ಪಾಕಿಸ್ತಾನದ ಕರ್ತಾರ್‌ಪುರ್ ಕಾರಿಡಾರ್ ಯೋಜನೆ ಉದ್ಘಾಟನೆಗೆ ಮನಮೋಹನ್ ಸಿಂಗ್‍ಗೆ ಆಹ್ವಾನ

Public TV
1 Min Read
manmohan singh

ನವದೆಹಲಿ: ಪಾಕಿಸ್ತಾನದ ಬೃಹತ್ ಯೋಜನೆ ದಿ ಕರ್ತಾರ್‌ಪುರ್ ಕಾರಿಡಾರ್ ಉದ್ಘಾಟನೆಗೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಆಹ್ವಾನ ನೀಡಲಾಗುತ್ತಿದೆ ಎಂಬ ಮಾಹಿತಿ ತಿಳಿದುಬಂದಿದೆ.

ಕರ್ತಾರ್‌ಪುರ್ ಕಾರಿಡಾರ್ ಪಾಕಿಸ್ತಾನದ ಬೃಹತ್ ಯೋಜನೆಯಾಗಿದ್ದು, ಕಾರ್ಯಕ್ರಮಕ್ಕಾಗಿ ಪಾಕಿಸ್ತಾನ ಎಲ್ಲ ತಯಾರಿ ನಡೆಸುತ್ತಿದೆ. ಈ ಕಾರ್ಯಕ್ರಮದ ಮುಖ್ಯ ಅತಿಥಿಯನ್ನಾಗಿ ಭಾರತದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರನ್ನು ಆಹ್ವಾನಿಸಲು ನಿರ್ಧರಿಸಿದ್ದೇವೆ. ಶೀಘ್ರದಲ್ಲೇ ಅವರಿಗೆ ಔಪಚಾರಿಕ ಆಹ್ವಾನವನ್ನು ನೀಡಲಾಗುವುದು. ಅಲ್ಲದೆ ಗುರುನಾನಕ್ ಅವರ 550ನೇ ಜನ್ಮ ದಿನಾಚರಣೆಗಾಗಿ ಕರ್ತಾರ್‍ಪುರಕ್ಕೆ ಆಗಮಿಸುತ್ತಿರುವ ಸಿಖ್ ಯಾತ್ರಾರ್ಥಿಗಳನ್ನು ಸ್ವಾಗತಿಸಲು ತುಂಬಾ ಸಂತೋಷವಾಗುತ್ತಿದೆ ಎಂದು ಪಾಕಿಸ್ತಾನದ ವಿದೇಶಾಂಗ ಸಚಿವಾಲಯ ತಿಳಿಸಿದೆ.

ಪಾಕಿಸ್ತಾನದಲ್ಲಿರುವ ಗುರುನಾನಕ್ ಅವರ ಅಂತಿಮ ವಿಶ್ರಾಂತಿ ಸ್ಥಳವಾದ ದರ್ಬಾರ್ ಸಾಹಿಬ್‍ಗೆ ಸಂಪರ್ಕ ಕಲ್ಪಿಸಲು ಕರ್ತಾರ್‌ಪುರ್ ಕಾರಿಡಾರ್ ಯೋಜನೆಯನ್ನು ಪಾಕಿಸ್ತಾನ ಆರಂಭಿಸಿದೆ. ಇದಕ್ಕಾಗಿ ಪಾಕಿಸ್ತಾನ ದೊಡ್ಡ ರೀತಿಯಲ್ಲಿ ತಯಾರಿ ನಡೆಸುತ್ತಿದೆ. ಮನಮೋಹನ್ ಸಿಂಗ್ ಅವರು ಸಿಖ್ ಸಮುದಾಯವನ್ನು ಪ್ರತಿನಿಧಿಸುವುದರಿಂದ ಮುಖ್ಯ ಅತಿಥಿಯನ್ನಾಗಿ ಆಹ್ವಾನಿಸಲು ನಾವು ನಿರ್ಧರಿಸಿದ್ದೇವೆ. ನಾವು ಶೀಘ್ರದಲ್ಲೇ ಅವರಿಗೆ ಆಹ್ವಾನ ಪತ್ರವನ್ನು ಕಳುಹಿಸುತ್ತೇವೆ ಎಂದು ಪಾಕಿಸ್ತಾನದ ವಿದೇಶಾಂಗ ಸಚಿವ ಷಾ ಮಹಮೂದ್ ಖುರೇಷಿ ವಿಡಿಯೋ ಸಂದೇಶದಲ್ಲಿ ತಿಳಿಸಿದ್ದಾರೆ.

ಗುರುನಾನಕ್ ಅವರ 550ನೇ ಜನ್ಮ ದಿನಾಚರಣೆಯನ್ನು ಆಚರಿಸಲು ಕರ್ತಾರ್‍ಪುರಕ್ಕೆ ಆಗಮಿಸುತ್ತಿರುವ ಸಿಖ್ ಯಾತ್ರಾರ್ಥಿಗಳನ್ನು ಸ್ವಾಗತಿಸಲು ತುಂಬಾ ಸಂತೋಷವಾಗುತ್ತಿದೆ ಎಂದು ವಿಡಿಯೋದಲ್ಲಿ ಖುರೇಷಿ ತಿಳಿಸಿದ್ದಾರೆ.

ಕಾಂಗ್ರೆಸ್‍ನಿಂದ ಆಹ್ವಾನ ತಿರಸ್ಕಾರ
ಪಾಕಿಸ್ತಾನದ ಆಹ್ವಾನವನ್ನು ಮನಮೋಹನ್ ಸಿಂಗ್ ಅವರು ಸ್ವೀಕರಿಸುವುದಿಲ್ಲ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ. ಈ ಆಹ್ವಾನವನ್ನು ಸ್ವೀಕರಿಸುವುದಿಲ್ಲ. ಅಲ್ಲದೆ, ಮನಮೋಹನ್ ಸಿಂಗ್ ಅವರು ಕಾರ್ಯಕ್ರಮದ ಉದ್ಘಾಟನೆಗೂ ತೆರಳುವುದಿಲ್ಲ ಎಂದು ತಿಳಿದು ಬಂದಿದೆ.

Share This Article
Leave a Comment

Leave a Reply

Your email address will not be published. Required fields are marked *