Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಆರೆಸ್ಸೆಸ್, ಬಿಜೆಪಿ ನಾಯಕರು ತಮ್ಮ ಮಕ್ಕಳಿಗೆ ಯಾಕೆ ಲಾಠಿ, ಗನ್ ಟ್ರೈನಿಂಗ್ ಕೊಡ್ತಿಲ್ಲ?: ಶಾಸಕ ಮಂಜುನಾಥ ಭಂಡಾರಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dakshina Kannada | ಆರೆಸ್ಸೆಸ್, ಬಿಜೆಪಿ ನಾಯಕರು ತಮ್ಮ ಮಕ್ಕಳಿಗೆ ಯಾಕೆ ಲಾಠಿ, ಗನ್ ಟ್ರೈನಿಂಗ್ ಕೊಡ್ತಿಲ್ಲ?: ಶಾಸಕ ಮಂಜುನಾಥ ಭಂಡಾರಿ

Dakshina Kannada

ಆರೆಸ್ಸೆಸ್, ಬಿಜೆಪಿ ನಾಯಕರು ತಮ್ಮ ಮಕ್ಕಳಿಗೆ ಯಾಕೆ ಲಾಠಿ, ಗನ್ ಟ್ರೈನಿಂಗ್ ಕೊಡ್ತಿಲ್ಲ?: ಶಾಸಕ ಮಂಜುನಾಥ ಭಂಡಾರಿ

Public TV
Last updated: October 18, 2025 9:08 pm
Public TV
Share
3 Min Read
manjunath bhandary press meet
SHARE

ಮಂಗಳೂರು: ಆರ್‌ಎಸ್‌ಎಸ್‌ (RSS), ಬಿಜೆಪಿ ನಾಯಕರು ತಮ್ಮ ಮಕ್ಕಳಿಗೆ ಯಾಕೆ ಲಾಠಿ, ಗನ್‌ ಟ್ರೈನಿಂಗ್‌ ಕೊಡ್ತಿಲ್ಲ ಎಂದು ಶಾಸಕ ಮಂಜುನಾಥ ಭಂಡಾರಿ (Manjunath Bhandary) ಪ್ರಶ್ನಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಯವರಿಗೆ (BJP) ಒಂದು ಪಾಕಿಸ್ತಾನ, ಇನ್ನೊಂದು ಮುಸ್ಲಿಂ ಇವೆರಡು ಬಿಟ್ರೆ ಏನೂ ಗೊತ್ತಿಲ್ಲ. ಬಿಜೆಪಿ 10 ವರ್ಷಗಳಲ್ಲಿ ನಡೆಸಿರುವ ಆಡಳಿತದಲ್ಲಿ ಯಾವುದನ್ನು ಹಿಡ್ಕೊಂಡು ಮತ ಕೇಳಿದ್ರಿ? ಸಚಿವ ಪ್ರಿಯಾಂಕ್ ಖರ್ಗೆ ಅವರು ಆರೆಸ್ಸೆಸ್ ಬಗ್ಗೆ ಮಾತಾಡಿದ್ರೆ ದೇಶದ್ರೋಹಿ ಪಟ್ಟ ಕಟ್ಟುತ್ತೀರಿ. ಪ್ರಿಯಾಂಕ್ ಖರ್ಗೆ ಪ್ರಶ್ನೆ ಮಾಡಿದ್ರಲ್ಲಿ ಏನು ತಪ್ಪಿದೆ? ಆರೆಸ್ಸೆಸ್ ಹಿಂದುಳಿದ ವರ್ಗದ ಮಕ್ಕಳನ್ನು ಲಾಠಿ, ಗನ್ನು ಕೊಟ್ಟು ಕೊಡ್ತಾ ಇರೋ ತರಬೇತಿ ಏನು? ಸರ್ಕಾರ ಹೇಳಿದ್ದು ಆರೆಸ್ಸೆಸ್ ಸಹಿತ ಖಾಸಗಿ ಸಂಘಟನೆಗಳಿಗೆ ಸರ್ಕಾರಿ ಮೈದಾನ, ರಸ್ತೆ, ಶಾಲೆಗಳಲ್ಲಿ ಕಾರ್ಯಚಟುವಟಿಕೆ ನಡೆಸಲು ಅನುಮತಿ ಬೇಕು ಎಂದು ಅಷ್ಟೇ. ನಿಮಗೆ ಅನುಮತಿ ಪಡೆಯಲು ಏನು ಸಮಸ್ಯೆಯಿದೆ? ಆರೆಸ್ಸೆಸ್ ಸಂಘಟನೆಗೆ 100 ವರ್ಷಗಳು ಆಯ್ತು ಅಂತ ದೇಶಾದ್ಯಂತ ಪಥಸಂಚಲನ ನಡೆಸ್ತೀರಿ. ಇಷ್ಟು ವರ್ಷಗಳಲ್ಲಿ ಯಾಕೆ ಸಂಘಟನೆಯನ್ನು ನೋಂದಣಿ ಮಾಡಿಸಿಕೊಂಡಿಲ್ಲ? ನೋಂದಣಿ ಮಾಡಿಸಿಕೊಳ್ಳದ ಸಂಘಟನೆಗೆ ಎಲ್ಲಿಂದ ಹಣ ಬರುತ್ತದೆ? ಖಾತೆಯಲ್ಲಿ ಎಷ್ಟು ಹಣ ಇದೆ? ಇದರ ತರಬೇತಿ ಯಾವ ರೀತಿ ನಡೆಯುತ್ತೆ? ಅಂತ ಸಂವಿಧಾನದಲ್ಲಿ ಯಾಕೆ ಕೇಳಬಾರದು ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಈದ್ಗಾ ಮೈದಾನ ಬಳಿ ರಸ್ತೆಯಲ್ಲೇ ನಮಾಜ್ ಮಾಡ್ತಾರಪ್ಪ, ಪರ್ಮಿಷನ್ ತಗೋತಾರ ಅವ್ರು?: ಕೆ.ಎನ್.ರಾಜಣ್ಣ

Kalaburagi RSS

ಆರೆಸ್ಸೆಸ್ ಒಂದು ಸಂಘಟನೆಯೇ ಅಲ್ಲ. ಅದೊಂದು ಸಂಘಟನೆ ಆಗಿದ್ದರೆ ಅದಕ್ಕೆ ಕೆಲವೊಂದು ಮಾನದಂಡಗಳಿವೆ. ಮುಖ್ಯವಾಗಿ ನೋಂದಣಿ ಮಾಡಿರಬೇಕು. ಅದ್ಯಾವುದೂ ಇಲ್ಲದ ಆರೆಸ್ಸೆಸ್ ಮತ್ತು ಇತರ ಖಾಸಗಿ ಸಂಘಟನೆಗಳಿಗೆ ಸಾರ್ವಜನಿಕ ಕಾರ್ಯಕ್ರಮ ನಡೆಸಲು ಸರ್ಕಾರ ನಿಷೇಧ ಹೇರಿದೆ. ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯರ ಈ ನಿರ್ಧಾರ ಸರಿಯಾಗಿಯೇ ಇದೆ. ಅದನ್ನು ನಾನು ಸಹಿತ ಜಿಲ್ಲೆಯ ಎಲ್ಲ ಕಾಂಗ್ರೆಸ್ ನಾಯಕರು ಒಪ್ಪಿಕೊಳ್ಳುತ್ತೇವೆ ಎಂದರು.

ವಿದ್ಯಾರ್ಥಿ ಜೀವನದಿಂದಲೇ ನಾನು ಆರೆಸ್ಸೆಸ್ ಬಿಜೆಪಿ ವಿರುದ್ಧ ಹೋರಾಟ ಮಾಡಿದವನು. ಯಡಿಯೂರಪ್ಪ ವಿರುದ್ಧ ಮಾತಾಡಿ ಎದುರು ಹಾಕಿಕೊಂಡವನು ನಾನು. ನಾವು ಕರಾವಳಿ ಕಾಂಗ್ರೆಸ್ಸಿಗರು ಪ್ರತಿಯೊಬ್ಬರೂ ಖರ್ಗೆ ಅವರ ಜೊತೆಗಿದ್ದೇವೆ. ಇಲ್ಲಿ ಆರೆಸ್ಸೆಸ್ ಬ್ಯಾನ್ ಆಗಿದೆ ಎಂದು ಬೊಬ್ಬೆ ಹೊಡೆಯುವವರು ಜನಸಾಮಾನ್ಯರನ್ನು ದಿಕ್ಕು ತಪ್ಪಿಸುತ್ತಿದ್ದಾರೆ. ಇಲ್ಲಿ ಆರೆಸ್ಸೆಸ್ ಮಾತ್ರವಲ್ಲ ಯಾವುದೇ ಖಾಸಗಿ ಸಂಘಟನೆಗಳಿಗೆ ಸರ್ಕಾರಿ ಜಾಗ ಬಳಸುವುದಕ್ಕೆ ಅನುಮತಿ ಪಡೆಯಲೇಬೇಕಾಗಿದೆ. ಮಡಿಕೇರಿಯಲ್ಲಿ ಮಕ್ಕಳಿಗೆ ಗನ್ ತರಬೇತಿ ಕೊಟ್ಟಿದ್ದು, ನಾವೆಲ್ಲರೂ ನೋಡಿದ್ದೇವೆ. ಬಿಜೆಪಿ ಆರೆಸ್ಸೆಸ್ ನಾಯಕರು ತಮ್ಮ ಮಕ್ಕಳನ್ನು ವಿದೇಶದಲ್ಲಿ ಶಿಕ್ಷಣಕ್ಕೆ ಉದ್ಯೋಗಕ್ಕೆ ಕಳುಹಿಸಿ ಇಲ್ಲಿ ಹಿಂದುಳಿದ ವರ್ಗಗಳ ಮಕ್ಕಳಿಗೆ ಶಸ್ತ್ರ ಕೊಟ್ಟು ಪ್ರಚೋದನೆ ಮಾಡುವುದು ಎಲ್ಲಿಯ ನ್ಯಾಯ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ನಾಳೆ RSS ಪಥ ಸಂಚಲನ – ಚಿತ್ತಾಪುರದಲ್ಲಿ ಹಾಕಿದ್ದ ಬ್ಯಾನರ್‌, ಬಂಟಿಂಗ್‌ ತೆರವು

ದಿನೇಶ್ ಅಮೀನ್ ಮಟ್ಟು ಆರೋಪ ಮಾಡಿರುವಂತೆ ನಮ್ಮ ಕಾಲೇಜಿನಲ್ಲಿ ಆರೆಸ್ಸೆಸ್‌ನ ಯಾವುದೇ ರೀತಿಯ ಕಾರ್ಯಕ್ರಮ ಇಲ್ಲಿನವರೆಗೆ ನಡೆದಿಲ್ಲ. ಸೃಷ್ಟಿ ಅಂತ ಒಂದು ಪ್ರಾಜೆಕ್ಟ್ ಕಾರ್ಯಕ್ರಮ ನಡೆದಿತ್ತು. ಅದು ರಾಜ್ಯದ ಎಲ್ಲ ಇಂಜಿನಿಯರಿಂಗ್ ಕಾಲೇಜುಗಳ ಒಟ್ಟು ಸೇರುವಿಕೆಯಲ್ಲಿ ನಡೆದಿದ್ದ ವಿಜ್ಞಾನ ಮಾಡೆಲ್ ಕಾರ್ಯಕ್ರಮ. ಅದರಲ್ಲಿ ಎಬಿವಿಪಿ ಕೂಡ ಪಾಲು ಪಡೆದಿತ್ತು. ಅಂದಿನ ಮುಖ್ಯಮಂತ್ರಿ ಸದಾನಂದ ಗೌಡ ಅದರಲ್ಲಿ ಪಾಲ್ಗೊಂಡ ಕಾರಣ ನಾನು ಭಾಗವಹಿಸಿದ್ದೆ. ಎಬಿವಿಪಿ ಸಮ್ಮೇಳನ, ಬೈಠಕ್ ನಡೆದಿದೆ ಎನ್ನುವವರು ಅದಕ್ಕೆ ಆಧಾರ ತೋರಿಸಲಿ. ಹೀಗೆ ಹೇಳುವವರು ಯಾವ ನೈತಿಕ ಆಧಾರದಲ್ಲಿ ಕಾಂಗ್ರೆಸ್ ಟಿಕೆಟ್ ಕೇಳಿದ್ರು? ಇಂದಿರಾ ಗಾಂಧಿ ಬಗ್ಗೆ ಬರೆದ್ರು, ರಾಜೀವ್ ಗಾಂಧಿ ಬಗ್ಗೆ ಬರೆದ್ರು ಆದ್ರೂ ಸಿದ್ಧಾಂತ ಗೊತ್ತಿಲ್ಲದೇ ಎಂಎಲ್‌ಸಿ ಟಿಕೆಟ್ ಕೊಡಿ ಅಂತ ಕೇಳಿದ್ರು? ಮುಂದೆ ಇಂತಹ ಆರೋಪ ಮಾಡಿದರೆ ಮಾನನಷ್ಟ ಮೊಕದ್ದಮೆ ಹಾಕುತ್ತೇನೆ ಎಂದು ಖಾರವಾಗಿ ಪ್ರತಿಕ್ರಿಯಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ಮಾಜಿ ಮೇಯರ್ ಶಶಿಧರ್ ಹೆಗ್ಡೆ, ಮಹಿಳಾ ಜಿಲ್ಲಾಧ್ಯಕ್ಷೆ ಶಾಲೆಟ್ ಪಿಂಟೋ, ವಿಕಾಸ್ ಶೆಟ್ಟಿ, ನೀರಜ್ ಪಾಲ್, ಆರ್.ಪದ್ಮರಾಜ್ ಮತ್ತಿತರ ಮುಖಂಡರು ಉಪಸ್ಥಿತರಿದ್ದರು.

TAGGED:bjpMangaluruManjunath Bhandaryrssಆರ್‍ಎಸ್‍ಎಸ್ಬಿಜೆಪಿಮಂಗಳೂರುಮಂಜುನಾಥ್ ಭಂಡಾರಿ.
Share This Article
Facebook Whatsapp Whatsapp Telegram

Cinema news

actor mayur patel car accident
ಕುಡಿದು ವಾಹನ ಚಲಾಯಿಸಿ ಕಾರುಗಳಿಗೆ ಸರಣಿ ಅಪಘಾತ; ನಟ ಮಯೂರ್ ಪಟೇಲ್ ವಿರುದ್ಧ FIR
Cinema Crime Latest Main Post Sandalwood
Ranveer Singh Rishab Shetty Kantara
ತುಳುನಾಡಿನ ದೈವಕ್ಕೆ ʻಹೆಣ್ಣು ದೆವ್ವʼ ಅಂತ ಅಪಮಾನ – ರಣವೀರ್ ಸಿಂಗ್‌ ವಿರುದ್ಧ FIR
Bengaluru City Cinema Crime Latest Main Post
Suri Anna 2
ಹರೀಶ್ ರಾಯ್ ನಟಿಸಿದ ಕೊನೆ ಚಿತ್ರ ಸೂರಿ ಅಣ್ಣ ಟ್ರೈಲರ್ ಬಿಡುಗಡೆ
Cinema Latest Main Post Sandalwood
Arijith Singh
ಹಿನ್ನೆಲೆ ಗಾಯನಕ್ಕೆ ಗುಡ್ ಬೈ ಹೇಳಿದ ಅರಿಜಿತ್ ಸಿಂಗ್
Bollywood Cinema Latest Main Post

You Might Also Like

29 year old dies of KFD in Thirthahalli
Districts

ತೀರ್ಥಹಳ್ಳಿ | ಮಂಗನ ಕಾಯಿಲೆಗೆ 29 ವರ್ಷದ ಯುವಕ ಬಲಿ

Public TV
By Public TV
23 minutes ago
Jagalur Accident Gangadarappa
Crime

ಲಾರಿ ಹರಿದು ಪಾದಾಚಾರಿ ಸಾವು ಪ್ರಕರಣ – 32 ವರ್ಷಗಳ ಬಳಿಕ ಚಾಲಕ ಸೆರೆ

Public TV
By Public TV
54 minutes ago
Ajit Pawar farewell
Latest

ಇಂದು ಮಹಾರಾಷ್ಟ್ರ ಡಿಸಿಎಂ ಅಜಿತ್‌ ಪವಾರ್‌ ಅಂತ್ಯಕ್ರಿಯೆ – ಅಂತಿಮ ದರ್ಶನಕ್ಕೆ ಜನಸ್ತೋಮ

Public TV
By Public TV
1 hour ago
Car School Bus Accident Bengaluru 1
Bengaluru Rural

ಬೆಂಗಳೂರು | ಸಿಗ್ನಲ್ ತಪ್ಪಿಸಲು ಹೋಗಿ ಶಾಲಾ ಬಸ್‍ಗೆ ಕಾರು ಡಿಕ್ಕಿ

Public TV
By Public TV
1 hour ago
ajit pawar plane crash flight attendant
Latest

ಅಪ್ಪ.. ನಾನು ಅಜಿತ್‌ ಪವಾರ್‌ ಅವ್ರ ವಿಮಾನದಲ್ಲಿ ಹೋಗ್ತಿದ್ದೇನೆ, ನಾಳೆ ಊರಿಗೆ ಬರ್ತೀನಿ: ತಂದೆ ಜೊತೆ ಫ್ಲೈಟ್‌ ಅಟೆಂಡೆಂಟ್‌ ಕೊನೆ ಮಾತು

Public TV
By Public TV
2 hours ago
Tumakuru Siddaganga Mutt Drinking Water
Districts

ಸಿದ್ದಗಂಗಾ ಮಠಕ್ಕೆ ಎದುರಾಗುತ್ತಾ ನೀರಿನ ಹಾಹಾಕಾರ? – 10 ಸಾವಿರ ಮಕ್ಕಳು, ಭಕ್ತಾದಿಗಳಿಗೆ ನೀರು ನೀಡಲು ಲೆಕ್ಕಾಚಾರ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?