ಬೆಂಗಳೂರು: ದುನಿಯಾ ವಿಜಯ್ ಹಲ್ಲೆ ಪ್ರಕರಣದ ಜಾಮೀನು ಅರ್ಜಿ ವಿಚಾರಣೆಯನ್ನು ಕೋರ್ಟ್ ಸೋಮವಾರಕ್ಕೆ ಮುಂದೂಡಿದೆ. ಆದರೆ ಹಲ್ಲೆಗಳೊಗಾದ ಮಾರುತಿ ಗೌಡ ಅವರ ಆರೋಗ್ಯದಲ್ಲಿ ಸುಧಾರಣೆ ಕಂಡಿದ್ದು, ಹಲ್ಲೆಯ ಕುರಿತು ಮಾರುತಿಗೌಡ ಪಬ್ಲಿಕ್ ಟಿವಿಗೆ ಮಾಹಿತಿ ನೀಡಿದ್ದಾರೆ.
ದುನಿಯಾ ವಿಜಯ್ ಅವರ ಮಗನಿಗೆ ನಾನು ಕಿಚಾಯಿಸಿಲ್ಲ. ಆದರೆ ಅವರೇ ಕಿಟ್ಟಿ ಎಲ್ಲಿದ್ದಾನೆ ಅಂತಾ ರೇಗಿಸಿ ಹೊಡೆದರು ಎಂದು ಹಲ್ಲೆಗೊಳಗಾದ ಮಾರುತಿ ಗೌಡ ಆರೋಪಿಸಿದ್ದಾರೆ.
ನನ್ನನ್ನು ಕಾರಿನಲ್ಲಿ ಕೂರಿಸಿಕೊಂಡು ಚಾಲನೆ ಮಾಡುತ್ತಲೇ ಸುಮಾರು 11 ಜನರು ಜಾಕ್ರಾಡ್ನಿಂದ ಹಲ್ಲೆ ಮಾಡಿದ್ದಾರೆ. ಬಳಿಕ ನನಗೆ ದುನಿಯಾ ವಿಜಯ್ ಫ್ಯಾನ್ಸ್ ಹೊಡೆದ್ರು ಅಂತ ಹೇಳಬೇಕೆಂದು ಎಚ್ಚರಿಕೆ ನೀಡಿದ್ದರು. ಅಷ್ಟೇ ಅಲ್ಲದೆ ಅಭಿಮಾನಿಗಳು ಹೊಡೆಯುವ ರೀತಿ ವಿಡಿಯೋ ಮಾಡಿಸಿದರು ಎಂದರು.
ನನ್ನ ಭೇಟಿಗೆ ದುನಿಯಾ ವಿಜಯ್ ಮೊದಲ ಪತ್ನಿ ನಾಗರತ್ನ ಅವರು ಬಂದಿದ್ದರು, ಆರೋಗ್ಯ ವಿಚಾರಿಸಿದ್ದಾರೆ. ಆದರೆ ಯಾವುದೇ ರಾಜಿ ಸಂಧಾನ ಮಾಡಿಕೊಂಡಿಲ್ಲ. ಕಾನೂನು ಹೋರಾಟ ಕೈಬಿಡುವುದಿಲ್ಲ ಎಂದು ಮಾರುತಿ ಗೌಡ ತಿಳಿಸಿದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv