ಮನಮೋಹನ್ ಸಿಂಗ್ ಪ್ರಧಾನಿಯಾಗಲಿದ್ದಾರೆ- ಬಿಜೆಪಿ ಅಭ್ಯರ್ಥಿ ಎಡವಟ್ಟು

Public TV
1 Min Read
tmk

ತುಮಕೂರು: ಈ ಬಾರಿಯ ಲೋಕಸಭಾ ಚುನಾವಣೆಯ ಫಲಿತಾಂಶದಲ್ಲಿ ಮನಮೋಹನ್ ಸಿಂಗ್ ಪ್ರಧಾನಿಯಾಗಲಿದ್ದಾರೆ ಎಂದು ಹೇಳುವ ಮೂಲಕ ಬಿಜೆಪಿ ಅಭ್ಯರ್ಥಿ ಜಿ.ಎಸ್ ಬಸವರಾಜು ಎಡವಟ್ಟು ಮಾಡಿದ್ದಾರೆ.

ಅಭ್ಯರ್ಥಿ ಗಳ ವಿಶ್ರಾಂತಿ ಕೊಠಡಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಕ್ಸಿಟ್ ಪೋಲ್ ನಲ್ಲಿ ಮನಮೋಹನ್ ಸಿಂಗ್ ಪರವಾಗಿ 303, 340, 370 ಹೇಳುತ್ತಾರೆ. ಒಟ್ಟಿನಲ್ಲಿ ಮನಮೋಹನ್ ಸಿಂಗ್ ಪ್ರಧಾನಿಯಾಗುತ್ತಾರೆ ಎಂದು ಹೇಳಿದ್ದಾರೆ. ಕೂಡಲೇ ತನ್ನ ತಪ್ಪಿನ ಅರಿವಾಗಿ ಕ್ಷಮಿಸಿ, ಮನಮೋಹನ್ ಸಿಂಗ್ ಅಲ್ಲ ಮೋದಿ ಪ್ರಧಾನಿಯಾಗುತ್ತಾರೆ ಎಂದಿದ್ದಾರೆ.

vlcsnap 2019 03 29 22h33m53s509 copy

8 ಕ್ಷೇತ್ರಗಳಲ್ಲಿ ಅತ್ಯುತ್ತಮವಾಗಿ ಹಾಗೆಯೇ ಸುಗಮವಾಗಿ ಚುನಾವಣೆ ನಡೆದಿದೆ. ಭಾರತೀಯ ಜನತಾ ಪಕ್ಷಕ್ಕೆ ಪೂರ್ಣ ಬೆಂಬಲ ಸಿಕ್ಕಿದೆ. ಎಲ್ಲರ ಅಭಿಪ್ರಾಯವನ್ನು ಇಂದು ಸಂಗ್ರಹಿಸಿದ್ದೇವೆ. ನನ್ನ ಮಟ್ಟಿಗೆ ಇಂದು ನಮ್ಮ ಪಕ್ಷ ಮುನ್ನಡೆ ಸಾಧಿಸುತ್ತದೆ ಎಂಬ ವಿಶ್ವಾಸವಿದೆ ಎಂದರು.

ಸಮೀಕ್ಷೆಗಳು ಅವರವರ ಇಷ್ಟಕ್ಕೆ ಬಂದಂತೆ, ಗಿಣಿ ಶಾಸ್ತ್ರ ಹೇಳಿದಂತೆ ಎಂದು ಎಕ್ಸಿಟ್ ಪೋಲ್ ಬಗ್ಗೆ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು. ಈ ಬಾರಿಯ ಲೋಕಸಭಾ ಚುನಾವಣೆಗೆ ಮಾಜಿ ಪ್ರಧಾನಿ ಎಚ್‍ಡಿ ದೇವೇಗೌಡ ಅವರು ತುಮಕೂರು ಕ್ಷೇತ್ರದಿಂದ ಸ್ಪರ್ಧೆ ಮಾಡಿದ್ದು, ಹಾಲಿ ಸಂಸದ ಮುದ್ದಹನುಮೇಗೌಡ ಅವರು ನಾಮಪತ್ರ ವಾಪಸ್ ಪಡೆದ ಹಿನ್ನೆಲೆಯಲ್ಲಿ ಬಿಜೆಪಿಯ ಜಿ.ಎಸ್. ಬಸವರಾಜು ಸ್ಪರ್ಧಿಸಿದ್ದಾರೆ.

tmk 1

Share This Article
Leave a Comment

Leave a Reply

Your email address will not be published. Required fields are marked *