Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೇಸರಿ ಜರ್ಸಿ ಧರಿಸಿದ್ದಕ್ಕೆ ಟೀಂ ಇಂಡಿಯಾಗೆ ಸೋಲು – ಮೆಹಬೂಬಾ ಮುಫ್ತಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಕೇಸರಿ ಜರ್ಸಿ ಧರಿಸಿದ್ದಕ್ಕೆ ಟೀಂ ಇಂಡಿಯಾಗೆ ಸೋಲು – ಮೆಹಬೂಬಾ ಮುಫ್ತಿ

Latest

ಕೇಸರಿ ಜರ್ಸಿ ಧರಿಸಿದ್ದಕ್ಕೆ ಟೀಂ ಇಂಡಿಯಾಗೆ ಸೋಲು – ಮೆಹಬೂಬಾ ಮುಫ್ತಿ

Public TV
Last updated: July 1, 2019 2:40 pm
Public TV
Share
3 Min Read
collage Mehbooba Mufti india
SHARE

ನವದೆಹಲಿ: ಭಾನುವಾರ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಪಂದ್ಯದಲ್ಲಿ ಇಂಡಿಯಾ ಸೋಲಲು ಭಾರತದ ಆಟಗಾರರು ಧರಿಸಿದ್ದ ಕಿತ್ತಳೆ ಬಣ್ಣದ ಜರ್ಸಿ ಕಾರಣ ಎಂದು ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ, ಪಿಡಿಪಿ ನಾಯಕಿ ಮೆಹಬೂಬಾ ಮುಫ್ತಿ ಹೇಳಿದ್ದಾರೆ.

ವಿಶ್ವಕಪ್‍ನಲ್ಲಿ ಸೋಲನ್ನೇ ಕಾಣದ ಭಾರತ ಇಂಗ್ಲೆಂಡ್ ವಿರುದ್ಧ ಬರ್ಮಿಗ್ಹ್ಯಾಮ್‍ನಲ್ಲಿ ನಡೆದ ಪಂದ್ಯದಲ್ಲಿ 31 ರನ್‍ಗಳ ಅಂತರದಿಂದ ಸೋತಿದೆ. ಇದಕ್ಕೆ ಬೇಸರ ವ್ಯಕ್ತಪಡಿಸುವ ರೂಪದಲ್ಲಿ ಮೆಹಬೂಬಾ ಮುಫ್ತಿ ಭಾರತ ಸೋಲಿಗೆ ಕಿತ್ತಳೆ ಬಣ್ಣದ ಜರ್ಸಿ ಕಾರಣ ಎಂದು ಟ್ವೀಟ್ ಮಾಡಿ ವಿವಾದಕ್ಕೆ ಸಿಲುಕಿದ್ದಾರೆ.

Call me superstitious but I’d say it’s the jersey that ended India’s winning streak in the #ICCWorldCup2019.

— Mehbooba Mufti (@MehboobaMufti) June 30, 2019

ಭಾರತದ ಸೋಲಿನ ನಂತರ ಟ್ವೀಟ್‍ವೊಂದನ್ನು ಮಾಡಿರುವ ಮೆಹಬೂಬಾ ಮುಫ್ತಿ, “ನಾನು ಮೂಢ ನಂಬಿಕೆಗಳನ್ನು ನಂಬುತ್ತೇನೆಂದು ಕರೆದರೂ ಪರವಾಗಿಲ್ಲ ಭಾರತದ ಗೆಲುವಿನ ಓಟವನ್ನು ತಡೆದದ್ದೆ ಟೀಂ ಇಂಡಿಯಾ ಧರಿಸಿದ್ದ ಕೇಸರಿ ಸರ್ಜಿ” ಎಂದು ಬರೆದುಕೊಂಡಿದ್ದಾರೆ. ಇದಕ್ಕೆ ಈಗ ವ್ಯಾಪಕ ವಿರೋಧ ವ್ಯಕ್ತವಾಗಿದೆ.

team india orrange

ಇದಕ್ಕೆ ಪ್ರತಿಕ್ರಿಯೆ ನೀಡಿರುವ ಜಮ್ಮು ಕಾಶ್ಮೀರದ ಬಿಜೆಪಿ ಮುಖಂಡ ರವೀಂದರ್ ರೈನಾ ಭಾರತ ಸೋತು ಪಾಕಿಸ್ತಾನವನ್ನು ಮನೆಗೆ ಕಳುಹಿಸಿದ್ದಕ್ಕೆ ಮೆಹಬೂಬಾ ಮುಫ್ತಿ ಅವರ ಮನಸ್ಸಿಗೆ ತುಂಬಾ ನೋವಾಗಿದೆ ಆದಕ್ಕೆ ಅವರು ಈ ರೀತಿ ಭಾರತದ ಜರ್ಸಿ ವಿರುದ್ಧ ಮಾತನಾಡುತ್ತಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ.

ಇದಕ್ಕೆ ಶಿವಸೇನೆ ಮುಖಂಡ ಸಂಜಯ್ ರೌತ್ ಅವರು ಕೂಡ ಪ್ರತಿಕ್ರಿಯಿಸಿದ್ದು, “ಹಾಗಾದರೆ ಪಾಕಿಸ್ತಾನ ಹಸಿರು ಬಣ್ಣದ ಜರ್ಸಿ ಧರಿಸಿ ಆಡುತ್ತದೆ ಮತ್ತೆ ಪಾಕಿಸ್ತಾನ ಏಕೆ ಸೋಲುತ್ತದೆ. ಪಾಕಿಸ್ತಾನದ ಆಟಗಾರರು ಪಾದ್ರಿಗಳಂತೆ ಗಡ್ಡ ಬಿಡುತ್ತಾರೆ ಅದಕ್ಕಾಗಿಯೇ ಸೋಲುತ್ತಿರಬಹುದು” ಎಂದು ಪರೋಕ್ಷವಾಗಿ ಕಿಡಿಕಾರಿದ್ದಾರೆ.

pakistan cheering 2

ಇದಕ್ಕೂ ಮುಂಚೆ ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷಗಳು ಕೇಸರಿ ಬಣ್ಣದ ಜರ್ಸಿಗೆ ಆಕ್ಷೇಪ ಎತ್ತಿದ್ದವು. ಈ ಬಗ್ಗೆ ಅಸಮಾಧಾನ ಹೊರ ಹಾಕಿದ್ದ ಉತ್ತರಪ್ರದೇಶದ ಸಮಾಜವಾದಿ ಪಕ್ಷದ ಶಾಸಕ ಅಬು ಅಸಿಮ್ ಅಜ್ಮಿ ಅವರು, ಬಿಸಿಸಿಐ ನಿರ್ಧಾರದ ಹಿಂದೆ ಕೇಂದ್ರ ಸರ್ಕಾರವಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಇಡೀ ದೇಶವನ್ನು ಕೇಸರಿಮಯವಾಗಿಸಲು ಹೊರಟಿದ್ದಾರೆ. ಭಾರತದ ತ್ರಿವರ್ಣ ಧ್ವಜವನ್ನು ವಿನ್ಯಾಸಗೊಳಿಸಿದ್ದು ಒಬ್ಬ ಮುಸ್ಲಿಂ. ತ್ರಿವರ್ಣ ಧ್ವಜದ ಮೂರು ಬಣ್ಣಗಳಲ್ಲಿ ಕೇಸರಿಯನ್ನೇ ಆಯ್ಕೆ ಮಾಡಿದ್ದು ಯಾಕೆ? ಜರ್ಸಿಯಲ್ಲಿ ಮೂರು ವರ್ಣಗಳನ್ನು ಬಳಸಿದ್ದರೆ ಉತ್ತಮವಾಗಿತ್ತು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದರು.

Team India B

ಐಸಿಸಿ 2019 ಏಕದಿನ ವಿಶ್ವಕಪ್‍ನಲ್ಲಿ ಭಾನುವಾರ ನಡೆದ ಪಂದ್ಯದಲ್ಲಿ ಭಾರತ ವಿರುದ್ಧ 31 ರನ್ ಅಂತರದ ರೋಚಕ ಗೆಲುವು ದಾಖಲಿಸಿರುವ ಆತಿಥೇಯ ಇಂಗ್ಲೆಂಡ್ ಸೆಮಿಫೈನಲ್ ಕನಸನ್ನು ಜೀವಂತವಾಗಿರಿಸಿದೆ. ಈ ಮೂಲಕ 1992ರ ಬಳಿಕ ಭಾರತ ವಿರುದ್ಧ ವಿಶ್ವಕಪ್‍ನಲ್ಲಿ ಮೊದಲ ಗೆಲುವನ್ನು ದಾಖಲಿಸಿದೆ.

ಹೊಸ ಜರ್ಸಿ ಯಾಕೆ?
ಐಸಿಸಿ ನಿಯಮದಂತೆ 2 ತಂಡಗಳು ಒಂದೇ ಬಣ್ಣದ ಜರ್ಸಿ ಧರಿಸುವಂತಿಲ್ಲ. ಎರಡೂ ತಂಡಗಳು ಒಂದೇ ವರ್ಣದ ಜರ್ಸಿ ತೊಟ್ಟು ಮೈದಾನಕ್ಕೆ ಇಳಿದರೆ ಪ್ರೇಕ್ಷಕರಿಗೆ ಗೊಂದಲ ಉಂಟಾಗುತ್ತದೆ. ಈ ನಿಟ್ಟಿನಲ್ಲಿ ಒಂದು ತಂಡವು ತನ್ನ ಜರ್ಸಿಯನ್ನು ಬದಲಾಯಿಸಬೇಕಾಗುತ್ತದೆ. ಫುಟ್ಬಾಲ್‍ನಲ್ಲಿರುವ `ಹೋಮ್’ ಮತ್ತು `ಅವೇ’ ನಿಯಮವನ್ನು ಕ್ರಿಕೆಟ್‍ಗೆ ಅಳವಡಿಸಲಾಗಿದೆ. ಈ ನಿಯಮದ ಪ್ರಕಾರ ಅತಿಥೇಯ ತಂಡ ಇಂಗ್ಲೆಂಡ್ ತನ್ನದೇ ಜರ್ಸಿಯನ್ನು ತೊಟ್ಟು ಆಡಿದ್ದು, ಕೊಹ್ಲಿ ಪಡೆ ಬೇರೆ ಬಣ್ಣದ ಜರ್ಸಿ ಧರಿಸಬೇಕಿದೆ. ಹೀಗಾಗಿ ಭಾರತ ನೀಲಿಯ ಬದಲು ಕೇಸರಿ ಬಣ್ಣ ಇರುವ ಜರ್ಸಿಯನ್ನು ಧರಿಸಲಿದೆ.

india new 1 1 1

ಈ ಹೇಳಿಕೆಗಳಿಗೆ ತಿರುಗೇಟು ನೀಡಿರುವ ಟೀಂ ಇಂಡಿಯಾ ಅಭಿಮಾನಿಗಳು ಈ ಹಿಂದೆ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗಲೇ ಭಾರತದ ಫುಟ್‍ಬಾಲ್ ಮತ್ತು ಹಾಕಿ ಆಟಗಾರರು ಕೇಸರಿ ಬಣ್ಣದ ಜರ್ಸಿಯಲ್ಲಿ ಆಡಿದ್ದಾರೆ. ಈ ವೇಳೆ ಆಕ್ಷೇಪ ಎತ್ತದ ರಾಜಕೀಯ ನಾಯಕರು ಈಗ ಪ್ರಚಾರಕ್ಕಾಗಿ ವಿವಾದವನ್ನು ಎತ್ತುತ್ತಿದ್ದಾರೆ ಎಂದು ಟೀಕಿಸಿದ್ದಾರೆ.

TAGGED:indiaMehbooba MuftiOrange jerseytwitterworld cupಕಿತ್ತಳೆ ಜರ್ಸಿಟ್ವಿಟ್ಟರ್ಭಾರತಮೆಹಬೂಬಾ ಮುಫ್ತಿವಿಶ್ವಕಪ್
Share This Article
Facebook Whatsapp Whatsapp Telegram

Cinema news

Alpha Trailor Srimurali
ಅಲ್ಫಾ ಟ್ರೈಲರ್ ಮೆಚ್ಚಿ ಪ್ರಶಂಸಿಸಿದ ನಟ ಶ್ರೀಮುರಳಿ
Cinema Latest Top Stories
CHANDRACHUD
ಅಸಂವಿಧಾನಿಕ ಪದಬಳಕೆ ಆರೋಪ – ಚಕ್ರವರ್ತಿ ಚಂದ್ರಚೂಡ್ ವಿರುದ್ಧ ಎಫ್ಐಆರ್
Bengaluru City Cinema Crime Karnataka Latest Sandalwood Top Stories
santosh kumar sukhibhava movie
‘ಸುಖೀಭವ’ ಚಿತ್ರ ನಿರ್ಮಾಣಕ್ಕೆ ಉದ್ಯಮಿ ಸಂತೋಷ್ ಕುಮಾರ್ ಸಾಥ್
Cinema Latest Sandalwood Top Stories
Bengaluru International Film Festival
ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವ – ಲಾಸ್ಟ್‌ ಲ್ಯಾಂಡ್‌, ಸಬರ್ ಬೊಂದಾ, ವನ್ಯಾ ಚಿತ್ರಕ್ಕೆ ಪ್ರಶಸ್ತಿ ಗರಿ
Bengaluru City Cinema Karnataka Latest Sandalwood States Top Stories

You Might Also Like

Om Birla
Latest

ಲೋಕಸಭೆ ಸ್ಪೀಕರ್ ವಿರುದ್ಧ ಅವಿಶ್ವಾಸ ನಿರ್ಣಯಕ್ಕೆ ಸಿದ್ಧತೆ – ರಾಹುಲ್ ಗಾಂಧಿಗೆ ಮಾತನಾಡಲು ಅವಕಾಶ ನೀಡದ್ದಕ್ಕೆ ಅಸಮಾಧಾನ

Public TV
By Public TV
19 minutes ago
Supreme Court 1
Court

ಎಸ್‌ಐಆರ್‌ ಪ್ರಕ್ರಿಯೆಗೆ ಅಡ್ಡಿಪಡಿಸಲಾಗುವುದಿಲ್ಲ: ರಾಜ್ಯಗಳಿಗೆ ‘ಸುಪ್ರೀಂ’ ಸ್ಪಷ್ಟ ಸಂದೇಶ

Public TV
By Public TV
27 minutes ago
mekedatu 1
Bengaluru City

ಸಂಗಮ ಕೆಳಭಾಗದಲ್ಲಿ ಮೇಕೆದಾಟು ಡ್ಯಾಂಗೆ ಸ್ಥಳ ನಿಗದಿ – ಕೇಂದ್ರಕ್ಕೆ ವರದಿ ಸಲ್ಲಿಸಿದ ರಾಜ್ಯ ಸರ್ಕಾರ

Public TV
By Public TV
43 minutes ago
Student Kills Girl Then Shoots Himself In 3 Second Classroom Horror
Crime

ಕ್ಲಾಸ್‌ ರೂಮ್‌ನಲ್ಲೇ ಯುವತಿಗೆ ಗುಂಡು ಹಾರಿಸಿ ಕೊಂದು, ತಾನೂ ಆತ್ಮಹತ್ಯೆಗೆ ಶರಣಾದ ಕಾನೂನು ವಿದ್ಯಾರ್ಥಿ

Public TV
By Public TV
51 minutes ago
KL Rahul
Cricket

ಆಪತ್ಬಾಂಧವ ಕೆ.ಎಲ್‌ ರಾಹುಲ್ ಅದ್ಭುತ ಶತಕ – ರಣಜಿ ಸೆಮಿಫೈನಲ್‌ಗೆ ಕರ್ನಾಟಕ

Public TV
By Public TV
1 hour ago
rcb g.parameshwara
Bengaluru City

ಬೆಂಗಳೂರಿನಲ್ಲಿ RCB ಪಂದ್ಯ ನಡೆಸಲು ಮುಂದುವರಿದ ಕೆಎಸ್‌ಸಿಎ ಕಸರತ್ತು; ಪರಮೇಶ್ವರ್ ಭೇಟಿ ಮಾಡಿದ ಕೆಎಸ್‌ಸಿಎ, ಆರ್‌ಸಿಬಿ ನಿಯೋಗ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?