Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿನಿಮಾ ಶೂಟಿಂಗ್‍ನಿಂದ ಮೇಲುಕೋಟೆಯಲ್ಲಿ ದೇವರ ಪೂಜೆಗೆ ತೊಂದರೆ, ಸ್ಥಳ ಮಹಿಮೆಗೆ ಅಪಚಾರ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಸಿನಿಮಾ ಶೂಟಿಂಗ್‍ನಿಂದ ಮೇಲುಕೋಟೆಯಲ್ಲಿ ದೇವರ ಪೂಜೆಗೆ ತೊಂದರೆ, ಸ್ಥಳ ಮಹಿಮೆಗೆ ಅಪಚಾರ!

Districts

ಸಿನಿಮಾ ಶೂಟಿಂಗ್‍ನಿಂದ ಮೇಲುಕೋಟೆಯಲ್ಲಿ ದೇವರ ಪೂಜೆಗೆ ತೊಂದರೆ, ಸ್ಥಳ ಮಹಿಮೆಗೆ ಅಪಚಾರ!

Public TV
Last updated: November 14, 2018 8:38 am
Public TV
Share
3 Min Read
melukote temple shooting 1
SHARE

– ಭರಾಟೆ ಚಿತ್ರಕ್ಕಾಗಿ ತಾತ್ಕಾಲಿಕವಾಗಿ ಚೌಡೇಶ್ವರಿ ದೇವಿ ಪ್ರತಿಷ್ಠಾಪನೆ
– ಒಂದು ಶಕ್ತಿಕೇಂದ್ರದಲ್ಲಿ ಮತ್ತೊಂದು ದೇವರನ್ನು ಸ್ಥಾಪಿಸುವುದು ಎಷ್ಟು ಸರಿ?

ಮಂಡ್ಯ: ಪುರಾಣ ಪ್ರಸಿದ್ಧ ಮೇಲುಕೋಟೆಗೂ ಸಿನಿಮಾಗಳಿಗೂ ಅವಿನಾಭಾವ ಸಂಬಂಧ. ಇಲ್ಲಿರುವ ದೇವಾಲಯಗಳು, ಆಕರ್ಷಕವಾದ ಲೊಕೇಷನ್ ಗಳು ಸಿನಿಮಾ ಚಿತ್ರೀಕರಣಕ್ಕೆ ಹೇಳಿ ಮಾಡಿಸಿದಂತಿದೆ. ಹೀಗಾಗಿ ಕನ್ನಡ ಸೇರಿದಂತೆ ಹಲವು ಭಾಷೆಯ ಚಿತ್ರಗಳು ಮೇಲುಕೋಟೆಯಲ್ಲಿ ಚಿತ್ರೀಕರಣಗೊಂಡು ಭರ್ಜರಿ ಯಶಸ್ಸು ಸಾಧಿಸಿವೆ. ಆದರೆ ಇದೀಗ ಸಿನಿಮಾ ಚಿತ್ರೀಕರಣದಿಂದಾಗಿ ಮೇಲುಕೋಟೆಯಲ್ಲಿ ನಡೆಯುವ ಪೂಜೆಗಳಿಗೆ ತೊಂದರೆಯಾಗುತ್ತಿದ್ದು, ಸ್ಥಳ ಮಹಿಮೆಗೆ ಅಪಚಾರವಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ.

ಪಾಂಡವಪುರ ತಾಲೂಕಿನಲ್ಲಿರುವ ಮೇಲುಕೋಟೆ ಧಾರ್ಮಿಕವಾಗಿ, ಐತಿಹಾಸಿಕವಾಗಿ ಬಹಳ ಪ್ರಸಿದ್ಧಿ ಪಡೆದಿದೆ. ಈ ಕ್ಷೇತ್ರ ಸಿನಿಮಾ ನಿರ್ಮಾಣ ಮಾಡುವವರಿಗೂ ಅಚ್ಚುಮೆಚ್ಚಾಗಿದ್ದು ಇಲ್ಲಿ ಸಾಕಷ್ಟು ಚಿತ್ರಗಳು ಶೂಟಿಂಗ್ ನಡೆಯುತ್ತಿರುತ್ತವೆ. ಆಗೆಲ್ಲಾ ಇರದ ಪಾವಿತ್ರ್ಯತೆಯ ಪ್ರಶ್ನೆ ಈಗ ಕಾಡಲಾರಂಭಿಸಿದೆ.

melkote cheluvaraya swamy temple shooting 2

ಕಳೆದ ಕೆಲವು ದಿನಗಳಿಂದ ನಟ ಶ್ರೀ ಮುರುಳಿ ನಟಿಸುತ್ತಿರುವ `ಭರಾಟೆ’ ಚಿತ್ರ ಶೂಟಿಂಗ್ ಮೇಲುಕೋಟೆಯ ಕಲ್ಯಾಣಿ ಸೇರಿದಂತೆ ಸುತ್ತಮುತ್ತಲ ಪ್ರದೇಶಗಳಲ್ಲಿ ನಡೆಯುತ್ತಿದೆ. ಇದಕ್ಕಾಗಿ ಚಿತ್ರತಂಡ ಸರ್ಕಾರದಿಂದ ಅನುಮತಿಯನ್ನು ಪಡೆದುಕೊಂಡಿದ್ದು ನವೆಂಬರ್ 11 ರಿಂದ 14ರವರೆಗೆ ಶೂಟಿಂಗ್ ಮಾಡಲು ಸರ್ಕಾರಕ್ಕೆ 96 ಸಾವಿರ ರೂ. ಬಿಲ್ ಪಾವತಿಸಲಾಗಿದೆ.

ಅನುಮತಿ ಪಡೆದುಕೊಂಡಿರುವ ಚಿತ್ರತಂಡಕ್ಕೆ ಮೂಲ ಸ್ವರೂಪಕ್ಕೆ ಧಕ್ಕೆಯಾಗದ ರೀತಿಯಲ್ಲಿ ಚಿತ್ರೀಕರಣ ಮಾಡಿ ಎಂದೂ ಹೇಳಲಾಗಿದ್ದರೂ ಚಿತ್ರತಂಡ ಕಲ್ಯಾಣಿಯ ತುಂಬಾ ಕೇಸರಿ ಬಣ್ಣದ ಬಟ್ಟೆಗಳನ್ನ ಕಟ್ಟಿ ಕೇಸರಿಕರಣ ಮಾಡಿದೆ. ಜೊತೆಗೆ ಕಲ್ಯಾಣಿಯಲ್ಲೇ ವಿಶೇಷವಾದ ಸೆಟ್ ಹಾಕಿದ್ದು ಚೌಡೇಶ್ವರಿ ದೇವಿ ವಿಗ್ರಹವನ್ನು ತಾತ್ಕಾಲಿಕವಾಗಿ ಪ್ರತಿಷ್ಠಾಪಿಸಲಾಗಿದೆ. ಇದು ಈಗ ವಿವಾದಕ್ಕೆ ಕಾರಣವಾಗಿದ್ದು, ಒಂದು ಶಕ್ತಿ ಕೇಂದ್ರವಾಗಿರುವ ಮೇಲುಕೋಟೆಯಲ್ಲಿ, ತಾತ್ಕಾಲಿಕವಾಗಿಯಾದರೂ ಬೇರೊಂದು ಶಕ್ತಿ ದೇವರನ್ನ ಪ್ರತಿಷ್ಠಾಪಿಸಿದರೆ ಮೂಲ ದೇವರ ಶಕ್ತಿ ಕುಂದುಂಟಾಗುತ್ತದೆ. ಅದು ತಕ್ಷಣ ಪರಿಣಾಮ ಬೀರದೇ ಇದ್ದರೂ ಭವಿಷ್ಯದಲ್ಲಿ ಪರಿಣಾಮ ಬೀರುತ್ತದೆ ಎಂದು ದೇವಾಲಯದ ಅರ್ಚಕ ಸಂಪತ್ ಕುಮಾರ್ ಹೇಳಿದ್ದಾರೆ.

melkote cheluvaraya swamy temple shooting 1

ಮೇಲುಕೋಟೆಯ ಶ್ರೀ ಚಲುವನಾರಾಯಣಸ್ವಾಮಿ ದೇವಾಲಯದಲ್ಲಿ ವರ್ಷದ ಪ್ರತೀ ದಿನವೂ ಒಂದಲ್ಲಾ ಒಂದು ವಿಶೇಷವಾದ ಪೂಜೆಗಳು ನಡೆಯುತ್ತಿರುತ್ತವೆ. ಹೀಗೆ ನಡೆಯುವ ಪೂಜೆಗಳಿಗೆ ಪವಿತ್ರ ಕಲ್ಯಾಣಿಯಿಂದಲೇ ನೀರನ್ನು ತೆಗೆದುಕೊಂಡು ಹೋಗಿ ಅಭಿಷೇಕ ಮಾಡಲಾಗುತ್ತದೆ. ದೇವಾಲಯ ಮಾತ್ರವಲ್ಲದೆ ಕಲ್ಯಾಣಿಯಲ್ಲೂ ಹಲವು ದೇವರುಗಳಿದ್ದು ಎಲ್ಲಾ ದೇವರಿಗೂ ಪೂಜೆ ಅಭಿಷೇಕ ಮಾಡಬೇಕಾಗುತ್ತದೆ. ಹಾಗೆಯೇ ಕಳೆದ ಭಾನುವಾರ ಮೇಲುಕೋಟೆ ದೇವಾಲಯಕ್ಕೆ ಸಂಬಂಧ ಪಟ್ಟಂತಹ, ಮಹಾಮುನಿ ಜೀಯರ್ ಸ್ವಾಮೀಜಿ ಅವರ ಜಯಂತಿ ಅಂಗವಾಗಿ ಅಭಿಷೇಕ ನಡೆಯಬೇಕಾಗಿತ್ತು. ಕಲ್ಯಾಣಿಯಿಂದ ನೀರನ್ನು ತಂದು ಅಭಿಷೇಕ ನೆರವೇರಿಸಬೇಕಿತ್ತು. ಆದರೆ ಕಲ್ಯಾಣಿಯ ಬಳಿ ಚಿತ್ರ ತಂಡ ಸೆಟ್ ಹಾಕಿದ್ದರಿಂದ, ಕಳೆದ 600 ವರ್ಷಗಳಿಂದಲೂ ನಡೆದುಕೊಂಡು ಬಂದಿದ್ದ ಅಭಿಷೇಕಕ್ಕೆ ತೊಂದರೆಯಾಗಿದೆ ಎಂಬ ಆರೋಪ ಕೇಳಿ ಬಂದಿದೆ.

mnd 13 melukote vs cinema 04

ಮೇಲುಕೋಟೆಯಲ್ಲಿ ವರ್ಷದ ಹಲವು ದಿನ ಬೇರೆ ಬೇರೆ ಸಿನಿಮಾಗಳ ಶೂಟಿಂಗ್ ನಡೆಯುತ್ತಿರುತ್ತದೆ. ಈ ವೇಳೆ ದೇವಾಲಯದ ಮೂಲ ಸ್ವರೂಪಕ್ಕೆ ಹಾನಿಯುಂಟಾಗುತ್ತದೆ ಎಂದು ಭಕ್ತರು ಬೇಸರ ವ್ಯಕ್ತಪಡಿಸಿದ್ದಾರೆ. ಹಣ ಸಿಗುತ್ತದೆ ಎನ್ನುವ ಕಾರಣಕ್ಕೆ ಚಿತ್ರದ ಶೂಟಿಂಗ್ ಮಾಡುವುದಕ್ಕೆ ಅನುಮತಿ ನೀಡುವ ಅಧಿಕಾರಿಗಳು, ದೇವಾಲಯದ ಉತ್ಸವಗಳಿಗೆ, ಪೂಜಾ ಕೈಂಕರ್ಯಗಳಿಗೆ ಮತ್ತು ಸ್ಥಳ ಮಹಿಮೆಗೆ ತೊಂದರೆಯಾಗದಂತೆ ಚಿತ್ರೀಕರಣ ನಡೆಯುವಂತೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಬೇಕು ಎಂದು ಧಾರ್ಮಿಕ ಚಿಂತಕ ಆನಂದ್ ಆಳ್ವರ್ ಅಭಿಪ್ರಾಯಪಟ್ಟಿದ್ದಾರೆ.

ಯಾವಾಗಲೂ ಒಂದಲ್ಲ ಒಂದು ವಿಚಾರಕ್ಕೆ ಸಂಬಂಧಪಟ್ಟಂತೆ ವಿವಾದಕ್ಕೆ ಸಿಲುಕಿ ಸುದ್ದಿಯಾಗುತ್ತಿರುವ ಮೇಲುಕೋಟೆಯ ಶ್ರೀ ಚಲುವ ನಾರಾಯಣಸ್ವಾಮಿ ದೇವಾಲಯ ಇದೀಗ ಸಿನಿಮಾ ಚಿತ್ರೀಕರಣದಿಂದಾಗಿ ಮತ್ತೊಮ್ಮೆ ಸುದ್ದಿಯಲ್ಲಿದೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಆದಷ್ಟು ಬೇಗ ಗಮನಹರಿಸಿ ಇನ್ನು ಮುಂದೆ ಚಿತ್ರೀಕರಣದಿಂದ ದೇವಾಲಯದ ಆಚರಣೆಗಳಿಗೆ ಮತ್ತು ಭಕ್ತರಿಗೆ ಆಗುವ ತೊಂದರೆಯನ್ನು ತಪ್ಪಿಸಬೇಕಿದೆ.

mnd 13 melukote vs cinema 01

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

TAGGED:BarateCheluvaraya Swamy Templekannadamelkoteshootingಕನ್ನಡಚಲುವ ನಾರಾಯಣಸ್ವಾಮಿಮೇಲುಕೋಟೆಶ್ರೀಮುರುಳಿಸಿನಿಮಾ ಶೂಟಿಂಗ್
Share This Article
Facebook Whatsapp Whatsapp Telegram

Cinema news

Tamanna Bhatia
ಮೈಸೂರು ಸ್ಯಾಂಡಲ್‌ ಸೋಪ್‌ಗೆ ಹೊಸ ರೂಪ – ಇಂದಿನಿಂದ 2 ವರ್ಷ ತಮನ್ನಾ ಪ್ರಚಾರ ರಾಯಭಾರಿ: ಎಂಬಿಪಿ
Bengaluru City Cinema Districts Karnataka Latest Main Post
Alpha Trailor Srimurali
ಅಲ್ಫಾ ಟ್ರೈಲರ್ ಮೆಚ್ಚಿ ಪ್ರಶಂಸಿಸಿದ ನಟ ಶ್ರೀಮುರಳಿ
Cinema Latest Top Stories
CHANDRACHUD
ಅಸಂವಿಧಾನಿಕ ಪದಬಳಕೆ ಆರೋಪ – ಚಕ್ರವರ್ತಿ ಚಂದ್ರಚೂಡ್ ವಿರುದ್ಧ ಎಫ್ಐಆರ್
Bengaluru City Cinema Crime Karnataka Latest Sandalwood Top Stories
santosh kumar sukhibhava movie
‘ಸುಖೀಭವ’ ಚಿತ್ರ ನಿರ್ಮಾಣಕ್ಕೆ ಉದ್ಯಮಿ ಸಂತೋಷ್ ಕುಮಾರ್ ಸಾಥ್
Cinema Latest Sandalwood Top Stories

You Might Also Like

India vs Pakistan 1
Cricket

T20 World Cup | ಫೆ.15 ರಂದು ಇಂಡೋ – ಪಾಕ್‌ ಕದನ ಫಿಕ್ಸ್‌; ಮಂಡಿಯೂರಿದ ಪಾಕಿಸ್ತಾನ

Public TV
By Public TV
3 hours ago
Cylinder blast two seriously injured in K.R Puram
Bengaluru City

ಸಿಲಿಂಡರ್ ಬ್ಲಾಸ್ಟ್ – ಧಗಧಗಿಸಿದ ಕಟ್ಟಡ, ಇಬ್ಬರಿಗೆ ಗಂಭೀರ ಗಾಯ

Public TV
By Public TV
4 hours ago
Jay Shah
Cricket

T20 World Cup | ಪಾಕ್‌ ಬೇಡಿಕೆ ಸಾರಾ ಸಗಟಾಗಿ ತಿರಸ್ಕರಿಸಿದ ಐಸಿಸಿ – ನಿರ್ಧಾರ ತಿಳಿಸಲು ಡೆಡ್‌ಲೈನ್‌ ಫಿಕ್ಸ್‌

Public TV
By Public TV
4 hours ago
C.T. Ravi
Chikkamagaluru

ಅಲ್ಪಸಂಖ್ಯಾತ ನಿಗಮ ಮಂಡಳಿ ಸಾಲದ ಬಡ್ಡಿ ಮನ್ನಾ – ಇದು ಸಂವಿಧಾನ ವಿರೋಧಿ ನಡೆ: ಸಿ.ಟಿ.ರವಿ ಕಿಡಿ

Public TV
By Public TV
4 hours ago
DK Shivakumar 1 1
Bengaluru City

ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ತಡೆಹಿಡಿದ ನಿರ್ಧಾರ ರಾಜ್ಯ ಸರ್ಕಾರದ್ದು: ಡಿ.ಕೆ. ಶಿವಕುಮಾರ್‌

Public TV
By Public TV
5 hours ago
T20WorldCup Scotland
Cricket

T20 World Cup – ಇಟಲಿ ವಿರುದ್ಧ 73 ರನ್‌ಗಳ ಭರ್ಜರಿ ಜಯಗಳಿಸಿದ ಸ್ಕಾಟ್ಲೆಂಡ್

Public TV
By Public TV
6 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?