Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಕೇಸರಿ ಜರ್ಸಿ ಧರಿಸಿದ್ದಕ್ಕೆ ಟೀಂ ಇಂಡಿಯಾಗೆ ಸೋಲು – ಮೆಹಬೂಬಾ ಮುಫ್ತಿ

Public TV
Last updated: July 1, 2019 2:40 pm
Public TV
Share
3 Min Read
collage Mehbooba Mufti india
SHARE

ನವದೆಹಲಿ: ಭಾನುವಾರ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಪಂದ್ಯದಲ್ಲಿ ಇಂಡಿಯಾ ಸೋಲಲು ಭಾರತದ ಆಟಗಾರರು ಧರಿಸಿದ್ದ ಕಿತ್ತಳೆ ಬಣ್ಣದ ಜರ್ಸಿ ಕಾರಣ ಎಂದು ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ, ಪಿಡಿಪಿ ನಾಯಕಿ ಮೆಹಬೂಬಾ ಮುಫ್ತಿ ಹೇಳಿದ್ದಾರೆ.

ವಿಶ್ವಕಪ್‍ನಲ್ಲಿ ಸೋಲನ್ನೇ ಕಾಣದ ಭಾರತ ಇಂಗ್ಲೆಂಡ್ ವಿರುದ್ಧ ಬರ್ಮಿಗ್ಹ್ಯಾಮ್‍ನಲ್ಲಿ ನಡೆದ ಪಂದ್ಯದಲ್ಲಿ 31 ರನ್‍ಗಳ ಅಂತರದಿಂದ ಸೋತಿದೆ. ಇದಕ್ಕೆ ಬೇಸರ ವ್ಯಕ್ತಪಡಿಸುವ ರೂಪದಲ್ಲಿ ಮೆಹಬೂಬಾ ಮುಫ್ತಿ ಭಾರತ ಸೋಲಿಗೆ ಕಿತ್ತಳೆ ಬಣ್ಣದ ಜರ್ಸಿ ಕಾರಣ ಎಂದು ಟ್ವೀಟ್ ಮಾಡಿ ವಿವಾದಕ್ಕೆ ಸಿಲುಕಿದ್ದಾರೆ.

Call me superstitious but I’d say it’s the jersey that ended India’s winning streak in the #ICCWorldCup2019.

— Mehbooba Mufti (@MehboobaMufti) June 30, 2019

ಭಾರತದ ಸೋಲಿನ ನಂತರ ಟ್ವೀಟ್‍ವೊಂದನ್ನು ಮಾಡಿರುವ ಮೆಹಬೂಬಾ ಮುಫ್ತಿ, “ನಾನು ಮೂಢ ನಂಬಿಕೆಗಳನ್ನು ನಂಬುತ್ತೇನೆಂದು ಕರೆದರೂ ಪರವಾಗಿಲ್ಲ ಭಾರತದ ಗೆಲುವಿನ ಓಟವನ್ನು ತಡೆದದ್ದೆ ಟೀಂ ಇಂಡಿಯಾ ಧರಿಸಿದ್ದ ಕೇಸರಿ ಸರ್ಜಿ” ಎಂದು ಬರೆದುಕೊಂಡಿದ್ದಾರೆ. ಇದಕ್ಕೆ ಈಗ ವ್ಯಾಪಕ ವಿರೋಧ ವ್ಯಕ್ತವಾಗಿದೆ.

team india orrange

ಇದಕ್ಕೆ ಪ್ರತಿಕ್ರಿಯೆ ನೀಡಿರುವ ಜಮ್ಮು ಕಾಶ್ಮೀರದ ಬಿಜೆಪಿ ಮುಖಂಡ ರವೀಂದರ್ ರೈನಾ ಭಾರತ ಸೋತು ಪಾಕಿಸ್ತಾನವನ್ನು ಮನೆಗೆ ಕಳುಹಿಸಿದ್ದಕ್ಕೆ ಮೆಹಬೂಬಾ ಮುಫ್ತಿ ಅವರ ಮನಸ್ಸಿಗೆ ತುಂಬಾ ನೋವಾಗಿದೆ ಆದಕ್ಕೆ ಅವರು ಈ ರೀತಿ ಭಾರತದ ಜರ್ಸಿ ವಿರುದ್ಧ ಮಾತನಾಡುತ್ತಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ.

ಇದಕ್ಕೆ ಶಿವಸೇನೆ ಮುಖಂಡ ಸಂಜಯ್ ರೌತ್ ಅವರು ಕೂಡ ಪ್ರತಿಕ್ರಿಯಿಸಿದ್ದು, “ಹಾಗಾದರೆ ಪಾಕಿಸ್ತಾನ ಹಸಿರು ಬಣ್ಣದ ಜರ್ಸಿ ಧರಿಸಿ ಆಡುತ್ತದೆ ಮತ್ತೆ ಪಾಕಿಸ್ತಾನ ಏಕೆ ಸೋಲುತ್ತದೆ. ಪಾಕಿಸ್ತಾನದ ಆಟಗಾರರು ಪಾದ್ರಿಗಳಂತೆ ಗಡ್ಡ ಬಿಡುತ್ತಾರೆ ಅದಕ್ಕಾಗಿಯೇ ಸೋಲುತ್ತಿರಬಹುದು” ಎಂದು ಪರೋಕ್ಷವಾಗಿ ಕಿಡಿಕಾರಿದ್ದಾರೆ.

pakistan cheering 2

ಇದಕ್ಕೂ ಮುಂಚೆ ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷಗಳು ಕೇಸರಿ ಬಣ್ಣದ ಜರ್ಸಿಗೆ ಆಕ್ಷೇಪ ಎತ್ತಿದ್ದವು. ಈ ಬಗ್ಗೆ ಅಸಮಾಧಾನ ಹೊರ ಹಾಕಿದ್ದ ಉತ್ತರಪ್ರದೇಶದ ಸಮಾಜವಾದಿ ಪಕ್ಷದ ಶಾಸಕ ಅಬು ಅಸಿಮ್ ಅಜ್ಮಿ ಅವರು, ಬಿಸಿಸಿಐ ನಿರ್ಧಾರದ ಹಿಂದೆ ಕೇಂದ್ರ ಸರ್ಕಾರವಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಇಡೀ ದೇಶವನ್ನು ಕೇಸರಿಮಯವಾಗಿಸಲು ಹೊರಟಿದ್ದಾರೆ. ಭಾರತದ ತ್ರಿವರ್ಣ ಧ್ವಜವನ್ನು ವಿನ್ಯಾಸಗೊಳಿಸಿದ್ದು ಒಬ್ಬ ಮುಸ್ಲಿಂ. ತ್ರಿವರ್ಣ ಧ್ವಜದ ಮೂರು ಬಣ್ಣಗಳಲ್ಲಿ ಕೇಸರಿಯನ್ನೇ ಆಯ್ಕೆ ಮಾಡಿದ್ದು ಯಾಕೆ? ಜರ್ಸಿಯಲ್ಲಿ ಮೂರು ವರ್ಣಗಳನ್ನು ಬಳಸಿದ್ದರೆ ಉತ್ತಮವಾಗಿತ್ತು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದರು.

Team India B

ಐಸಿಸಿ 2019 ಏಕದಿನ ವಿಶ್ವಕಪ್‍ನಲ್ಲಿ ಭಾನುವಾರ ನಡೆದ ಪಂದ್ಯದಲ್ಲಿ ಭಾರತ ವಿರುದ್ಧ 31 ರನ್ ಅಂತರದ ರೋಚಕ ಗೆಲುವು ದಾಖಲಿಸಿರುವ ಆತಿಥೇಯ ಇಂಗ್ಲೆಂಡ್ ಸೆಮಿಫೈನಲ್ ಕನಸನ್ನು ಜೀವಂತವಾಗಿರಿಸಿದೆ. ಈ ಮೂಲಕ 1992ರ ಬಳಿಕ ಭಾರತ ವಿರುದ್ಧ ವಿಶ್ವಕಪ್‍ನಲ್ಲಿ ಮೊದಲ ಗೆಲುವನ್ನು ದಾಖಲಿಸಿದೆ.

ಹೊಸ ಜರ್ಸಿ ಯಾಕೆ?
ಐಸಿಸಿ ನಿಯಮದಂತೆ 2 ತಂಡಗಳು ಒಂದೇ ಬಣ್ಣದ ಜರ್ಸಿ ಧರಿಸುವಂತಿಲ್ಲ. ಎರಡೂ ತಂಡಗಳು ಒಂದೇ ವರ್ಣದ ಜರ್ಸಿ ತೊಟ್ಟು ಮೈದಾನಕ್ಕೆ ಇಳಿದರೆ ಪ್ರೇಕ್ಷಕರಿಗೆ ಗೊಂದಲ ಉಂಟಾಗುತ್ತದೆ. ಈ ನಿಟ್ಟಿನಲ್ಲಿ ಒಂದು ತಂಡವು ತನ್ನ ಜರ್ಸಿಯನ್ನು ಬದಲಾಯಿಸಬೇಕಾಗುತ್ತದೆ. ಫುಟ್ಬಾಲ್‍ನಲ್ಲಿರುವ `ಹೋಮ್’ ಮತ್ತು `ಅವೇ’ ನಿಯಮವನ್ನು ಕ್ರಿಕೆಟ್‍ಗೆ ಅಳವಡಿಸಲಾಗಿದೆ. ಈ ನಿಯಮದ ಪ್ರಕಾರ ಅತಿಥೇಯ ತಂಡ ಇಂಗ್ಲೆಂಡ್ ತನ್ನದೇ ಜರ್ಸಿಯನ್ನು ತೊಟ್ಟು ಆಡಿದ್ದು, ಕೊಹ್ಲಿ ಪಡೆ ಬೇರೆ ಬಣ್ಣದ ಜರ್ಸಿ ಧರಿಸಬೇಕಿದೆ. ಹೀಗಾಗಿ ಭಾರತ ನೀಲಿಯ ಬದಲು ಕೇಸರಿ ಬಣ್ಣ ಇರುವ ಜರ್ಸಿಯನ್ನು ಧರಿಸಲಿದೆ.

india new 1 1 1

ಈ ಹೇಳಿಕೆಗಳಿಗೆ ತಿರುಗೇಟು ನೀಡಿರುವ ಟೀಂ ಇಂಡಿಯಾ ಅಭಿಮಾನಿಗಳು ಈ ಹಿಂದೆ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗಲೇ ಭಾರತದ ಫುಟ್‍ಬಾಲ್ ಮತ್ತು ಹಾಕಿ ಆಟಗಾರರು ಕೇಸರಿ ಬಣ್ಣದ ಜರ್ಸಿಯಲ್ಲಿ ಆಡಿದ್ದಾರೆ. ಈ ವೇಳೆ ಆಕ್ಷೇಪ ಎತ್ತದ ರಾಜಕೀಯ ನಾಯಕರು ಈಗ ಪ್ರಚಾರಕ್ಕಾಗಿ ವಿವಾದವನ್ನು ಎತ್ತುತ್ತಿದ್ದಾರೆ ಎಂದು ಟೀಕಿಸಿದ್ದಾರೆ.

TAGGED:indiaMehbooba MuftiOrange jerseytwitterworld cupಕಿತ್ತಳೆ ಜರ್ಸಿಟ್ವಿಟ್ಟರ್ಭಾರತಮೆಹಬೂಬಾ ಮುಫ್ತಿವಿಶ್ವಕಪ್
Share This Article
Facebook Whatsapp Whatsapp Telegram

Cinema Updates

The girl Friend
ರಶ್ಮಿಕಾ ಮಂದಣ್ಣ ನಟನೆಯ ದಿ ಗರ್ಲ್ ಫ್ರೆಂಡ್ ಚಿತ್ರದ ಫಸ್ಟ್ ಸಾಂಗ್ ರಿಲೀಸ್
Cinema Latest Top Stories
Actor Darshan At Bengaluru Airpor
ಏರ್‌ಪೋರ್ಟ್‌ನಲ್ಲಿ ದರ್ಶನ್ ಫೋಟೋ ರಿವೀಲ್
Bengaluru City Cinema Latest Sandalwood Top Stories
Yogaraj Bhat Jayant Kaikini
ಯೋಗರಾಜ್ ಭಟ್ ಗೀತ ಗುಚ್ಛಕ್ಕೆ ಕಾಯ್ಕಿಣಿ ಸಾಥ್
Bengaluru City Cinema Latest Sandalwood
31 Days
ಜಾಲಿಡೇಸ್ ಹುಡುಗನ ಚಿತ್ರಕ್ಕೆ ಮನೋಹರ್ ಸಂಗೀತ : ಇದು 150ನೇ ಸಿನಿಮಾ
Cinema Latest Sandalwood Top Stories
K Manju and Style Shrinu
ಸದ್ಯದಲ್ಲೇ ಕೆ.ಮಂಜು ಮತ್ತು ಸ್ಮೈಲ್ ಶ್ರೀನು ಕಾಂಬಿನೇಶನ್ ಚಿತ್ರ
Cinema Latest Sandalwood Top Stories

You Might Also Like

KSRTC 2
Bengaluru City

ಸರ್ಕಾರ Vs ಸಾರಿಗೆ ನೌಕರರು – ಆ.5ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ!

Public TV
By Public TV
3 hours ago
Siddaramaiah 7
Bengaluru City

22 ಸಚಿವರ ಮೀಟಿಂಗ್ ಬೆನ್ನಲ್ಲೇ ಸಿಎಂ-ಡಿಸಿಎಂ ಜೊತೆ ಸುರ್ಜೇವಾಲಾ ಸಭೆ – ಕೆರಳಿದ ಕುತೂಹಲ

Public TV
By Public TV
3 hours ago
PM Modi Meeting
Latest

100 ಕೃಷಿ ಜಿಲ್ಲೆಗಳ ಅಭಿವೃದ್ಧಿಗೆ ನಿರ್ಧಾರ – 24,000 ಕೋಟಿ ವೆಚ್ಚದ ಯೋಜನೆಗೆ ಕೇಂದ್ರ ಸಂಪುಟ ಅಸ್ತು

Public TV
By Public TV
3 hours ago
Mamata Banerjee
Latest

ಬಂಗಾಳಿ ವಲಸೆಗಾರರ ಮೇಲೆ ಹಲ್ಲೆ, ದೌರ್ಜನ್ಯ ಹೆಚ್ಚಳ; ದೀದಿ ನೇತೃತ್ವದಲ್ಲಿ ಪ್ರತಿಭಟನೆ

Public TV
By Public TV
4 hours ago
Kodagu Rain 2
Districts

ಕೊಡಗಿನಲ್ಲಿ ಭಾರೀ ಮಳೆ – 2 ದಿನ ಆರೆಂಜ್ ಅಲರ್ಟ್, ಗುರುವಾರ ಶಾಲಾ ಕಾಲೇಜುಗಳಿಗೆ ರಜೆ

Public TV
By Public TV
4 hours ago
Israel Bobm
Latest

ಸಿರಿಯಾ ಮಿಲಿಟರಿ ಹೆಡ್‌ಕ್ವಾಟ್ರಸ್‌ ಮೇಲೆ ಇಸ್ರೇಲ್ ದಾಳಿ – ಲೈವ್‌ನಿಂದಲೇ ಎದ್ದು ಓಡಿದ ಟಿವಿ ಆಂಕರ್

Public TV
By Public TV
5 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?