ಮಹಾ ಕುಂಭಮೇಳಕ್ಕೆ ಟೆಂಟ್‌ ಸಾಮಗ್ರಿ ಪೂರೈಸುತ್ತಿದ್ದ ಕಂಪನಿಯ ಗೊಡೋನ್​ನಲ್ಲಿ ಅಗ್ನಿ ದುರಂತ

Public TV
1 Min Read
Prayagraj Fire

ಪ್ರಯಾಗರಾಜ್: ಕೆಲ ದಿನಗಳ ಹಿಂದೆ ಮುಕ್ತಾಯಗೊಂಡ ಮಹಾ ಕುಂಭಮೇಳಕ್ಕೆ (Maha Kumbh) ಟೆಂಟ್‌ ಸಾಮಗ್ರಿಗಳನ್ನು ಪೂರೈಸುತ್ತಿದ್ದ ಕಂಪನಿಯೊಂದರ ಗೊಡೋನ್‌ನಲ್ಲಿ ಶನಿವಾರ (ಇಂದು) ಭಾರೀ ಅಗ್ನಿ ಅವಘಡ ಸಂಭವಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Maha Kumbh Mela 2

ಅದೃಷ್ಟವಶಾತ್‌ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಸದ್ಯ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕಾಗಮಿಸಿದ್ದು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. 6 ನೀರಿನ ಟ್ಯಾಂಕರ್‌ಗಳನ್ನ  (Water Tenders) ಸ್ಥಳಕ್ಕೆ ತರಿಸಲಾಗಿದ್ದು, ಮುಖ್ಯ ಅಗ್ನಿಶಾಮಕ ಅಧಿಕಾರಿ ರಾಜೀವ್ ಕುಮಾರ್ ಪಾಂಡೆ ನೇತೃತ್ವದಲ್ಲಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಯುತ್ತಿದೆ. ಇದನ್ನೂ ಓದಿ: ಮೇಲಾಧಿಕಾರಿಗಳ ಕಿರುಕುಳ – ವಿಷ ಸೇವಿಸಿ KSRTC ಬಸ್‌ ಚಾಲಕ ಆತ್ಮಹತ್ಯೆಗೆ ಯತ್ನ

ಅಗ್ನಿ ಅವಘಡಕ್ಕೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಆದ್ರೆ ಗೊಡೋನ್‌ ಕೆಲಸ ಮಾಡ್ತಿದ್ದ ರಾಹುಲ್‌, ಸಿಲಿಂಡರ್‌ಗಳು ಸ್ಫೋಟಗೊಂಡ ಸದ್ದು ಕೇಳಿಸಿತು ಎಂಬುದಾಗಿ ಹೇಳಿದ್ದಾರೆ. ಈ ಕುರಿತು ಪರಿಶೀಲನೆ ನಡೆಯುತ್ತಿದೆ. ಇದನ್ನೂ ಓದಿ: 9 ವರ್ಷವಾದ್ರೂ ಪೂರ್ಣಗೊಳ್ಳದ ಶಿರಾಡಿ ಘಾಟ್ ರಸ್ತೆ – ಅಧಿಕ ಮಳೆಯಾದರೆ ಅನಾಹುತ ಫಿಕ್ಸ್?

ಬೆಂಕಿ ಬಿದ್ದ ಗೊಡೋನ್‌ನಲ್ಲಿ ಲಾಗ್‌ಗಳು ಮತ್ತು ಟೆಂಟ್ ವಸ್ತುಗಳನ್ನು ಸಂಗ್ರಹಿಸಲಾಗಿತ್ತು. ಇದನ್ನೂ ಓದಿ: ರಿಕ್ಕಿ ರೈ ಮೇಲೆ ಶೂಟೌಟ್‌ ಕೇಸ್‌: ಮುತ್ತಪ್ಪ ರೈ 2ನೇ ಪತ್ನಿ ಅನುರಾಧ ಸೇರಿ ನಾಲ್ವರ ವಿರುದ್ಧ FIR

Share This Article