ಅಗರ್ತಲಾ: ಬಿಜೆಪಿ ತ್ರಿಪುರ ರಾಜ್ಯ ಘಟಕದ ಮುಖ್ಯಸ್ಥ ಹಾಗೂ ರಾಜ್ಯಸಭಾ ಸಂಸದ ಮಾಣಿಕ್ ಸಹಾ ಅವರು ತ್ರಿಪುರದ ನೂತನ ಮುಖ್ಯಮಂತ್ರಿ ಎಂದು ಘೋಷಿಸಲಾಗಿದೆ.
ಬಿಪ್ಲಬ್ ಕುಮಾರ್ ದೇವ್ ಅವರು ತ್ರಿಪುರ ಸಿಎಂ ಸ್ಥಾನಕ್ಕೆ ಶನಿವಾರ ಮಧ್ಯಾಹ್ನ ರಾಜೀನಾಮೆ ನೀಡಿದ್ದರು. ಇದರ ಬೆನ್ನಲ್ಲೇ ಮಾಣಿಕ್ ಸಹಾ ಅವರು ನೂತನ ಸಿಎಂ ಆಗಿದ್ದಾರೆ. ಇದನ್ನೂ ಓದಿ: ತ್ರಿಪುರಾ ಮುಖ್ಯಮಂತ್ರಿ ಬಿಪ್ಲಬ್ ಕುಮಾರ್ ದೇವ್ ರಾಜೀನಾಮೆ
ಬಿಪ್ಲಬ್ ಕುಮಾರ್ ದೇವ್ ಅವರು ಬಿಜೆಪಿಯ ತ್ರಿಪುರ ಘಟಕದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳುವ ಸಾಧ್ಯತೆಯಿದೆ.
ತ್ರಿಪುರಾದಲ್ಲಿ ನವೆಂಬರ್ 2021 ರಲ್ಲಿ ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿಯ ದಾಖಲೆ ಗೆಲುವಿನ ಕೊಡುಗೆ ಮಾಣಿಕ್ ಸಹಾ ಅವರಿಗೆ ಸಲ್ಲುತ್ತದೆ. ಇದನ್ನೂ ಓದಿ: ಚಲಿಸುತ್ತಿರುವ ರೈಲಿನಿಂದ ಬಿದ್ದ ವೃದ್ಧೆಯನ್ನು ರಕ್ಷಿಸಿದ ರೈಲ್ವೆ ಪೊಲೀಸ್