Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಎಂಬಿಪಿ ಸಿಎಂ ಆಗ್ಲಿ: ಗೋವಾ ಬಿಜೆಪಿ ನಾಯಕ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | States | Karnataka | ಎಂಬಿಪಿ ಸಿಎಂ ಆಗ್ಲಿ: ಗೋವಾ ಬಿಜೆಪಿ ನಾಯಕ

Karnataka

ಎಂಬಿಪಿ ಸಿಎಂ ಆಗ್ಲಿ: ಗೋವಾ ಬಿಜೆಪಿ ನಾಯಕ

Public TV
Last updated: July 2, 2019 9:10 pm
Public TV
Share
2 Min Read
mbpatil 1524321611
SHARE

-ಬಿಜೆಪಿ ನಾಯಕನಿಗೆ ಸಾಥ್ ನೀಡಿದ ಆರ್.ಶಂಕರ್
-ನಾನು ಸಿಎಂ ಆಗಬಾರದಾ? ಎಂಬಿಪಿ ಪ್ರಶ್ನೆ

ವಿಜಯಪುರ: ಇಂದು ತಿಕೋಟ ತಾಲೂಕಿನಲ್ಲಿ ನಡೆದ ದುರ್ಗಾದೇವಿ ಜಾತ್ರೆಯಲ್ಲಿ ಭಾಗಿಯಾಗಿದ್ದ ಗೋವಾ ಬಿಜೆಪಿ ಶಾಸಕ ಮೈಕಲ್ ಲೋಬೋ, ಮುಂದಿನ ದಿನಗಳಲ್ಲಿ ವಿಜಯಪುರ ಜಿಲ್ಲೆಯ ನಾಯಕ, ಗೃಹ ಸಚಿವರಾಗಿರುವ ಎಂ.ಬಿ.ಪಾಟೀಲ್ ಕರ್ನಾಟಕದ ಮುಖ್ಯಮಂತ್ರಿ ಆಗಲಿ ಎಂಬ ಇಂಗಿತವನ್ನು ಹೊರ ಹಾಕಿದರು.

ಜಾತ್ರೆಯ ಕಾರ್ಯಕ್ರಮದ ವೇದಿಕೆಯಲ್ಲಿ ಮಾತನಾಡಿದ ಮೈಕಲ್ ಲೋಬೋ, ಸಚಿವರು ಮತ್ತು ನಾನು ಒಳ್ಳೆಯ ಸ್ನೇಹಿತರಾಗಿದ್ದು, ರಾಜ್ಯ, ದೇಶದ ರಾಜಕಾರಣದಲ್ಲಿ ಬದಲಾವಣೆಯ ಗಾಳಿ ಬೀಸುತ್ತಿದೆ. ಇವತ್ತು ಕಾಂಗ್ರೆಸ್ ನಲ್ಲಿದ್ದಾರೆ. ಮುಂದೆ ಎಲ್ಲಿ ಇರುತ್ತಾರೋ ಗೊತ್ತಿಲ್ಲ ಎಂದು ಹೇಳಿದರು.

mb patil main

ಮೈಕಲ್ ಲೋಬೋ ಅವರ ಬಳಿಕ ಮಾತನಾಡಿದ ಸಚಿವ ಆರ್.ಶಂಕರ್ ಸಹ ಎಂ.ಬಿ ಪಾಟೀಲ್ ಮುಖ್ಯಮಂತ್ರಿ ಆಗಲಿ ಎಂಬ ಇಚ್ಛೆಯನ್ನು ಹೊರ ಹಾಕಿದರು. ಪಾಟೀಲರು ಜಲಸಂಪನ್ಮೂಲ ಸಚಿವರಾಗಿದ್ದು ಬರಡು ಭೂಮಿಗೆ ನೀರು ಹರಿಸಿದ್ದಾರೆ. ಅಭಿವೃದ್ಧಿಪರ ಕೆಲಸಗಳಿಂದಲೇ ಕ್ಷೇತ್ರದಲ್ಲಿ ಬಹು ಮತಗಳ ಅಂತದರದಲ್ಲಿ ಗೆಲುವು ಕಾಣುತ್ತಾ ಬಂದಿದ್ದಾರೆ. ತಾಯಿ ದುರ್ಗಾದೇವಿಯ ಆಶೀರ್ವಾದ ಇದ್ದರೆ ಎಂ.ಬಿ.ಪಾಟೀಲರು ಸಹ ಮುಖ್ಯಮಂತ್ರಿ ಆಗಲಿ ಎಂದು ಆರ್.ಶಂಕರ್ ತಿಳಿಸಿದರು.

mbp 3

ಮೈಕಲ್ ಲೋಬೋ ಅವರ ಮಾತಿಗೆ ರಾಜಕೀಯ ಅರ್ಥ ಕಲ್ಪಿಸೋದು ಬೇಡ. ಪಕ್ಷಗಳು ಬೇರೆಯಾಗಿದ್ದರೂ, ನಾವಿಬ್ಬರು ಒಳ್ಳೆಯ ಸ್ನೇಹಿತರು. ಸ್ನೇಹದ ಪ್ರತೀಕವಾಗಿ ತನ್ನ ಗೆಳೆಯ ಸಿಎಂ ಆಗಲಿ ಎಂದು ಹಾರೈಸಿದ್ದಾರೆ. ಹಾಗಾದ್ರೆ ನೀವು ಮುಖ್ಯಮಂತ್ರಿ ಆಗ್ತೀರಾ ಪ್ರಶ್ನೆಗೆ ನಾನು ಸಿಎಂ ಆಗಬಾರದಾ ಎಂದರು. ಕ್ಷೇತ್ರ ಮತ್ತು ಕರ್ನಾಟಕದ ಜನತೆ ನಮಗೆ ಬಹುಮತ ನೀಡಿ ನಮ್ಮನ್ನು ಸ್ವಂತ ಬಲದಿಂದ ಸರ್ಕಾರ ರಚನೆ ಮಾಡಿದಾಗ ಸಿಎಂ ಆಗಲು ಸಾಧ್ಯ. ನಾವು, ನೀವೂ ಹೇಳಿದ ಮಾತ್ರಕ್ಕೆ ಯಾರು ಸಿಎಂ ಆಗಲ್ಲ. ಬಹುಮತ ಬಂದ ಮೇಲೆ ಎಲ್ಲ ಶಾಸಕರು ಮತ್ತು ಹೈಕಮಾಂಡ್ ಒಪ್ಪಿದರೆ ಮಾತ್ರ ಸಿಎಂ ಆಗಲು ಸಾಧ್ಯವಾಗಲಿದೆ ಎಂದು ಎಂ.ಬಿ.ಪಾಟೀಲರು ಸ್ಪಷ್ಟನೆ ನೀಡಿದರು.

mbp 2

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಮಾಜಿ ಸಚಿವ ವಿನಯ್ ಕುಲಕರ್ಣಿ ಮಾತನಾಡಿ, ಮೈತ್ರಿ ಸರ್ಕಾರ ಸುಭದ್ರವಾಗಿದ್ದು, ಇಬ್ಬರ ರಾಜೀನಾಮೆಯಿಂದ ಏನು ಆಗಲ್ಲ. ಪಕ್ಷದ ಮುಖಂಡರು ಮುಂದೆ ಏನು ಮಾಡಬೇಕು ಎಂಬುದರ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಿದ್ದಾರೆ. ಹೈಕಮಾಂಡ್, ಜನಾಶೀರ್ವಾದ, ಶಾಸಕರ ಬೆಂಬಲ ಸಿಕ್ಕರೆ ಎಂ.ಬಿ.ಪಾಟೀಲ್ ಮುಖ್ಯಮಂತ್ರಿಯಾಗಬಹುದು ಎಂದರು.

mbp 4

2018ರಲ್ಲಿ ಸಚಿವ ಸ್ಥಾನ ವಂಚಿತರಾಗಿದ್ದ ಎಂ.ಬಿ.ಪಾಟೀಲ್ ಇದೇ ಜಾತ್ರೆಯಲ್ಲಿ ಭಾಗವಹಿಸಿದ್ದ ವೇಳೆಯೂ ಮುಖ್ಯಮಂತ್ರಿ ಆಗುವ ಇಂಗಿತವನ್ನು ಹೊರ ಹಾಕಿದ್ದರು. ಅಂದು ಸ್ವ-ಕ್ಷೇತ್ರ ಗ್ರಾಮದ ಸೋಮದೇವರಹಟ್ಟಿ ದುರ್ಗಾದೇವಿ ಜಾತ್ರೆಯಲ್ಲಿ ಭಾಗಿಯಾಗಿದ್ದ ಎಂ.ಬಿ.ಪಾಟೀಲ್, ನಾನು ಸಚಿವನಾದರೂ, ಶಾಸಕನಾದರೂ ಯಾವಾಗಲೂ ಫವರ್ ಫುಲ್. ತಾಯಿ ದುರ್ಗಾದೇವಿಯ ಆಶೀರ್ವಾದ ನನ್ನ ಮೇಲಿದೆ. ತಾಯಿಯ ಕೃಪೆಯಿಂದ ಮುಂದಿನ ದಿನಗಳಲ್ಲಿ ಸಚಿವ ಸ್ಥಾನ ಸಿಗಲಿದೆ ಎಂಬ ಭರವಸೆ ವ್ಯಕ್ತಪಡಿಸಿದ್ದರು.

mb patil 1

ನನಗೆ ಇನ್ನೂ 54 ವರ್ಷ ಆಗಿದೆ. ಮುಂದಿನ ದಿನಗಳಲ್ಲಿ ನನಗೂ ಮುಖ್ಯಮಂತ್ರಿ ಆಗುವ ಟೈಮ್ ಬರುತ್ತದೆ. ಸಿಎಂ ಆಗುವ ಆಸೆ ಸ್ವಾಭಾವಿಕ. ಆದ್ರೆ ನನಗೆ ದುರಾಸೆ ಇಲ್ಲ ಎಂದು ಮುಖ್ಯಮಂತ್ರಿ ಆಗುವ ಇಂಗಿತವನ್ನ ವ್ಯಕ್ತಪಡಿಸಿದರು. ಸದ್ಯ ದೇವಿ ಪರೀಕ್ಷೆ ನಡೆಸಿದ್ದಾಳೆ. ನನಗೆ ಎದುರಾಗಿರುವ ಪರೀಕ್ಷೆಯನ್ನು ದುರ್ಗಾದೇವಿಯೇ ಪಾರು ಮಾಡುತ್ತಾಳೆ. ಕಳೆದ ವರ್ಷದ ಜಾತ್ರೆಯಲ್ಲಿಯೂ ಎಂ.ಬಿ. ಪಾಟೀಲ್ ಸಿಎಂ ಆಗುವ ಇಂಗಿತ ವ್ಯಕ್ತಪಡಿಸಿದ್ದು, ಶುಕ್ರವಾರ ಅದೇ ಮಾತನ್ನು ಪುನರುಚ್ಚರಿಸಿದ್ದರು.

TAGGED:bjpcmcongressMB PatilMichael LoboPublic TVR Shankarಆರ್.ಶಂಕರ್ಎಂ.ಬಿ.ಪಾಟೀಲ್ಕಾಂಗ್ರೆಸ್ಪಬ್ಲಿಕ್ ಟಿವಿಬಿಜೆಪಿಮೈಕಲ್ ಲೋಬೋಸಿಎಂ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ನಮ್ಮದು ‘ವಿರೋಶ್‌’ ಜೋಡಿ, ಮದುವೆಗೆ ಬನ್ನಿ..: ಆಮಂತ್ರಣ ನೀಡಿದ ರಶ್ಮಿಕಾ ಮಂದಣ್ಣ
Cinema Latest Top Stories
Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories

You Might Also Like

ಸಾಂದರ್ಭಿಕ ಚಿತ್ರ
Bengaluru City

ನಮ್ಗೂ ಅವಕಾಶ ಕೊಡಿ – ಸಚಿವ ಸಂಪುಟ‌ ಪುನಾರಚನೆಗೆ 31 ಹೊಸ ಶಾಸಕರ ಪತ್ರ

Public TV
By Public TV
18 seconds ago
Eshwar Khandre
Bengaluru City

ವನ್ಯಜೀವಿ ಸಂಚಾರದ ಬಗ್ಗೆ ಸ್ಥಳೀಯರಿಗೆ ತಕ್ಷಣ ಮಾಹಿತಿ ನೀಡಿ: ಈಶ್ವರ್ ಖಂಡ್ರೆ ಸೂಚನೆ

Public TV
By Public TV
4 minutes ago
IDFC First bank
Latest

IDFC First Bank ಒಂದೇ ಬ್ರ್ಯಾಂಚ್‌ನಲ್ಲಿ 590 ಕೋಟಿ ವಂಚನೆ – ನಾಲ್ವರು ಅಮಾನತು

Public TV
By Public TV
23 minutes ago
V Somanna Gajendra Singh Shekhawat
Districts

ಮಧುಗಿರಿ ಬೆಟ್ಟಕ್ಕೆ ರೋಪ್ ವೇ ನಿರ್ಮಾಣಕ್ಕೆ ಸೋಮಣ್ಣ ಮನವಿ

Public TV
By Public TV
33 minutes ago
Bhopal Boy Stabbed
Crime

ಶಾಲಾ ವಿದ್ಯಾರ್ಥಿ ಮೇಲೆ 30 ಸೆಕೆಂಡ್‌ನಲ್ಲಿ 27 ಬಾರಿ ಚಾಕುವಿನಿಂದ ಇರಿದ ಅಪ್ರಾಪ್ತರು

Public TV
By Public TV
38 minutes ago
iran protest 1
Latest

ಕೂಡಲೇ ದೇಶ ತೊರೆಯಿರಿ – ಇರಾನ್‌ನಲ್ಲಿರೋ ಭಾರತೀಯ ಪ್ರಜೆಗಳಿಗೆ ವಾರ್ನಿಂಗ್‌

Public TV
By Public TV
53 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?