಾರೆ ಸಿಎಂ.
ಸಿ.ಡಿ. ಬಿಡುಗಡೆ ವೇಳೆಯೇ ಇಂತಹ ಬಾಲಿಶತನದ ಪ್ರತಿಕ್ರಿಯೆ ಬಿಟ್ಟು ಮತ್ತೇನು ಬಿಜೆಪಿ ನಾಯಕರಿಂದ ನಿರೀಕ್ಷಿಸಲು ಸಾಧ್ಯ? ಎಂದಿದ್ದೆ. ಅದನ್ನು ರುಜುವಾತುಪಡಿಸಿದಿರಿ.
1/12

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) January 11, 2020

ಮಂಗಳೂರು ಶಾಂತವಾದರೆ ಅದು ವಾಣಿಜ್ಯಿಕವಾಗಿ ಬೆಳವಣಿಗೆಯಾಗುತ್ತದೆ. ದೇಶಕ್ಕೆ ಮಾದರಿಯಾಗುವ ತನ್ನ ಐತಿಹಾಸಿಕ ಗುಣವನ್ನು ಮುಂದುವರಿಸಿಕೊಂಡು ಹೋಗುತ್ತದೆ. ಶಾಂತಿ ಸ್ಥಾಪನೆಯಾಗಬೇಕಿದ್ದರೆ ಬಿಜೆಪಿ ತೆಪ್ಪಗಿರಬೇಕಷ್ಟೇ. ಮಂಗಳೂರಿನಲ್ಲಿ ನಾನು ರಾಜಕಾರಣ ಮಾಡಬಾರದು ಎನ್ನುತ್ತಾರೆ ಸೋದರಿ ಶೋಭಾ. ಆದರೆ, ರಾಜಕೀಯ ಪಕ್ಷವೊಂದರ ಶಾಸಕಾಂಗ ಪಕ್ಷದ ನಾಯಕನಾದ ನಾನು ಮಂಗಳೂರಲ್ಲಿ ಏಕೆ ರಾಜಕಾರಣ ಮಾಡಬಾರದು? ಹಾಗೇನಾದರೂ ನನಗೆ ನಿರ್ಬಂಧವಿದೆಯೇ? ಮಂಗಳೂರಲ್ಲಿ ನಾನೂ ರಾಜಕಾರಣ ಮಾಡುತ್ತೇನೆ. ಆದರೆ ಬಿಜೆಪಿಯಂತಲ್ಲ. ಸಾತ್ವಿಕವಾಗಿ.

TAGGED:bjphd kumaraswamyjdsMangaluru GolibarPublic TVvideoಜೆಡಿಎಸ್ಪಬ್ಲಿಕ್ ಟಿವಿಬಿಜೆಪಿಮಂಗಳೂರು ಗೋಲಿಬಾರ್ವಿಡಿಯೋಹೆಚ್ ಡಿ ಕುಮಾರಸ್ವಾಮಿ
Share This Article
Facebook Whatsapp Whatsapp Telegram

You Might Also Like

Chikkaballapura 6
Chikkaballapur

ಪೈಪ್‌ಲೈನ್‌ಗೆ ರಂಧ್ರ ಕೊರೆದು ಪೆಟ್ರೋಲ್ ಕಳ್ಳತನ ಮಾಡ್ತಿದ್ದ ಅಪ್ಪ-ಮಗ ಅಂದರ್

Public TV
By Public TV
25 minutes ago
big bulletin 26 June 2025 part 1
Big Bulletin

ಬಿಗ್‌ ಬುಲೆಟಿನ್‌ 26 June 2025 ಭಾಗ-1

Public TV
By Public TV
33 minutes ago
big bulletin 26 June 2025 part 2
Big Bulletin

ಬಿಗ್‌ ಬುಲೆಟಿನ್‌ 26 June 2025 ಭಾಗ-2

Public TV
By Public TV
35 minutes ago
China
Latest

ಚೀನಾದಲ್ಲಿ ಜಲಪ್ರಳಯಕ್ಕೆ 6 ಮಂದಿ ಬಲಿ

Public TV
By Public TV
39 minutes ago
big bulletin 26 June 2025 part 3
Big Bulletin

ಬಿಗ್‌ ಬುಲೆಟಿನ್‌ 26 June 2025 ಭಾಗ-3

Public TV
By Public TV
39 minutes ago
Koppala crime
Crime

3ನೇ ಪತ್ನಿಯ ಹತ್ಯೆಗೈದು ಗೋಣಿ ಚೀಲದಲ್ಲಿ ಪ್ಯಾಕ್ – ಲಗೇಜ್ ಎಂದು ಸರ್ಕಾರಿ ಬಸ್ಸಲ್ಲಿ ಕಳುಹಿಸಿದ್ದವ 24 ವರ್ಷಗಳ ಬಳಿಕ ಅರೆಸ್ಟ್

Public TV
By Public TV
42 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?