ಚಾಮರಾಜನಗರ: ಕಿಡಿಗೇಡಿಗಳು ತರಕಾರಿ ಅಂಗಡಿಗಳಿಗೆ ಬೆಂಕಿ ಹಚ್ಚಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬೇಗೂರಿನಲ್ಲಿ ನಡೆದಿದೆ.
ರವಿ ಹಾಗೂ ಮರಿಶೆಟ್ಟಿ ಎಂಬವರಿಗೆ ಸೇರಿದ ಮೂರು ತರಕಾರಿ ಅಂಗಡಿಗಳಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. ರಾತ್ರಿ ಯಾರೋ ಕಿಡಿಗೇಡಿಗಳು ಅಂಗಡಿಗಳಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ. ಇದರಿಂದ ಅಂಗಡಿ ಒಳಗಿದ್ದ ತರಕಾರಿ ಸುಟ್ಟು ಭಸ್ಮವಾಗಿದೆ.
ಈ ಸಂಬಂಧ ಬೇಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.