ಬೆಳಗಾವಿ ಬಂದ್‍ಗೆ MES ಕರೆ – ಬಂದ್‍ಗೆ ಅವಕಾಶ ಕೊಡಲ್ಲ ಎಂದ ಕರ್ನಾಟಕ ಪೊಲೀಸ್

Public TV
1 Min Read
Belagavi MES 1

ಬೆಳಗಾವಿ: ಎಂಇಎಸ್ ಮುಖಂಡನ ದೀಪಕ್ ದಳವಿ ಮುಖಕ್ಕೆ ಮಸಿ ಬಳಿದ ಹಿನ್ನೆಲೆಯಲ್ಲಿ ಮಂಗಳವಾರ  ಬೆಳಗಾವಿ ಬಂದ್‍ಗೆ ಎಂಇಎಸ್ ಕರೆ ನೀಡಿದೆ.

Belagavi MES 3

ಎಂಇಎಸ್ ಮಾಜಿ ಶಾಸಕ ಮನೋಹರ್ ಕಿಣೇಕರ್ ಬಂದ್‍ಗೆ ಕರೆ ನೀಡಿದ್ದು, ಘಟನೆಯನ್ನು ಮಹಾರಾಷ್ಟ್ರ ನಾಯಕರ ಗಮನಕ್ಕೆ ತರಲು ನಿರ್ಧರಿಸಿದ್ದೇವೆ. ಈ ವಿಚಾರವನ್ನು ಶಿವಸೇನೆ, ಎನ್.ಸಿ.ಪಿ ಹಾಗೂ ಕಾಂಗ್ರೆಸ್ ನಾಯಕರ ಗಮನಕ್ಕೆ ತರಲು ನಿರ್ಧರಿಸಲಾಗಿದೆ ಎಂದರು. ಮಹಾಮೇಳಾವ್ ಮುಗಿದ ಬಳಿಕ ಟಿಳಕವಾಡಿ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಲು ಎಂಇಎಸ್ ಮುಖಂಡರು ನಿರ್ಧರಿಸಿದ್ದಾರೆ.

BLG MES MASI 1

ಅಲ್ಲದೆ ನಾಳೆಯ ಬಂದ್ ಯಶಸ್ವಿ ಮಾಡಲು ಕಾರ್ಯಕರ್ತರಿಗೆ ಕರೆ ನೀಡಿದ ಅವರು, ಪ್ರಜಾಪ್ರಭುತ್ವ ವ್ಯವಸ್ಥೆ ಆಧಾರದ ಮೇಲೆ ಮಹಾಮೇಳಾವ್ ಆಚರಣೆ ಮಾಡುತ್ತಿದ್ದೇವೆ. ಮುಖಕ್ಕೆ ಮಸಿ ಬಳಿದ ಪ್ರಕರಣಕ್ಕೆ ತಿರುಗೇಟು ನೀಡುತ್ತೇವೆ ಎಂದು ಎಚ್ಚರಿಸಿದ್ದಾರೆ. ಇದನ್ನೂ ಓದಿ: ಕನ್ನಡ ಕಾರ್ಯಕರ್ತರಿಂದ MES ಮುಖಂಡನ ಮುಖಕ್ಕೆ ಮಸಿ

ಬಂದ್‍ಗೆ ಅವಕಾಶ ನೀಡಲ್ಲ: ಘಟನೆ ಬಗ್ಗೆ ಪ್ರತಿಕ್ರಿಯಿಸಿದ ಬೆಳಗಾವಿ ನಗರ ಪೊಲೀಸ್ ಆಯುಕ್ತ ಕೆ.ತ್ಯಾಗರಾಜನ್, ಎಂಇಎಸ್‍ನವರ ಮಹಾಮೇಳಾವ್ ಆಯೋಜನೆಗೆ ಅನುಮತಿ ನೀಡಿರಲಿಲ್ಲ ಎಂದರು.

Belagavi MES 2

ಚಳಿಗಾಲದ ಅಧಿವೇಶನ ಇರುವ ಹಿನ್ನೆಲೆಯಲ್ಲಿ ನಾಳೆ ಬೆಳಗಾವಿ ಬಂದ್‍ಗೆ ನಾವು ಅವಕಾಶ ನೀಡಲ್ಲ. ಬಂದ್‍ಗೆ ಕರೆ ನೀಡಿದವರ ಜೊತೆ ಮಾತನಾಡಿ ಮನವೊಲಿಸುತ್ತೇವೆ. ನಮ್ಮಲ್ಲಿ ಸಿಬ್ಬಂದಿ ಕೊರತೆ ಇಲ್ಲ ಎಂದು ಸ್ಪಷ್ಟಪಡಿಸಿದರು.  ಇದನ್ನೂ ಓದಿ: ತವರು ಜಿಲ್ಲೆಯ ಅಧಿವೇಶನಕ್ಕೂ ಬರಲಿಲ್ಲ ರಮೇಶ್ ಜಾರಕಿಹೊಳಿ!

ಮಹಾನಗರ ಪಾಲಿಕೆ ಸಿಬ್ಬಂದಿಗೆ ಎಂಇಎಸ್ ಮುಖಂಡರ ಆವಾಜ್ ಹಾಕಿರುವ ಬಗ್ಗೆ ಮಹಾನಗರ ಪಾಲಿಕೆ ಸಿಬ್ಬಂದಿ ದೂರು ನೀಡಿದ್ರೆ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳುತ್ತೇವೆ ಎಂದರು.

Share This Article
Leave a Comment

Leave a Reply

Your email address will not be published. Required fields are marked *