ನೆಲಮಂಗಲ: ಮಠದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಸ್ವಾಮೀಜಿ ಸಾವನ್ನಪ್ಪಿರುವ ಘಟನೆ ನೆಲಮಂಗಲದಲ್ಲಿ ನಡೆದಿದೆ.
ಶ್ರೀ ಬಸವಲಿಂಗ ಸ್ವಾಮೀಜಿ(59) ಮೃತರಾಗಿದ್ದಾರೆ. ಸ್ವಾಮೀಜಿ ಸಾವಿನಿಂದ ಅಪಾರ ಭಕ್ತವೃಂದ ಆತಂಕಕ್ಕೆ ಒಳಗಾಗಿದ್ದಾರೆ. ಸ್ವಾಮೀಜಿ ಸಾವು ಹಲವು ಅನುಮಾನಗಳನ್ನು ಮೂಡಿಸಿದೆ. ಬೆಂಗಳೂರು ಹೊರವಲಯ ನೆಲಮಂಗಲ ವಿಧಾನ ಸಭಾ ಕ್ಷೇತ್ರದ ಸೋಲೂರು ಬಳಿಯ ಸಿದ್ದಗಂಗ ಮಠದ ಶಾಖಾ ಮಠ ಚಿಲುಮೆ ಮಠದ ಶ್ರೀಗಳ ಸಾವನಪ್ಪಿರುವುದು ಸಾಕಷ್ಟು ಅನುಮಾನಕ್ಕೆ ಕಾರಣವಾಗಿದೆ. ಇದನ್ನೂ ಓದಿ: 40 ಸಾವಿರ ವರ್ಷಗಳಿಂದ ಭಾರತೀಯರ ಡಿಎನ್ಎ ಒಂದೇ ಆಗಿದೆ: ಆರ್ಎಸ್ಎಸ್ ಮುಖ್ಯಸ್ಥ
ಮಾಗಡಿ ತಾಲೂಕಿನ ಸೋಲೂರಿನ ಚಿಲುಮೆ ಮಠದ ಕಿಟಕಿಯಲ್ಲಿ ನೇಣು ಬಿಗಿದ ಸ್ಥೀತಿಯಲ್ಲಿದ್ದ ಬಸವಲಿಂಗ ಶ್ರೀಗಳ ದೇಹ ಪತ್ತೆಯಾಗಿದೆ. ಕುದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಕೊಂಡ ಪೊಲೀಸರು ಹೆಚ್ಚಿನ ವಿಚಾರಣೆ ಆರಂಭಿಸಿದ್ದಾರೆ. ಮಠಕ್ಕೆ ವಿವಿಧ ಮಠಾಧೀಶರು ಭೇಟಿ ನೀಡಿದ್ದಾರೆ. ಇದನ್ನೂ ಓದಿ: ಹಿಂದುತ್ವದಲ್ಲಿ ನಂಬಿಕೆ ಇದ್ದವರು ಭಾರತೀಯರ DNA ಒಂದೇ ಎಂದು ಭಾವಿಸುತ್ತಾರೆ: ರಾಹುಲ್