Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಿನ್ನನ್ನು ಮುಂದೆ ನೋಡ್ಕೋತ್ತೀನಿ: ಶಾಸಕ ಶಿವಮೂರ್ತಿ ನಾಯ್ಕ್ ಬೆದರಿಕೆ ಬಗ್ಗೆ ಕಟಾರಿಯಾ ತಿಳಿಸಿದ್ದು ಹೀಗೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ನಿನ್ನನ್ನು ಮುಂದೆ ನೋಡ್ಕೋತ್ತೀನಿ: ಶಾಸಕ ಶಿವಮೂರ್ತಿ ನಾಯ್ಕ್ ಬೆದರಿಕೆ ಬಗ್ಗೆ ಕಟಾರಿಯಾ ತಿಳಿಸಿದ್ದು ಹೀಗೆ

Bengaluru City

ನಿನ್ನನ್ನು ಮುಂದೆ ನೋಡ್ಕೋತ್ತೀನಿ: ಶಾಸಕ ಶಿವಮೂರ್ತಿ ನಾಯ್ಕ್ ಬೆದರಿಕೆ ಬಗ್ಗೆ ಕಟಾರಿಯಾ ತಿಳಿಸಿದ್ದು ಹೀಗೆ

Public TV
Last updated: October 11, 2017 7:48 pm
Public TV
Share
2 Min Read
KATARIYA SHIVAMURTHI
SHARE

ಬೆಂಗಳೂರು: ಮಾಯಕೊಂಡ ಕ್ಷೇತ್ರದ ಶಾಸಕ ಶಿವಮೂರ್ತಿ ನಾಯ್ಕ್ ಅವರು ಮುಂದೆ ನಿನ್ನನ್ನು ನೋಡಿಕೊಳ್ಳುತ್ತೀನಿ ಎಂದು ನನಗೆ ಬೆದರಿಕೆ ಹಾಕಿದ್ದರು ಎಂದು ಕೈಗಾರಿಕಾ ಇಲಾಖೆಯ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ ಹೇಳಿದ್ದಾರೆ.

ಶಾಸಕ ಶಿವಮೂರ್ತಿ ನಾಯ್ಕ್ ಅವರು ಕಚೇರಿಗೆ ಬಂದು ಹೇಗೆ ಬೆದರಿಕೆ ಹಾಕಿದ್ದರು ಎನ್ನುವುದನ್ನು ರಾಜೇಂದ್ರ ಕುಮಾರ್ ಕಟಾರಿಯಾ ಪಬ್ಲಿಕ್ ಟಿವಿಗೆ ವಿವರಿಸಿದ್ದಾರೆ.

ಸೋಮವಾರ ಶಿವಮೂರ್ತಿನಾಯ್ಕ್ ಅವರು ತಮ್ಮ ಮಗನ ಕೇಸ್ ಬಗ್ಗೆ ಕಚೇರಿಗೆ ಬಂದು ನಿಮ್ಮಲ್ಲಿ ಅರ್ಜಿ ಪೆಂಡಿಂಗ್ ಇದೆ, ಅದನ್ನು ಬೇಗನೆ ಅನುಮೋದನೆ ನೀಡಬೇಕೆಂದು ಕೇಳಿದರು.

ನಾನು ಅವರಿಗೆ ಇದನ್ನು ಕಾನೂನಾತ್ಮಕವಾಗಿ ಅನುಮೋದನೆ ಮಾಡಲು ಬರುವುದಿಲ್ಲ. ನಿಮ್ಮ ಅರ್ಜಿ ನಿರ್ದೇಶಕರ ಹತ್ತಿರ ಪೆಂಡಿಂಗ್ ಇದೆ, ಅವರು ಅವರ ಕಾನೂನು ಚೌಕಟ್ಟಿನಲ್ಲಿ ಏನು ಮಾಡಲು ಬರುತ್ತೋ ಅದನ್ನು ಮಾಡುತ್ತಾರೆ ಎನ್ನುವುದನ್ನು ವಿವರಿಸಿದೆ.

ನಾನು ತಿಳಿಸಿದರೂ ಅವರು ಇವತ್ತೇ ನನಗೆ ಬೇಕು, ಇವತ್ತೆ ಆರ್ಡರ್ ಕೊಡಬೇಕು ಎಂದು ವಾದಿಸುತ್ತಿದ್ದರು. ಜೋರಾಗಿ ಬಾಯಿ ಮಾಡುತ್ತಿದ್ದರು. ತುಂಬಾ ಅವಾಚ್ಯ ಶಬ್ಧಗಳನ್ನು ಬಳಸುತ್ತಿದ್ದರು. ನಾನು ನಿರಾಕರಿಸಿದ್ದಕ್ಕೆ ನಿನ್ನ ಮುಂದೆ ನೋಡ್ಕೋತ್ತೀನಿ ಅಂತ ಎಲ್ಲಾ ಹೆದರಿಸಿದರು. ತುಂಬಾ ಜಾಸ್ತಿನೆ ಜಗಳ ಆಯ್ತು ಅದರ ಬಗ್ಗೆ ನಾನು ವಿವರವಾಗಿ, ಮುಖ್ಯ ಕಾರ್ಯದರ್ಶಿ ಹಾಗೂ ಮುಖ್ಯಮಂತ್ರಿ ಅವರಿಗೆ ದೂರು ಕೊಟ್ಟಿದ್ದೇನೆ. ಇವತ್ತು ನಾನು ಸಿಎಂ ಅವರನ್ನು ಭೇಟಿ ಮಾಡಿ ಅವರ ಗಮನಕ್ಕೆ ತಂದಿದ್ದೇನೆ ಎಂದು ತಿಳಿಸಿದರು.

ಎಸ್‍ಸಿ, ಎಸ್‍ಟಿ ಅನುಕೂಲಗಳಿಗೆ ಅಧಿಕಾರಿಗಳು ಅಡ್ಡಿ ಮಾಡುತ್ತಿದ್ದಾರೆ ಎನ್ನುವ ಪ್ರಶ್ನೆಗೆ, ಆ ಪಂಗಡಗಳಿಗೆ ಏನು ಸಿಗಬೇಕೋ ಅದು ಸಿಗುತ್ತದೆ. ಅವುಗಳಿಗಾಗಿ ಬೇರೆ ಬೇರೆ ಕಛೇರಿಗಳಿವೆ. ಅನುದಾನ ಏನು ನೀಡಬೇಕೋ ಅದನ್ನು ಸರಿಯಾಗಿ ನೀಡುತ್ತಿದ್ದೇವೆ ಎಂದು ತಿಳಿಸಿದರು.

ಸಿಎಂ ಸಿದ್ದರಾಮಯ್ಯನವರು ನನಗೆ ಭರವಸೆಯನ್ನು ನೀಡಿದ್ದಾರೆ. ಇಂತಹ ನಾನ್ ಸೆನ್ಸ್ ಗಳಿಗೆ ನೀವು ತಲೆ ಕೆಡಿಸಿಕೊಳ್ಳಬೇಡಿ ನಾನು ನೋಡಿಕೊಳ್ಳುತ್ತೇನೆ. ನಿಮ್ಮ ಡ್ಯೂಟಿಯನ್ನು ನೀವು ಮಾಡಿ ಎಂದು ಹೇಳಿದ್ದಾರೆ. ಸಿಎಂ ಅವರು ಈ ಬಗ್ಗೆ ಕ್ರಮ ಕೈಗೊಳ್ಳುತ್ತಾರೆ ಎಂಬ ವಿಶ್ವಾಸ ನನಗೆ ಇದೆ ಎಂದು ತಿಳಿಸಿದರು.

ತಮ್ಮ ಪುತ್ರ ಸೂರಜ್ ಎಸ್. ನಾಯ್ಕ್ ಅವರಿಗೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ಸಿದ್ದೇಶ್ವರನದುರ್ಗದಲ್ಲಿ ಗ್ರಾನೈಟ್ ಗಣಿಗಾರಿಕೆ ನಡೆಸಲು ಪರವಾನಗಿ ನೀಡಿಲ್ಲ ಎನ್ನುವ ಕಾರಣಕ್ಕೆ ನನಗೆ ಬೆದರಿಕೆ ಹಾಕಿದ್ದಾರೆ ಎಂದು ಮುಖ್ಯ ಕಾರ್ಯದರ್ಶಿ ಸುಭಾಷ್ ಚಂದ್ರ ಖುಂಟಿಆ ಅವರಿಗೆ ರಾಜೇಂದ್ರ ಕುಮಾರ್ ಕಟಾರಿಯಾ ದೂರು ನೀಡಿದ್ದರು.

ಅಕ್ಟೋಬರ್ 9ರಂದು ಕಚೇರಿಗೆ ನುಗ್ಗಿದ ಶಿವಮೂರ್ತಿ ನಾಯ್ಕ್ ತಕ್ಷಣವೇ ಕಡತ ತರಿಸಿ ಗಣಿಗಾರಿಕೆಗೆ ಅನುಮೋದನೆ ನೀಡಬೇಕೆಂದು ಒತ್ತಡ ಹೇರಿದರು. ನಾನೇ ಸರ್ಕಾರ. ನನ್ನ ಆದೇಶವನ್ನು ಪಾಲಿಸಲೇಬೇಕು ಎಂದು ಕೂಗಾಡಿದರು ಎಂದು ಕಟಾರಿಯಾ ದೂರಿನಲ್ಲಿ ತಿಳಿಸಿದ್ದಾರೆ.

 

ಇದನ್ನೂ ಓದಿ: ಕಟಾರಿಯಾಗೆ ಬೆದರಿಕೆ ಹಾಕಿದ್ದ ಶಾಸಕ ಶಿವಮೂರ್ತಿಗೆ ಸಿಎಂ ಕ್ಲಾಸ್ ತೆಗೊಂಡಿದ್ದು ಹೀಗೆ

Rajendra Kataria letter 1

Rajendra Kataria letter 2

Rajendra Kataria letter 3

Rajendra Kataria letter 4

Rajendra Kataria letter 5

TAGGED:BangaloreKatariaMayakondaPublic TVShivamurthysiddaramaiahಕಟಾರಿಯಾಪಬ್ಲಿಕ್ ಟಿವಿಬೆಂಗಳೂರುಮಾಯಕೊಂಡಶಿವಮೂರ್ತಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Maharashtra Man Arrest
ಮಹಾರಾಷ್ಟ್ರ ‘ಲವ್ ಟ್ರ್ಯಾಪ್’ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ – ಮತ್ತೋರ್ವ ಆರೋಪಿ ಅಂದರ್
Cinema Latest National Top Stories
Atlee
ಹೆಣ್ಣು ಮಗು ಜನಿಸಿದ ಸಂಭ್ರಮದಲ್ಲಿ ನಿರ್ದೇಶಕ ಅಟ್ಲೀ ದಂಪತಿ
Cinema Latest Top Stories
Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories
darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories

You Might Also Like

ಸಾಂದರ್ಭಿಕ ಚಿತ್ರ
Bengaluru City

CET 2026 – ಕೆಇಎಯಿಂದ ವಸ್ತ್ರಸಂಹಿತೆ ಜಾರಿ, ಉಲ್ಲಂಘಿಸಿದರೆ ಕಠಿಣ ಕ್ರಮ

Public TV
By Public TV
1 minute ago
donald trump iran supreme leader
Latest

ಮತ್ತೆ ಯುದ್ಧದ ಭೀತಿ, ಮಾತುಕತೆ ನಡೆಯೋದೇ ಡೌಟ್‌ – ಇರಾನ್ ನೌಕೆ ವಶಕ್ಕೆ ಪಡೆದ ಅಮೆರಿಕ

Public TV
By Public TV
20 minutes ago
kandakur and Siddaramaiah
Bengaluru City

ನೀವು ರಾಜ್ಯಕ್ಕೆ ಸಿಎಂ? ಅಥವಾ ಮೈಸೂರಿಗೆ ಮಾತ್ರನಾ? – ಇದು ಮಲತಾಯಿ ಧೋರಣೆ, ಸಿದ್ದರಾಮಯ್ಯಗೆ ಶಾಸಕ ಕಂದಕೂರು ಪತ್ರ

Public TV
By Public TV
33 minutes ago
KPCC Muslim leaders express outrage against Jabbar for providing financial assistance to SDPI candidate in Davangere
Bengaluru City

ದಾವಣಗೆರೆಯಲ್ಲಿ SDPI ಅಭ್ಯರ್ಥಿಗೆ ಜಬ್ಬಾರ್‌ ಹಣಕಾಸು ಸಹಾಯ ಮಾಡಿದ್ದಾರೆ: ಸಿಡಿದ ಕೆಪಿಸಿಸಿ ಮುಸ್ಲಿಮ್‌ ನಾಯಕರು

Public TV
By Public TV
59 minutes ago
Shobha Karandlaje 1
Bengaluru City

ಬೆಂಗಳೂರಿನಲ್ಲಿ ಸಾಲ ವಸೂಲಾತಿ ಮೇಲ್ಮನವಿ ನ್ಯಾಯಮಂಡಳಿ ಸ್ಥಾಪನೆಗೆ ಮನವಿ

Public TV
By Public TV
1 hour ago
Rashid Khan
Cricket

ಅಫ್ಘಾನ್ ಬಿಟ್ಟು ನಮ್ಮ ತಂಡವನ್ನು ಪ್ರತಿನಿಧಿಸಿ, ಪೌರತ್ವ ನೀಡುತ್ತೇವೆ ಅಂತ ಭಾರತ ಹೇಳಿತ್ತು – ರಶೀದ್ ಖಾನ್

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?