Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಭಾರತ ಮುಸ್ಲಿಮರಿಗೆ ಸೂಕ್ತ ಸ್ಥಳವಲ್ಲ- ಮೆಹಬೂಬಾ ಮುಫ್ತಿ ಪುತ್ರಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಭಾರತ ಮುಸ್ಲಿಮರಿಗೆ ಸೂಕ್ತ ಸ್ಥಳವಲ್ಲ- ಮೆಹಬೂಬಾ ಮುಫ್ತಿ ಪುತ್ರಿ

Latest

ಭಾರತ ಮುಸ್ಲಿಮರಿಗೆ ಸೂಕ್ತ ಸ್ಥಳವಲ್ಲ- ಮೆಹಬೂಬಾ ಮುಫ್ತಿ ಪುತ್ರಿ

Public TV
Last updated: December 4, 2019 10:57 pm
Public TV
Share
2 Min Read
MUFTI DAUGHTER
SHARE

ನವದೆಹಲಿ: ನೆರೆಯ ರಾಷ್ಟ್ರಗಳ ಮುಸ್ಲಿಮೇತರರಿಗೆ ಮಾತ್ರ ಪೌರತ್ವ ನೀಡುವ ಕೇಂದ್ರ ಸರ್ಕಾರದ ಕ್ರಮದ ವಿರುದ್ಧ ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಪುತ್ರಿ ಸನಾ ಇಲ್ತಿಜಾ ಜವೇದ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಂದು ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಈ ವಿವಾದಿತ ತಿದ್ದುಪಡಿ ಮಸೂದೆಗೆ ಅನುಮೋದನೆ ನೀಡಲಾಗಿದೆ. ಇದಕ್ಕೆ ಮೆಹಬೂಬಾ ಮುಫ್ತಿ ಪುತ್ರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿಯವರ ಟ್ವಿಟ್ಟರ್ ಖಾತೆಯಿಂದ ಟ್ವೀಟ್ ಮಾಡಿದ್ದು, ಭಾರತ-ಮುಸ್ಲಿಮರಿಗಾಗಿ ಇರುವ ದೇಶವಲ್ಲ ಎಂದು ಬರೆದಿದ್ದಾರೆ.

ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಇಂದು ತಿದ್ದುಪಡಿ ಮಸೂದೆಗೆ ಒಪ್ಪಿಗೆ ಸೂಚಿಸುತ್ತಿದ್ದಂತೆ ಈ ಕುರಿತು ಟ್ವೀಟ್ ಮಾಡಲಾಗಿದ್ದು, ಸರ್ಕಾರ ಮುಸ್ಲಿಮರನ್ನು ಹೊರಗಿಡುವ ಪ್ರಯತ್ನ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

India – No country for Muslims https://t.co/j8NK5XQxnu

— Mehbooba Mufti (@MehboobaMufti) December 4, 2019

ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರದ್ದು ಪಡಿಸುವ ಸಂದರ್ಭದಲ್ಲಿ ಆಗಸ್ಟ್ 5ರಂದು ಮೆಹಬೂಬಾ ಮುಫ್ತಿಯವರನ್ನು ಬಂಧನಕ್ಕೊಳಪಡಿಸಿದಾಗಿನಿಂದ ಸನಾ ಇಲ್ತಿಜಾ ಜವೇದ್ ಅವರು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಈ ಹಿಂದೆ ಸಹ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದ ಸನಾ, ಮುಸ್ಲಿಮರು ಹೆಚ್ಚಿರುವ ದೇಶದಲ್ಲಿ ಅವರು ಎರಡನೇ ದರ್ಜೆಯ ಪ್ರಜೆಗಳಾಗುತ್ತಿದ್ದಾರೆ ಎಂದು ಟ್ವೀಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದರು.

ಜಮ್ಮು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನವನ್ನು ರದ್ದು ಪಡಿಸುವ ಸಂದರ್ಭದಲ್ಲಿ ಬಂಧಿಸಲಾಗಿದ್ದ ಮೆಹಬೂಬಾ ಮುಫ್ತಿ, ನ್ಯಾಷನಲ್ ಕಾನ್ಫರೆನ್ಸ್ ಮುಖ್ಯಸ್ಥ ಫಾರೂಖ್ ಅಬ್ದುಲ್ಲಾ ಹಾಗೂ ಮಗ ಒಮರ್ ಅಬ್ದುಲ್ಲಾ ಅವರನ್ನು ಇನ್ನೂ ಸಹ ಬಿಡುಗಡೆ ಮಾಡಿಲ್ಲ. ಅಲ್ಲದೆ ಯಾವಾಗ ಬಿಡುಗಡೆ ಮಾಡಲಾಗುತ್ತದೆ ಎಂಬುದರ ಕುರಿತು ಸಹ ಸ್ಪಷ್ಟತೆ ಇಲ್ಲ.

ಇಂದು ಸಚಿವ ಸಂಪುಟ ಸಭೆಯಲ್ಲಿ ಬಾಂಗ್ಲಾದೇಶ, ಅಫ್ಘಾನಿಸ್ಥಾನ ಹಾಗೂ ಪಾಕಿಸ್ಥಾನದ ಮುಸ್ಲಿಮೇತರ ವಲಸಿಗರಿಗೆ ಭಾರತೀಯ ಪೌರತ್ವ ನೀಡುವ ಪೌರತ್ವ ತಿದ್ದುಪಡಿ ಮಸೂದೆಗೆ ಅನುಮೋದನೆ ನೀಡಲಾಗಿದೆ.

Union Cabinet 1

ಈ ದೇಶಗಳಲ್ಲಿ ಅಲ್ಪಸಂಖ್ಯಾತರಾದ ಹಿಂದೂಗಳು, ಸಿಖ್, ಜೈನರು, ಬೌದ್ಧರು, ಪಾರ್ಸಿ ಹಾಗೂ ಕ್ರಿಶ್ಚಿಯನ್ ಸಮುದಾಯ ಕಿರುಕುಳ ಅನುಭವಿಸುತ್ತಿದೆ. ಹೀಗಾಗಿ ಇವರಿಗೆ ಭಾರತದ ಪೌರತ್ವ ನೀಡುವ ಅವಶ್ಯಕತೆ ಇದೆ ಎನ್ನುವುದು ಕೇಂದ್ರದ ವಾದ. ಆದರೆ ಮುಸ್ಲಿಮರನ್ನು ಹೊರಗಡೆ ಇಟ್ಟಿರುವುದು ಸಂವಿಧಾನ ವಿರೋಧಿ ನಡೆ ಎನ್ನುವುದು ವಿಪಕ್ಷಗಳ ಪ್ರತಿವಾದ.

ಭಾರತದ ಪೌರತ್ವ ಪಡೆಯಬೇಕಾದರೆ 12 ವರ್ಷಕ್ಕಿಂತ ಹೆಚ್ಚು ಕಾಲ ದೇಶದಲ್ಲಿ ನೆಲೆಸಿರಬೇಕು ಎನ್ನುವ ನಿಯಮವನ್ನು 6 ವರ್ಷಕ್ಕೆ ಈ ಮಸೂದೆ ಇಳಿಸಿದೆ. ಸೂಕ್ತ ದಾಖಲೆಯ ಅಗತ್ಯತೆಯೂ ಇಲ್ಲದಿದ್ದರೂ ಕೂಡ ಪೌರತ್ವ ಸಿಗಲಿದೆ.

2016ರಲ್ಲಿ ಈ ಮಸೂದೆ ಮೊದಲ ಬಾರಿಗೆ ಲೋಕಸಭೆಯಲ್ಲಿ ಮಂಡನೆಯಾಗಿತ್ತು. ಈ ವೇಳೆ ಕೋಲಾಹಲ ನಡೆದು ಜಂಟಿ ಸಂಸದೀಯ ಸಮಿತಿ ಪರಾಮರ್ಶೆಗೆ ಹೋಗಿತ್ತು. ಈ ಸಮಿತಿ ಈ ವರ್ಷದ ಜನವರಿಯಲ್ಲಿ ವರದಿ ನೀಡಿದ ಬಳಿಕ ಮಸೂದೆ ಮಂಡನೆಯಾಗಿತ್ತು. ಲೋಕಸಭೆಯಲ್ಲಿ ಪಾಸ್ ಆದರೂ ರಾಜ್ಯಸಭೆಯಲ್ಲಿ ಬಹುಮತ ಇಲ್ಲದ ಕಾರಣ ಮಸೂದೆ ಪಾಸ್ ಆಗಿರಲಿಲ್ಲ. ಈ ಸಂದರ್ಭದಲ್ಲಿ 16ನೇ ಲೋಕಸಭೆಯ ಅವಧಿ ಮುಕ್ತಾಯವಾಗಿತ್ತು. ಹೀಗಾಗಿ ಈಗ ತಿದ್ದುಪಡಿ ಮಾಡಿ ಮಂದಿನ ಮಂಗಳವಾರ ಮಸೂದೆಯನ್ನು ಲೋಕಸಭೆಯಲ್ಲಿ ಮಂಡಿಸಲಾಗುತ್ತಿದೆ.

omar and mufti

ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ 370ನೇ ವಿಧಿಯನ್ನು ರದ್ದುಗೊಳಿಸುವಷ್ಟೇ ಮಹತ್ವದ ಮಸೂದೆ ಇದಾಗಿದೆ. ಹೀಗಾಗಿ ಎಲ್ಲ ಸಂಸದರು ಸದನದಲ್ಲಿ ಹಾಜರಿರಬೇಕು ಎಂದು ಈಗಾಗಲೇ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಬಿಜೆಪಿ ಸಂಸದರಿಗೆ ಸೂಚಿಸಿದ್ದಾರೆ.

TAGGED:cabinetCitizenshipMehbooba MuftiPublic TVSana Iltija Javedunion governmentಕೇಂದ್ರ ಸರ್ಕಾರಪಬ್ಲಿಕ್ ಟಿವಿಪೌರತ್ವಮೆಹಬೂಬಾ ಮುಫ್ತಿಸಚಿವ ಸಂಪುಟ ಸಭೆಸನಾ ಇಲ್ತಿಜಾ ಜವೇದ್
Share This Article
Facebook Whatsapp Whatsapp Telegram

Cinema news

ravichandran bigg boss
ಬಿಗ್‌ ಬಾಸ್‌ ಮನೆಗೆ ಕ್ರೇಜಿಸ್ಟಾರ್‌ ಎಂಟ್ರಿ – ತನ್ನ ಹೃದಯ ಕದ್ದ ಚೆಲುವೆ ಬಗ್ಗೆ ಮಾತಾಡಿದ ರವಿಚಂದ್ರನ್‌
Cinema Latest Top Stories TV Shows
Nidhhi Agerwal 3
Video Viral | ಸೆಲ್ಫಿಗಾಗಿ ಮೈಮೇಲೆ ಮುಗಿಬಿದ್ದ ಫ್ಯಾನ್ಸ್ – ನಟಿ ನಿಧಿ ಅಗರ್ವಾಲ್‌ಗೆ ಭಾರೀ ಕಸಿವಿಸಿ
Cinema Latest South cinema Top Stories
Venkat Bharadwaj
ಅಪರೂಪದ ಸಾಹಸಕ್ಕೆ ಸಾಕ್ಷಿಯಾದ ನಿರ್ದೇಶಕ ವೆಂಕಟ್ ಭಾರದ್ವಾಜ್
Cinema Latest Sandalwood Top Stories
film producer harshavardhan
ಪತ್ನಿಯನ್ನೇ ಕಿಡ್ನ್ಯಾಪ್‌ ಮಾಡಿದ್ದ ಸಿನಿಮಾ ನಿರ್ಮಾಪಕ; ಕಳ್ಳತನ ಕೇಸಲ್ಲಿ ಅರೆಸ್ಟ್
Cinema Latest Main Post Sandalwood Uttara Kannada

You Might Also Like

Nitin Gadkari
Automobile

2026ರ ಅಂತ್ಯಕ್ಕೆ ದೇಶಾದ್ಯಂತ ಉಪಗ್ರಹ ಆಧಾರಿತ ಟೋಲ್‌: ಗಡ್ಕರಿ ಘೋಷಣೆ

Public TV
By Public TV
16 minutes ago
Indian Citizenship
Latest

ಭಾರತೀಯ ಪೌರತ್ವ ತ್ಯಜಿಸುವವರ ಸಂಖ್ಯೆಯಲ್ಲಿ ಹೆಚ್ಚಳ

Public TV
By Public TV
18 minutes ago
Magadi
Crime

ಪ್ರೀತಿ ಹೆಸರಲ್ಲಿ ವಂಚಿಸಿ ಯುವತಿ ಮೇಲೆ ಗ್ಯಾಂಗ್‌ ರೇಪ್‌ – ಮೂವರು ಕಾಮುಕರು ಅರೆಸ್ಟ್‌

Public TV
By Public TV
34 minutes ago
g.parameshwara session
Belgaum

ಅಕ್ರಮದಲ್ಲಿ ಭಾಗಿಯಾಗೋ ಪೊಲೀಸರನ್ನ ಕೆಲಸದಿಂದ ವಜಾ ಮಾಡಲು ಕ್ರಮ: ಪರಮೇಶ್ವರ್

Public TV
By Public TV
1 hour ago
G Parameshwar Legislative Council
Belgaum

`ಪಾಕಿಸ್ತಾನ ಜಿಂದಾಬಾದ್’ ಘೋಷಣೆ – 3 ವರ್ಷಗಳಲ್ಲಿ 12 ಕೇಸ್ ದಾಖಲು: ಪರಮೇಶ್ವರ್

Public TV
By Public TV
1 hour ago
DK Shivakumar 11
Belgaum

ಅವರಪ್ಪನ ಹೆಸರು ಕೆಡಿಸಿದ್ದು ವಿಜಯೇಂದ್ರ – ಎಲ್ಲಾ ಬಿಚ್ಚಿಡಬೇಕಾ? – ಡಿಕೆಶಿ ಫುಲ್‌ ಗರಂ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?