Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜ್ಯದಲ್ಲಿ ಇಂದು 22 ಮಂದಿಗೆ ಕೊರೊನಾ, ಇಬ್ಬರು ಸಾವು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರಾಜ್ಯದಲ್ಲಿ ಇಂದು 22 ಮಂದಿಗೆ ಕೊರೊನಾ, ಇಬ್ಬರು ಸಾವು

Bengaluru City

ರಾಜ್ಯದಲ್ಲಿ ಇಂದು 22 ಮಂದಿಗೆ ಕೊರೊನಾ, ಇಬ್ಬರು ಸಾವು

Public TV
Last updated: May 5, 2020 6:12 pm
Public TV
Share
4 Min Read
Karnataka Corona
SHARE

– ಸೋಂಕಿತರ ಸಂಖ್ಯೆ 673ಕ್ಕೆ ಏರಿಕೆ, 29 ಮಂದಿ ಬಲಿ
– ದಾವರಣಗೆರೆಯಲ್ಲಿ ಕೊರೊನಾ ಸ್ಫೋಟ
– ಹೌಸ್ ಕೀಪರ್, ಕೂಲಿ ಕಾರ್ಮಿಕನಿಗೆ ಡೆಡ್ಲಿ ವೈರಸ್

ಬೆಂಗಳೂರು: ರಾಜ್ಯದಲ್ಲಿ ಡೆಡ್ಲಿ ಕೊರೊನಾ ವೈರಸ್ ನಿಯಂತ್ರಣಕ್ಕೆ ಬರುವಂತೆ ಕಾಣುತ್ತಿಲ್ಲ. ಇಂದು ಒಂದೇ ದಿನದಲ್ಲಿ 22 ಮಂದಿಗೆ ಸೋಂಕು ದೃಢಪಟ್ಟಿದೆ. ಅಷ್ಟೇ ಅಲ್ಲದೆ ಇಬ್ಬರು ಹೆಮ್ಮಾರಿ ವೈರಸ್‍ಗೆ ಬಲಿಯಾಗಿದ್ದಾರೆ.

ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 673ಕ್ಕೆ ಹಾಗೂ ಮೃತರ ಸಂಖ್ಯೆ 29ಕ್ಕೆ ಏರಿಕೆಯಾಗಿದೆ. ಇವತ್ತು ಬಾಗಲಕೋಟೆ, ಮೈಸೂರು, ವಿಜಯಪುರ ಜಿಲ್ಲೆಯಲ್ಲಿ ತಲಾ ಮೂವರು ಸೇರಿದಂತೆ ಒಟ್ಟು 10 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇತ್ತ ದಾವಣಗೆರೆಯಲ್ಲಿ ಕೊರೊನಾ ಸ್ಫೋಟಗೊಂಡಂತೆ ಕಾಣುತ್ತಿದೆ. ಕೊರೊನಾದಿಂದ ಮುಕ್ತವಾಗಿ ಹಸಿರು ವಲಯದಲ್ಲಿದ್ದ ಉತ್ತರ ಕನ್ನಡ ಜಿಲ್ಲೆಯ ಯುವಕನಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಎರಡು ದಿನಗಳ ಹಿಂದೆ ಯುವಕನಿಗೆ ಕೊರೊನಾ ಲಕ್ಷಣಗಳು ಕಾಣಿಸಿಕೊಂಡಿದ್ದವು.

Corona aa 1

ದಾವಣಗೆರೆ ಜಿಲ್ಲೆಯಲ್ಲಿ ಇಂದು ಒಂದೇ ದಿನದಲ್ಲಿ 5 ವರ್ಷದ ಬಾಲಕ ಸೇರಿದಂತೆ 12 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 44ಕ್ಕೆ ಏರಿಕೆ ಕಂಡಿದೆ. ಇತ್ತ ಹಸಿರು ವಲಯದಲ್ಲಿದ್ದ ಹಾವೇರಿ ಜಿಲ್ಲೆಯಲ್ಲಿ ಮತ್ತೊಬ್ಬರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಬೆಂಗಳೂರು ಹಾಗೂ ಬಾಗಲಕೋಟೆ ಜಿಲ್ಲೆಯಲ್ಲಿ ಮೂವರಿಗೆ, ಬಳ್ಳಾರಿ ಜಿಲ್ಲೆಯ ಇಬ್ಬರಿಗೆ, ದಕ್ಷಿಣ ಕನ್ನಡ, ಧಾರವಾಡ ಹಾಗೂ ಉತ್ತರ ಕನ್ನಡ ಜಿಲ್ಲೆಯ ತಲಾ ಒಬ್ಬರಿಗೆ ಸೋಂಕು ತಗುಲಿದೆ.

ಬೆಂಗಳೂರಿನ ಶಿವಾಜಿನಗರದಲ್ಲಿ ಹೌಸ್ ಕೀಪಿಂಗ್ ಕೆಲಸ ಮಾಡುತ್ತಿದ್ದ 40 ವರ್ಷದ ವ್ಯಕ್ತಿಗೆ ಕೊರೊನಾ ಸೋಂಕು ತಗುಲಿದೆ. ಈ ವ್ಯಕ್ತಿ ವಾಸವಾಗಿದ್ದ ಒಂದೇ ಕೋಣೆಯಲ್ಲಿ 7 ಜನರು ವಾಸವಾಗಿರುವ ಆತಂಕಕಾರಿ ವಿಷಯ ಬೆಳಕಿಗೆ ಬಂದಿದೆ. ಸೋಂಕಿತ ವ್ಯಕ್ತಿ ಕ್ವಾರಂಟೈನ್ ಮಾಡಿದ್ದ ಹೋಟೆಲ್ ನಲ್ಲಿ ಹೌಸ್ ಕೀಪಿಂಗ್ ಕೆಲಸ ಮಾಡಿಕೊಂಡಿದ್ದು, ಇಲ್ಲಿ 72 ಜನರು ಉಳಿದುಕೊಂಡಿದ್ದರು. ಸೋಂಕಿತನ ಪ್ರಾಥಮಿಕ ಸಂಪರ್ಕದಲ್ಲಿದ್ದ 13 ಜನರನ್ನು ಗುರುತಿಸಿ ಕ್ವಾರಂಟೈನ್ ಮಾಡಲಾಗಿದೆ. ಆದ್ರೆ ಸೋಂಕು ಹೇಗೆ ತಗುಲಿದೆ ಎಂಬುವುದು ತಿಳಿದು ಬಂದಿಲ್ಲ.

DVG 1 1

ಬೆಂಗಳೂರಿನ ಮಂಗಮ್ಮನ ಪಾಳ್ಯದ 45 ವರ್ಷದ ಕೂಲಿ ಕಾರ್ಮಿಕನಿಗೆ ಸೋಂಕು ತಗುಲಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಜಯನಗರದ ಜನರಲ್ ಆಸ್ಪತ್ರೆಯಿಂದ ವಿಕ್ಟೋರಿಯಾದ ಕೋವಿಡ್-19 ಘಟಕಕ್ಕೆ ಶಿಫ್ಟ್ ಮಾಡಲಾಗಿದೆ. ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಕಾರ್ಮಿಕ ಐದು ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದನು.

ಸೋಂಕಿತರ ವಿವರ:
1. ರೋಗಿ 652: ಬೆಂಗಳೂರಿನ 30 ವರ್ಷದ ಮಹಿಳೆ. ಸೋಂಕು ಸಂಪರ್ಕ ಮಾಹಿತಿಯನ್ನು ಪತ್ತೆ ಹಚ್ಚಲಾಗುತ್ತಿದೆ.
2. ರೋಗಿ 653: ಬೆಂಗಳೂರಿನ 40 ವರ್ಷದ ಪುರುಷ. ರೋಗಿ 420ರ ಜೊತೆ ಸಂಪರ್ಕ
3. ರೋಗಿ 654: ಬೆಂಗಳೂರಿನ 45 ವರ್ಷದ ಪುರುಷ. ಜ್ವರದ ಲಕ್ಷಣಗಳು ಕಾಣಿಸಿಕೊಂಡಿವೆ.
4. ರೋಗಿ 655: ಬಾಗಲಕೋಟೆಯ 29 ವರ್ಷದ ಮಹಿಳೆ. ರೋಗಿ 367 ಮತ್ತು 368ರ ಸಂಪರ್ಕದಲ್ಲಿದ್ದರು.
5. ರೋಗಿ 656: ಬಾಗಲಕೋಟೆಯ 29 ವರ್ಷದ ಪುರುಷ. ರೋಗಿ 367 ಮತ್ತು 368ರ ಸಂಪರ್ಕದಲ್ಲಿದ್ದರು.

corona hospital

6. ರೋಗಿ 657: ಬಳ್ಳಾರಿ 43 ವರ್ಷದ ಪುರುಷ. ಉತ್ತರಾಖಂಡಕ್ಕೆ ಪ್ರಯಾಣದ ಹಿನ್ನೆಲೆ
7. ರೋಗಿ 658: ದಕ್ಷಿಣ ಕನ್ನಡ 51 ವರ್ಷದ ಪುರುಷ. ರೋಗಿ 536ರ ಜೊತೆ ಸಂಪರ್ಕದಲ್ಲಿದ್ದರು.
8. ರೋಗಿ 659: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ 28 ವರ್ಷದ ಯುವಕ. ಜ್ವರದ ಲಕ್ಷಣಗಳು ಕಾಣಿಸಿಕೊಂಡಿವೆ.

ಮಧ್ಯಾಹ್ನದ ವರದಿ:
9. ರೋಗಿ-660: ದಾವಣಗೆರೆಯ 30 ವರ್ಷದ ಪುರುಷ. ರೋಗಿ-556ರ ಸಂಪರ್ಕದಲ್ಲಿದ್ದರು.
10. ರೋಗಿ-660: ದಾವಣಗೆರೆಯ 25 ವರ್ಷದ ಪುರುಷ. ರೋಗಿ-556ರ ಸಂಪರ್ಕದಲ್ಲಿದ್ದರು.
11. ರೋಗಿ-662: ದಾವಣಗೆರೆಯ 50 ವರ್ಷದ ಮಹಿಳೆ. ರೋಗಿ-556ರ ದ್ವಿತೀಯ ಸಂಪರ್ಕದಲ್ಲಿದ್ದರು.
12. ರೋಗಿ-663: ದಾವಣಗೆರೆಯ 51 ವರ್ಷದ ಪುರುಷ. ರೋಗಿ-556ರ ದ್ವಿತೀಯ ಸಂಪರ್ಕದಲ್ಲಿದ್ದರು.

DVG 4

13. ರೋಗಿ-664: ದಾವಣಗೆರೆಯ 48 ವರ್ಷದ ಪುರುಷ. ರೋಗಿ-581ರ ಸಂಪರ್ಕದಲ್ಲಿದ್ದರು.
14. ರೋಗಿ-665: ದಾವಣಗೆರೆಯ 52 ವರ್ಷದ ಮಹಿಳೆ. ರೋಗಿ-556ರ ಸಂಪರ್ಕದಲ್ಲಿದ್ದರು.
15. ರೋಗಿ-666: ದಾವಣಗೆರೆಯ 36 ವರ್ಷದ ಮಹಿಳೆ. ರೋಗಿ-581ರ ಸಂಪರ್ಕದಲ್ಲಿದ್ದರು.
16. ರೋಗಿ-667: ದಾವಣಗೆರೆಯ 15 ವರ್ಷದ ಬಾಲಕಿ. ರೋಗಿ-581ರ ಸಂಪರ್ಕದಲ್ಲಿದ್ದಳು.
17. ರೋಗಿ-668: ದಾವಣಗೆರೆಯ 19 ವರ್ಷದ ಯುವತಿ. ರೋಗಿ-581ರ ಸಂಪರ್ಕದಲ್ಲಿದ್ದರು.
18. ರೋಗಿ-669: ದಾವಣಗೆರೆಯ 27 ವರ್ಷದ ಪುರುಷ. ರೋಗಿ-581ರ ಸಂಪರ್ಕದಲ್ಲಿದ್ದಳು.
19. ರೋಗಿ-670: ದಾವಣಗೆರೆಯ 42 ವರ್ಷದ ಪುರುಷ. ರೋಗಿ-581ರ ಸಂಪರ್ಕದಲ್ಲಿದ್ದರು.

coronavirus 1 1000x600 1

20. ರೋಗಿ-671: ದಾವಣಗೆರೆಯ 5 ವರ್ಷದ ಬಾಲಕ. ರೋಗಿ-581ರ ಸಂಪರ್ಕದಲ್ಲಿದ್ದರು.
21. ರೋಗಿ-672: ಹಾವೇರಿ ಜಿಲ್ಲೆ ಸವನೂರಿನ 40 ವರ್ಷದ ಪುರುಷ. ರೋಗಿ-639ರ ಸಂಪರ್ಕದಲ್ಲಿದ್ದರು.
22. ರೋಗಿ-673: ಧಾರವಾಡದ 26 ವರ್ಷದ ಪುರುಷ. ಮುಂಬೈ ಪ್ರವಾಸದ ಹಿನ್ನಲೆ ಹೊಂದಿದ್ದರು.

ಬಳ್ಳಾರಿಯ ಕೌಲ್ ಬಜಾರ್ ಪ್ರದೇಶದ ವ್ಯಕ್ತಿಗೆ ಕೊರೊನಾ ಸೋಂಕು ತಗುಲಿದೆ. ಈ ವ್ಯಕ್ತಿ 18 ಜನರ ತಂಡದೊಂದಿಗೆ ಉತ್ತರಾಖಂಡ ಪ್ರವಾಸಕೈಗೊಂಡಿದ್ದರು. ಸೋಂಕಿತನ ಸಂಪರ್ಕದಲ್ಲಿದ್ದ 12 ಜನರ ಆರೋಗ್ಯದ ಮೇಲೆ ನಿಗಾ ಇಡಲಾಗಿದ್ದು, ಜಿಲ್ಲಾಡಳಿತ ಎಲ್ಲರ ವರದಿಗಾಗಿ ಕಾಯುತ್ತಿದೆ.

coronavirus india

ರೋಗಿ ನಂಬರ್ 640 (62 ವರ್ಷ)ದ ಮಹಿಳೆ ಕೊರೊನಾಗೆ ಬಲಿಯಾಗಿದ್ದಾರೆ. ಇವರು ಅಸ್ತಮಾ, ಶ್ವಾಸಕೋಶ ಕಾಯಿಲೆ, ಬೊಜ್ಜು ಸೇರಿ ನಾನಾ ಕಾಯಿಲೆಗಳಿಂದ ಬಳಲುತ್ತಿದ್ದು, 3-4 ದಿನಗಳ ಹಿಂದೆ ವಿಜಯಪುರ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದರು. ಸೋಮವಾರ ಬೆಳಗ್ಗೆ ಈ ವೃದ್ಧೆಯಲ್ಲಿ ಕೊರೊನಾ ಸೋಂಕು ಇರುವುದು ಪತ್ತೆಯಾಗಿತ್ತು. ಆದರೆ ಇಂದು ಬೆಳಗ್ಗಿನ ಜಾವ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಇವರಿಗೆ ರೋಗಿ ನಂಬರ್ 228 (13 ವರ್ಷ)ದ ಬಾಲಕನ ದ್ವಿತೀಯ ಸಂಪರ್ಕಕ್ಕೆ ಬಂದ ಹಿನ್ನೆಲೆ ಸೋಂಕು ತಗುಲಿದ್ದು ಧೃಢಪಟ್ಟಿದೆ. ಸಕಲ ವೈದ್ಯಕೀಯ, ಧಾರ್ಮಿಕ ಶಿಷ್ಠಾಚಾರದಂತೆ ವೃದ್ಧೆಯ ಅಂತ್ಯಕ್ರಿಯೆಯನ್ನು ಅಧಿಕಾರಿಗಳು ನೆರವೇರಿಸಿದ್ದಾರೆ.

ರೋಗಿ-662 (50 ವರ್ಷದ) ದಾವಣಗೆರೆ ಮಹಿಳೆ ಸೋಂಕಿನಿಂದ ಮೃತಪಟ್ಟಿದ್ದಾರೆ. ಅವರಿಗೆ ವೈರಲ್ ನ್ಯುಮೋನಿಯಾ ಇತ್ತು. ಇಂದು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

TAGGED:CoronavirusCovid 19karnatakaPublic TVಕರ್ನಾಟಕಕೊರೊನಾ ವೈರಸ್ಕೋವಿಡ್ 19ದಾವಣಗೆರೆಪಬ್ಲಿಕ್ ಟಿವಿಬೆಂಗಳೂರು
Share This Article
Facebook Whatsapp Whatsapp Telegram

Cinema news

3 Idiots
10 ವರ್ಷಗಳ ಬಳಿಕವೂ ಅದೇ ಪಾತ್ರಗಳೊಂದಿಗೆ ಬರಲಿದೆ 3 Idiots ಸೀಕ್ವೆಲ್
Bollywood Cinema Latest Top Stories
nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories

You Might Also Like

United Arab Emirates will leave OPEC in a blow to the oil cartel Why is the UAE leaving OPEC Saudi Arabia UAE cold war
Latest

ಒಪೆಕ್ ಒಕ್ಕೂಟಕ್ಕೆ ಗುಡ್ ಬೈ – ತೈಲ ಮಾರುಕಟ್ಟೆಯಲ್ಲಿ ‘ದುಬೈ’ ಸ್ವತಂತ್ರ ಆಟ ಶುರು| ಸೌದಿ ಜೊತೆ ಯುಎಇ ಕಿತ್ತಾಟ ಯಾಕೆ?

Public TV
By Public TV
3 seconds ago
Chikkamagaluru Sub Inspector Wife Suicide copy
Chikkamagaluru

ಕೌಟುಂಬಿಕ ಕಲಹ – ಸಬ್ ಇನ್ಸ್‌ಪೆಕ್ಟರ್ ಪತ್ನಿ ನೇಣಿಗೆ ಶರಣು

Public TV
By Public TV
4 minutes ago
Haveri Man Drown in River copy
Districts

ನದಿಯಲ್ಲಿ ಸ್ನಾನ ಮಾಡಲು ಹೋಗಿ ನೀರಿನಲ್ಲಿ ಮುಳುಗಿ ವ್ಯಕ್ತಿ ಸಾವು

Public TV
By Public TV
23 minutes ago
Assembly Election Exit Poll 2026
Latest

ಇಂದು ಸಂಜೆ ಎಕ್ಸಿಟ್ ಪೋಲ್ – ಪಂಚ ರಾಜ್ಯಗಳ ಕಜ್ಜಾಯ ಯಾರಿಗೆ?

Public TV
By Public TV
60 minutes ago
West Bengal voting
Latest

ಪಶ್ಚಿಮ ಬಂಗಾಳದಲ್ಲಿ 2ನೇ ಹಂತದ ಮತದಾನ ಆರಂಭ

Public TV
By Public TV
1 hour ago
WEB GFX
Karnataka

ಮಲೆನಾಡಲ್ಲಿ ಕೆರೆಬೇಟೆ ಸೀಸನ್‌ – ಈ ಜನಪದ ಸಂಭ್ರಮ ಹೇಗಿರುತ್ತೆ ಗೊತ್ತಾ?

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?