ಮತ್ತೆ ನೈಜಘಟನೆಯ ಬೆನ್ನುಹತ್ತಿದ ನಿರ್ದೇಶಕ ಮಂಸೋರೆ

Public TV
1 Min Read
FotoJet 9 8

ರಡು ಬಾರಿ ರಾಷ್ಟ್ರ ಪ್ರಶಸ್ತಿ ಪಡೆದಿರುವ ನಿರ್ದೇಶಕ ಮಂಸೋರೆ, ಇದೀಗ ಮತ್ತೊಂದು ಸಿನಿಮಾಗೆ ಆಕ್ಸನ್ ಕಟ್ ಹೇಳುತ್ತಿದ್ದು, ಈ ಸಿನಿಮಾ ಇಂದಿನಿಂದ ಚಿತ್ರೀಕರಣ ಆರಂಭಿಸಿದೆ. ಇವರ ಚೊಚ್ಚಲು ಸಿನಿಮಾ ‘ಹರಿವು’ ಕೂಡ ನೈಜಘಟನೆಯನ್ನೇ ಆಧರಿಸಿತ್ತು. ಇದೀಗ ನಾಲ್ಕನೇ ಚಿತ್ರಕ್ಕೂ ಅವರು ನಡೆದ ಘಟನೆಯನ್ನೇ ತಮ್ಮ ಚಿತ್ರಕ್ಕಾಗಿ ಆಯ್ಕೆ ಮಾಡಿಕೊಂಡಿದ್ದಾರೆ. ಇದನ್ನೂ ಓದಿ : ಕೆಜಿಎಫ್ ಸಿನಿಮಾ ಆಗೋಕೆ ಮೂವರು ಮಹಿಳೆಯರು ಕಾರಣ: ವಿಜಯ್ ಕಿರಗಂದೂರು

FotoJet 11 3

ಹರಿವು ಸಿನಿಮಾದಲ್ಲಿ ಮಗನನ್ನು ಕಳೆದುಕೊಂಡ ಅಸಹಾಯಕ ತಂದೆಯೊಬ್ಬರು ಬೆಂಗಳೂರಿನಿಂದ ಉತ್ತರ ಕರ್ನಾಟಕದ ಹಳ್ಳಿಗೆ ತಮ್ಮ ಮಗನ ಶವವನ್ನು ಪೆಟ್ಟಿಗೆಯಲ್ಲಿ  ತಗೆದುಕೊಂಡು ಹೋದ ಅಮಾನವೀಯ ಘಟನೆಯನ್ನು ಆಯ್ಕೆ ಮಾಡಿಕೊಂಡಿದ್ದರು. ಈ ಬಾರಿ ಅವರು ಘಟನೆಯ ಬಗ್ಗೆ ಹೇಳಿಕೊಳ್ಳದೇ ‘ಈ ನೆಲದ ಮಣ್ಣಿನ ಜನರ ಆರ್ದ್ರ ಬದುಕಿನ ನೈಜ ಘಟನೆಯೊಂದನ್ನು ತೆರೆಯ ಮೇಲೆ ತರುವ ಪ್ರಯತ್ನ ಮಾಡುತ್ತಿದ್ದೇನೆ’ ಎಂದಷ್ಟೇ ಬರೆದುಕೊಂಡಿದ್ದಾರೆ. ಇದನ್ನೂ ಓದಿ : ಪ್ರತಿಷ್ಠಿತ ಆಸ್ಕರ್ ಪ್ರಶಸ್ತಿ ವೇದಿಕೆಯಲ್ಲೇ ಕಪಾಳಮೋಕ್ಷ: ಅತ್ಯುತ್ತಮ ನಟ ಆಸ್ಕರ್ ವಿಜೇತ ವಿಲ್ ಸ್ಮಿತ್ ಉಗ್ರತಾಪ

FotoJet 12 1

ಸಿನಿಮಾದ ಶೀರ್ಷಿಕೆಯೇ ಆಕರ್ಷಕವಾಗಿದೆ ಮತ್ತು ಕುತೂಹಲ ಮೂಡಿಸುತ್ತದೆ. ತಮ್ಮ ನಾಲ್ಕನೇ ಸಿನಿಮಾಗೆ ಅವರು ’19, 20, 21’ ಎಂದು ಹೆಸರಿಟ್ಟಿದ್ದಾರೆ. ಈ ಟೈಟಲ್ ನಾನಾ ಅರ್ಥಗಳನ್ನು ಹೇಳುತ್ತಿದೆ. ಈ ಮೂರು ತಾರೀಖಿನ ದಿನಗಳಲ್ಲಿ ನಡೆದ ಘಟನೆಯಾ? ಅಥವಾ ಆರ್ಟಿಕಲ್ 19, 20, 21ರ ಬಗೆಗಿನ ಕಥಾನಕವಾ ಎನ್ನುವುದು ಸದ್ಯ ಚರ್ಚೆಯ ವಿಷಯವಾಗಿದೆ. ಇದನ್ನೂ ಓದಿ: ಕೆಜಿಎಫ್-2 ಟ್ರೈಲರ್ ರಿಲೀಸ್ ಮಾಡಿದ ಶಿವಣ್ಣ- ರಾಕಿಬಾಯ್ ಅಬ್ಬರ ಶುರು

FotoJet 10 3

ಎರಡ್ಮೂರು ದಿನಗಳ ಹಿಂದೆಯೇ ಇಡೀ ಟೀಮ್ ಕಟ್ಟಿಕೊಂಡು ಮಲೆನಾಡಿನ ಸೆರೆಗಿನಲ್ಲಿ ಬೀಡುಬಿಟ್ಟಿದ್ದಾರೆ ಮಂಸೋರೆ. ಉತ್ತರ ಕರ್ನಾಟಕದ ಕೆಲ ಕಡೆ ಮತ್ತು ಕರಾವಳಿ ಭಾಗದಲ್ಲೂ ಒಂದಷ್ಟು ದಿನಗಳ ಕಾಲ ಚಿತ್ರೀಕರಣ ನಡೆಸಲಿದೆ ತಂಡ. ಎಂದಿನಂತೆ ಬಹುತೇಕ ಆಕ್ಟ್ 1978 ಸಿನಿಮಾದಲ್ಲಿ ಕೆಲಸ ಮಾಡಿದವರೇ ಈ ಟೀಮ್ ನಲ್ಲೂ ಮುಂದುವರೆದಿದ್ದಾರೆ. ಸತ್ಯಾ ಹೆಗಡೆ ಅವರ ಸಿನಿಮಾಟೋಗ್ರಫಿ, ದೇವರಾಜ್ ಅವರ ನಿರ್ಮಾಣ ಚಿತ್ರಕ್ಕಿದೆ.

Share This Article
Leave a Comment

Leave a Reply

Your email address will not be published. Required fields are marked *