Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜನಿವಾರ ಕತ್ತರಿಸಿ ಪರೀಕ್ಷೆ ಬರೆಸಿದ ಪ್ರಕರಣ; ಬ್ರಾಹ್ಮಣ ಸಮುದಾಯದ ಆಕ್ರೋಶದಲ್ಲಿ ತಪ್ಪಿಲ್ಲ: ಎಂ.ಸಿ ಸುಧಾಕರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಜನಿವಾರ ಕತ್ತರಿಸಿ ಪರೀಕ್ಷೆ ಬರೆಸಿದ ಪ್ರಕರಣ; ಬ್ರಾಹ್ಮಣ ಸಮುದಾಯದ ಆಕ್ರೋಶದಲ್ಲಿ ತಪ್ಪಿಲ್ಲ: ಎಂ.ಸಿ ಸುಧಾಕರ್

Bengaluru City

ಜನಿವಾರ ಕತ್ತರಿಸಿ ಪರೀಕ್ಷೆ ಬರೆಸಿದ ಪ್ರಕರಣ; ಬ್ರಾಹ್ಮಣ ಸಮುದಾಯದ ಆಕ್ರೋಶದಲ್ಲಿ ತಪ್ಪಿಲ್ಲ: ಎಂ.ಸಿ ಸುಧಾಕರ್

Public TV
Last updated: April 18, 2025 1:45 pm
Public TV
Share
2 Min Read
M C Sudhakar
SHARE

– ಅಮಾನವೀಯವಾಗಿ ನಡೆದುಕೊಂಡವರ ವಿರುದ್ಧ ಕ್ರಮದ ಎಚ್ಚರಿಕೆ

ಬೆಂಗಳೂರು: ಜನಿವಾರ ಹಾಕಿದ್ದಕ್ಕೆ ಸಿಇಟಿ ಪರೀಕ್ಷೆಗೆ (CET Exam) ಅವಕಾಶ ಕೊಡದೇ ಇರುವುದಕ್ಕೆ ಬ್ರಾಹ್ಮಣ ಸಮುದಾಯ (Brahmin community) ಆಕ್ರೋಶ ಮಾಡುವುದರಲ್ಲಿ ತಪ್ಪಿಲ್ಲ ಎಂದು ಉನ್ನತ ಶಿಕ್ಷಣ ಸಚಿವ ಎಂ.ಸಿ ಸುಧಾಕರ್ (M C Sudhakar) ಹೇಳಿದ್ದಾರೆ.

ಈ ವಿಚಾರವಾಗಿ ಬೆಂಗಳೂರಿನಲ್ಲಿ (Bengaluru) ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶಿವಮೊಗ್ಗ (Shivamogga) ಮತ್ತು ಬೀದರ್‌ನಲ್ಲಿ (Bidar) ಈ ರೀತಿ ಘಟನೆ ಆಗಿದೆ ಎಂದು ಬೆಳಗ್ಗೆ ನಮ್ಮ ಸ್ನೇಹಿತರು ಹೇಳಿದರು. ಇದರಲ್ಲಿ ಸ್ಥಳೀಯ ಜಿಲ್ಲಾಧಿಕಾರಿಗಳಿಗೆ ಜವಾಬ್ದಾರಿ ಇರುತ್ತದೆ. ಕೆಇಎಯಿಂದ ಜನಿವಾರ ತೆಗೆಸಿ ಬರೆಸುವಂತಹ ನಿಯಮ ಇಲ್ಲ ಎಂದರು. ಇದನ್ನೂ ಓದಿ: ಜನಿವಾರ ಹಾಕಿದ್ದಕ್ಕೆ CET ಪರೀಕ್ಷೆಗೆ ಅವಕಾಶ ಕೊಡದ ಸಿಬ್ಬಂದಿ; ಬ್ರಾಹ್ಮಣ ಸಂಘಟನೆಗಳಿಂದ ಆಕ್ರೋಶ

ಶಿವಮೊಗ್ಗ ಎಡಿಸಿ ಜನಿವಾರ ತೆಗೆಸಿ ಪರೀಕ್ಷೆ ಬರೆಸಿಲ್ಲ ಎಂದು ಹೇಳುತ್ತಿದ್ದಾರೆ. ನಾನು ಸತ್ಯಾಸತ್ಯತೆ ತಿಳಿಯುತ್ತೇನೆ. ಈ ರೀತಿ ಸೂಚನೆ ಕೊಡಲು ನಾವು ಅವಿವೇಕಿಗಳಲ್ಲ. ಆ ರೀತಿ ಜನಿವಾರ ತೆಗೆಸಿದ್ದರೆ ಖಂಡಿತಾ ಕ್ರಮ ತೆಗೆದುಕೊಳ್ಳುತ್ತೇನೆ. ಇದರ ವರದಿಯನ್ನು ನಾನು ತರಿಸಿಕೊಳ್ಳುತ್ತೇನೆ. ಇದನ್ನು ನಾವು ಒಪ್ಪುವುದಿಲ್ಲ. ಈ ರೀತಿ ಮಾಡಿರುವುದು ಸರಿ ಎಂದು ಹೇಳುವಂತಹ ಕೀಳುಮಟ್ಟದಲ್ಲಿ ನಾವು ಇಲ್ಲ. ತೊಂದರೆಗೆ ಒಳಗಾಗಿರುವ ವಿದ್ಯಾರ್ಥಿಗಳು ಇಂತಹ ಸೆಂಟರ್, ಇಂತಹ ಅಧಿಕಾರಿ ಎಂದು ಹೇಳಲಿ ಎಂದು ಹೇಳಿದರು. ಇದನ್ನೂ ಓದಿ: ಜನಿವಾರದಲ್ಲಿ ಬ್ಲೂಟೂತ್ ಹಾಕ್ಕೊಂಡು ಎಕ್ಸಾಂ ಬರೆಯೋಕೆ ಆಗುತ್ತಾ? – ಚಕ್ರವರ್ತಿ ಸೂಲಿಬೆಲೆ

ಈ ವಿಚಾರವಾಗಿ ಬ್ರಾಹ್ಮಣ ಸಮುದಾಯ ಆಕ್ರೋಶ ಮಾಡುವುದರಲ್ಲಿ ತಪ್ಪಿಲ್ಲ. ಯಾವುದೇ ಧರ್ಮದ ನಂಬಿಕೆಗೆ ಧಕ್ಕೆ ಬರುವ ರೀತಿ ನಡೆದುಕೊಳ್ಳಬಾರದು. ಈ ರೀತಿ ಆಗಿಲ್ಲ ಎಂದು ಶಿವಮೊಗ್ಗ ಎಡಿಸಿ ಹೇಳುತ್ತಿದ್ದಾರೆ. ನಾನು ತನಿಖೆ ಮಾಡಿಸುತ್ತೇನೆ. ನಿನ್ನೆ ಅಥವಾ ಮೊನ್ನೆ ಇಂತಹ ಘಟನೆ ಆಗಿದೆಯಾ ಎಂದು ಗೊತ್ತಿಲ್ಲ. ಅಮಾನವೀಯವಾಗಿ ನಡೆದುಕೊಂಡಿದ್ದರೆ ಅವರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇನೆ. ಅಧಿಕಾರಿಗಳು ಆಗಿಲ್ಲ ಎನ್ನುತ್ತಿದ್ದಾರೆ. ವಿದ್ಯಾರ್ಥಿಗಳು ಆಗಿದೆ ಅಂತಾ ಇದ್ದಾರೆ. ಇಂತಹ ಸೆಂಟರ್‌ನಲ್ಲಿ ನಡೆದಿದೆ ಎಂದು ಗೊತ್ತಾದರೆ ಖಂಡಿತಾ ತನಿಖೆ ಮಾಡಿಸುತ್ತೇನೆ ಎಂದು ಭರವಸೆ ನೀಡಿದರು.

ಏನಿದು ಘಟನೆ?
ಸಿಇಟಿ ಪರೀಕ್ಷೆಗಾಗಿ (CET Exam) ಕಾಲೇಜಿನ ಒಳಭಾಗಕ್ಕೆ ತೆರಳುವ ಸಮಯದಲ್ಲಿ ಸಿಇಟಿ ಸಿಬ್ಬಂದಿ ಬ್ರಾಹ್ಮಣ ವಿದ್ಯಾರ್ಥಿಗಳು ಕೈಯಲ್ಲಿ ಕಟ್ಟಿಕೊಂಡಿದ್ದ ಕಾಕಿದಾರ ಮತ್ತು ಗಾಯತ್ರಿ ದೀಕ್ಷೆ ಪಡೆದ ಜನಿವಾರವನ್ನು ತೆಗೆಸಿ ಹಾಕಿರುವುದು ಮಕ್ಕಳ ಪೋಷಕರಿಂದ ತಿಳಿದು ಬಂದಿದೆ. ಈ ಕೇಂದ್ರದಲ್ಲಿ ಈ ರೀತಿ ಗಾಯತ್ರಿ ಮಂತ್ರ ದೀಕ್ಷೆ ಪಡೆದು ಅಕ್ಕ ಸಾಕ್ಷರದ ಪರಮ ಸಂಕಲ್ಪ ಮಾಡಿದ್ದ ವಿದ್ಯಾರ್ಥಿಗಳ ಜನಿವಾರವನ್ನು ಬಿಚ್ಚಿಸಿದ ಅವಮಾನಕಾರಿ ಘಟನೆ ಅಧಿಕಾರಿಗಳು ಮಾಡಿದ್ದು ಖಂಡನೀಯ ಎಂದು ಬ್ರಾಹ್ಮಣ ಸಮುದಾಯ ತೀವ್ರ ಆಕ್ರೋಶ ಹೊರಹಾಕಿದೆ.

ವರ್ಷಪೂರ್ತಿ ಕಷ್ಟ ಪಟ್ಟು ಅಧ್ಯಯನ ಮಾಡಿ ಒಳ್ಳೆ ಭವಿಷ್ಯಕ್ಕಾಗಿ ಸಿದ್ಧತೆ ಮಾಡಿಕೊಂಡು ಬಂದಿದ್ದ ವಿದ್ಯಾರ್ಥಿಗಳ ಜನಿವಾರ ಬಿಚ್ಛಿಸುವ ಅಧಿಕಾರಿಗಳ ಕೃತ್ಯ ಬ್ರಾಹ್ಮಣ ಮತ್ತು ಹಿಂದೂ ವಿರೋಧಿಯಾಗಿದೆ. ಅಖಿಲ ಕನರ್ನಾಟಕ ಬ್ರಾಹ್ಮಣ ಮಹಾ ಸಭಾ ಮತ್ತು ಶಿವಮೊಗ್ಗ ಜಿಲ್ಲೆಯ ವಿಶ್ವ ಸಂಘಟನೆಗೆ ಒಕ್ಕೂಟವು ಈ ಘಟನೆಯನ್ನು ತೀವ್ರವಾಗಿ ಖಂಡಿಸುತ್ತದೆ.

ಜಿಲ್ಲಾಧಿಕಾರಿಗಳು ತಕ್ಷಣ ತನಿಖೆ ನಡೆಸಿ ಹಿಂದೂ ಪರಂಪರೆಯ ಸಂಸ್ಕಾರವಾದ ಗಾಯತ್ರಿ ಮಂತ್ರ ದೀಕ್ಷೆಯ ಪ್ರಾಮುಖ್ಯತೆ. ಘನತೆ ಗೌರವ ಗೊತ್ತಿಲ್ಲದ ಧರ್ಮ ವಿರೋದಿ ಕೃತ್ಯ ಎಸಗಿರುವ ಹೀನ ಅಧಿಕಾರಿಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳಲು ನಿರ್ದೇಶನ ನೀಡಬೇಕೆಂದು ವಿನಂತಿಸಿದೆ.

TAGGED:bengalurubidarBrahmin communityCET ExamM.C.Sudhakarshivamoggaಎಂ.ಸಿ ಸುಧಾಕರ್ಬೀದರ್ಬೆಂಗಳೂರುಬ್ರಾಹ್ಮಣ ಸಮುದಾಯಶಿವಮೊಗ್ಗಸಿಇಟಿ ಪರೀಕ್ಷೆ
Share This Article
Facebook Whatsapp Whatsapp Telegram

Cinema news

Kerala Story 2 is false propaganda poisonous work Chief Minister Pinarayi Vijayan
ಫೆ.27ಕ್ಕೆ ಕೇರಳ ಸ್ಟೋರಿ 2 ಬಿಡುಗಡೆ – ಚಿತ್ರ ಬಹಿಷ್ಕರಿಸುವಂತೆ ಪಿಣರಾಯಿ ಕರೆ
Cinema Latest National South cinema Top Stories
MEJESTIC 2 1
ಮೆಜೆಸ್ಟಿಕ್- 2 ಟ್ರೈಲರ್ ರಿಲೀಸ್: ಮಹಾ ಕಲಾವಿದರ ಸಂಗಮ
Cinema Latest Sandalwood
Rakshas kannada Web Series
ತರುಣ್ ಸುಧೀರ್ ನಿರ್ಮಾಣದಲ್ಲಿ ರಾಕ್ಷಸ ವೆಬ್ ಸಿರೀಸ್
Cinema Latest Sandalwood Top Stories
Veera Kambal Trailer Released The Glory of Tulunad Revealed Adithya SV Rajendra Singh Babu Kadri Manikanth
ವೀರ ಕಂಬಳ ಟ್ರೈಲರ್ ಬಿಡುಗಡೆ : ತುಳುನಾಡಿನ ವೈಭವ ಅನಾವರಣ
Cinema Latest Sandalwood

You Might Also Like

Stones pelted from mosque during Shivaji Jayanti stones pelted at police Bagalkote
Bagalkot

ಶಿವಾಜಿ ಜಯಂತಿ ಮೆರವಣಿಗೆ ವೇಳೆ ಮಸೀದಿಯಿಂದ ಕಲ್ಲು ತೂರಾಟ – ಪೊಲೀಸರ ಮೇಲೂ ಬಿತ್ತು ಕಲ್ಲು

Public TV
By Public TV
2 hours ago
Donald Trump gaza peace inauguration 1
Latest

6,7,8 ಆಯ್ತು ಈಗ ಭಾರತ, ಪಾಕ್‌ ಕಾದಾಟದಲ್ಲಿ 11 ಜೆಟ್‌ ಹೊಡೆದುರುಳಿಸಲಾಗಿದೆ ಎಂದ ಟ್ರಂಪ್‌

Public TV
By Public TV
2 hours ago
food inspection officer attacked in davangere
Crime

ದಾವಣಗೆರೆ | ಪೊಲೀಸರಿಗೆ ಹೊಡೆದ ಪ್ರಕರಣ ಮಾಸುವ ಮುನ್ನವೇ ಮತ್ತೊಬ್ಬ ಅಧಿಕಾರಿ ಮೇಲೆ ಹಲ್ಲೆ

Public TV
By Public TV
3 hours ago
dutch prime minister dick schoof arrives bengaluru 1
Bengaluru City

ಬೆಂಗಳೂರಿಗೆ ಆಗಮಿಸಿದ ನೆದರ್ ಲ್ಯಾಂಡ್ಸ್ ಪ್ರಧಾನಿ ಡಿಕ್ ಶೂಫ್  

Public TV
By Public TV
3 hours ago
Chikkamagaluru Police
Chikkamagaluru

ಸ್ನೇಹಿತೆ ಜೊತೆಗಿದ್ದ ಅಪ್ರಾಪ್ತನ ಮೇಲೆ ಅನ್ಯಕೋಮಿನ ಯುವಕರಿಂದ ನೈತಿಕ ಪೊಲೀಸ್‌ಗಿರಿ – ನಾಲ್ವರು ಅರೆಸ್ಟ್‌

Public TV
By Public TV
3 hours ago
forest officials raid bhatkal 21 kg of deer meat found in fridge
Crime

ಭಟ್ಕಳ | ಅರಣ್ಯಾಧಿಕಾರಿಗಳ ದಾಳಿ – ಫ್ರಿಡ್ಜ್‌ಲ್ಲಿ 21 ಕೆಜಿ ಜಿಂಕೆ ಮಾಂಸ ಪತ್ತೆ

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?