Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜನರಿಗೆ ಹಣ ಕೊಟ್ಟು ಕರೆಸಿಕೊಂಡು ನಡೆಸುತ್ತಿರುವ ಈ ಜಾತ್ರೆಯಿಂದ ಮೇಕೆದಾಟು ಸಾಕಾರ ಅಸಾಧ್ಯ: ಎಚ್‍ಡಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಜನರಿಗೆ ಹಣ ಕೊಟ್ಟು ಕರೆಸಿಕೊಂಡು ನಡೆಸುತ್ತಿರುವ ಈ ಜಾತ್ರೆಯಿಂದ ಮೇಕೆದಾಟು ಸಾಕಾರ ಅಸಾಧ್ಯ: ಎಚ್‍ಡಿಕೆ

Bengaluru City

ಜನರಿಗೆ ಹಣ ಕೊಟ್ಟು ಕರೆಸಿಕೊಂಡು ನಡೆಸುತ್ತಿರುವ ಈ ಜಾತ್ರೆಯಿಂದ ಮೇಕೆದಾಟು ಸಾಕಾರ ಅಸಾಧ್ಯ: ಎಚ್‍ಡಿಕೆ

Public TV
Last updated: January 12, 2022 8:23 pm
Public TV
Share
2 Min Read
HDK 2
SHARE

-ಮೇಕೆದಾಟು ಬಗ್ಗೆ ಬಿಜೆಪಿ-ಕಾಂಗ್ರೆಸ್ ಜಾಹೀರಾತು ಕೊಟ್ಟುಕೊಂಡು ಸಮಜಾಯಿಷಿ
-ಇಂಥ ಹೈಟೆಕ್ ಪಾದಯಾತ್ರೆಯನ್ನು ನೋಡಿರಲಿಲ್ಲ

ಬೆಂಗಳೂರು: ಕಳೆದ 4 ದಿನಗಳಿಂದ ಜಿಲ್ಲೆಗಳಿಂದ ಬಸ್‍ಗಳಲ್ಲಿ ಜನರಿಗೆ ಹಣ ಕೊಟ್ಟು ಕರೆಸಿಕೊಂಡು ನಡೆಸುತ್ತಿರುವ ಈ ಜಾತ್ರೆಯಿಂದ ಮೇಕೆದಾಟು ಸಾಕಾರ ಅಸಾಧ್ಯ. ಇದು ‘ಸೋಂಕಿನ ಸಮಾರಾಧನೆ’ಯಷ್ಟೇ ಹೊರತು ಹೋರಾಟವಲ್ಲ. ಸರ್ಕಾರ ಜಿಲ್ಲೆಗಳಿಂದ ಬರುವ ಜನರನ್ನು ಅಲ್ಲಲ್ಲಿಯೇ ತಡೆಯುವ ಕೆಲಸ ಮಾಡಬೇಕು ಎಂದು ಮಾಜಿ ಸಿಎಂ ಎಚ್‍ಡಿ ಕುಮಾರಸ್ವಾಮಿ ಟ್ವಿಟ್ಟರ್‌ನಲ್ಲಿ ಟ್ವೀಟ್ ಮಾಡುವ ಮೂಲಕ ಆಗ್ರಹಿಸಿದ್ದಾರೆ.

DK Shivakumar Mekedatu Padyatra scaled

ಟ್ವೀಟ್‍ನಲ್ಲಿ ಏನಿದೆ?:
ಮೇಕೆದಾಟು ಪಾದಯಾತ್ರೆಯನ್ನು ‘ಓಮಿಕ್ರಾನ್ ಜಾತ್ರೆ’ಯನ್ನಾಗಿ ಪರಿವರ್ತಿಸಿದ ಕಾಂಗ್ರೆಸ್ ಪಕ್ಷಕ್ಕೆ ರಾಜ್ಯ ಹೈಕೋರ್ಟ್ ಛೀಮಾರಿ ಹಾಕಿದೆ. ಸೋಂಕನ್ನು ನಿರ್ಲಕ್ಷಿಸಿದ ಸರ್ಕಾರಕ್ಕೂ ಚಾಟಿ ಬೀಸಿದೆ. ಕೂಡಲೇ ಈ ಬಗ್ಗೆ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು. ನೀರಿನ ನೆಪದ ಈ ದೊಂಬರಾಟಕ್ಕೆ ಕೊನೆ ಹಾಡಬೇಕು. ಇದನ್ನೂ ಓದಿ: ಪಾದಯಾತ್ರೆಗೆ ಹೈಕೋರ್ಟ್ ಕೆಂಡಾಮಂಡಲ – ಕೈ ಮುಗಿದು ಮುಖದ ಮೇಲೆ ಕೈಯಿಟ್ಟ ಡಿಕೆಶಿ

Mekedatu Padyatra DK Shivakumar Siddaramaiah

ಕೋವಿಡ್ ರಕ್ಕಸ ರೂಪ ಪಡೆದು ವೇಗವಾಗಿ ಹರಡುತ್ತಿದೆ. ಪಾದಯಾತ್ರೆಯಲ್ಲಿ ಭಾಗವಹಿಸಿದ್ದ ಅನೇಕ ನಾಯಕರೇ ಪಾಸಿಟವ್ ಆಗಿ ಆಸ್ಪತ್ರೆ ಸೇರಿಕೊಂಡಿದ್ದಾರೆ. ಸರಿಯಾಗಿ ಪರೀಕ್ಷೆ ನಡೆಸಿದರೆ ದೊಡ್ಡ ಸಂಖ್ಯೆಯ ಜನರು ಸೋಂಕಿತರಾಗಿರುವುದು ಬಯಲಾಗುತ್ತದೆ. ನ್ಯಾಯಾಲಯದಿಂದ ಮತ್ತೆ ಛೀಮಾರಿ ಹಾಕಿಸಿಕೊಳ್ಳುವುದು ಬೇಡ. ಪರಿಸ್ಥಿತಿ ಕೈಮೀರಿದೆ. ಎಚ್ಚರ ತಪ್ಪಿದರೆ ಇರುವ ಆಸ್ಪತ್ರೆಗಳು, ವೈದ್ಯ ವ್ಯವಸ್ಥೆ ಸಾಲುವುದಿಲ್ಲ. ಮತ್ತೊಮ್ಮೆ ಸರಕಾರ ಮುಜುಗರಕ್ಕೆ ಒಳಗಾಗುವುದು ಸರಿಯಲ್ಲ. ಇದನ್ನೂ ಓದಿ: ಹೈಕೋರ್ಟ್ ಆಕ್ಷೇಪ ವ್ಯಕ್ತಪಡಿಸಿದೆ ಈಗಲಾದರೂ ಸುಳ್ಳಿನಜಾತ್ರೆ ನಿಲ್ಲಿಸುತ್ತೀರೋ – ಕಾಂಗ್ರೆಸ್‍ಗೆ ಬಿಜೆಪಿ ಪ್ರಶ್ನೆ

Mekedatu Padayatra

ಮೇಕೆದಾಟು ಬಗ್ಗೆ ಏನೇನು ಮಾಡಲಾಗಿದೆ ಎಂದು ಸರ್ಕಾರ ಜಾಹೀರಾತು ನೀಡಿದೆ. ಬಿಜೆಪಿ-ಕಾಂಗ್ರೆಸ್ ಪಕ್ಷಗಳೂ ಜಾಹೀರಾತು ಕೊಟ್ಟುಕೊಂಡು ಸಮಜಾಯಿಷಿ ನೀಡಿವೆ. ಯಾವುದು ಸತ್ಯ? ಯಾವುದು ಸುಳ್ಳು? ಎನ್ನುವ ಲೆಕ್ಕವನ್ನು ನಾನು ಜನರ ಮುಂದೆ ಇಡುತ್ತೇನೆ. 1924ರಿಂದ ಕಾವೇರಿ ವಿಷಯದಲ್ಲಿ ಏನೆಲ್ಲಾ ನಡೆಯಿತು? ರಾಜ್ಯಕ್ಕೆಷ್ಟು ಅನ್ಯಾಯ ಆಯಿತು ಎಂಬುದನ್ನು ಮುಂದೆ ನಾನು ವಿವರವಾಗಿ ಚರ್ಚೆ ಮಾಡುತ್ತೇನೆ. ಕಾಂಗ್ರೆಸ್ ಪಾದಯಾತ್ರೆಯಿಂದ ನಮ್ಮ ಪಕ್ಷಕ್ಕೇನು ಆತಂಕವಿಲ್ಲ. ಆದರೆ ಜನ ಆರೋಗ್ಯದ ಆತಂಕದಲ್ಲಿದ್ದಾರೆ. ಹಾಗಂತ, ಇವರ ಯಾತ್ರೆ ಬಗ್ಗೆ ಅಥವಾ ನಾಡಿನ ಪರ ದನಿಯೆತ್ತುವ ಬಗ್ಗೆ ನನ್ನ ತಕರಾರಿಲ್ಲ. ಆದರೆ, ಕೋವಿಡ್ ಅಟ್ಟಹಾಸದ ಹೊತ್ತಿನಲ್ಲಿ ಇದು ಖಂಡಿತಾ ಬೇಕಿರಲಿಲ್ಲ. ಇದನ್ನೂ ಓದಿ: ಸಿದ್ದರಾಮಯ್ಯಗೆ ತೀವ್ರ ಬೆನ್ನು ನೋವು- ಬೆಂಗ್ಳೂರಿಗೆ ವಾಪಸ್ ಆದ ಮಾಜಿ ಸಿಎಂ

ಚುನಾವಣೆ ಹತ್ತಿರದಲ್ಲಿದೆ. ಕಾಂಗ್ರೆಸ್ ಸಂಘಟನೆ ಮಾಡಿಕೊಳ್ಳಲಿ. ಕೋವಿಡ್ ಇಳಿಮುಖವಾದ ನಂತರ ಅದನ್ನು ಮಾಡಲಿ. ಅದನ್ನು ಬಿಟ್ಟು ಜನರ ಜೀವದ ಜತೆ ಚೆಲ್ಲಾಟ ಆಡುವುದು ಸರಿಯಲ್ಲ. ಕಾಂಗ್ರೆಸ್ ಒಂದು ಜವಾಬ್ದಾರಿ ಪಕ್ಷವಾಗಿದ್ದರೆ ತಕ್ಷಣ ಪಾದಯಾತ್ರೆ ನಿಲ್ಲಿಸಲಿ. ಗಂಡಸ್ತನ ತೋರಿಸುವುದಕ್ಕೆ ಹೋಗಿ ʼಮೇಕೆದಾಟನ್ನು ಮಸಣʼ ಮಾಡುವುದು ಬೇಡ.9/10

— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) January 12, 2022

ಗಾಂಧೀಜಿ ಅವರ ಪಾದಯಾತ್ರೆ ಬಗ್ಗೆ ಓದಿದ್ದೇನೆ. ವಿನೋಬಾ ಭಾವೆ ಅವರ ಪಾದಯಾತ್ರೆ ಬಗ್ಗೆ ಅರಿತಿದ್ದೇನೆ. ದೇವೇಗೌಡರ ಪಾದಪಾತ್ರೆಯನ್ನು ಕಣ್ಣಾರೆ ಕಂಡಿದ್ದೇನೆ. ಆದರೆ, ಇಂಥ ‘ಹೈಟೆಕ್ ಪಾದಯಾತ್ರೆ’ಯನ್ನು ನೋಡಿರಲಿಲ್ಲ. ಇಂಥ ದೊಂಬರಾಟದಿಂದ ಕಾನೂನಿನ ವ್ಯಾಪ್ತಿಯಲ್ಲಿರುವ ಮೇಕೆದಾಟು ಯೋಜನೆ ಜಾರಿ ಸಾಧ್ಯವಿಲ್ಲ. ಚುನಾವಣೆ ಹತ್ತಿರದಲ್ಲಿದೆ. ಕಾಂಗ್ರೆಸ್ ಸಂಘಟನೆ ಮಾಡಿಕೊಳ್ಳಲಿ. ಕೋವಿಡ್ ಇಳಿಮುಖವಾದ ನಂತರ ಅದನ್ನು ಮಾಡಲಿ. ಅದನ್ನು ಬಿಟ್ಟು ಜನರ ಜೀವದ ಜೊತೆ ಚೆಲ್ಲಾಟ ಆಡುವುದು ಸರಿಯಲ್ಲ. ಕಾಂಗ್ರೆಸ್ ಒಂದು ಜವಾಬ್ದಾರಿ ಪಕ್ಷವಾಗಿದ್ದರೆ ತಕ್ಷಣ ಪಾದಯಾತ್ರೆ ನಿಲ್ಲಿಸಲಿ. ಗಂಡಸ್ತನ ತೋರಿಸುವುದಕ್ಕೆ ಹೋಗಿ ‘ಮೇಕೆದಾಟನ್ನು ಮಸಣ’ ಮಾಡುವುದು ಬೇಡ.

mekedatu padyatra dk shivakumar 1

ಕಳೆದ 4 ದಿನಗಳಿಂದ ಸರ್ಕಾರ ತೋರಿದ ಉದಾರತೆ ಸಾಕು. ಇನ್ನೂ ಔದಾರ್ಯ ತೋರಿದರೆ ರಾಜ್ಯದ ಅವನತಿಗೆ ದಾರಿಯಾದೀತು. ಕೋವಿಡ್ ನಿಯಮ ಪಾಲಿಸುವಂತೆ ಜನರಿಗೆ ಹಿಂಸೆ ಕೊಟ್ಟು, ರಾಜಕಾರಣಿಗಳಿಗೆ ವಿನಾಯಿತಿ ಕೊಡುವುದು ಉತ್ತಮ ಆಡಳಿತದ ಲಕ್ಷಣವಲ್ಲ. ಸರ್ಕಾರ ಕೆಚ್ಚೆದೆಯ ಕ್ರಮ ಕೈಗೊಳ್ಳಬೇಕು.

TAGGED:bjpcongressDK ShivakumarKumaraswamyMekedatu Padayatrasiddaramaiahಕಾಂಗ್ರೆಸ್ಕುಮಾರಸ್ವಾಮಿಬಿಜೆಪಿಮೇಕೆದಾಟು
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ರಶ್ಮಿಕಾ, ವಿಜಯ್ ಮದುವೆಗೆ ಫೋನ್ ಬ್ಯಾನ್ – ವಿಡಿಯೋ ಚಿತ್ರೀಕರಣ ತಂಡದಿಂದಲೂ NDAಗೆ ಸಹಿ
Bollywood Cinema Latest Main Post
Rajanivasa
ʻರಾಜನಿವಾಸʼದಲ್ಲಿ ʻಕಾಂತಾರʼದ ಝಲಕ್‌ – ಕುತೂಹಲ ಹೆಚ್ಚಿಸಿದ ಟ್ರೇಲರ್‌!
Cinema Latest Sandalwood
salman khan salim khan
ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್‌ ಆಸ್ಪತ್ರೆಗೆ ದಾಖಲು
Bollywood Cinema Latest Main Post
Mobile video recording
ಬೆಂಗಳೂರು | ನಟಿಯ ಖಾಸಗಿ ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್‌ – ಸ್ನೇಹಿತೆಗೆ ಕಳಿಸಿ ಹಣಕ್ಕೆ ಡಿಮ್ಯಾಂಡ್‌
Cinema Crime Karnataka Latest Sandalwood Top Stories

You Might Also Like

BMW buried
Latest

ಮಗನ ಸಾವಿನ ನೋವಿನಲ್ಲಿ 6 ಕೋಟಿ ಮೌಲ್ಯದ BMW ಕಾರನ್ನ ಸಮಾಧಿ ಮಾಡಿದ ತಂದೆ

Public TV
By Public TV
15 minutes ago
GBA Election
Bengaluru City

ಜಿಬಿಎ ಚುನಾವಣೆಗೆ ಭರ್ಜರಿ ಸಿದ್ಧತೆ – 369 ಕ್ಷೇತಕ್ಕೆ 900 ಆಕಾಂಕ್ಷಿಗಳಿಂದ ಅರ್ಜಿ ಸಲ್ಲಿಕೆ

Public TV
By Public TV
31 minutes ago
rahul gandhi
Bengaluru City

ಕರ್ನಾಟಕ ಬಿಜೆಪಿ ವಿರುದ್ಧ 40% ಕಮೀಷನ್‌ ಜಾಹೀರಾತು – ರಾಹುಲ್‌ಗೆ ರಿಲೀಫ್‌, ವಿಚಾರಣೆಯೇ ರದ್ದು

Public TV
By Public TV
9 hours ago
Ramanagar Arrest
Districts

16.8 ಲಕ್ಷ ಮೌಲ್ಯದ 120 ಗ್ರಾಂ ಚಿನ್ನದ ಗಟ್ಟಿ ಕಳ್ಳತನ – ಇಬ್ಬರು ಅರೆಸ್ಟ್

Public TV
By Public TV
9 hours ago
Fire breaks out at bike garage more than 8 bikes burnt Ilkal Bagalkote
Bagalkot

ಬೈಕ್ ಗ್ಯಾರೇಜ್‌ಗೆ ಬೆಂಕಿ- 8ಕ್ಕೂ ಹೆಚ್ಚು ಬೈಕ್‌ಗಳು ಸುಟ್ಟು ಭಸ್ಮ

Public TV
By Public TV
9 hours ago
IMRAN KHAN
Cricket

ಕಪಿಲ್, ಸುನಿಲ್ ಗವಾಸ್ಕರ್ ಸೇರಿ 14 ಕ್ರಿಕೆಟ್ ದಿಗ್ಗಜರಿಂದ ಪಾಕ್‌ಗೆ ಪತ್ರ – ಇಮ್ರಾನ್‌ಗೆ ವೈದ್ಯಕೀಯ ಸೇವೆ ನೀಡುವಂತೆ ಮನವಿ

Public TV
By Public TV
10 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?