Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಸಿಡಿಯ ಸತ್ಯಾಸತ್ಯತೆ ಬಗ್ಗೆ ತಜ್ಞರಿಂದ ವರದಿ ತರಿಸಿಕೊಳ್ಳುವ ಧೈರ್ಯ ನಿಮಗಿದೆಯೇ? ಹೆಚ್‍ಡಿಕೆ ಸವಾಲ್

Public TV
Last updated: January 11, 2020 2:55 pm
Public TV
Share
3 Min Read
mng hdk
SHARE

ಬೆಂಗಳೂರು: ಮಂಗಳೂರು ಗೋಲಿಬಾರ್ ಗೆ ಸಂಬಂಧಿಸಿದಂತೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಶುಕ್ರವಾರ ಕೆಲ ವಿಡಿಯೋಗಳನ್ನು ಬಿಡುಗಡೆಗೊಳಿಸಿದ್ದರು. ಈ ಸಿಡಿಗೆ ಸಂಬಂಧಿಸಿದಂತೆ ಸಿಎಂ ಯಡಿಯೂರಪ್ಪ, ಅದೆಲ್ಲಾ ಕಟ್ ಆಂಡ್ ಪೇಸ್ಟ್ ವೀಡಿಯೋ ಎಂದಿದ್ದಾರೆ. ಸಿಎಂ ಹೇಳಿಕೆ ಉತ್ತರ ನೀಡಿರುವ ಮಾಜಿ ಸಿಎಂ, ಸಿ.ಡಿ.ಯ ಸತ್ಯಾಸತ್ಯತೆ ಬಗ್ಗೆ ತಜ್ಞರಿಂದ ವರದಿ ತರಿಸಿಕೊಳ್ಳುವ ಧೈರ್ಯ ನಿಮಗಿದೆಯೇ ಎಂದು ಪ್ರಶ್ನಿಸಿದ್ದಾರೆ.

ಇಂದು ಟ್ವಿಟ್ಟರ್ ನಲ್ಲಿ ಸಾಲು ಸಾಲು ಟ್ವೀಟ್ ಗಳ ಮೂಲಕ ಹೆಚ್.ಡಿ.ಕುಮಾರಸ್ವಾಮಿ, ಬಿಜೆಪಿ ನಾಯಕರನ್ನು ಪ್ರಶ್ನಿಸಿದ್ದಾರೆ.

“ಅದಕ್ಕೆಲ್ಲಾ ಅರ್ಥ ಇದ್ಯೇನ್ರೀ, ಅದೆಲ್ಲಾ ಕಟ್ ಆಂಡ್ ಪೇಸ್ಟ್ ವೀಡಿಯೋ” ಎಂದಿದ್ದಾರೆ ಸಿಎಂ. ಸಿ.ಡಿ. ಬಿಡುಗಡೆ ವೇಳೆಯೇ ಇಂತಹ ಬಾಲಿಶತನದ ಪ್ರತಿಕ್ರಿಯೆ ಬಿಟ್ಟು ಮತ್ತೇನು ಬಿಜೆಪಿ ನಾಯಕರಿಂದ ನಿರೀಕ್ಷಿಸಲು ಸಾಧ್ಯ? ಎಂದಿದ್ದೆ. ಅದನ್ನು ರುಜುವಾತುಪಡಿಸಿದಿರಿ. ಸಿ.ಡಿ.ಯ ಸತ್ಯಾಸತ್ಯತೆ ಬಗ್ಗೆ ತಜ್ಞರಿಂದ ವರದಿ ತರಿಸಿಕೊಳ್ಳುವ ಧೈರ್ಯ ನಿಮಗಿದೆಯೇ? ಅದಕ್ಕೂ ಮಿಗಿಲಾಗಿ ನಿಮ್ಮ ಆತ್ಮಸಾಕ್ಷಿಯನ್ನು ಪ್ರಶ್ನಿಸಿಕೊಳ್ಳಿ. ನಾನು ಬಿಡುಗಡೆ ಮಾಡಿರುವ ‘ಸಿಡಿ’ಯನ್ನು ನೀವು ಸೃಷ್ಟಿಸಿಕೊಂಡಂತೆ ‘ಕಟ್ ಅಂಡ್ ಪೇಸ್ಟ್’ ಬಿಜೆಪಿ ಸರ್ಕಾರ ಎಂದುಕೊಂಡಿರಾ?

ಸಮುದ್ರ ತೀರದ ಜಗತ್ತಿನ ಹಲವು ಪ್ರದೇಶಗಳು ವಾಣಿಜ್ಯ ನಗರಿಗಳಾಗಿವೆ. ಅಷ್ಟೇ ಏಕೆ, ಮುಂಬೈ, ಚೆನ್ನೈ, ಕೊಚ್ಚಿ ನಮ್ಮ ದೇಶದ ಉದಾಹರಣೆಗಳು. ಮಂಗಳೂರಿಗೂ ಅಂಥದ್ದೇ ಅವಕಾಶಗಳಿದ್ದವು, ಇದೆ. ದೇಶಕ್ಕೆ ದೊಡ್ಡ ಬ್ಯಾಂಕ್ಗಳನ್ನು ಕೊಟ್ಟದ್ದು ಇದೇ ಕರಾವಳಿ. ಆದರೆ ನಿಮ್ಮ ಚಿಲ್ಲರೆ ರಾಜಕಾರಣ ಮಂಗಳೂರಿನ ವಾಣಿಜ್ಯಿಕ ಬೆಳವಣಿಗೆಗೆ ಅಡ್ಡಗಾಲಾಗಿದೆ.
10/12

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) January 11, 2020

ಉಪ ಚುನಾವಣೆಯಲ್ಲಿ ಸೋತ ಹತಾಶೆಯಿಂದ ಸ್ಥಿಮಿತ ಕಳೆದುಕೊಂಡ ಕುಮಾರಸ್ವಾಮಿ ಮಂಗಳೂರು ಗಲಭೆ ವಿಡಿಯೊ ಬಿಡುಗಡೆ ಮಾಡಿದ್ದಾರೆ ಎಂದು ಡಿಸಿಎಂ ಲಕ್ಮಣ ಸವದಿ ಆರೋಪಿಸಿದ್ದಾರೆ. ಸರಿ. ಹಾಗಾದರೆ ಸವದಿ ಅದ್ಯಾವ ಸ್ಥಿಮಿತ ಕಳೆದುಕೊಂಡು ಸದನದಲ್ಲಿ ನೀಲಿ ಚಿತ್ರ ನೋಡಿದರು? ಈ ಬಾರಿ ಅವರು ಯಾವ ಚುನಾವಣೆ ಗೆದ್ದಿದ್ದಾರೆ? ಸ್ಥಿಮಿತ ಉಳಿದಿದೆಯೇ? ಪೊಲೀಸರು ಗಲಭೆ ಮಾಡುವುದಿಲ್ಲ, ನಿಯಂತ್ರಿಸುತ್ತಾರೆ. ಕುಮಾರಸ್ವಾಮಿ ಕಾಲದಲ್ಲೂ ಅದೇ ಪೋಲೀಸರೇ ಇದ್ದರು ಎಂದಿದ್ದಾರೆ ಗೃಹ ಸಚಿವ. ಬೊಮ್ಮಾಯಿ ಅವರೇ ಅದು ನನ್ನ ಕಾಲ. ಶಾಂತಿ-ಸುವ್ಯವಸ್ಥೆಗಷ್ಟೇ ಪೊಲೀಸರ ಸೇವೆ ಪಡೆಯುತ್ತಿದ್ದೆವು. ಇದು ನಿಮ್ಮ ಕಾಲ. ಗಲಭೆ, ಗುಂಡೇಟಿಗೆ ನೀವು ಪೊಲೀಸರನ್ನು ಬಳಸಿಕೊಳ್ಳುತ್ತಿದ್ದೀರಿ.

ಮೆಕ್ಕಾಕ್ಕೆ ಹೋದಾಗ ಮುಸಲ್ಮಾನರು ಸೈತಾನನಿಗೆ ಕಲ್ಲು ಹೊಡೆಯುತ್ತಾರೆ. ಪೊಲೀಸರ ಮೇಲೆ ಕಲ್ಲು ತೂರಲು ಅವರೇನು ಸೈತಾನರೇ ಎಂದು ಸೋದರಿ ಶೋಭಾ ಪ್ರಶ್ನೆ ಮಾಡಿದ್ದಾರೆ. ಹಾಗಾದರೆ ಪೊಲೀಸರು ಕಲ್ಲು ತೂರಾಟ ಮಾಡಿದರಲ್ಲ… ಹೋರಾಟಗಾರರೇನು ಸೈತಾನರೇ? ಉತ್ತರಿಸುವಿರಾ ಶೋಭಾ ಅವರೇ?
8/12

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) January 11, 2020

ನನ್ನ ಕಾಲದಲ್ಲೂ ಇದೇ ಪೊಲೀಸರಿದ್ದರು. ಹೌದು. ಆದರೆ ನನ್ನ ಕಾಲದಲ್ಲಿ ಗಲಭೆಗಳು ಯಾಕೆ ಆಗಲಿಲ್ಲ? ಗೋಲಿಬಾರ್ ಗಳು ಯಾಕೆ ಆಗಲಿಲ್ಲ? ಇದಕ್ಕೆ ನೀವು ಉತ್ತರಿಸುವಿರಾ? ಗಲಭೆಯ ಸಿಡಿ ಬಿಡುಗಡೆ ಮಾಡಿದ್ದಕ್ಕೆ ಸದಾನಂದಗೌಡ ವ್ಯಂಗ್ಯವಾಡಿದ್ದಾರೆ. ಸಿಡಿ ಹಲವರಿಗೆ ರಾಜಕೀಯ ಅಸ್ತಿತ್ವದ ಸ್ವತ್ತು ಎಂದಿದ್ದಾರೆ. ಬಿಜೆಪಿಯಲ್ಲಿ ಸದ್ದು ಮಾಡಿದ ಸಿಡಿಗಳ ಸಂಖ್ಯೆ ಒಂದೆರಡೇ? ಎಲ್ಲ ಸಿಡಿಗಳು ಬಯಲಾದರೆ ಬಿಜೆಪಿಗರು ಬೆತ್ತಲಾಗುತ್ತಾರಷ್ಟೇ. ಸಿಡಿಗಳು ಬಿಜೆಪಿಯ ಸ್ವತ್ತು. ಸಿಡಿ ಬಗ್ಗೆ ಮಾತಾಡುವಾಗ ಸದಾನಂದಗೌಡ ಎಚ್ಚರವಾಗಿರಲಿ.

ನನ್ನ ಕಾಲದಲ್ಲೂ ಇದೇ ಪೊಲೀಸರಿದ್ದರು. ಹೌದು. ಆದರೆ ನನ್ನ ಕಾಲದಲ್ಲಿ ಗಲಭೆಗಳು ಯಾಕೆ ಆಗಲಿಲ್ಲ? ಗೋಲಿಬಾರ್ಗಳು ಯಾಕೆ ಆಗಲಿಲ್ಲ? ಇದಕ್ಕೆ ನೀವು ಉತ್ತರಿಸುವಿರಾ?
5/12

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) January 11, 2020

ಮಂಗಳೂರು ಶಾಂತಿಯಿಂದಿದೆ, ಮರಳಿ ಗಲಭೆ ಎಬ್ಬಿಸಿ ಅಲ್ಲಿ ಅಸ್ತಿತ್ವವೇ ಇಲ್ಲದ ತಮ್ಮ ಪಕ್ಷಕ್ಕೆ ನೆಲೆ ಕಲ್ಪಿಸಲು ಕುಮಾರಸ್ವಾಮಿ ಪ್ರಯತ್ನಿಸುತ್ತಿದ್ದಾರೆ ಎಂದು ಸೋದರಿ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಮಂಗಳೂರಿನ ಭಿನ್ನ ಧ್ವನಿಗಳ ಕೊರಳು ಬಿಗಿ ಹಿಡಿದು, ಉಸಿರುಗಟ್ಟಿಸಿ, ಸದ್ದು ಬಾರದಂತೆ ಮಾಡಿರುವುದು ನಿಮ್ಮ ಪ್ರಕಾರ ‘ಶಾಂತಿ’ಯೇ? ಮೆಕ್ಕಾಕ್ಕೆ ಹೋದಾಗ ಮುಸಲ್ಮಾನರು ಸೈತಾನನಿಗೆ ಕಲ್ಲು ಹೊಡೆಯುತ್ತಾರೆ. ಪೊಲೀಸರ ಮೇಲೆ ಕಲ್ಲು ತೂರಲು ಅವರೇನು ಸೈತಾನರೇ ಎಂದು ಸೋದರಿ ಶೋಭಾ ಪ್ರಶ್ನೆ ಮಾಡಿದ್ದಾರೆ. ಹಾಗಾದರೆ ಪೊಲೀಸರು ಕಲ್ಲು ತೂರಾಟ ಮಾಡಿದರಲ್ಲ. ಹೋರಾಟಗಾರರೇನು ಸೈತಾನರೇ? ಉತ್ತರಿಸುವಿರಾ ಶೋಭಾ ಅವರೇ?

ಸಿ.ಡಿ.ಯ ಸತ್ಯಾಸತ್ಯತೆ ಬಗ್ಗೆ ತಜ್ಞರಿಂದ ವರದಿ ತರಿಸಿ ಕೊಳ್ಳುವ ಧೈರ್ಯ ನಿಮಗಿದೆಯೇ?
ಅದಕ್ಕೂ ಮಿಗಿಲಾಗಿ ನಿಮ್ಮ ಆತ್ಮಸಾಕ್ಷಿಯನ್ನು ಪ್ರಶ್ನಿಸಿಕೊಳ್ಳಿ. ನಾನು ಬಿಡುಗಡೆ ಮಾಡಿರುವ 'ಸಿಡಿ'ಯನ್ನು ನೀವು ಸೃಷ್ಟಿಸಿಕೊಂಡಂತೆ 'ಕಟ್ ಅಂಡ್ ಪೇಸ್ಟ್' ಬಿಜೆಪಿ ಸರ್ಕಾರ ಎಂದುಕೊಂಡಿರಾ?
2/12

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) January 11, 2020

ಮಂಗಳೂರಿನಲ್ಲಿ ನಾನು ರಾಜಕಾರಣ ಮಾಡಬೇಕಿಲ್ಲ. ಅಲ್ಲಿ ರಾಜಕಾರಣ ಮಾಡುತ್ತಿರುವುದು ನೀವು. ಅಲ್ಲಿ ಕೋಮು ಗಲಭೆ ಉಂಟು ಮಾಡುತ್ತಿರುವುದು ನೀವು. ವಾಣಿಜ್ಯ ನಗರಿಯಾಗಬೇಕಿದ್ದ ಮಂಗಳೂರು ಕೋಮು ರಾಜಕಾರಣದ ಕಣವಾಗಿದ್ದು ಬಿಜೆಪಿಯಿಂದ. ಸಮುದ್ರ ತೀರದ ಜಗತ್ತಿನ ಹಲವು ಪ್ರದೇಶಗಳು ವಾಣಿಜ್ಯ ನಗರಿಗಳಾಗಿವೆ. ಅಷ್ಟೇ ಏಕೆ, ಮುಂಬೈ, ಚೆನ್ನೈ, ಕೊಚ್ಚಿ ನಮ್ಮ ದೇಶದ ಉದಾಹರಣೆಗಳು. ಮಂಗಳೂರಿಗೂ ಅಂಥದ್ದೇ ಅವಕಾಶಗಳಿದ್ದವು, ಇದೆ. ದೇಶಕ್ಕೆ ದೊಡ್ಡ ಬ್ಯಾಂಕ್ ಗಳನ್ನು ಕೊಟ್ಟದ್ದು ಇದೇ ಕರಾವಳಿ. ಆದರೆ ನಿಮ್ಮ ಚಿಲ್ಲರೆ ರಾಜಕಾರಣ ಮಂಗಳೂರಿನ ವಾಣಿಜ್ಯಿಕ ಬೆಳವಣಿಗೆಗೆ ಅಡ್ಡಗಾಲಾಗಿದೆ.

"ಅದಕ್ಕೆಲ್ಲಾ ಅರ್ಥ ಇದ್ಯೇನ್ರೀ, ಅದೆಲ್ಲಾ ಕಟ್ ಆಂಡ್ ಪೇಸ್ಟ್ ವೀಡಿಯೋ" ಎಂದಿದ್ದಾರೆ ಸಿಎಂ.
ಸಿ.ಡಿ. ಬಿಡುಗಡೆ ವೇಳೆಯೇ ಇಂತಹ ಬಾಲಿಶತನದ ಪ್ರತಿಕ್ರಿಯೆ ಬಿಟ್ಟು ಮತ್ತೇನು ಬಿಜೆಪಿ ನಾಯಕರಿಂದ ನಿರೀಕ್ಷಿಸಲು ಸಾಧ್ಯ? ಎಂದಿದ್ದೆ. ಅದನ್ನು ರುಜುವಾತುಪಡಿಸಿದಿರಿ.
1/12

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) January 11, 2020

ಮಂಗಳೂರು ಶಾಂತವಾದರೆ ಅದು ವಾಣಿಜ್ಯಿಕವಾಗಿ ಬೆಳವಣಿಗೆಯಾಗುತ್ತದೆ. ದೇಶಕ್ಕೆ ಮಾದರಿಯಾಗುವ ತನ್ನ ಐತಿಹಾಸಿಕ ಗುಣವನ್ನು ಮುಂದುವರಿಸಿಕೊಂಡು ಹೋಗುತ್ತದೆ. ಶಾಂತಿ ಸ್ಥಾಪನೆಯಾಗಬೇಕಿದ್ದರೆ ಬಿಜೆಪಿ ತೆಪ್ಪಗಿರಬೇಕಷ್ಟೇ. ಮಂಗಳೂರಿನಲ್ಲಿ ನಾನು ರಾಜಕಾರಣ ಮಾಡಬಾರದು ಎನ್ನುತ್ತಾರೆ ಸೋದರಿ ಶೋಭಾ. ಆದರೆ, ರಾಜಕೀಯ ಪಕ್ಷವೊಂದರ ಶಾಸಕಾಂಗ ಪಕ್ಷದ ನಾಯಕನಾದ ನಾನು ಮಂಗಳೂರಲ್ಲಿ ಏಕೆ ರಾಜಕಾರಣ ಮಾಡಬಾರದು? ಹಾಗೇನಾದರೂ ನನಗೆ ನಿರ್ಬಂಧವಿದೆಯೇ? ಮಂಗಳೂರಲ್ಲಿ ನಾನೂ ರಾಜಕಾರಣ ಮಾಡುತ್ತೇನೆ. ಆದರೆ ಬಿಜೆಪಿಯಂತಲ್ಲ. ಸಾತ್ವಿಕವಾಗಿ.

TAGGED:bjphd kumaraswamyjdsMangaluru GolibarPublic TVvideoಜೆಡಿಎಸ್ಪಬ್ಲಿಕ್ ಟಿವಿಬಿಜೆಪಿಮಂಗಳೂರು ಗೋಲಿಬಾರ್ವಿಡಿಯೋಹೆಚ್ ಡಿ ಕುಮಾರಸ್ವಾಮಿ
Share This Article
Facebook Whatsapp Whatsapp Telegram
1 Comment

Leave a Reply

Your email address will not be published. Required fields are marked *

Cinema News

Actress Sumalatha condoles the death of Malayalam Actor Shanawas
`ಕ್ಯಾರಮ್, ಬ್ಯಾಡ್ಮಿಂಟನ್ ಆಡುವಾಗ ಸೆಕೆಂಡ್‍ನಲ್ಲಿ ಸೋಲಿಸುತ್ತಿದ್ದರು’- ಸುಮಲತಾ ನೆನಪು ಹಂಚಿಕೊಂಡಿದ್ದು ಯಾರ ಬಗ್ಗೆ?
Cinema Latest South cinema Top Stories
janaki vs state of kerala
ಜಾನಕಿ V v/s ಸ್ಟೇಟ್ ಆಫ್ ಕೇರಳ ಚಿತ್ರ ಸ್ಟ್ರೀಮಿಂಗ್: ಸ್ವಾತಂತ್ರ್ಯ ದಿನಕ್ಕೆ ಗಿಫ್ಟ್
Cinema Latest South cinema Top Stories
Santhosh balaraj 1
ಸ್ಯಾಂಡಲ್‌ವುಡ್‌ನ ಯುವ ನಟ ಸಂತೋಷ್ ಬಾಲರಾಜ್ ನಿಧನ
Cinema Latest Sandalwood Top Stories
Ramya Prajwal Devaraj
ರಮ್ಯಾಗೆ ಅಶ್ಲೀಲ ಮೆಸೇಜ್ ಕೇಸ್: ಪ್ರಜ್ವಲ್ ಕಿಡಿ
Cinema Latest Sandalwood Top Stories
Ramya Case 2 arrested by ccb police
ನಟಿ ರಮ್ಯಾಗೆ ಅಶ್ಲೀಲ ಕಾಮೆಂಟ್ – ಸಿಸಿಬಿ ಪೊಲೀಸರಿಂದ ಇನ್ನಿಬ್ಬರು ಅರೆಸ್ಟ್
Cinema Latest Sandalwood Top Stories

You Might Also Like

Amit shah
Latest

ಎಲ್.ಕೆ ಅಡ್ವಾಣಿ ಹಿಂದಿಕ್ಕಿ ದೀರ್ಘಾವಧಿಯ ಗೃಹ ಸಚಿವರಾಗಿ ಸೇವೆ ಸಲ್ಲಿಸಿದ ಅಮಿತ್ ಶಾ

Public TV
By Public TV
13 minutes ago
SATYAPAL MALIK
Latest

ಜಮ್ಮು-ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ನಿಧನ

Public TV
By Public TV
15 minutes ago
Trump 1
Latest

ಟ್ರಂಪ್ ಸುಂಕ ಬೆದರಿಕೆ ನಡ್ವೆ ಅಮೆರಿಕಕ್ಕೆ ತಿವಿದ ಇಂಡಿಯನ್ ಆರ್ಮಿ – ಪಾಕ್‌ಗೆ ಶಸ್ತ್ರಾಸ್ತ್ರ ಪೂರೈಕೆ ಬಗ್ಗೆ 1971ರ ಪೇಪರ್ ಕಟಿಂಗ್‌ ಪೋಸ್ಟ್

Public TV
By Public TV
30 minutes ago
HD Revanna
Chikkamagaluru

ಜೈಲಲ್ಲಿರೋ ಪ್ರಜ್ವಲ್ ಹುಟ್ಟುಹಬ್ಬ – ಶೃಂಗೇರಿ ಶಾರದಾಂಬೆಗೆ ವಿಶೇಷ ಪೂಜೆ ಸಲ್ಲಿಸಿದ ರೇವಣ್ಣ

Public TV
By Public TV
1 hour ago
America
Latest

ವೀಸಾ ಅವಧಿ ಮೀರಿ ವಾಸ್ತವ್ಯ; ಭಾರತ ಸೇರಿ ವಿದೇಶಿ ಪ್ರಜೆಗಳಿಗೆ ಅಮೆರಿಕ ಗಡೀಪಾರು ಎಚ್ಚರಿಕೆ

Public TV
By Public TV
2 hours ago
Raichur 1
Districts

ಸಾರಿಗೆ ಮುಷ್ಕರದಿಂದ ಹೈರಾಣಾದ ಜನ – ರಾಯಚೂರಿನಲ್ಲಿ ಆಂಧ್ರ, ತೆಲಂಗಾಣದ ಬಸ್‌ ಬಳಕೆ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?