Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಲೆಮಹದೇಶ್ವರ ಅಭಿವೃದ್ಧಿಗೆ ಮಾಸ್ಟರ್ ಪ್ಲಾನ್: ಸಿಎಂ ಬೊಮ್ಮಾಯಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chamarajanagar | ಮಲೆಮಹದೇಶ್ವರ ಅಭಿವೃದ್ಧಿಗೆ ಮಾಸ್ಟರ್ ಪ್ಲಾನ್: ಸಿಎಂ ಬೊಮ್ಮಾಯಿ

Chamarajanagar

ಮಲೆಮಹದೇಶ್ವರ ಅಭಿವೃದ್ಧಿಗೆ ಮಾಸ್ಟರ್ ಪ್ಲಾನ್: ಸಿಎಂ ಬೊಮ್ಮಾಯಿ

Public TV
Last updated: December 13, 2022 10:50 pm
Public TV
Share
2 Min Read
male mahadeshwar Chamarajanagar Basavaraj Bommai 3
SHARE

ಚಾಮರಾಜನಗರದ: ನಗರದ ಪ್ರಸಿದ್ಧ ಮಲೆಮಹದೇಶ್ವರ ಬೆಟ್ಟದ (Male Mahadeshwara Hill) ಅಭಿವೃದ್ಧಿಗೆ (Development) ಅಗತ್ಯವಿರುವ ವ್ಯವಸ್ಥೆಗಳನ್ನು ಒದಗಿಸಲು ಮಾಸ್ಟರ್ ಪ್ಲಾನ್ ರಚಿಸಲು ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಮಂಗಳವಾರ ತಿಳಿಸಿದ್ದಾರೆ.

ಬೊಮ್ಮಾಯಿ ಅವರು ಇಂದು ತಮ್ಮ ಅಧ್ಯಕ್ಷತೆಯಲ್ಲಿ ನಡೆದ ಮಲೆಮಹದೇಶ್ವರದಲ್ಲಿ ಮಹದೇಶ್ವರ ಪ್ರಾಧಿಕಾರದ ಸಭೆಯ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿ, ಬೆಟ್ಟಕ್ಕೆ ಭಕ್ತಾದಿಗಳು ಹೆಚ್ಚಾಗಿ ಬರುತ್ತಿದ್ದು, ಪ್ರತಿದಿನ 10-20 ಸಾವಿರ ಜನರು ಭೇಟಿ ನೀಡುತ್ತಿದ್ದಾರೆ. ಅಮಾವಾಸ್ಯೆ, ಹುಣ್ಣಿಮೆ ದಿನಗಳಂದು, ವಾರಾಂತ್ಯಗಳಲ್ಲಿ ಇನ್ನೂ ಹೆಚ್ಚಾಗಿ ಬರುತ್ತಾರೆ. ಜಾತ್ರೆಗಳು ನಡೆಯುವ ವೇಳೆ ಲಕ್ಷಾಂತರ ಜನರು ಸೇರುತ್ತಾರೆ. ಇಲ್ಲಿ 159 ಎಕರೆ ಪ್ರದೇಶವಿದ್ದು, ಇನ್ನೂ 70 ಎಕರೆ ಬಳಕೆಯಾಗಿಲ್ಲ. 80 ಎಕರೆಯಲ್ಲಿ ತಾತ್ಕಾಲಿಕವಾಗಿ ನಿರ್ಮಿಸಲಾಗಿರುವ ಶೆಡ್‌ಗಳನ್ನು ತೆಗೆದು ಏನು ಮಾಡಲು ಸಾಧ್ಯವಿದೆ ಎಂದು ಪರಿಶೀಲಿಸಲಾಗುತ್ತದೆ. ಮೂಲ ದೇವಸ್ಥಾನದ 70 ಎಕರೆಗೆ ಮಾಸ್ಟರ್ ಪ್ಲಾನ್ ರಚಿಸಿ ಯೋಜನಾಬದ್ಧವಾಗಿ ಅನುಷ್ಠಾನ ಗೊಳಿಸಬೇಕು. ಬಡಜನರು ಇಲ್ಲಿಗೆ ಹೆಚ್ಚು ಬರುವುದರಿಂದ ಡಾರ್ಮಿಟರಿಗಳನ್ನು ನಿರ್ಮಿಸಬೇಕು. ಸುಮಾರು 5 ಸಾವಿರ ಜನರು ಒಂದೇ ಬಾರಿಗೆ ಉಳಿದುಕೊಳ್ಳುವ ವ್ಯವಸ್ಥೆಯಾಗಬೇಕು ಎಂದು ಸೂಚಿಸಲಾಗಿದೆ ಎಂದರು.

male mahadeshwar Chamarajanagar Basavaraj Bommai

ಮೂರ್ತಿ ಅನಾವರಣ:
ಮಲೆಮಹದೇಶ್ವರನ ಮೂರ್ತಿ ಪೂರ್ಣಗೊಂಡಿದ್ದು, ಅದು ಮುಂದಿನ ತಿಂಗಳು ಅನಾವರಣವಾಗಲಿದೆ. ಹಲವಾರು ಕಾರ್ಯಕ್ರಮಗಳನ್ನು ನಿಗದಿತ ಸಮಯದಲ್ಲಿ ಪೂರ್ಣಗೊಳಿಸಲು ತಿಳಿಸಲಾಗಿದೆ ಎಂದು ಹೇಳಿದರು.

ಸಂಪರ್ಕ ರಸ್ತೆಗೆ 100 ಕೋಟಿ:
ಮಲೆಮಹದೇಶ್ವರ ಕ್ಷೇತ್ರದಲ್ಲಿ ಹತ್ತು ಹಲವಾರು ಅಭಿವೃದ್ಧಿ ಕಾರ್ಯಕ್ರಮಗಳನ್ನು ಪ್ರಾರಂಭಿಸಿ ನಿಗದಿತ ಸಮಯದಲ್ಲಿ ಪೂರ್ಣಗೊಳಿಸಲು ಸೂಚಿಸಲಾಗಿದೆ. ಈ ಪ್ರದೇಶದಲ್ಲಿ ಒಳಚರಂಡಿ ವ್ಯವಸ್ಥೆ ಬಹಳ ಪ್ರಮುಖವಾಗಿದ್ದು, ಕಾಮಗಾರಿಯನ್ನು ಶೀಘ್ರವಾಗಿ ಪೂರ್ಣಗೊಳಿಸಬೇಕು. ಈ ಪ್ರದೇಶಕ್ಕೆ ಸಂಪರ್ಕ ರಸ್ತೆ ನಿರ್ಮಿಸಲು 100 ಕೋಟಿ ರೂ. ಮಲೆಮಹದೇಶ್ವರ ಬೆಟ್ಟ ಹಾಗೂ ಕ್ಷೇತ್ರದ ಎರಡೂ ಬದಿಗಳಿಗೆ ರಸ್ತೆ ನಿರ್ಮಾಣಕ್ಕೆ ಸಂಬಂಧಪಟ್ಟ ಇಲಾಖೆಗೆ ಹಣವನ್ನು ನೀಡಲಾಗುವುದು. ಒಟ್ಟಾರೆ ಮಲೆಮಹದೇಶ್ವರ ಬೆಟ್ಟದ ಯೋಜನಾಬದ್ಧವಾದ ಅಭಿವೃದ್ಧಿ ಸರ್ಕಾರದ ಮುಂದಿರುವ ಗುರಿಯಾಗಿದೆ ಎಂದು ಬೊಮ್ಮಾಯಿ ತಿಳಿಸಿದರು.

male mahadeshwar Chamarajanagar Basavaraj Bommai 2

ಕ್ಷೇತ್ರದಲ್ಲಿ ಭಕ್ತಾದಿಗಳ ಎಲ್ಲಾ ರೀತಿಯ ಸೌಕರ್ಯಗಳನ್ನು ಒದಗಿಸುವ ವ್ಯವಸ್ಥೆ ಮಾಡಲಾಗುವುದು. ಶ್ರೀ ಕ್ಷೇತ್ರದಲ್ಲಿ ದೇವರ ಸನ್ನಿಧಾನಕ್ಕೆ ಸಾಲುಗಟ್ಟಿ ನಿಲ್ಲುವ ಭಕ್ತರಿಗೆ ನೆರಳು ಹಾಗೂ ನೀರಿನ ವ್ಯವಸ್ಥೆ ಸೇರಿದಂತೆ ವಿವಿಧ ಸೌಕರ್ಯಗಳನ್ನು ಕಲ್ಪಿಸಲು ಅನುಮೋದನೆಯನ್ನು ನೀಡಲಾಗಿದೆ ಎಂದರು. ಇದನ್ನೂ ಓದಿ: ಚಾಮರಾಜನಗರಕ್ಕೆ ಹೋಗಬಾರದು ಅಂತಾರೆ, ಇಲ್ಲಿಗೆ ಬಂದಿರುವ ನಾನೇ ಪುಣ್ಯವಂತ: ಬೊಮ್ಮಾಯಿ‌

ಹುಲಿ ಯೋಜನೆ:
ಹುಲಿ ಯೋಜನೆಯ ಪ್ರಸ್ತಾಪ ವನ್ಯಜೀವಿ ಮಂಡಳಿಯ ಮುಂದಿದ್ದು, ಈ ಬಗ್ಗೆ ಯಾವುದೇ ತೀರ್ಮಾನವಾಗಿಲ್ಲ. ಈ ಯೋಜನೆಯ ಅನುಷ್ಠಾನದ ಸಂದರ್ಭದಲ್ಲಿ ಇಲ್ಲಿನ ಜನವಸತಿಗೆ ಯಾವುದೇ ರೀತಿಯ ತೊಂದರೆಯಾಗುವ ಬಗ್ಗೆ ಕೆಲವು ಸಂದೇಹಗಳು ವ್ಯಕ್ತವಾಗಿದೆ. ಈ ಬಗ್ಗೆ ಯಾವುದೇ ತೀರ್ಮಾನವಾಗಿಲ್ಲ ಎಂದು ತಿಳಿಸಿದರು.

male mahadeshwar Chamarajanagar Basavaraj Bommai 1

ಗಡಿ ವಿಚಾರ – ರಾಜ್ಯ ಅಚಲ ನಿಲುವು:
ನಾಳೆ ನವದೆಹಲಿಯ ಪ್ರವಾಸ ಕೈಗೊಳ್ಳುತ್ತಿದ್ದು, ಗಡಿ ವಿಚಾರದ ಬಗ್ಗೆ ಚರ್ಚಿಸಲು ಬೆಳಗಾವಿ ಉಸ್ತುವಾರಿ ಸಚಿವರು, ಎಜಿ, ಗೃಹಸಚಿವರು ಇರಲಿದ್ದಾರೆ. ರಾಜ್ಯ ಪುನರ್‌ರಚನೆ ನಂತರದ ಎಲ್ಲಾ ಬೆಳವಣಿಗೆಗಳು, ಗಡಿಗಳ ಬಗ್ಗೆ ರಾಜ್ಯದ ಅಚಲವಾದ ನಿಲುವನ್ನು ನಾಳಿನ ಸಭೆಯಲ್ಲಿ ಪುನಃ ಪ್ರತಿಪಾದಿಸಲಾಗುವುದು ಎಂದರು. ಇದನ್ನೂ ಓದಿ: ಡಿಸೆಂಬರ್ 15ಕ್ಕೆ ಜೆಪಿ ನಡ್ಡಾ ರಾಜ್ಯಕ್ಕೆ ಎಂಟ್ರಿ – 10 ಜಿಲ್ಲೆಗಳಲ್ಲಿ ಪಕ್ಷದ ನೂತನ ಕಾರ್ಯಾಲಯಗಳ ಉದ್ಘಾಟನೆ

Live Tv
[brid partner=56869869 player=32851 video=960834 autoplay=true]

TAGGED:Basavaraj BommaichamarajanagarMale Mahadeshwara Hillಚಾಮರಾಜನಗರಬಸವರಾಜ ಬೊಮ್ಮಾಯಿಮಲೆಮಹದೇಶ್ವರ ಬೆಟ್ಟ
Share This Article
Facebook Whatsapp Whatsapp Telegram

Cinema news

Sangeeth Sagar
ಸಿನಿಮಾ ಚಿತ್ರೀಕರಣ ವೇಳೆ ಹೃದಯಾಘಾತದಿಂದ ನಿರ್ದೇಶಕ ಸಂಗೀತ್‌ ಸಾಗರ್‌ ಸಾವು
Cinema Latest Main Post Sandalwood Shivamogga
Dhanya Ramkumar
ಶಾರುಖ್ ಪುತ್ರನ ಜೊತೆ ಧನ್ಯಾ ರಾಮ್‌ಕುಮಾರ್; ಬಾಲಿವುಡ್‌ ಪ್ಲ್ಯಾನ್‌ನಲ್ಲಿದ್ದಾರಾ?
Bollywood Cinema Latest Sandalwood Top Stories
Jai Lalitha Serial
ಹೊಸ ಧಾರಾವಾಹಿ: ರಾಕಿಂಗ್ ಸ್ಟಾರ್ ಯಶ್ ಅಭಿಮಾನಿ ಜೈ ಲಲಿತಾ
Cinema Latest Top Stories TV Shows
Arjun Janya
ಅರ್ಜುನ್ ಜನ್ಯ ಸಂಯೋಜನೆಯಲ್ಲಿ ʻಮಹಾಗುರು ಮಹಾದೇವʼ ಆಲ್ಬಂ
Cinema Latest Sandalwood

You Might Also Like

Drumstick Main
Bengaluru City

ಗ್ರಾಹಕರಿಗೆ ಶಾಕ್ – ನುಗ್ಗೇಕಾಯಿ ಕೆಜಿಗೆ 700 ರೂ.

Public TV
By Public TV
4 hours ago
Bengaluru Andrahalli
Bengaluru City

ಪ್ರೀತಿಸಿ ಮದ್ವೆಯಾಗಿದ್ದ ನವವಿವಾಹಿತೆ ಮೂರೇ ತಿಂಗಳಿಗೆ ಆತ್ಮಹತ್ಯೆ!

Public TV
By Public TV
5 hours ago
d.k.shivakumar KPCC
Latest

ಡಿ.8 ರ ಸರ್ವಪಕ್ಷ‌ ಸಭೆ ಮುಂದೂಡಿಕೆ: ಡಿ.ಕೆ.ಶಿವಕುಮಾರ್

Public TV
By Public TV
5 hours ago
N chaluvarayaswamy
Districts

ಎರಡೂವರೆ ವರ್ಷಗಳಲ್ಲಿ ಮಂಡ್ಯ ಅಭಿವೃದ್ಧಿಗೆ 10 ಸಾವಿರ ಕೋಟಿ ಅನುದಾನ – ಚಲುವರಾಯಸ್ವಾಮಿ

Public TV
By Public TV
5 hours ago
Lawrence Bishnoi
Districts

ಹನುಮ ಮಾಲಾಧಾರಿಯಿಂದ ಗ್ಯಾಂಗ್‌ಸ್ಟರ್‌ ಲಾರೆನ್ಸ್ ಬಿಷ್ಣೋಯ್‌ ಫೋಟೋ ಪ್ರದರ್ಶನ

Public TV
By Public TV
5 hours ago
IndiGo
Latest

ದೇಶಾದ್ಯಂತ 200 ವಿಮಾನಗಳ ಹಾರಾಟ ರದ್ದು – ಕ್ಷಮೆ ಕೋರಿದ ಇಂಡಿಗೋ

Public TV
By Public TV
6 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?