ಚಿಕ್ಕಮಗಳೂರು: ನರೇಂದ್ರ ಮೋದಿ ಹೆಸರಿನಲ್ಲಿ ಅನ್ನದಾನದ ರಶೀದಿ ನೀಡಲು ಮಂತ್ರಾಲಯದ ರಾಘವೇಂದ್ರ ಸ್ವಾಮಿ ಮಠದ ಸಿಬ್ಬಂದಿ ನಿರಾಕರಿಸಿರುವ ಘಟನೆ ನಡೆದಿದೆ.
ನರೇಂದ್ರ ಮೋದಿ ಸರ್ಕಾರ 8 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಯುವಕರ ತಂಡ ವಿಶೇಷ ಪೂಜೆ ಮಾಡಿಸಲು ಮಂತ್ರಾಲಯಕ್ಕೆ ತೆರಳಿತ್ತು. ಅಲ್ಲಿ ನರೇಂದ್ರ ಮೋದಿ ಹೆಸರು ಹೇಳುತ್ತಲೇ ರಶೀದಿ ನೀಡಲು ನಿರಾಕರಿಸಿದೆ. ಇದನ್ನೂ ಓದಿ: ಲಾಲು ಯಾದವ್ ಪಕ್ಷದ ಬೆಂಬಲದೊಂದಿಗೆ ಅಗ್ನಿಪಥ್ ವಿರೋಧಿಸಿ ಇಂದು ಬಿಹಾರ್ ಬಂದ್
ಇದಕ್ಕೆ ಬಿಜೆಪಿ ಕಾರ್ಯಕರ್ತರು ರಶೀದಿ ನೀಡಲು ಯಾಕೆ ನಿರಾಕರಿಸುತ್ತೀರಿ ಎಂದು ಅಲ್ಲಿನ ಸಿಬ್ಬಂದಿಯನ್ನು ಪ್ರಶ್ನಿಸಿದ್ದಾರೆ. ಅಷ್ಟೇ ಅಲ್ಲದೇ ರಶೀದಿ ನೀಡಲು ನಿರಾಕರಿಸಿದ ಸಿಬ್ಬಂದಿಗೆ ಕಾರ್ಯಕರ್ತರು ತರಾಟೆಗೆ ತೆಗೆದುಕೊಂಡಿದ್ದಾರೆ. ಸುಮಾರು 5 ನಿಮಿಷದ ವಾಗ್ವಾದದ ಬಳಿಕ ಅಲ್ಲಿನ ಸಿಬ್ಬಂದಿ ರಶೀದಿ ನೀಡಿದ್ದಾರೆ. ಕೊನೆಗೂ ಬಿಜೆಪಿ ಕಾರ್ಯಕರ್ತರು ನರೇಂದ್ರ ಮೋದಿ ಹೆಸರಿನಲ್ಲೇ ಅನ್ನದಾನದ ರಶೀದಿ ಪಡೆದಿದ್ದಾರೆ. ಇದನ್ನೂ ಓದಿ: 40 ವರ್ಷದ ಹಳೆಯ ಥಿಯೇಟರ್ ಗೋಡೆ ಕುಸಿತ – 24 ಬೈಕ್ಗಳು ಜಖಂ