ಎಂ.ಬಿ.ಪಾಟೀಲ್ ಬುಡಬುಡಕಿ ಆಟ ಕಾಂಗ್ರೆಸ್ಸಿನಲ್ಲಿ ನಡೆಯಲ್ಲ: ಶಾಮನೂರು

Public TV
0 Min Read
m.b.patil shamanur shivashankarapp

ದಾವಣಗೆರೆ: ಮಂತ್ರಿಗಿರಿಗೆ ಕಾಂಗ್ರೆಸ್‍ನಲ್ಲಿ ಬಂಡಾಯವೆದ್ದು, ಭಾರೀ ಸದ್ದು ಮಾಡುತ್ತಿರುವ ಮಾಜಿ ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್‍ಗೆ ಶಾಮನೂರು ಶಿವಶಂಕರಪ್ಪ ಭರ್ಜರಿ ಟಾಂಗ್ ನೀಡಿದ್ದಾರೆ.

ಶುಕ್ರವಾರ ಮಾಧ್ಯಮದೊಂದಿಗೆ ಮಾತನಾಡಿದ ಶಾಮನೂರು ಶಿವಶಂಕರಪ್ಪ ಅವರು, ಸಚಿವ ಸ್ಥಾನಕ್ಕೆ ಪಕ್ಷದಲ್ಲಿ ಒತ್ತಡ ಹೇರುತ್ತಿರುವ ಶಾಸಕ ಎಂ.ಬಿ.ಪಾಟೀಲ್ ಬುಡಬುಡಕಿ ಆಟ ಕಾಂಗ್ರೆಸ್ ನಲ್ಲಿ ನಡೆಯುವುದಿಲ್ಲ. ಅಲ್ಲದೇ ಪಕ್ಷದಲ್ಲಿ ಒತ್ತಡ ತಂತ್ರ ಕೆಲಸ ಮಾಡಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

ನಾನು ಸಚಿವ ಸ್ಥಾನದ ಹಿಂದೆ ಬಿದ್ದಿಲ್ಲ. ಸಚಿವ ಸ್ಥಾನಕ್ಕಿಂತ ಹೆಚ್ಚಾಗಿ ದಾವಣಗೆರೆ ಮತಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಮಾಡುತ್ತೇನೆ. ಪ್ರತ್ಯೇಕ ಲಿಂಗಾಯತ ಧರ್ಮ ಹೋರಾಟಕ್ಕೆ ಯಾವುದೇ ಷರತ್ತುಗಳು ಬೇಡ. ಹೋರಾಟಕ್ಕೆ ಹೊಂದಾಣಿಕೆ ಅಗತ್ಯವಾಗಿದೆ ಎಂದು ಹೇಳಿದರು.

Share This Article
Leave a Comment

Leave a Reply

Your email address will not be published. Required fields are marked *