ಮಾನಸಿಕ ಖಿನ್ನತೆ – 13ರ ಬಾಲಕಿ ಆತ್ಮಹತ್ಯೆಗೆ ಶರಣು

Public TV
1 Min Read
Madikeri Student

ಮಡಿಕೇರಿ: ಖಿನ್ನತೆಯಿಂದ (Mental Depression) ಬಳಲುತ್ತಿದ್ದ 7ನೇ ತರಗತಿಯ ವಿದ್ಯಾರ್ಥಿನಿ ತಮ್ಮ ಮನೆಯಲ್ಲೇ ನೇಣುಬಿಗಿದುಕೊಂಡು ಆತ್ಮಹತ್ಯೆಗೆ (Suicide) ಶರಣಾಗಿರುವ ಘಟನೆ ಕೊಡಗು (Kodagu) ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಶಿವರಹಳ್ಳಿ ಗ್ರಾಮದಲ್ಲಿ ನಡೆದಿದೆ.

ಶಿವರಹಳ್ಳಿ ಗ್ರಾಮದ ಜಿತೇಂದ್ರ-ಅಕ್ಷತಾ ದಂಪತಿಯ ಪುತ್ರಿ ವೈಷ್ಣವಿ (13) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ಇದನ್ನೂ ಓದಿ: ಸ್ವಲ್ಪ ನಕ್ಕುಬಿಡಿ – ಮಾ.19 ರಾಷ್ಟ್ರೀಯ ನಗುವಿನ ದಿನ; ಆರೋಗ್ಯಕ್ಕೆ ಎಷ್ಟು ಒಳ್ಳೆಯದು ಗೊತ್ತಾ..?

CRIME 2

ಸೊಮವಾರಪೇಟೆಯ ಖಾಸಗಿ ಶಾಲೆಯಲ್ಲಿ (Private School) 7ನೇ ತರಗತಿ ಓದುತ್ತಿದ್ದ ವೈಷ್ಣವಿ ಕಳೆದ ಒಂದು ವಾರದಿಂದಲೂ ಖಿನ್ನತೆಯಿಂದ ಬಳಲುತ್ತಿದ್ದಳು. ಭಾನುವಾರ ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ. ಇದನ್ನೂ ಓದಿ: ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಹೇಳಿಕೆ – ವಿವರ ಪಡೆಯಲು ರಾಗಾ ಮನೆಗೆ ಆಗಮಿಸಿದ ಪೊಲೀಸರು

ಶನಿವಾರಸಂತೆ ಪೊಲೀಸ್ ಠಾಣೆಯಲ್ಲಿ (Shanivarasanthe Police Station) ಪ್ರಕರಣ ದಾಖಲಾಗಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಶನಿವಾರಸಂತೆ ಸಮುದಾಯ ಆರೋಗ್ಯ ಕೇಂದ್ರಕ್ಕೆ ರವಾನಿಸಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *