ಇತ್ತೀಚೆಗೆ ನಟ ಧ್ರುವ ಸರ್ಜಾ (Dhruva Sarja) ಸೇರಿದಂತೆ ‘ಮಾರ್ಟಿನ್’ (Martin) ಚಿತ್ರ ತಂಡವಿದ್ದ ವಿಮಾನವು ಅಪಘಾತದಿಂದ ಕೂದಲೆಳೆ ಅಂತರದಲ್ಲಿ ಪಾರಾಗಿದ್ದರು. ಚಿತ್ರತಂಡದವರಿಗೆ ಆ ಘಟನೆ ಯಾವ ರೀತಿ ಕಹಿ ಅನುಭವ ಕೊಟ್ಟಿತ್ತು ಎಂದು ನಿರ್ದೇಶಕ ಎ.ಪಿ ಅರ್ಜುನ್ (A.p Arjun) ಇದೀಗ ಚಿತ್ರದ ಸುದ್ದಿಗೋಷ್ಠಿಯಲ್ಲಿ ವಿವರಿಸಿದ್ದಾರೆ. ಇದನ್ನೂ ಓದಿ:ರಾಜಮೌಳಿ ಚಿತ್ರದಲ್ಲಿ 8 ಗೆಟಪ್ನಲ್ಲಿ ಕಾಣಿಸಿಕೊಳ್ತಾರೆ ಪ್ರಿನ್ಸ್
ಕಳೆದ ಫೆಬ್ರವರಿಯಲ್ಲಿ ಶೂಟಿಂಗ್ ಮುಗಿಸಿಕೊಂಡು ವಿಮಾನದಲ್ಲಿ ಬರುತ್ತಿದ್ದ ‘ಮಾರ್ಟಿನ್’ ಸಿನಿಮಾ ತಂಡದವರಿಗೆ ಶಾಕ್ ಆಗಿತ್ತು. ಕಾರಣಾಂತರಗಳಿಂದ ವಿಮಾನದ ಹಾರಾಟದಲ್ಲಿ ತೊಂದರೆ ಉಂಟಾಗಿತ್ತು. ಇನ್ನೇನು ಆ ವಿಮಾನ ಅಪಘಾತ ಆಗುತ್ತದೆ ಎಂದು ಇಡೀ ಚಿತ್ರತಂಡದವರು ಭಯಗೊಂಡಿದ್ದರು. ಆ ಕ್ಷಣ ಹೇಗಿತ್ತು ಎಂಬುದನ್ನು ಎ.ಪಿ. ಅರ್ಜುನ್ ಬಿಚ್ಚಿಟ್ಟಿದ್ದಾರೆ.
ಅಂದು ನಮ್ಮೆಲ್ಲರ ಕಣ್ಣಲ್ಲಿ ನೀರು ತುಂಬಿತ್ತು. ನನ್ನ ಪಕ್ಕದಲ್ಲಿ ಸ್ವಾಮಿ ಕುಳಿತಿದ್ದರು. ಅವರ ಪಕ್ಕದಲ್ಲಿ ನಾಯಕಿ ವೈಭವಿ ಇದ್ದರು. ಅಂದು ಯಾರೂ ಧೈರ್ಯವಾಗಿ ಇರಲಿಲ್ಲ. ಅಷ್ಟು ಹೊತ್ತಿಗಾಗಲೇ ನಟಿ ವೈಭವಿ ಅವರು ತಂದೆ-ತಾಯಿಗೆ ಮೆಸೇಜ್ ಮಾಡಿದ್ದರು. ನಾವೆಲ್ಲ ಸತ್ತು ಹೋಗುತ್ತಿದ್ದೇವೆ. ನಾವೇನಾದರೂ ತಪ್ಪು ಮಾಡಿದ್ದರೆ ಕ್ಷಮಿಸಿ ಅಂತ ಮೆಸೇಜ್ ಮಾಡಿ ಜೋರಾಗಿ ಅಳುತ್ತಿದ್ದರು. ಅಂದು ಏನು ಅವಘಡ ನಡೆಯದೇ ಸೇಫ್ ಆದೆವು. ಆ ದೇವರೇ ನಮ್ಮನ್ನು ಕಾಪಾಡಿದ್ದು. ಇದು ಎಲ್ಲರಿಗೂ ಪುನರ್ ಜನ್ಮ ಎಂದು ಎ.ಪಿ. ಅರ್ಜುನ್ ಸ್ಮರಿಸಿದ್ದರು.
ಮಾರ್ಟಿನ್ ಸಿನಿಮಾ ಶೂಟಿಂಗ್ ಕಂಪ್ಲಿಟ್ ಆಗಿದೆ. ಧ್ರುವ ಸರ್ಜಾಗೆ ವೈಭವಿ ನಟಿಸಿದ್ದಾರೆ. ಸದ್ಯದಲ್ಲೇ ಸಿನಿಮಾದ ರಿಲೀಸ್ ಬಗ್ಗೆ ತಿಳಿಸೋದಾಗಿ ಚಿತ್ರತಂಡ ಅಪ್ಡೇಟ್ ನೀಡಿದೆ.