ಬೆಳಗಾವಿ: ಹವಾಮಾನ ಇಲಾಖೆಯು ಉಡುಪಿ, ಉತ್ತರ ಕನ್ನಡ, ಮಹಾರಾಷ್ಟ್ರದ ಸಿಂಧುದುರ್ಗ, ರತ್ನಗಿರಿ, ಉತ್ತರ ಹಾಗೂ ದಕ್ಷಿಣ ಗೋವಾ ಜಿಲ್ಲೆಗಳಲ್ಲಿ ಹಠಾತ್ ಪ್ರವಾಹ ಮುನ್ಸೂಚನೆ (Flash Flood Forecast) ನೀಡಿದೆ. ಈ ಬಗ್ಗೆ ಬೆಳಗಾವಿ ಜಿಲ್ಲೆಯ ಜನರು ಇಲಾಖೆ ಸೂಚಿಸಿರುವ ಜಿಲ್ಲೆಗಳಿಗೆ ಪ್ರವಾಸಕ್ಕೆ ತೆರಳದಂತೆ ಎಚ್ಚರಿಕೆ ವಹಿಸಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ತಿಳಿಸಿದ್ದಾರೆ.
ಮಳೆ (Rain) ಹೆಚ್ಚಳವಾಗುತ್ತಿರುವುದರಿಂದ ಜನ ಎಚ್ಚರಿಕೆಯಿಂದ ಇರಬೇಕು. ಸಾರ್ವಜನಿಕರು ಬೆಳಗಾವಿ (Belagavi) ಜಿಲ್ಲೆಯ ಖಾನಾಪುರ ತಾಲ್ಲೂಕು ಸೇರಿದಂತೆ ಮೇಲ್ಕಂಡ ಜಿಲ್ಲೆಗಳ ಜಲಪಾತ ವೀಕ್ಷಣೆ ಹಾಗೂ ಚಾರಣ ಕೈಗೊಳ್ಳದಿರುವುದು ಒಳ್ಳೆಯದು. ಮಳೆಯಿಂದಾಗಿ ಪ್ರವಾಸಿ ತಾಣಗಳಲ್ಲಿ ಆಗಬಹುದಾದ ಅವಘಡಗಳನ್ನು ತಡೆಯಲು ಈ ಎಚ್ಚರಿಕೆಯನ್ನು ನೀಡುತ್ತಿರುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ಉತ್ತರದಲ್ಲಿ ಅವಾಂತರದ ಬಳಿಕ ಮುಂಗಾರು ದಕ್ಷಿಣ ಭಾರತಕ್ಕೆ – ಕರ್ನಾಟಕ ಸೇರಿ 3 ರಾಜ್ಯಗಳಲ್ಲಿ ರೆಡ್ ಅಲರ್ಟ್
ಈ ಸಂದರ್ಭಗಳಲ್ಲಿ ಗುಡ್ಡ ಕುಸಿಯುವ ಸಂಭವ ಇರುತ್ತದೆ. ಆದ್ದರಿಂದ ಪ್ರವಾಸಿಗರು ಮತ್ತು ಗುಡ್ಡದ ಮೇಲೆ ವಾಸಿಸುವ ಗ್ರಾಮಸ್ಥರು ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕು. ಹಠಾತ್ ಪ್ರವಾಹದ ಮುನ್ಸೂಚನೆ ಇರುವುದರಿಂದ ಅಧಿಕಾರಿಗಳು ಖಾನಾಪುರ ಸೇರಿದಂತೆ ಗಡಿಭಾಗದ ತಾಲ್ಲೂಕುಗಳಲ್ಲಿ ನಿರಂತರ ನಿಗಾ ವಹಿಸಬೇಕು ಎಂದು ಅವರು ಸೂಚಿಸಿದ್ದಾರೆ. ಇದನ್ನೂ ಓದಿ: ಸರ್ಕಾರ ಮುಸ್ಲಿಂ ಓಲೈಕೆಗೆ ಸಂವಿಧಾನಬಾಹಿರವಾಗಿ ವರ್ತಿಸಿದ್ರೆ ಪರಿಣಾಮ ನೆಟ್ಟಗಿರಲ್ಲ: ಸುನೀಲ್ ಕುಮಾರ್
Web Stories