ಮಂಗಳೂರು: ಮಾರ್ಬಲ್ ತುಂಬಿದ್ದ ಲಾರಿಯೊಂದು (Marbal Loaded Lorry) ಪಲ್ಟಿಯಾಗಿ ನಾಲ್ವರು ಕಾರ್ಮಿಕರು ಗಂಭೀರ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಬಂಟ್ವಾಳ (Bantwal) ತಾಲೂಕಿನ ಕರೋಪಾಡಿ ಗ್ರಾಮದ ಒಡಿಯೂರು ಸಮೀಪ ಈ ದುರ್ಘಟನೆ ನಡೆದಿದೆ. ಗಾಯಗೊಂಡ ಕಾರ್ಮಿಕರು ಉತ್ತರ ಭಾರತ ಮೂದವರು ಎಂಬುದಾಗಿ ತಿಳಿದುಬಂದಿದೆ.
ಘಟನೆ ವಿವರ: ಮಾರ್ಬಲ್ ಅನ್ ಲೋಡ್ಗಾಗಿ ಲಾರಿಯನ್ನು ರಿವರ್ಸ್ ತೆಗೆದುಕೊಳ್ಳಲಾಗುತ್ತಿತ್ತು. ಈ ವೇಳೆ ಬ್ರೇಕ್ ಫೈಲ್ ಆಗಿ ಲಾರಿ ಪಲ್ಟಿಯಾಯಿತು. ಅಲ್ಲದೆ ಹೋಗಿ ನೀರಿನ ತೊಟ್ಟಿಗೆ ಬಿದ್ದಿದೆ. ಪರಿಣಾಮ ಲಾರಿಯಲ್ಲಿದ್ದ ನಾಲ್ವರು ಕಾರ್ಮಿಕರ ಕೈ-ಕಾಲು ಛಿದ್ರ ಛಿದ್ರಗೊಂಡಿದೆ. ಇದನ್ನೂ ಓದಿ: ಉಡುಪಿ ಹಿಂದೂ ಸಮಾಜೋತ್ಸವಕ್ಕೆ ತಟ್ಟಿದ ಶಿವಮೊಗ್ಗ ಗಲಾಟೆ ಬಿಸಿ
ಘಟನೆ ನಡೆದ ಕೂಡಲೇ ಸ್ಥಳೀಯರು ಜಮಾಯಿಸಿ ನಾಲ್ಕು ಅಂಬುಲೆನ್ಸ್ ಮೂಲಕ ಗಾಯಾಳುಗಳನ್ನು ಮಂಗಳೂರಿನ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Web Stories