Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ ಕನಿಷ್ಠ 35 ಸ್ಥಾನ ಗೆಲ್ಲಲಿದೆ: ಸಲೀಂ ಅಹಮದ್ ವಿಶ್ವಾಸ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ ಕನಿಷ್ಠ 35 ಸ್ಥಾನ ಗೆಲ್ಲಲಿದೆ: ಸಲೀಂ ಅಹಮದ್ ವಿಶ್ವಾಸ

Districts

ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ ಕನಿಷ್ಠ 35 ಸ್ಥಾನ ಗೆಲ್ಲಲಿದೆ: ಸಲೀಂ ಅಹಮದ್ ವಿಶ್ವಾಸ

Public TV
Last updated: August 29, 2021 4:51 pm
Public TV
Share
3 Min Read
SALEEM AHMED 3
SHARE

ಕಲಬುರಗಿ: ಕಲಬುರಗಿ ಮಹಾನಗರ ಪಾಲಿಕೆ ಚುನಾಣೆಯ 55 ಸ್ಥಾನಗಳ ಪೈಕಿ ಕನಿಷ್ಠ 35 ಸ್ಥಾನಗಳನ್ನು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸುತ್ತಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹಮದ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

SALEEM AHMED

ಕಲಬುರಗಿ ಮಹಾನಗರ ಚುನಾವಣೆ ಹಿನ್ನೆಲೆ ಡಿಸಿಸಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರಗಳು ಜನರ ಹಿತ ಕಾಪಾಡಲು ವಿಫಲವಾಗಿವೆ. ಸುಮಾರು 2,000 ಕೋಟಿಯಷ್ಟು ರಾಜ್ಯ ಸರ್ಕಾರ ಭ್ರಷ್ಟಾಚಾರ ಎಸಗಿದೆ. ಕೋವಿಡ್ ಎರಡನೇ ಅಲೆಯನ್ನು ಎದುರಿಸಲು ಸರ್ಕಾರ ವಿಫಲವಾಗಿದ್ದು, ಸಾವಿನ ಸಂಖ್ಯೆ ಕಡಿಮೆ ತೋರಿಸುವ ಮೂಲಕ ಜನರಿಗೆ ದಾರಿ ತಪ್ಪಿಸಲು ಪ್ರಯತ್ನಿಸುತ್ತಿದೆ. ಕಾಂಗ್ರೆಸ್ ಪಕ್ಷದ ವತಿಯಿಂದ ಸಾವಿನ ಸಂಖ್ಯೆ ಕುರಿತು ಆಂತರಿಕ ತನಿಖೆ ನಡೆಸುತ್ತಿದೆ. ರಾಜ್ಯ ಸರ್ಕಾರ ಕೋವಿಡ್‍ನಿಂದ ನಿಧನರಾದ ವ್ಯಕ್ತಿಗಳ ಕುಟುಂಬದವರಿಗೆ ತಲಾ ರೂ. 5 ಲಕ್ಷ ಪರಿಹಾರ ನೀಡಬೇಕು ಎಂದು ಇದೇ ಸಂದರ್ಭದಲ್ಲಿ ಒತ್ತಾಯಿಸಿದ್ದಾರೆ.

SALEEM AHMED

ಮೊಟ್ಟೆ ಹಗರಣದಲ್ಲಿಭಾಗಿಯಾಗಿರುವ ಶಶಿಕಲಾ ಜೊಲ್ಲೆ ಪ್ರಮಾಣ ಸ್ವೀಕಾರಕ್ಕೆ ಬರಲು ವಿಮಾನ ನಿಲ್ದಾಣದಿಂದ ರಾಜಭವನದವರೆಗೆ ಬರಲು ಜೀರೋ ಟ್ರಾಫಿಕ್ ಮಾಡಿದ್ದು ನೋಡಿದರೆ ಸರ್ಕಾರದ ನೈತಿಕತೆ ಅರ್ಥವಾಗುತ್ತದೆ ಎಂದು ಟೀಕಿಸಿದ್ದಾರೆ. ಇತ್ತೀಚಿಗೆ ನಾಲ್ವರು ಕೇಂದ್ರ ಸಚಿವರು ಜನಾಶೀರ್ವಾದ ಯಾತ್ರೆ ಕಾರ್ಯಕ್ರಮ ನಡೆಸಿದರು. ಯಾವ ಪುರುಷಾರ್ಥಕ್ಕೆ ಈ ಕಾರ್ಯಕ್ರಮ ನಡೆಸಿದ್ದಾರೆ. ರಾಜ್ಯದಲ್ಲಿ ಕೋವಿಡ್ ನಿಂದ ಅಪಾರ ಜನರು ಸಾವು ನೋವು ಅನುಭವಿಸಿದ್ದಾರೆ. ಜನಸಾಮಾನ್ಯರು ಬೆಲೆ ಏರಿಕೆಯಿಂದ ತತ್ತರಿಸಿದ್ದಾರೆ. ಜನರಿಗೆ ಅಚ್ಚೇದಿನ್ ಭರವಸೆ ನೀಡಿ ಅತ್ಯಂತ ಕೆಟ್ಟ ದಿನಗಳಲ್ಲಿ ನರಳುವಂತೆ ಮಾಡಿದ್ದಕ್ಕೆ, ಸುಮಾರು 13,000 ಕೋಟಿ ಜಿಎಸ್‍ಟಿ ಅನುದಾನ ಬಿಡುಗಡೆ ಮಾಡಿಸಲು ಸಾಧ್ಯವಾಗದ್ದಕ್ಕೆ ಬಿಜೆಪಿ ಮಂತ್ರಿಗಳು ಕ್ಷಮೆ ಕೇಳುವ ಯಾತ್ರೆ ನಡೆಸಬೇಕಿತ್ತು ಎಂದಿದ್ದಾರೆ. ಇದನ್ನೂ ಓದಿ:ಚಾಮುಂಡಿ ದೇವಿಯ ತಪ್ಪಲಿನಲ್ಲಿ ಅತ್ಯಾಚಾರ ಆಗಿರುವುದು ಅಪಮಾನ: ಜಯ ಮೃತ್ಯುಂಜಯ ಸ್ವಾಮೀಜಿ

Shashikala Jolle Haveri Meeting 2 medium

ಯಾದಗಿರಿಯಲ್ಲಿ ಕೇಂದ್ರ ಸಚಿವರ ಸ್ವಾಗತ ಸಮಯದಲ್ಲಿ ಗಾಳಿಯಲ್ಲಿ ಗುಂಡುಹಾರಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಸಲೀಂ ಅಹಮದ್ ಅವರು ಉತ್ತರ ಪ್ರದೇಶ ಹಾಗೂ ಬಿಹಾರದ ಸಂಸ್ಕೃತಿಯನ್ನು ಬಿಜೆಪಿ ರಾಜ್ಯದಲ್ಲಿ ಪರಿಚಯಿಸುತ್ತಿದೆ ಇದು ನಾಚಿಕೆಗೇಡು. ಮಾಜಿ ಸಚಿವರೊಬ್ಬರ ಅಣತಿಯಂತೆ ಆ ಘಟನೆ ನಡೆದಿದ್ದು, ಹೋಂ ಮಿನಿಸ್ಟರ್ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ಸಂಬಂಧಪಟ್ಟವರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಹೇಳಿದ್ದಾರೆ.

saleem ahmad

ಮೈಸೂರಿನಲ್ಲಿ ನಡೆದ ಸಾಮೂಹಿಕ ಅತ್ಯಾಚಾರದ ಘಟನೆಯನ್ನು ತೀವ್ರವಾಗಿ ಖಂಡಿಸಿದ ಕೆಪಿಸಿಸಿ ಕಾರ್ಯಾಧ್ಯಕ್ಷರು ಘಟನೆ ಕುರಿತಂತೆ ಪ್ರತಿಕ್ರಿಯೆ ನೀಡುವಾಗ ಗೃಹ ಸಚಿವರು ಉಢಾಫೆಯಾಗಿ ಉತ್ತರಿಸಿದ್ದಾರೆ. ಇದು ಸರಿಯಾದ ಕ್ರಮವಲ್ಲ ಎಂದು ಅಸಮಧಾನ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ ರಾಜ್ಯದ ಜನರು ರಾಜ್ಯ ಹಾಗೂ ಕೇಂದ್ರ ಸರ್ಕಾರ ಜನವಿರೋಧಿ ನೀತಿಯಿಂದಾಗಿ ರೋಸಿ ಹೋಗಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳನ್ನು ಈ ಚುನಾವಣೆಯಲ್ಲಿ ಆರಿಸಿ ಕಳಿಸುವ ಮೂಲಕ ಮುಂಬರುವ ಸ್ಥಳೀಯ ಸಂಸ್ಥೆ, ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಗೆ ಒಂದು ಹೊಸತನಕ್ಕೆ ನಾಂದಿ ಹಾಡಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲಿದ್ದಾರೆ ಎಂದು ನುಡಿದಿದ್ದಾರೆ. ಇದನ್ನೂ ಓದಿ:ನೋಬಾಲ್ ಎಸೆದು ಕೆಂಗಣ್ಣಿಗೆ ಗುರಿಯಾದ ಟೀಂ ಇಂಡಿಯಾ, ಇಂಗ್ಲೆಂಡ್ ಬೌಲರ್​ಗಳು

MYS RAPE CASE 2

ಕಲಬುರಗಿ ಮಹಾನಗರ ಪಾಲಿಕೆಯ ಚುನಾವಣೆ ಟಿಕೆಟ್ ಹಂಚಿಕೆ ವಿಷಯದಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಗೊಂದಲವಾಗಿದೆ. ಅತೃಪ್ತರೆಲ್ಲ ಬೇರೆ, ಬೇರೆ ಪಕ್ಷ ಸೇರಿದ್ದಾರೆ. ಇದು ಪಕ್ಷಕ್ಕೆ ಹಿನ್ನೆಡೆಯಾಗಲಿದೆಯಾ ಎನ್ನುವ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಪ್ರಿಯಾಂಕ್ ಖರ್ಗೆ ಸ್ಥಳೀಯ ನಾಯಕರ ಅಭಿಪ್ರಾಯ ಪಡೆದು ಗೆಲ್ಲುವ ಅಭ್ಯರ್ಥಿಗಳಿಗೆ ಟಿಕೆಟ್ ಹಂಚಿಕೆ ಮಾಡಲಾಗಿದೆ. ಜೊತೆಗೆ ಯುವಕರಿಗೆ ಹೆಚ್ಚಿನ ಅವಕಾಶ ನೀಡಲಾಗಿದೆ. 55 ಸೀಟುಗಳಲ್ಲಿ 36 ಜನ ಹೊಸಬರಿಗೆ ಅವಕಾಶ ನೀಡಲಾಗಿದೆ. ಟಿಕೆಟ್ ಹಂಚಿಕೆಯಲ್ಲಿ ಸಹಜವಾಗಿ ಎಲ್ಲ ಪಕ್ಷದಲ್ಲಿ ಅಸಮಾಧಾನ ಇದ್ದೇ ಇರುತ್ತದೆ. ಸಾಧ್ಯವಾದಷ್ಟು ಸಮಸ್ಯೆ ಬಗೆಹರಿಸಲಾಗಿದೆ. ಇಷ್ಟಾಗಿಯೂ ಕೆಲವರು ಎಂಐಎಂ ಹಾಗೂ ಜೆಡಿಎಸ್‍ಗೆ ಹೋಗಿದ್ದಾರೆ. ಆದರೂ ಕೂಡಾ ನಮ್ಮ ಪಕ್ಷಕ್ಕೆ ನಷ್ಟವಿಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ.

priyank kharge 1

ಇದೇ ಸಂದರ್ಭದಲ್ಲಿ ಮಧ್ಯೆ ಪ್ರವೇಶಿಸಿ ಮಾತನಾಡಿದ ಶಾಸಕ ಅಜಯ್ ಸಿಂಗ್ ಅವರು ನಮ್ಮ ಪಕ್ಷದಲ್ಲಿ ಟಿಕೆಟ್ ಹಂಚಿಕೆಯಾದ ಸಂದರ್ಭದಲ್ಲಿ ನಮ್ಮ ಅಭ್ಯರ್ಥಿಗಳ ಸಂಖ್ಯೆ ಹೆಚ್ಚಾಗಿದೆ. ಆದರೆ, ಬಿಜೆಪಿಯಲ್ಲಿ ಅಭ್ಯರ್ಥಿಗಳು ಸಿಗದೆ ಕೆಲಸ್ಥಾನಗಳಲ್ಲಿ ಅಭ್ಯರ್ಥಿಗಳನ್ನು ಹಾಕಲು ವಿಫಲವಾಗಿದೆ ಎಂದಿದ್ದಾರೆ. ಇದನ್ನೂ ಓದಿ:ಜನರ ಮರ್ಯಾದೆಯನ್ನೆ ಬಂಡವಾಳ ಮಾಡಿಕೊಂಡಿದ್ದ ಗ್ಯಾಂಗ್ ರೇಪ್ ಕಿರಾತಕರು

SALEEM AHMED 2

ರಾಷ್ಟ್ರೀಯ ಪಕ್ಷ ಎಂದು ಹೇಳುವ ಬಿಜೆಪಿ ತನ್ನ ಬಿ ಟೀಮ್ ಆದ ಎಂಐಎಂಗೆ ಸ್ಥಾನ ಬಿಟ್ಟುಕೊಟ್ಟಿದೆ ಎಂದು ಕುಟುಕಿದ ಸಲೀಂ ಅಹಮದ್, ಇದು ಆ ಪಕ್ಷದ ಚುನಾವಣಾ ನೀತಿಯನ್ನು ತೋರಿಸುತ್ತಿದೆ ಎಂದು ವ್ಯಂಗ್ಯವಾಡಿದ್ದಾರೆ. ಈ ಸಂದರ್ಭದಲ್ಲಿ ಡಿಸಿಸಿ ಅಧ್ಯಕ್ಷರಾದ ಜಗದೇವ ಗುತ್ತೇದಾರ, ಮಾಜಿ ಎಂಎಲ್‍ಸಿ ಅಲ್ಲಮಪ್ರಭು ಪಾಟೀಲ್ ಸೇರಿದಂತೆ ಮತ್ತಿತರಿದ್ದರು.

TAGGED:BJP governmentcongresskalburgiMetropolitan ElectionsPublic TVSaleem Ahmedಕಲಬುರಗಿಕಾಂಗ್ರೆಸ್ಪಬ್ಲಿಕ್ ಟಿವಿಬಿಜೆಪಿ ಸರ್ಕಾರಮಹಾನಗರ ಪಾಲಿಕೆ ಚುನಾವಣೆಸಲೀಂ ಅಹಮದ್
Share This Article
Facebook Whatsapp Whatsapp Telegram

Cinema news

Captains room locked Will Sudeep give Gilli a severe punishment
ಕ್ಯಾಪ್ಟನ್ ರೂಂಗೆ ಬೀಗ; ಗಿಲ್ಲಿಗೆ ಸುದೀಪ್ ನೀಡ್ತಾರಾ ಕಠಿಣ ಶಿಕ್ಷೆ?
Latest Sandalwood South cinema
time fix for the kiccha sudeep mark movie trailer
ಕಿಚ್ಚನ ಮಾರ್ಕ್ ಸಿನಿಮಾ ಟ್ರೈಲರ್‌ಗೆ ಟೈಮ್ ಫಿಕ್ಸ್
Cinema Latest Sandalwood South cinema Top Stories
Shivarajkumar
‌ `ಗುಮ್ಮಡಿ ನರಸಯ್ಯ’ ಬಯೋಪಿಕ್ ಚಿತ್ರಕ್ಕೆ ಮುಹೂರ್ತ
Cinema Latest South cinema Top Stories
Kantara star Rishab Shetty and Hombale Films fulfills the promise Bhoota Kola seeks blessings of Panjurli Daiva 2
ದೈವದ ಅಭಯ: ರಿಷಬ್ ಟೀಮ್‌ನಲ್ಲಿ ಸಂಚಲನ
Dakshina Kannada Latest South cinema Top Stories

You Might Also Like

big bulletin 06 December 2025 part 1
Big Bulletin

ಬಿಗ್‌ ಬುಲೆಟಿನ್‌ 06 December 2025 ಭಾಗ-1

Public TV
By Public TV
6 hours ago
IndiGo CEO Pieter Elbers
Latest

ಇಂಡಿಗೋ ಏರ್‌ಲೈನ್ಸ್‌ಗೆ ಶೋಕಾಸ್‌ ನೋಟಿಸ್‌ ಜಾರಿ; 24 ಗಂಟೆಯಲ್ಲಿ ಉತ್ತರಿಸುವಂತೆ ಸೂಚನೆ

Public TV
By Public TV
6 hours ago
AICC MALLIKARJUN KHARGE SONIA GANDHI RAHUL GANDHI
Latest

ರಾಜ್ಯ ಕಾಂಗ್ರೆಸ್‌ನಲ್ಲಿ ಪವರ್ ಶೇರಿಂಗ್ ಫೈಟ್ – ಕುರ್ಚಿ ಕಲಹಕ್ಕೆ ಸಿಗದ ಹೈಕಮಾಂಡ್ ಮುಲಾಮು

Public TV
By Public TV
7 hours ago
big bulletin 06 December 2025 part 2
Big Bulletin

ಬಿಗ್‌ ಬುಲೆಟಿನ್‌ 06 December 2025 ಭಾಗ-2

Public TV
By Public TV
7 hours ago
big bulletin 06 December 2025 part 3
Big Bulletin

ಬಿಗ್‌ ಬುಲೆಟಿನ್‌ 06 December 2025 ಭಾಗ-3

Public TV
By Public TV
7 hours ago
team india 1
Cricket

3rd ODI: ಜೈಸ್ವಾಲ್‌ ಶತಕ, ರೋ-ಕೊ ಆಕರ್ಷಕ ಫಿಫ್ಟಿ – ಆಫ್ರಿಕಾ ವಿರುದ್ಧ 9 ವಿಕೆಟ್‌ಗಳ ಜಯ; ಸರಣಿ ಭಾರತ ಕೈವಶ

Public TV
By Public TV
7 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?