ರಾಯಚೂರು: ಕಲಿಯುಗ ಕಾಮಧೇನು ಮಂತ್ರಾಲಯ (Mantralaya) ಗುರುರಾಘವೇಂದ್ರ ಸ್ವಾಮಿ ಮಠದ ಕಾಣಿಕೆ ಹುಂಡಿ ಎಣಿಕೆ ಮುಕ್ತಾಯವಾಗಿದೆ. ಮಠದಲ್ಲಿ ಮೊದಲ ಬಾರಿಗೆ 5.46 ಕೋಟಿ ರೂ. ದಾಖಲೆಯ ಕಾಣಿಕೆ ಸಂಗ್ರಹಗೊಂಡಿದೆ.

ಜೂನ್ ತಿಂಗಳಲ್ಲಿ ಒಟ್ಟು 5 ಕೋಟಿ 28 ಲಕ್ಷ 39,538 ರೂ. ಕಾಣಿಕೆ ಸಂಗ್ರಹವಾಗಿತ್ತು. ಈ ಬಾರಿ ಆ ದಾಖಲೆಯನ್ನು ಮುರಿದು ಭಾರೀ ಪ್ರಮಾಣದ ಕಾಣಿಕೆ ಸಂಗ್ರಹವಾಗಿದೆ. ಕರ ಸೇವಕರು, ಮಠದ ಭಕ್ತರು, ಮಠದ ಸಿಬ್ಬಂದಿ ಹುಂಡಿ ಎಣಿಕೆ ಕಾರ್ಯದಲ್ಲಿ ಭಾಗವಹಿಸಿದ್ದರು. ಹುಂಡಿ ಎಣಿಕೆ ಕಾರ್ಯ ಮುಕ್ತಾಯಗೊಂಡಿರುವುದಾಗಿ ರಾಯರ ಮಠದ ಆಡಳಿತ ಮಂಡಳಿ ತಿಳಿಸಿದೆ.

