ಬೆಂಗಳೂರು: ಕನಿಷ್ಟ ವೇತನ ಮತ್ತು ಇನ್ನಿತರ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಬಿಸಿಯೂಟ ಕಾರ್ಯಕರ್ತೆಯರು ನಡೆಸುತ್ತಿರುವ ಪ್ರತಿಭಟನೆ 4ನೇ ದಿನಕ್ಕೆ ಕಾಲಿಟ್ಟಿದೆ. ಇದನ್ನೂ ಓದಿ: ಹೆಣ್ಮಕ್ಕಳ ವಿಷಯ ಬಂದ್ರೆ ನಾನು ಜೈಲಿಗೆ ಹೋಗಲು ಸಿದ್ಧ: ಬಿಸಿಯೂಟ ಕಾರ್ಯಕರ್ತೆಯರ ಬೆಂಬಲಕ್ಕೆ ನಿಂತ ಹುಚ್ಚ ವೆಂಕಟ್
- Advertisement 2
ಇಂದು ರಾಜ್ಯ ವಿವಿಧ ಭಾಗಗಳಿಂದ ಮತ್ತಷ್ಟು ಕಾರ್ಯಕರ್ತೆಯರು ಆಗಮಿಸಲಿದ್ದು, ಪ್ರತಿಭಟನೆ ಕಾವು ಮತ್ತಷ್ಟು ಹೆಚ್ಚಲಿದೆ. ಗುರುವಾರ ರಾತ್ರಿ ಶಾಸಕ ಕೋನರೆಡ್ಡಿ ಪ್ರತಿಭಟನಾಕಾರರನ್ನು ಭೇಟಿ ಮಾಡಿದ್ರು. ಪ್ರತಿಭಟನಾಕಾರರು ಸರ್ಕಾರದ ಮುಂದಿಟ್ಟಿರುವ ಬೇಡಿಕೆಗಳ ಕುರಿತು ಖುದ್ದು ಅವರಿಂದಲೇ ಮಾಹಿತಿ ಪಡೆದ್ರು. ಇದನ್ನೂ ಓದಿ: 3ನೇ ದಿನಕ್ಕೆ ಕಾಲಿಟ್ಟ ಬಿಸಿಯೂಟ ಕಾರ್ಯಕರ್ತೆಯರ ಪ್ರತಿಭಟನೆ- ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ನಿರ್ಧಾರ
- Advertisement 3
- Advertisement 4
ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಾಜಿ ಸಿಎಂ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಚರ್ಚಿಸುತ್ತೇನೆ. ಇಂದು ಅಧಿವೇಶದನಲ್ಲಿ ಖುದ್ದು ನಾನೇ ಈ ಕುರಿತು ಪ್ರಸ್ತಾಪ ಮಾಡುತ್ತೇನೆ ಅಂದ್ರು. ಇದನ್ನೂ ಓದಿ: ಸಾವಿರಾರು ಬಿಸಿಯೂಟ ಸಿಬ್ಬಂದಿಗಳಿಂದ ಪ್ರತಿಭಟನೆ- ಸಚಿವ ತನ್ವೀರ್ ಸೇಠ್ ಮನೆ ಮುತ್ತಿಗೆಗೆ ಪೊಲೀಸರ ತಡೆ