ಖಾಸಗಿ ಕಾಲೇಜಿನಲ್ಲಿ ಸಿಎಎ ವಿರೋಧಿಸಿ ಗೋಡೆ ಬರಹ

Public TV
1 Min Read
caa srusthi college students 1

ಬೆಂಗಳೂರು: ಯಲಹಂಕದ ಖಾಸಗಿ ಕಾಲೇಜಿನಲ್ಲಿ ಸಿಎಎ ವಿರೋಧಿಸಿ ಗೋಡೆ ಬರಹಗಳನ್ನು ಬರೆದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

ಯಲಹಂಕದ 5ನೇ ಹಂತದಲ್ಲಿರುವ ಸೃಷ್ಟಿ ಇನ್ಸ್ ಟಿಟ್ಯೂಟ್ ಆಫ್ ಆರ್ಟ್, ಡಿಸೈನ್ ಆ್ಯಂಡ್ ಟೆಕ್ನಾಲಜಿ ಕಾಲೇಜಿನ ಎದುರಿನ ಪಾರ್ಕ್ ಹಾಗೂ ಮೈದಾನದ ಗೋಡೆಗಳ ಮೇಲೆ ಸಿಎಎ ಹಾಗೂ ಪ್ರಧಾನಿ ಮೋದಿ ಕುರಿತ ವ್ಯಂಗ್ಯ ಚಿತ್ರಗಳು ಬಿಡಿಸಲಾಗಿತ್ತು. ಇದು ವಿವಾದಕ್ಕೆ ಕಾರಣವಾಗಿದ್ದು, ಬುಧವಾರ ಸ್ಥಳಕ್ಕೆ ಆಗಮಿಸಿದ ಬಿಬಿಎಂಪಿ ಅಧಿಕಾರಿಗಳು, ಆ ಚಿತ್ರ ಹಾಗೂ ಬರಹಗಳನ್ನು ತೆರೆವುಗೊಳಿಸಿದ್ದಾರೆ.

caa srusthi college students e1579151095954

ಈ ಘಟನೆ ಹಿನ್ನೆಲೆ ಬುಧವಾರ ಸ್ಥಳಕ್ಕೆ ಆಗಮಿಸಿದ ಯಲಹಂಕ ಶಾಸಕ ಎಸ್.ಆರ್. ವಿಶ್ವನಾಥ್ ಮತ್ತು ಪಕ್ಷದ ಕಾರ್ಯಕರ್ತರು, ಬಿಬಿಎಂಪಿ ಅಧಿಕಾರಿಗಳೊಂದಿಗೆ ಕಾಲೇಜಿಗೆ ಭೇಟಿ ನೀಡಿದರು. ವಿಶ್ವನಾಥ್ ಭೇಟಿಗೆ ಕೆಲವು ವಿದ್ಯಾರ್ಥಿಗಳು ಹಾಗೂ ಸಿಎಎ ವಿರೋಧಿ ಪ್ರತಿಭಟನಾಕಾರರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಜೊತೆಗೆ ವಿದ್ಯಾರ್ಥಿಗಳ ಡ್ರೆಸ್ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಈ ಬಗ್ಗೆ ವಿದ್ಯಾರ್ಥಿಗಳು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದ್ದಾರೆ.

ಈ ಘಟನೆ ಬಗ್ಗೆ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಯಲಹಂಕ ಶಾಸಕ ಎಸ್.ಆರ್ ವಿಶ್ವನಾಥ್, ಕಾಲೇಜಿನ ಸುತ್ತಲೂ ರಸ್ತೆಗಳಿವೆ. ಆದರೆ ವಿದ್ಯಾರ್ಥಿಗಳು ಕಾಲೇಜಿನೊಳಗೆ ಪಾರ್ಕಿಂಗ್ ಮಾಡುವ ಬದಲು ಫುಟ್‍ಪಾತ್ ಮತ್ತು ರಸ್ತೆ ಮೇಲೆ ಪಾರ್ಕಿಂಗ್ ಮಾಡುತ್ತಾರೆ. ಇದರಿಂದ ಸಾರ್ವಜನಿಕರ ಓಡಾಟಕ್ಕೆ ಸಮಸ್ಯೆಯಾಗುತ್ತಿದೆ ಎಂದು ಸ್ಥಳೀಯರು ದೂರು ನೀಡಿದರು. ಈ ಹಿನ್ನೆಲೆಯಲ್ಲಿ ಕಾಲೇಜಿಗೆ ಭೇಟಿ ನೀಡಿ ವಾಹನಗಳನ್ನು ಆವರಣದಲ್ಲಿ ನಿಲ್ಲಿಸಿಕೊಳ್ಳುವಂತೆ ಮನವಿ ಮಾಡಿದ್ದೇನೆ ಎಂದರು.

S.R.Vishwanath

ಅಲ್ಲದೆ ಮೋದಿ ಬಗ್ಗೆ ಆಕ್ಷೇಪಾರ್ಹ ಬರಹ ಮತ್ತು ಚಿತ್ರಗಳನ್ನು ಬರೆದಿದ್ದು, ಅವುಗಳನ್ನು ಅಳಿಸಿ ಹಾಕಲಾಗಿದೆ. ಯಾರು ಆ ಚಿತ್ರಗಳನ್ನು ಬಿಡಿಸಿದ್ದರು ಎನ್ನುವ ಬಗ್ಗೆ ಸಿಸಿಟಿವಿ ದೃಶ್ಯಗಳನ್ನು ತೆಗೆಸಲಾಗುತ್ತೆ. ವಿದ್ಯಾರ್ಥಿಗಳ ಡ್ರೆಸ್ ವಿಚಾರವಾಗಿ ನಾನ್ಯಾಕೆ ಮಾತಾಡಲಿ ಎಂದು ಪ್ರತಿಕ್ರಿಯೆ ನೀಡಿದ್ದಾರೆ. ಈ ಹಿಂದೆ ಸೃಷ್ಟಿ ಕಾಲೇಜಿನ ವಿದ್ಯಾರ್ಥಿಗಳು ಸಿಎಎ ವಿರೋಧಿಸಿ ಪ್ರತಿಭಟಿಸಿದ್ದರು. ಆಗ ಪೊಲೀಸರು ಅಕ್ರಮವಾಗಿ ವಿದ್ಯಾರ್ಥಿಗಳನ್ನು ಬಂಧಿಸಿ ಇಟ್ಟಿದ್ದರು. ಪೊಲೀಸರ ಕ್ರಮದ ಬಗ್ಗೆ ಸೃಷ್ಟಿ ಕಾಲೇಜು ವಿದ್ಯಾರ್ಥಿಗಳು ಹೈಕೋರ್ಟ್ ಮೆಟ್ಟಿಲೇರಿದ್ದರು.

Share This Article
Leave a Comment

Leave a Reply

Your email address will not be published. Required fields are marked *