ವಾಷಿಂಗ್ಟನ್: ಮೈಕ್ರೋಸಾಫ್ಟ್(Microsoft ) ಮುಖ್ಯಸ್ಥ ಮತ್ತು ಸಿಇಒ ಆಗಿರುವ ಸತ್ಯ ನಾಡೆಲ್ಲಾ(Satya Nadella) ಅವರಿಗೆ ಪದ್ಮಭೂಷಣ(Padma Bhushan) ಪ್ರಶಸ್ತಿಯನ್ನು ಪ್ರದಾನ ಮಾಡಲಾಗಿದೆ.
ಅಮೆರಿಕದ ಸ್ಯಾನ್ಫ್ರಾನ್ಸಿಸ್ಕೋದಲ್ಲಿ ಭಾರತದ ಕಾನ್ಸುಲ್ ಜನರಲ್ ಡಾ.ಟಿ.ವಿ ನಾಗೇಂದ್ರ ಪ್ರಸಾದ್ ಪ್ರಶಸ್ತಿಯನ್ನು ಪ್ರದಾನ ಮಾಡಿದ್ದಾರೆ. ಇದನ್ನೂ ಓದಿ: ಮೈಕ್ರೋಸಾಫ್ಟ್ ಉದ್ಯೋಗಿಗಳಿಗೆ ಬಂಪರ್: ಒಂದೇ ಬಾರಿಗೆ ಸಂಬಳ ಡಬಲ್
- Advertisement 2
- Advertisement 3
ಭಾರತದ ಮೂರನೇ ದೊಡ್ಡ ನಾಗರಿಕ ಪ್ರಶಸ್ತಿಯಾದ ಪದ್ಮಭೂಷಣ ಪ್ರಶಸ್ತಿಯನ್ನು ಸ್ವೀಕರಿಸುವುದು ದೊಡ್ಡ ಗೌರವವಾಗಿದೆ. ಹಲವಾರು ಅಸಾಧಾರಣ ವ್ಯಕ್ತಿಗಳೊಂದಿಗೆ ಗುರುತಿಸಿದ್ದಕ್ಕೆ ನಾನು ರಾಷ್ಟ್ರಪತಿ, ಪ್ರಧಾನ ಮಂತ್ರಿ ಮತ್ತು ಭಾರತದ ಜನರಿಗೆ ಕೃತಜ್ಞನಾಗಿದ್ದೇನೆ ಎಂದು ನಾಡೆಲ್ಲಾ ಹೇಳಿದ್ದಾರೆ.
- Advertisement 4
ನಾಡೆಲ್ಲಾ ಜನವರಿ 2023 ರಲ್ಲಿ ಭಾರತಕ್ಕೆ ಭೇಟಿ ನೀಡಲಿದ್ದಾರೆ. ಮೂರು ವರ್ಷಗಳ ನಂತರ ದೇಶಕ್ಕೆ ಅವರು ಮೊದಲ ಭೇಟಿ ನೀಡಲಿದ್ದಾರೆ.