Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾಲ್ತುಳಿತ ದುರ್ಘಟನೆ – ಜೂ.13ರಂದು ರಾಜ್ಯ ಸರ್ಕಾರದ ವಿರುದ್ಧ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ: ವಿಜಯೇಂದ್ರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕಾಲ್ತುಳಿತ ದುರ್ಘಟನೆ – ಜೂ.13ರಂದು ರಾಜ್ಯ ಸರ್ಕಾರದ ವಿರುದ್ಧ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ: ವಿಜಯೇಂದ್ರ

Bengaluru City

ಕಾಲ್ತುಳಿತ ದುರ್ಘಟನೆ – ಜೂ.13ರಂದು ರಾಜ್ಯ ಸರ್ಕಾರದ ವಿರುದ್ಧ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ: ವಿಜಯೇಂದ್ರ

Public TV
Last updated: June 10, 2025 6:29 pm
Public TV
Share
3 Min Read
BY Vijayendra
SHARE

– ಕರ್ತವ್ಯನಿರತ ಹೈಕೋರ್ಟ್ ನ್ಯಾಯಮೂರ್ತಿಗಳಿಂದ ತನಿಖೆಗೆ ಆಗ್ರಹ

ಬೆಂಗಳೂರು: ಜನವಿರೋಧಿ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ಸರ್ಕಾರದ (Congress Government) ವಿರುದ್ಧ ಬೃಹತ್ ಹೋರಾಟ ಮಾಡಲು ತೀರ್ಮಾನಿಸಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ ವಿಜಯೇಂದ್ರ (BY Vijayendra) ಅವರು ಪ್ರಕಟಿಸಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಜನವಿರೋಧಿ ಕಾಂಗ್ರೆಸ್ ಸರ್ಕಾರ ಕಿತ್ತೊಗೆಯುವ ವರೆಗೂ ಹೋರಾಟ ಮುಂದುವರೆಸಲು ನಿರ್ಧರಿಸಿದ್ದೇವೆ. ಜೂನ್ 13ರಂದು ಬೆಂಗಳೂರು (Bengaluru) ಮಹಾನಗರದ ಫ್ರೀಡಂ ಪಾರ್ಕಿನಲ್ಲಿ ಪ್ರತಿಭಟನೆ ಇದೆ. ಬಿಜೆಪಿ ಕಾರ್ಯಕರ್ತರು, ಘಟನೆಯಲ್ಲಿ ನೊಂದ ಕುಟುಂಬಗಳ ಸದಸ್ಯರು, ನೊಂದವರು ಬರಲಿದ್ದಾರೆ. ಸುಮಾರು 15- 20 ಸಾವಿರ ಸಂಖ್ಯೆಯಲ್ಲಿ ಪ್ರತಿಭಟನಾಕಾರರು ಸೇರಲಿದ್ದಾರೆ ಎಂದು ವಿವರಿಸಿದರು. ಇದನ್ನೂ ಓದಿ: ಅಭಿಮಾನಿಗಳಿಗೆ ಬಿಗ್‌ ಶಾಕ್‌ – ಆರ್‌ಸಿಬಿ ಸೇಲ್‌..?

Chinnaswamy Stampede

ಆರ್‌ಸಿಬಿ ಗೆಲುವಿನ ಸಂಭ್ರಮಾಚರಣೆಯಲ್ಲಿ ನಡೆದ ಕಾಲ್ತುಳಿತ, 11 ಸಾವಿನ ಸಂಬಂಧ ದುರ್ಘಟನೆಯಲ್ಲಿ ಆರೋಪಿ ನಂ.1 ಆರ್‌ಸಿಬಿ ಅಲ್ಲ, ಆರ್‌ಸಿಬಿ, ಕೆಎಸ್‌ಸಿಎ, ಡಿಎನ್‍ಎ ಅವರು ಕೂಡ ಆರೋಪಿಗಳೇ ಆಗಿದ್ದಾರೆ. ಮುಖ್ಯಮಂತ್ರಿಗಳೇ ಆರೋಪಿ ನಂ.1, ಉಪ ಮುಖ್ಯಮಂತ್ರಿಗಳು (Chief Minister) 2ನೇ ಆರೋಪಿ, ಕೈಕಟ್ಟಿ ಕುಳಿತಿದ್ದ ಗೃಹ ಸಚಿವ ಪರಮೇಶ್ವರ್ ಅವರು ಆರೋಪಿ ನಂ.3, ನಂತರದ ಹೊಣೆಗಾರರು ಆರ್‌ಸಿಬಿ, ಕೆಎಸ್‌ಸಿಎ, ಡಿಎನ್‍ಎ ಎಂದು ತಿಳಿಸಿದರು. ಇದನ್ನೂ ಓದಿ: ಸಿದ್ದು ಸಂಪುಟಕ್ಕೆ ನಡೆಯುತ್ತಾ ಮೇಜರ್‌ ಸರ್ಜರಿ? – 10 ಸಚಿವರಿಗೆ ಕೊಕ್‌ ಸಾಧ್ಯತೆ

Chinnaswamy Stadium Stampede

ಸರ್ಕಾರಕ್ಕೆ ಕ್ಲೀನ್ ಚಿಟ್ ಪಡೆಯಲೆಂದೇ…
ಕರ್ತವ್ಯನಿರತ ಹೈಕೋರ್ಟ್ ನ್ಯಾಯಮೂರ್ತಿಗಳಿಂದ ಈ ಪ್ರಕರಣದ ತನಿಖೆ ನಡೆಸಬೇಕೆಂದು ಬಿಜೆಪಿ ಆಗ್ರಹಿಸಿತ್ತು. ಸಿಐಡಿ ತನಿಖೆಗೆ ಕೊಟ್ಟರು. ಮತ್ತೊಂದು ಕಡೆ ನಿವೃತ್ತ ಹೈಕೋರ್ಟ್ ನ್ಯಾಯಮೂರ್ತಿಗಳಿಂದ ತನಿಖೆಗೆ ಆದೇಶಿಸಿದ್ದಾರೆ. ಅವರಿಗೆ ಬೇಕಾದವರನ್ನು ನೇಮಿಸಿ ರಾಜ್ಯ ಸರ್ಕಾರಕ್ಕೆ ಕ್ಲೀನ್ ಚಿಟ್ ಕೊಟ್ಟು ಅಧಿಕಾರಿಗಳ ಮೇಲೆ ಗೂಬೆ ಕೂರಿಸಿ ಹೊಣೆಯಿಂದ ತಪ್ಪಿಸಿಕೊಳ್ಳಲೆಂದೇ ಹೀಗೆ ಮಾಡಿದ್ದಾರೆ ಎಂದು ಆರೋಪಿಸಿದರು. ರಾಜ್ಯ ಸರ್ಕಾರಕ್ಕೆ ಕಿಂಚಿತ್ತಾದರೂ ಮಾನಮರ್ಯಾದೆ ಇದ್ದರೆ ಹೈಕೋರ್ಟ್‍ನ ಸಿಟ್ಟಿಂಗ್ ನ್ಯಾಯಮೂರ್ತಿಗಳಿಂದ ಈ ಪ್ರಕರಣದ ತನಿಖೆ ನಡೆಸಲಿ ಎಂದು ವಿಜಯೇಂದ್ರ ಅವರು ಆಗ್ರಹಿಸಿದರು.

vidhana soudha RCB Siddaramaiah DK Shivakumar

ಸಿಎಂ, ಡಿಸಿಎಂ ನಡುವೆ ಪೈಪೋಟಿ..
ಸಿಎಂ, ಡಿಸಿಎಂ ನಡುವೆ ಪೈಪೋಟಿ ಇತ್ತು. ತಮ್ಮ ಜನಪ್ರಿಯತೆಗಾಗಿ ವಿಧಾನಸೌಧದ ಮುಂದೆ ಮುಖ್ಯಮಂತ್ರಿ ಕಾರ್ಯಕ್ರಮ ಆಯೋಜಿಸಿದ್ದರು. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಡಿ.ಕೆ.ಶಿವಕುಮಾರ್ ಕಾರ್ಯಕ್ರಮ ಏರ್ಪಡಿಸಿದ್ದರು ಎಂದು ಪ್ರಶ್ನೆಗೆ ಉತ್ತರಿಸಿದರು. ಇವರ ಗೊಂದಲದಿಂದ ಬಲಿ ಆದುದು ಯಾರು? ಯಾರ ಮರ್ಯಾದೆ ಹೋಗಿದೆ? ಎಂದು ವಿಜಯೇಂದ್ರ ಅವರು ಕೇಳಿದರು. ಚಿನ್ನಸ್ವಾಮಿ ಸ್ಟೇಡಿಯಂ ವಿಚಾರದಲ್ಲಿ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ. ಸಿಎಂ, ಡಿಸಿಎಂ ನಡುವೆ ಸಂಬಂಧವೇ ಇಲ್ಲದ ಸರ್ಕಾರ ಎಂದು ಮುಖ್ಯಮಂತ್ರಿಗಳು ಹೇಳಿಕೆ ಕೊಡಲಿ ಎಂದು ಅವರು ಒತ್ತಾಯಿಸಿದರು.

RCB KOHLI DK SHIVAKUMAR

ರಾಜ್ಯದ ಗೌರವವನ್ನೂ ಹಾಳು ಮಾಡಿದ್ದಾರೆ
ವಿಧಾನಸೌಧದ ಮುಂದೆ ರಾಜಕಾರಣಿಗಳ ಉಪಟಳ ತಡೆಯಲು ಸಾಧ್ಯವಾಗದೆ ಆರ್‌ಸಿಬಿ ಅಭಿಮಾನಿಗಳು ವಿಧಾನಸೌಧದ ಮೆಟ್ಟಿಲ ಬಳಿ ಚಪ್ಪಲಿ, ಕಲ್ಲು ತೂರಿದ್ದಾರೆ. ಇವರಿಗೆ ಸೆಲ್ಫಿ ಚಟ, ಜನಪ್ರಿಯತೆಯ ಚಟ ಇತ್ತು. ರಾಜ್ಯದ ಗೌರವವನ್ನೂ ಹಾಳು ಮಾಡಿದ್ದಾರೆ ಎಂದು ಟೀಕಿಸಿದರು. ಇದನ್ನೂ ಓದಿ: ಅಡ್ಡವಾಗಿ ಕಾಲುಗಳು, ಮೂಲೆಯಲ್ಲಿ ತಲೆ – ಸೂಟ್‌ಕೇಸ್‌ನಲ್ಲಿ ಮಹಿಳೆಯ ಮೃತದೇಹ ಪತ್ತೆ

ಮಾನ್ಯ ರಾಜ್ಯಪಾಲರನ್ನು ತಪ್ಪು ದಾರಿಗೆ ಎಳೆದು ಅವರನ್ನೂ ಕೂರಿಸಿಕೊಂಡಿದ್ದರು. ವಿಧಾನಸೌಧದಲ್ಲಿ ಕಾರ್ಯಕ್ರಮ ಮಾಡಲು ನಾವು ಹೇಳಿದ್ದೇವಾ? ನಾವು ಮೆರವಣಿಗೆಗೆ ಅವಕಾಶ ಕೋರಿದ್ದೆವು. ಮೆರವಣಿಗೆ ಮಾಡಿದ್ದರೆ ಬಹುಶಃ ದುರ್ಘಟನೆ ನಡೆಯುತ್ತಿರಲಿಲ್ಲ ಎಂದು ಪ್ರಶ್ನೆಗೆ ಉತ್ತರ ನೀಡಿದರು. ನಾವು ಅಭಿಮಾನಿಗಳ ಪರವಾಗಿ ಕರೆ ಕೊಟ್ಟಿದ್ದೇವೆ. ಆದರೆ, ಸರ್ಕಾರಕ್ಕೆ ಜವಾಬ್ದಾರಿ ಇಲ್ಲವೇ ಎಂದು ಕೇಳಿದರು. ಕಾನೂನು- ಸುವ್ಯವಸ್ಥೆ ಸರ್ಕಾರದ ಹೊಣೆಯಲ್ಲವೇ? ಅದು ವಿಪಕ್ಷದ ಜವಾಬ್ದಾರಿಯೇ ಎಂದು ಪ್ರಶ್ನೆಯನ್ನು ಮುಂದಿಟ್ಟರು. ಇದನ್ನೂ ಓದಿ: ಡಿಜಿಟಲ್ ಅರೆಸ್ಟ್ ಹೆಸರಲ್ಲಿ ವೃದ್ಧ ದಂಪತಿಯಿಂದ 4.79 ಕೋಟಿ ಸುಲಿಗೆ – ಇಬ್ಬರು ಅರೆಸ್ಟ್

ರಾಜ್ಯ ಸರ್ಕಾರ ದಪ್ಪ ಚರ್ಮದ್ದು..
ದೇಶದ- ನಾಡಿನ ಜನರ ಭಾವನೆಯನ್ನು ರಾಜ್ಯದ ಮುಖ್ಯಮಂತ್ರಿಗಳಿಗೆ ತಿಳಿಸುವ ಉದ್ದೇಶದಿಂದ ಇವತ್ತು ಸಿಎಂಗೆ ಬಹಿರಂಗ ಪತ್ರ ಬರೆದಿರುವುದಾಗಿ ಅವರು ಹೇಳಿದರು. ಪ್ರಾಣ ಕಳಕೊಂಡ, ನೊಂದ ಕುಟುಂಬಗಳ ಸದಸ್ಯರ ಭಾವನೆಯು ರಾಜ್ಯದ ಸಿಎಂ, ಡಿಸಿಎಂ, ರಾಜ್ಯ ಸರ್ಕಾರಕ್ಕೆ ಅರ್ಥ ಆಗಬೇಕೆಂಬ ನಿಟ್ಟಿನಲ್ಲಿ ಪತ್ರ ಬರೆದುದಾಗಿ ಸ್ಪಷ್ಟಪಡಿಸಿದರು. ಪತ್ರ ನೋಡಿ ಮುಖ್ಯಮಂತ್ರಿಗಳು ಸ್ಪಂದಿಸುವ ವಿಶ್ವಾಸ ನನಗಿಲ್ಲ; ರಾಜ್ಯ ಸರಕಾರ ದಪ್ಪ ಚರ್ಮದ್ದು ಎಂದು ವಿಜಯೇಂದ್ರ ಅವರು ವ್ಯಂಗ್ಯವಾಡಿದರು.

TAGGED:bengalurubjpBY Vijayendracongressrcbsiddaramaiahಆರ್‍ಸಿಬಿಕಾಂಗ್ರೆಸ್ಕಾಲ್ತುಳಿತಬಿಜೆಪಿವಿಜಯೇಂದ್ರಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Sarse Ninna Seraga Sarse song jogi prem
ಸರ್ಸೆ ಸೆರಗ ಸೆರ್ಸೆ ಹಾಡಿನಲ್ಲಿ ಅಶ್ಲೀಲತೆ ಆರೋಪ – ನಿರ್ದೇಶಕ ಪ್ರೇಮ್ ಸೇರಿ ಹಲವರಿಗೆ ಮಹಿಳಾ ಆಯೋಗ ನೋಟಿಸ್
Cinema Latest Main Post Sandalwood
Dhurandhar 2
ವಿಶ್ವದಾದ್ಯಂತ ‘ಧುರಂಧರ್‌ 2’ ರಿಲೀಸ್‌ – ರಣವೀರ್‌ ಸಿಂಗ್‌ ಕಮಾಲ್‌
Bollywood Cinema Latest Main Post
KD Vulgar Song Controversy I will write and release a new song Director Prem apologizes 1
ಹೊಸ ಹಾಡನ್ನು ಬರೆದು ಬಿಡುಗಡೆ ಮಾಡುತ್ತೇನೆ: ಕ್ಷಮೆ ಕೇಳಿದ ಪ್ರೇಮ್‌
Bengaluru City Cinema Districts Latest Main Post
KD The Devil Thanks for opposing the song Nora Fatehi Reacts To Vulgar Song Controversy
ಸಾಂಗ್‌ ವಿರೋಧಿಸಿದ್ದಕ್ಕೆ ಥ್ಯಾಂಕ್ಸ್‌ – ಕೆಡಿಯ ಸರ್ಸೆ ಸೆರಗ ಹಾಡಿಗೆ ನೋರಾ ಕಿಡಿ ಕಿಡಿ
Bollywood Cinema Latest Sandalwood

You Might Also Like

Flights
Latest

ಮಧ್ಯಪ್ರಾಚ್ಯ ಸಂಘರ್ಷ – ಭಾರತದ ಪ್ರವಾಸೋದ್ಯಮ, ವಿಮಾನಯಾನ ಕ್ಷೇತ್ರಕ್ಕೆ ಆತಂಕ

Public TV
By Public TV
2 minutes ago
Indian Origin Men Fined Rs 1.7 Lakh Each In for Spitting Paan On Streets
Latest

ಲಂಡನ್‌ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರಿಗೆ ತಲಾ 1.7 ಲಕ್ಷ ದಂಡ

Public TV
By Public TV
10 minutes ago
Pralhad Joshi 1
Latest

ನವೀಕರಿಸಬಹುದಾದ ಇಂಧನದಲ್ಲಿ ಭಾರತ 3ನೇ ಅತಿದೊಡ್ಡ ರಾಷ್ಟ್ರ: ಪ್ರಹ್ಲಾದ್ ಜೋಶಿ

Public TV
By Public TV
47 minutes ago
Droupadi Murmu Ram Temple
Ayodhya Ram Mandir

ಅಯೋಧ್ಯೆ ರಾಮಮಂದಿರಕ್ಕೆ ದ್ರೌಪದಿ ಮುರ್ಮು ಭೇಟಿ – 150 ಕೆಜಿ ತೂಕದ ಚಿನ್ನ ಲೇಪಿತ ಲೋಹದ ತಟ್ಟೆ ಪ್ರತಿಷ್ಠಾಪನೆ

Public TV
By Public TV
47 minutes ago
Ras Laffan
Latest

ವಿಶ್ವದ ಅತಿ ದೊಡ್ಡ LNG ಸ್ಥಾವರದ ಮೇಲೆ ಇರಾನ್‌ ದಾಳಿ- ಭಾರತದ ಮೇಲೆ ಪರಿಣಾಮ ಏನು?

Public TV
By Public TV
48 minutes ago
Yatnal
Davanagere

ದಾವಣಗೆರೆ ಬಿಜೆಪಿ ಟಿಕೆಟ್ ಬದಲಾದ್ರೂ ಆಶ್ಚರ್ಯ ಇಲ್ಲ: ಯತ್ನಾಳ್‌ ಹೊಸ ಬಾಂಬ್‌

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?