– ಟ್ಯಾಟೂನಿಂದ ಮೃತ ಪತಿಯ ಗುರುತು ಪತ್ತೆ
– ಪತ್ನಿ ದೇಹಕ್ಕಾಗಿ ಮುಂದುವರಿದ ಶೋಧ
ಶಿಲ್ಲಾಂಗ್: ಕಳೆದ ಮೇ 23ರಂದು ಹನಿಮೂನ್ ಸಲುವಾಗಿ ಚಿರಾಪುಂಜಿಗೆ ಪ್ರಯಾಣಿಸಿದ್ದ ಇಂದೋರ್ನ ದಂಪತಿ ನಾಪತ್ತೆ ಪ್ರಕರಣ ಪೊಲೀಸರಿಗೆ (Meghalaya Police) ದೊಡ್ಡ ತಲೆನೋವು ತಂದಿದೆ. ದಂಪತಿ ಪೈಕಿ ಪತಿಯ ಮೃತದೇಹ ಮಾತ್ರ ಪತ್ತೆಯಾಗಿದ್ದು, ಪತ್ನಿಗಾಗಿ ಶೋಧ ಕಾರ್ಯ ಮುಂದುವರಿದಿದೆ. ಈ ನಡುವೆ ಸ್ಥಳೀಯ ಗೈಡ್ (Tourist Guide) ದಂಪತಿ ಕುರಿತು ಸ್ಫೋಟಕ ಹೇಳಿಕೆಯೊಂದನ್ನ ನೀಡಿದ್ದಾರೆ. ಇದು ಪೊಲೀಸರನ್ನು ಮತ್ತಷ್ಟು ಸವಾಲಿನ ಕೆಲಸಕ್ಕೆ ದೂಡಿದೆ.
ಇಂದೋರ್ (Indore) ಮೂಲದ ನವ ದಂಪತಿ ರಾಜಾ ರಘುವಂಶಿ (30) ಮತ್ತು ಸೋನಮ್ ರಘುವಂಶಿ (27) ತಮ್ಮ ಹನಿಮೂನ್ಗಾಗಿ ಮೇಘಾಲಯಕ್ಕೆ ಬಂದಿದ್ದರು. ಮಳೆಯಲ್ಲಿ ಸಮೃದ್ಧಿಯಾದ ಬೆಟ್ಟದ ಸೌಂದರ್ಯವನ್ನು ಕಣ್ತುಂಬಿಕೊಳ್ಳು ಚಿರಾಪುಂಜಿಗೆ ಬಂದಿದ್ದರು. ಈ ವೇಳೆ ಇಬ್ಬರೂ ನಾಪತ್ತೆಯಾಗಿದ್ದರು. ಈ ಸಂಬಂಧ ಮಿಸ್ಸಿಂಗ್ ಕೇಸ್ ದಾಖಲಿಸಿಕೊಂಡು ತನಿಖೆ ನಡೆಸಿದ್ದ ಪೊಲೀಸರಿಗೆ ಮೃತದೇಹವೊಂದು ಸಿಕ್ಕಿದ್ದು, ಆಗ ಕೈಯಲ್ಲಿದ್ದ ಟ್ಯಾಟೂ ನೋಡಿ ಇದು ಮೃತ ರಘುವಂಶಿಯದ್ದೇ ಎಂದು ಪತ್ತೆ ಮಾಡಲಾಗಿತ್ತು. ಆದ್ರೆ ಪತ್ನಿಯ ದೇಹಕ್ಕಾಗಿ ಹುಡುಕಾಟ ನಡೆಸುತ್ತಿದ್ದಾಗಲೇ ಸ್ಥಳೀಯ ಗೈಡ್ವೊಬ್ಬರ ಹೇಳಿಕೆ ಪ್ರಕರಣಕ್ಕೆ ರೋಚಕ ತಿರುವು ನೀಡಿದೆ. ಇದನ್ನೂ ಓದಿ: ಎಲ್ರೂ ಬಂದು ಹೇಗಾಯ್ತು ಹುಷಾರಾಗಿ ಅಂತಾರೆ, ಪರಿಹಾರ ಮಾತ್ರ ಇಲ್ಲ: ಆರ್ಸಿಬಿ ಫ್ಯಾನ್ಸ್ ನೋವಿನ ಮಾತು
ಗೈಡ್ ಬಿಚ್ಚಿಟ್ಟಿದ ರಹಸ್ಯ ಸಂಗತಿ ಏನು?
ಮೇ 23 ರಂದು ಬೆಳಗ್ಗೆ 10 ಗಂಟೆ ಸುಮಾರಿಗೆ ನೊಂಗ್ರಿಯಾತ್ನಿಂದ ಮಾವ್ಲಾಖಿಯಾತ್ಗೆ 3,000 ಮೆಟ್ಟಿಲುಗಳನ್ನು ಹತ್ತುತ್ತಿದ್ದಾಗ ಮೂವರು ಪುರುಷ ಪ್ರವಾಸಿಗರು ದಂಪತಿ ಜೊತೆಗೆ ಇದ್ದುದ್ದನ್ನು ನೋಡಿದೆ. ಮೇ.22ರಂದು ದಂಪತಿಯನ್ನ ನೊಂಗ್ರಿಯಾಟ್ಗೆ ಕರೆದೊಯ್ಯಲು ನಾನು ಮುಂದಾದೆ. ಆದರೆ, ಅವರು ನನ್ನ ಗೈಡ್ ಸೇವೆಯನ್ನ ಒಳ್ಳೆಯ ಮಾತುಗಳಿಂದಲೇ ಬೇಡವೆಂದರು. ಇದೇ ವೇಳೆ ಭಾ ವಾನ್ಸಾಯಿ ಎಂಬ ಇನ್ನೊಬ್ಬ ಗೈಡ್ನನ್ನು ನೇಮಕ ಮಾಡಿಕೊಂಡ ದಂಪತಿ, ಶಿವಾರಾ ಹೋಂಸ್ಟೇಯಲ್ಲಿ ರಾತ್ರಿ ಕಳೆದು, ಮರುದಿನ ಅವರಿಬ್ಬರೇ ಹೊರಬಂದರು ಎಂದು ಹೇಳಿದ್ದಾರೆ. ಇದು ಪೊಲೀಸರ ತನಿಖೆಯನ್ನು ಮತ್ತಷ್ಟು ಸವಾಲಾಗಿಸಿದೆ. ಇದನ್ನೂ ಓದಿ: ರಷ್ಯಾದ ಏರ್ಬೇಸ್ ಉಡೀಸ್ ಮಾಡೋಕೆ ಉಕ್ರೇನ್ ಬಳಸಿದ FPV ಡ್ರೋನ್ ವಿಶೇಷವೇನು ಗೊತ್ತಾ?
ನಾನು ಅವರನ್ನು ಮತ್ತೆ ನೋಡಿದಾಗ ನಾಲ್ವರು ಪುರುಷರಿದ್ದರು, ಆದ್ರೆ ಅವರು ಹಿಂದಿಯಲ್ಲಿ ಮಾತನಾಡುತ್ತಿದ್ದರು. ಹಾಗಾಗಿ ನನಗೆ ಅದನ್ನು ಸಂಪೂರ್ಣವಾಗಿ ಅರ್ಥ ಮಾಡಿಕೊಳ್ಳಲು ಆಗಲಿಲ್ಲ. ಪುರುಷರು ಮೌಲಖಿಯಾತ್ ತಲುಪಿದಾಗ, ದಂಪತಿಗಳ ಸ್ಕೂಟರ್ ಅಲ್ಲಿ ಇರಲಿಲ್ಲ ಎಂದು ಗೈಡ್ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಮಣಿಪುರದಲ್ಲಿ ತೀವ್ರ ಪ್ರತಿಭಟನೆ – 5 ದಿನಗಳವರೆಗೆ ಇಂಟರ್ನೆಟ್ ಸೇವೆ ಸ್ಥಗಿತ
ಸೋನಮ್ ಕುಟುಂಬಸ್ಥರು ಹೇಳೋದೇನು?
ಇನ್ನೂ ನಾಪತ್ತೆಯಾದ ಮಹಿಳೆ ಸೋನಮ್ ಸಹೋದರ ಗೋವಿಂದ್ ಮಾತನಾಡಿ, ಮೇಘಾಲಯ ಸರ್ಕಾರ ಈಗಾಗಲೇ ಈ ಪ್ರಕರಣವನ್ನು ಸಾಯಿಸಿದೆ ಎಂದು ಕಿಡಿ ಕಾರಿದರು. ಸೋನಮ್ ಜೀವಂತವಾಗಿದ್ದಾರೆಂದು ನಮಗೆ ಅನ್ನಿಸುತ್ತಿದೆ. ಆದ್ರೆ ಸರ್ಕಾರ ತನಿಖೆ ನಡೆಸಲು ಹಿಂದೇಟು ಹಾಕುತ್ತಿದೆ. ಪೊಲೀಸರು ಮಂದಗತಿಯಲ್ಲಿ ತನಿಖೆ ನಡೆಸುತ್ತಿದ್ದಾರೆ. ಕೂಡಲೇ ಈ ತನಿಖೆಯನ್ನ ಸಿಬಿಐಗೆ ವಹಿಸಬೇಕು ಎಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಬೆಂಕಿ ಬಿದ್ದರೂ ತಿಳಿಯದೇ ಟ್ರ್ಯಾಕ್ಟರ್ ಚಾಲನೆ- ನಾಲ್ವರು ಅಪಾಯದಿಂದ ಪಾರು
ಇದಕ್ಕೆ ಪ್ರತಿಕ್ರಿಯಿಸಿರುವ ಮೇಘಾಲಯ ಮುಖ್ಯಮಂತ್ರಿ ಕಾನ್ರಾಡ್ ಕೆ. ಸಂಗ್ಮಾ, ಕಾಣೆಯಾದ ಮಹಿಳೆಯನ್ನು ಪತ್ತೆಹಚ್ಚಲು ಸರ್ಕಾರ ಎಲ್ಲ ಪ್ರಯತ್ನಗಳನ್ನು ಮಾಡುತ್ತಿದೆ. ನಾವು ನಮ್ಮ ಕೈಲಾದಷ್ಟು ಪ್ರಯತ್ನ ಮಾಡುತ್ತಿದ್ದೇವೆ. ತರಬೇತಿ ಪಡೆದ ಶ್ವಾನಗಳು ಹಾಗೂ ವಿಶೇಷ ಉಪಕರಣಗಳೊಂದಿಗೆ ನಮ್ಮ ತಂಡಗಳು ದಣಿವರಿಯದೇ ಕೆಲಸ ಮಾಡುತ್ತಿವೆ. ಆದ್ರೆ ಇಲ್ಲಿನ ದಟ್ಟವಾದ ಭೂಪ್ರದೇಶ, ನಿರಂತರ ಮಳೆ ಮತ್ತು ಕಳಪೆ ಗೋಚರತೆಯು ಕಾರ್ಯಾಚರಣೆಗೆ ಅಡ್ಡಿಯಾಗುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.