Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಉಢಾಳರಾದರೂ ಉರುಳಾಡಿಸಿ ನಗಿಸುತ್ತಾರೆ ಭರತ ಬಾಹುಬಲಿ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಉಢಾಳರಾದರೂ ಉರುಳಾಡಿಸಿ ನಗಿಸುತ್ತಾರೆ ಭರತ ಬಾಹುಬಲಿ!

Cinema

ಉಢಾಳರಾದರೂ ಉರುಳಾಡಿಸಿ ನಗಿಸುತ್ತಾರೆ ಭರತ ಬಾಹುಬಲಿ!

Public TV
Last updated: January 17, 2020 8:08 pm
Public TV
Share
2 Min Read
Bharata Bahubali a
SHARE

ಮಂಜು ಮಾಂಡವ್ಯ, ಚಿಕ್ಕಣ್ಣ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ ಶ್ರೀ ಭರತ ಬಾಹುಬಲಿ ಟೀಸರ್, ಟ್ರೇಲರ್ ಮತ್ತು ಹಾಡುಗಳ ಮೂಲಕ ಗಣನೀಯ ಪ್ರಮಾಣದಲ್ಲಿ ನಿರೀಕ್ಷೆ ಮೂಡಿಸಿತ್ತು. ಯಾವ ಸ್ಟಾರ್ ಡಮ್ ಕೂಡಾ ಇಲ್ಲದ ಈ ಸಿನಿಮಾ ಸುದ್ದಿಯಾಗಿದ್ದದ್ದೇ ಕ್ರಿಯೇಟಿವ್ ಅಂಶಗಳಿಂದ. ಭರತ ಬಾಹುಬಲಿಯದ್ದೊಂದು ವಿಶೇಷವಾದ ಕಥನ ಎಂಬ ನಂಬಿಕೆ ಬಿಡುಗಡೆಯ ಹೊತ್ತಿಗೆಲ್ಲ ಪ್ರೇಕ್ಷಕರ ಮನದಲ್ಲಿ ಪ್ರತಿಷ್ಠಾಪಿತಗೊಂಡು ಬಿಟ್ಟಿತ್ತು. ಆ ಎಲ್ಲ ನಿರೀಕ್ಷೆ, ಕಾತರಗಳನ್ನು ನಿಜವಾಗಿಸುವಂತೆ ಭರಪೂರ ಮನರಂಜನೆಯೊಂದಿಗೆ ಈ ಚಿತ್ರವೀಗ ತೆರೆಗಂಡಿದೆ. ಭರತ ಬಾಹುಬಲಿಯ ಕಾಮಿಡಿ ಝಲಕ್ಕಿನಿಂದಾಗಿ ಪ್ರೇಕ್ಷಕರೆಲ್ಲ ನಗುವಿನಲೆಯಲ್ಲಿ ಮಿಂದೆದ್ದು ಒಂದೊಳ್ಳೆ ಮನರಂಜನಾತ್ಮಕ ಸಿನಿಮಾ ನೀಡಿದ ತೃಪ್ತ ಭಾವದಿಂದ ಖುಷಿಗೊಂಡಿದ್ದಾರೆ.

Sri Bharatha Baahubali 13

ಈ ಹಿಂದೆ ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಮಾಸ್ಟರ್ ಪೀಸ್’ ಸಿನಿಮಾ ನಿರ್ದೇಶಕನಾಗಿ ತಮ್ಮ ಪ್ರತಿಭೆ ತೋರಿದ್ದ ಮಂಜು ಮಾಂಡವ್ಯ ಈ ಚಿತ್ರದ ಮೂಲಕ ನಾಯಕನಾಗಲೂ ಸೈ ಅನ್ನೋದನ್ನು ಪ್ರೂವ್ ಮಾಡಿದ್ದಾರೆ. ಚಿಕ್ಕಣ್ಣ, ಮಂಜು ಮಾಂಡವ್ಯ ಜುಗಲ್ ಬಂದಿ ತೆರೆ ಮೇಲೆ ಜಾದು ಸೃಷ್ಟಿಸಿದೆ. ಹೊಸ ರೀತಿಯ ಸ್ಕ್ರೀನ್ ಫ್ಲೇ, ಯಾವ ಹಂತದಲ್ಲಿಯೂ ಸಡಿಲಗೊಳ್ಳದ ಕಥೆ, ಪ್ರತಿ ಹಂತದಲ್ಲಿಯೂ ನಗುವಿನ ಸಿಂಚನ ಮಾಡುತ್ತಲೇ ಸಾಗುವ ಎಫೆಕ್ಟೀವ್ ಸಂಭಾಷಣೆಗಳೊಂದಿಗೆ ಈ ಚಿತ್ರ ಪ್ರೇಕ್ಷಕರನ್ನು ಹಿಡಿದಿಡುವಲ್ಲಿ ಯಶಸ್ವಿಯಾಗಿದೆ. ನಿಖರವಾಗಿ ಹೇಳಬೇಕೆಂದರೆ ಈ ಭರತ ಬಾಹುಬಲಿ ಉಢಾಳರಾದರೂ ಉರುಳಾಡಿ ನಗುವಂತೆ ಮಾಡುತ್ತಾರೆ.

Sri Bharatha Baahubali

ಮಂಜು ಮಾಂಡವ್ಯ ಮತ್ತು ಚಿಕ್ಕಣ್ಣ ಭರತ, ಬಾಹುಬಲಿ ಪಾತ್ರದಲ್ಲಿ ಮಿಂಚಿದ್ದಾರೆ. ಅವೆರಡೂ ಹಳ್ಳಿ ಕಂಪು ಹೊದ್ದುಕೊಂಡಿರುವಂಥಾ ಪಾತ್ರಗಳು. ಅದಕ್ಕೆ ಜೀವ ತುಂಬಿರೋ ರೀತಿಯೇ ಇಡೀ ಕಥೆಯ ನಿಜವಾದ ಜೀವಾಳ. ಪುಂಡ ಪೋಲಿಗಳಾಗಿ ತಲೆಹರಟೆ ಮಾಡಿಕೊಂಡು ಊರ ತುಂಬಾ ಅಂಡಲೆಯೋದೇ ಭರತ ಬಾಹುಬಲಿಯ ಫುಲ್ ಟೈಂ ಡ್ಯೂಟಿ. ಈ ನಡುವೆ ಹುಡುಗಾಟದಲ್ಲಿ ಮಾಡಿದ ಕೆಲಸವೇ ಅವರಿಬ್ಬರನ್ನು ಕಾನೂನಿನ ಸರಪಳಿಯಲ್ಲಿ ಬಂಧಿಗಳಾಗುವಂತೆ ಮಾಡುತ್ತದೆ. ಅಪ್ರಾಪ್ತ ಸ್ನೇಹಿತನಿಗೆ ಮದುವೆ ಮಾಡಿಸಿ ಜೈಲಿಗೆ ಸೇರೊ ಭರತ ಬಾಹುಬಲಿ ಬದುಕಿಗೆ ಎಂಟ್ರಿ ಕೊಡುವ ಶ್ರೀ ಇಡೀ ಚಿತ್ರದ ಚಿತ್ರಣವನ್ನೇ ಬದಲಿಸುತ್ತಾಳೆ. ಆ ನಂತರದಲ್ಲಿ ಕಥೆ ಮತ್ತಷ್ಟು ಓಘ ಪಡೆದುಕೊಳ್ಳುತ್ತದೆ. ಮುಂದೆ ಭರತ ಬಾಹುಬಲಿ ತಮ್ಮ ಪೋಲಿತನ ಬಿಟ್ಟು ಸರಿ ಹೋಗ್ತಾರಾ, ಭರತ ಬಾಹುಬಲಿ ಲೈಫಲ್ಲಿ ಏನೇನೆಲ್ಲ ಘಟಿಸುತ್ತವೆ ಅನ್ನೋ ಕುತೂಹಲ ನಿಮಗಿದ್ದರೆ ಈ ಚಿತ್ರವನ್ನು ಖಂಡಿತವಾಗಿಯೂ ಮಿಸ್ ಮಾಡದೆ ನೋಡಲೇಕು. ಇದನ್ನು ಓದಿ: ಗೆಳೆಯನ ಯಶಸ್ಸಿಗೆ ಹಾರೈಸಿದ ಯಶ್

Sri Bharatha Baahubali D

ಇಂಥಾ ನಿರೀಕ್ಷೆ ಹೊತ್ತು ಯಾರೇ ಚಿತ್ರಮಂದಿರ ಹೊಕ್ಕರೂ ಭರತ ಬಾಹುಬಲಿ ಖಂಡಿತಾ ನಿರಾಸೆ ಮಾಡುವುದಿಲ್ಲ. ಇಲ್ಲಿರೋದು ತುಂಬ ಸರಳವಾದ ಕಥೆ. ಇಂಟ್ರಸ್ಟಿಂಗ್ ವೇನಲ್ಲಿ ಸ್ಕ್ರೀನ್ ಪ್ಲೇ ಹೆಣೆದು ಅದನ್ನು ತೆರೆ ಮೇಲೆ ಅಷ್ಟೇ ಚೆಂದವಾಗಿ ಪ್ರೊಜೆಕ್ಟ್ ಮಾಡುವ ಮೂಲಕ ನಿರ್ದೇಶಕ ಮಂಜು ಮಾಂಡವ್ಯ ಎಲ್ಲವನ್ನೂ ವಿಶೇಷವಾಗಿಸಿದ್ದಾರೆ. ನಟನಾಗಿಯೂ ಸೈ ಎನಿಸಿಕೊಂಡಿರೋ ಮಂಜು ಮಾಂಡವ್ಯ ಅದಕ್ಕಾಗಿ ತುಂಬಾನೇ ತಾಲೀಮು ನಡೆಸಿರೋದು ತೆರೆ ಮೇಲೆ ಸ್ಪಷ್ಟವಾಗಿಯೇ ಕಾಣಿಸುತ್ತದೆ. ಎಂದಿನಂತೆ ಚಿಕ್ಕಣ್ಣ ಎಲ್ಲರಿಗೂ ಇಷ್ಟವಾಗುತ್ತಾರೆ. ನಾಯಕಿ ಪಾತ್ರದಲ್ಲಿ ಸಾರಾ ಮಹೇಶ್ ತಮ್ಮ ಪಾತ್ರವನ್ನು ಅಚ್ಚುಕಟ್ಟಾಗಿ ನಿಭಾಯಿಸಿದ್ದಾರೆ. ಮಣಿಕಾಂತ್ ಕದ್ರಿ ಮ್ಯೂಸಿಕ್, ಫರ್ವೇಜ್ ಕೆ ಸಿನಿಮಾಟೋಗ್ರಫಿ ಎಲ್ಲರ ಮನಸೆಳೆಯುತ್ತದೆ. ಒಟ್ಟಾರೆಯಾಗಿ ಶ್ರೀ ಭರತ ಬಾಹುಬಲಿ ನಿರೀಕ್ಷೆ ಮೀರಿದ ಫೀಲ್ ಕೊಡುವಂತೆ ಮೂಡಿ ಬಂದಿದೆ.

ಚಿತ್ರ: ಶ್ರೀ ಭರತ ಬಾಹುಬಲಿ
ನಿರ್ದೇಶನ: ಮಂಜು ಮಾಂಡವ್ಯ
ನಿರ್ಮಾಪಕ: ಟಿ. ಶ್ರೀನಿವಾಸ್
ಸಂಗೀತ: ಮಣಿಕಾಂತ್ ಕದ್ರಿ
ತಾರಾಬಳಗ: ಮಂಜು ಮಾಂಡವ್ಯ, ಚಿಕ್ಕಣ್ಣ, ಸಾರಾ ಮಹೇಶ್, ಶ್ರೀನಿವಾಸ್ ಮೂರ್ತಿ, ಇತರರು.

ರೇಟಿಂಗ್: 3.5/5

TAGGED:bengaluruChikkannaManju mandavyaPublic TVSri BharatabahubaliYashಚಿಕ್ಕಣ್ಣಪಬ್ಲಿಕ್ ಟಿವಿಬೆಂಗಳೂರುಮಂಜು ಮಾಂಡವ್ಯಶ್ರೀ ಭರತಬಾಹುಬಲಿ
Share This Article
Facebook Whatsapp Whatsapp Telegram

Cinema news

The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories

You Might Also Like

lpg sylender
Latest

ಇರಾನ್‌ ಯುದ್ಧ| ಎಲ್‌ಪಿಜಿ ಕನಿಷ್ಠ ಬುಕ್ಕಿಂಗ್‌ ಅವಧಿಯನ್ನು ಹೆಚ್ಚಿಸಿದ ಕೇಂದ್ರ

Public TV
By Public TV
7 minutes ago
GBA Maheshwar Rao
Bengaluru City

ಪರಿಷ್ಕೃತ ಕರಡು ಮತದಾರರ ಪಟ್ಟಿ ಬಿಡುಗಡೆ ಮಾಡಿದ ಜಿಬಿಎ

Public TV
By Public TV
16 minutes ago
HD Devegowda
Karnataka

ರಾಜ್ಯ ಸರ್ಕಾರದಿಂದಲೇ ಎತ್ತಿನಹೊಳೆಗೆ ಆಮೆಗತಿ, ಮೇಕೆದಾಟು ವಿಳಂಬವಾಗುತ್ತಿದೆ: ಕಾಂಗ್ರೆಸ್‌ ವಿರುದ್ಧ ಹೆಚ್‌ಡಿಡಿ ಕಿಡಿ

Public TV
By Public TV
51 minutes ago
Bengaluru Kalaburagi Vande Bharat Express train
Bagalkot

ಮಾ.15ರಿಂದ ವಂದೇ ಭಾರತ್ ರೈಲುಗಳ ವೇಳಾಪಟ್ಟಿ ಪರಿಷ್ಕರಣೆ

Public TV
By Public TV
2 hours ago
Restaurant Hotel
Bengaluru City

ಹೋಟೆಲ್‌ಗಳಿಗೆ ಸಂಕಷ್ಟ – ಬೆಂಗಳೂರಿನಲ್ಲಿ ವಾಣಿಜ್ಯ ಸಿಲಿಂಡರ್‌ ಸರಬರಾಜು ಬಂದ್‌

Public TV
By Public TV
2 hours ago
Mariana L Naishuler
Latest

ಚೆನ್ನೈನ US ಕಾನ್ಸುಲೇಟ್ ಜನರಲ್ ಆಗಿ ಮರಿಯಾನಾ ಎಲ್.ನೈಶುಲರ್ ಅಧಿಕಾರ ಸ್ವೀಕಾರ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?