ಗುರುವಾರ ತಡರಾತ್ರಿ ಕೆಪಿಸಿಸಿ ಕಚೇರಿಯಲ್ಲಿ ಗುಪ್ತ್ ಗುಪ್ತ್ ಮೀಟಿಂಗ್!

Public TV
1 Min Read
kpcc

ಬೆಂಗಳೂರು: ಸ್ಥಳೀಯ ಸಂಸ್ಥೆ ಚುನಾವಣೆಯ ಹಿನ್ನೆಲೆಯಲ್ಲಿ ಗುರುವಾರ ತಡರಾತ್ರಿ ಕೆಪಿಸಿಸಿ ಕಚೇರಿಯಲ್ಲಿ ರಹಸ್ಯ ಸಭೆಯೊಂದು ನಡೆದಿದೆ ಎಂದು ಪಕ್ಷದ ಮೂಲಗಳಿಂದ ಪಬ್ಲಿಕ್ ಟಿವಿಗೆ ಮಾಹಿತಿ ಲಭಿಸಿದೆ.

ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಸಚಿವರಾದ ಡಿ.ಕೆ.ಶಿವಕುಮಾರ್ ಮತ್ತು ಆರ್.ವಿ.ದೇಶಪಾಂಡೆ ನೇತೃತ್ವದಲ್ಲಿ ಸಭೆ ನಡೆದಿದೆ ಎನ್ನಲಾಗಿದೆ. ಸಭೆಯಲ್ಲಿ ಸ್ಥಳೀಯ ಚುನಾವಣೆಯ ದಿನಾಂಕ ಸಮೀಪಿಸುತ್ತಿದ್ದು, ಕಾಂಗ್ರೆಸ್‍ನಲ್ಲಿ ಹಣಕಾಸಿನ ಸಮಸ್ಯೆ ಕಾಣಿಸಿಕೊಂಡಿದೆಯಂತೆ. ಈ ಸಂಬಂಧ ಚುನಾವಣೆಗೆ ಹಣ ಹೇಗೆ ಹೊಂದಿಸಬೇಕು? ಹೇಗೆ ವ್ಯಯಿಸಬೇಕೆಂಬುದರ ಬಗ್ಗೆ ರಹಸ್ಯ ಮಾತುಕತೆಗಳು ನಡೆದಿವೆಯಂತೆ.

kpcc ofc protest 1

ಪಕ್ಷ ಕರೆದ ಸಭೆಗೆ ಸಚಿವ ಸ್ಥಾನ ಆಕಾಂಕ್ಷಿಗಳು ದೂರ ಉಳಿದಿದ್ದು, ಅಧಿಕಾರ ಮಾತ್ರ ನಿಮಗೆ ಹಣ ನಮ್ಮದು ಹೇಗೆ ಅಂತಾ ಹಿರಿಯ ನಾಯಕರನ್ನು ಪ್ರಶ್ನಿಸುತ್ತಿದ್ದಾರಂತೆ. ಮೊದಲು ಸಂಪುಟ ವಿಸ್ತರಣೆ ಮಾಡಿ, ಆಮೇಲೆ ಹಣ ಕೇಳಿ ಎಂದು ಮಾಜಿ ಸಚಿವ ರಾಮಲಿಂಗಾ ರೆಡ್ಡಿ, ಕೆಪಿಸಿಸಿ ಅಧ್ಯಕ್ಷರನ್ನು ಪ್ರಶ್ನಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ಇತ್ತ ಬೆಂಗಳೂರಿನಲ್ಲಿಯೇ ಇದ್ದರೂ ಸಚಿನ ಕೆ.ಜೆ.ಜಾರ್ಜ್ ಸಭೆಗೆ ಗೈರಾಗಿದ್ದರು. ಚುನಾವಣೆಗೆ ಹಣ ಹೊಂದಿಸುವ ಚಿಂತೆ ದಿನೇಶ್ ಗುಂಡೂರಾವ್ ಅವರನ್ನು ಕಾಡುತ್ತಿದೆಯಂತೆ. ಸದ್ಯಕ್ಕೆ ಹಣ ಹೊಂದಿಸುವ ವಿಚಾರವಾಗಿ ಡಿಸಿಎಂ ಪರಮೇಶ್ವರ್, ಡಿಕೆಶಿ ಹಾಗೂ ದೇಶಪಾಂಡೆಯಷ್ಟೇ ದಿನೇಶ್ ಗುಂಡೂರಾವ್ ನೆರವಿಗೆ ಬಂದಿದ್ದಾರೆ ಎನ್ನಲಾಗುತ್ತಿದೆ.

Share This Article
Leave a Comment

Leave a Reply

Your email address will not be published. Required fields are marked *