ರಾಮನಗರ: ಮಾಸ್ತಿಗುಡಿ ಕ್ಲೈಮ್ಯಾಕ್ಸ್ ದುರಂತ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಚಾರಣೆಗೆ ಹಾಜರಾಗದಿದ್ದ ನಿರ್ಮಾಪಕ ಸುಂದರ್ ಪಿ ಗೌಡಗೆ ರಾಮನಗರ ಜೆಎಂಎಫ್ ಸಿ ಕೋರ್ಟ್ ಜಾಮೀನು ರಹಿತ ಬಂಧನದ ವಾರೆಂಟ್ ಆದೇಶಿಸಿದೆ.
ಜಾಮೀನು ರಹಿತ ವಾರೆಂಟ್ ಹಿನ್ನೆಲೆಯಲ್ಲಿ ಸುಂದರ್ ಪಿ ಗೌಡನನ್ನ ಬಂಧಿಸಲು ಪೊಲೀಸರು ತೆರಳಿದ್ದ ವೇಳೆ ಹೈಡ್ರಾಮವೇ ನಡೆದಿದೆ. ಮಂಗಳವಾರ ಸಂಜೆ ವೇಳೆ ತಾವರೆಕೆರೆ ಪೊಲೀಸರು ವಾರೆಂಟ್ ಹಿಡಿದು ಬೆಂಗಳೂರಿನ ಸುಂದರ್ ಮನೆಗೆ ತೆರಳಿದ್ದರು.
ಈ ವೇಳೆ ಮನೆಯಲ್ಲಿ ಸುಂದರ್ ಹಾಗೂ ನಟ ದುನಿಯ ವಿಜಯ್ ಚರ್ಚೆಯಲ್ಲಿ ತೊಡಗಿದ್ದರು. ವಾರೆಂಟ್ ವಿಚಾರ ತಿಳಿಸಿದ ಪೊಲೀಸರು ಸುಂದರ್ ಬಂಧನಕ್ಕೆ ಮುಂದಾಗಿದ್ದರು. ಈ ವೇಳೆ ಬಟ್ಟೆ ಧರಿಸಿ ಬರುವುದಾಗಿ ಹೇಳಿ ಹೋಗಿದ್ದ ಸುಂದರಗೌಡ ಪರಾರಿಯಾಗಿದ್ದಾರೆ.
ಆರೋಪಿಯ ಸುಂದರ್ ಪಿ ಗೌಡ ತಾಯಿ ಆರೋಗ್ಯದ ಸಮಸ್ಯೆ ಹಿನ್ನೆಲೆ ತಾವೇ ನಾಳೆ ಕರೆತರುವುದಾಗಿ ದುನಿಯಾ ವಿಜಯ್ ಮಧ್ಯಸ್ತಿಕೆ ವಹಿಸಿದ್ದರು. ದುನಿಯ ವಿಜಯ್ ತಾವೇ ಸ್ವತಃ ಸುಂದರ್ ನನ್ನ ಪೊಲೀಸ್ ಠಾಣೆಗೆ ಕರೆತರುವುದಾಗಿ ಪೊಲೀಸರ ಮನವೊಲಿಸುವ ಪ್ರಯತ್ನ ಮಾಡಿದ್ದಾರೆ. ಆದರೆ ವಿಜಯ್ ಮಾತನ್ನು ನಿರಾಕರಿಸಿದ ತಾವರೆಕೆರೆ ಪೊಲೀಸರು ಸುಂದರ್ ಬಂಧನಕ್ಕೆ ಹುಡುಕಾಟ ನಡೆಸುತ್ತಿದ್ದಾರೆ.