ಬೆಂಗಳೂರು: ಬೆಲೆ ಕುಸಿತದಿಂದ ಕಂಗೆಟ್ಟಿರುವ ರಾಜ್ಯದ ಮಾವು ಬೆಳೆಗಾರರ (Mango Crop) ನೆರವಿಗೆ ಧಾವಿಸಿರುವ ಸರ್ಕಾರ ಈ ಹಿಂದಿನ ಆದೇಶವನ್ನು ಮಾರ್ಪಾಡು ಮಾಡಿ ಬೆಂಬಲ ಬೆಲೆಯೊಂದಿಗೆ ಪ್ರತಿ ಎಕರೆಗೆ 40 ಕ್ವಿಂಟಾಲ್ನಂತೆ ಗರಿಷ್ಠ 5 ಎಕರೆಗೆ 200 ಕ್ವಿಂಟಾಲ್ವರೆಗೆ ಮಿತಿಗೊಳಿಸಿ ಖರೀದಿಸಲು ಆದೇಶ ಹೊರಡಿಸಿದೆ.
ಈ ಆದೇಶವು ಸದರಿ ಯೋಜನೆಯಡಿ ಈಗಾಗಲೇ ನೋಂದಾಯಿಸಿರುವ ರೈತರಿಗೂ (Farmers) ಸಹ ಅನ್ವಯವಾಗಲಿದೆ. ಪ್ರತಿ ಕೆ.ಜಿ.ಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ತಲಾ 2 ರೂಪಾಯಿಗಳಂತೆ ಒಟ್ಟು 4 ರೂಪಾಯಿ ಬೆಂಬಲ ಬೆಲೆಯೊಂದಿಗೆ ಮಾವು ಖರೀದಿಗೆ 2025ರ ಜೂನ್ 25ರಂದು ಆದೇಶ ಹೊರಡಿಸಲಾಗಿತ್ತು. ಇದನ್ನೂ ಓದಿ: ಅಡಿಕೆ ಶೆಡ್ ನಿರ್ಮಾಣ ಮಾಡ್ತಿದ್ದ ಕಾರ್ಮಿಕರಿಗೆ ವಿದ್ಯುತ್ ಶಾಕ್ – ಮೂವರು ದುರ್ಮರಣ
ಈ ಆದೇಶದನ್ವಯ ಪ್ರತಿ ಎಕರೆಗೆ 20 ಕ್ವಿಂಟಾಲ್ನಂತೆ ಗರಿಷ್ಟ 5 ಎಕರೆಗೆ 100 ಕ್ವಿಂಟಾಲ್ವರೆಗೆ ಮಿತಿಗೊಳಿಸಲಾಗಿತ್ತು. ಇದೀಗ ಮಾರ್ಪಾಡು ಆದೇಶದಲ್ಲಿ ಈ ಮಿತಿಯನ್ನು 200 ಕ್ವಿಂಟಾಲ್ಗೆ ವಿಸ್ತರಿಸಲಾಗಿದೆ. ಇದನ್ನೂ ಓದಿ: ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳಿಂದ ಹೆಚ್ಚಾದ ತಲಾದಾಯ – ಶರಣ್ ಪ್ರಕಾಶ್ ಪಾಟೀಲ್
ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿರವರು ಖರೀದಿ ಮಿತಿ ವಿಸ್ತರಣೆ ಕುರಿತಂತೆ ಪತ್ರ ಬರೆದು ಕೇಂದ್ರಕ್ಕೂ ಮನವಿ ಮಾಡಿದ್ದು, ಖರೀದಿ ಕೇಂದ್ರಗಳಲ್ಲಿ ಅಗತ್ಯ ಕ್ರಮಕ್ಕೆ ನಿರ್ದೇಶನ ನೀಡಿದ್ದಾರೆ. ಇದನ್ನೂ ಓದಿ: ಸಣ್ಣ ವರ್ತಕರಿಗೆ ರಿಲೀಫ್ | 3 ವರ್ಷದ ಬಾಕಿ ತೆರಿಗೆ ವಸೂಲಿ ಮಾಡಲ್ಲ: ಸಿದ್ದರಾಮಯ್ಯ ಘೋಷಣೆ