Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: RSS ಮುಖಂಡನ ಮನೆ ಮೇಲೆ ಮಧ್ಯರಾತ್ರಿ ದಾಳಿ – ಕಾರಣ ಕೇಳಿ ದ.ಕ. ಎಸ್‌ಪಿಗೆ ಹೈಕೋರ್ಟ್‌ ನೋಟಿಸ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dakshina Kannada | RSS ಮುಖಂಡನ ಮನೆ ಮೇಲೆ ಮಧ್ಯರಾತ್ರಿ ದಾಳಿ – ಕಾರಣ ಕೇಳಿ ದ.ಕ. ಎಸ್‌ಪಿಗೆ ಹೈಕೋರ್ಟ್‌ ನೋಟಿಸ್‌

Dakshina Kannada

RSS ಮುಖಂಡನ ಮನೆ ಮೇಲೆ ಮಧ್ಯರಾತ್ರಿ ದಾಳಿ – ಕಾರಣ ಕೇಳಿ ದ.ಕ. ಎಸ್‌ಪಿಗೆ ಹೈಕೋರ್ಟ್‌ ನೋಟಿಸ್‌

Public TV
Last updated: June 20, 2025 11:41 am
Public TV
Share
2 Min Read
RSS leader UG Radha and Dakshina Kannada SP Arun Kumar
SHARE

– ಪೊಲೀಸರ ಕ್ರಮ ಪ್ರಶ್ನಿಸಿ ಕೋರ್ಟ್‌ ಮೆಟ್ಟಿಲೇರಿದ್ದ ಯು.ಜಿ. ರಾಧಾ
– 20 ಲಕ್ಷ ರೂ. ಮಾನನಷ್ಟ ಪರಿಹಾರ ಕೋರಿ ಅರ್ಜಿ

ಮಂಗಳೂರು: ದಕ್ಷಿಣ ಕನ್ನಡ (Dakshina Kannada) ಜಿಲ್ಲಾ ಎಸ್‌ಪಿಗೆ ಹಿಂದೂ ಮುಖಂಡರ ಮನೆ ಮೇಲಿನ ಮಿಡ್ ನೈಟ್ ದಾಳಿ (Mid Night Raid) ಪ್ರಕರಣ ಬಿಸಿ ತುಪ್ಪವಾಗಿ ಪರಿಣಮಿಸಲು ಆರಂಭವಾಗಿದೆ. ಜಿಲ್ಲೆಯ ಹಿರಿಯ ಅರ್‌ಎಸ್‌ಎಸ್‌ (RSS) ಮುಖಂಡನ ಮನೆ ಮೇಲಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್‌(High Court) ಈಗ ನೋಟಿಸ್‌ ಜಾರಿ ಮಾಡಿದೆ.

ಯು.ಜಿ.ರಾಧಾ ಅವರ ಮನೆ ಮೇಲೆ ದಾಳಿಗೆ ಸಂಬಂಧಿಸಿದಂತೆ ಜಿಲ್ಲಾ ಎಸ್ಪಿ ಡಾ.ಅರುಣ್ ಕುಮಾರ್‌ಗೆ(Arun Kumar) ಕಾರಣ ಕೇಳಿ ನೋಟಿಸ್‌ ಜಾರಿ ಮಾಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸೂಕ್ತ ದಾಖಲೆ ಸಲ್ಲಿಸಬೇಕು. ಅಷ್ಟೇ ಅಲ್ಲದೇ ಕಾನೂನು ಹೊರತಾಗಿ ಅವರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ತಾಕೀತು ಮಾಡಿದೆ.

ಜೂನ್ 1 ರಂದು ಉಪ್ಪಿನಂಗಡಿಯಲ್ಲಿರುವ (Uppinangady) ನನ್ನ ಮನೆಗೆ ಪೊಲೀಸರು ರಾತ್ರಿ ಬಂದಿದ್ದರು. ನನ್ನ ಮೇಲೆ ಯಾವುದೇ ಕ್ರಿಮಿನಲ್‌ ಪ್ರಕರಣ ಇಲ್ಲದೇ ಇದ್ದರೂ ಆರೋಪಿಯ ರೀತಿ ನನ್ನನ್ನು ಪೊಲೀಸರು ನಡೆಸಿಕೊಂಡಿದ್ದಾರೆ. ಇದರಿಂದ ನನ್ನ ಖಾಸಗಿತನ, ಚಾರಿತ್ರ್ಯಕ್ಕೆ ಧಕ್ಕೆಯಾಗಿದೆ. ವ್ಯಕ್ತಿ ಸ್ವಾತಂತ್ರ್ಯದ ಮೂಲಭೂತ ಹಕ್ಕನ್ನು ಪೊಲೀಸರು ವಿನಾ ಕಾರಣ ಕಸಿದಿದ್ದಾರೆ ಎಂದು ಆರೋಪಿಸಿ ಯು.ಜಿ.ರಾಧಾ ಹೈಕೋರ್ಟ್ ಮೊರೆ ಹೋಗಿದ್ದರು. ಇದನ್ನೂ ಓದಿ: ರಾಜಕೀಯ ಮಾತಾಡ್ಬಾರದು ಅಂತ ಯಾವಾಗಿನಿಂದ ಜಾರಿಯಾಗಿದೆ? – ನೋಟಿಸ್‌ಗೆ ಚಕ್ರವರ್ತಿ ಸೂಲಿಬೆಲೆ ಕಿಡಿ

RSS leader UG Radha House Raid

ವಿಚಾರಣೆ ನಡೆಸುವ ಮೂಲಕ ನನಗೆ ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡಲಾಗಿದೆ. ಹೀಗಾಗಿ ನನಗೆ 20 ಲಕ್ಷ ರು. ಮಾನನಷ್ಟ ಪರಿಹಾರ ನೀಡುವಂತೆ ಯು.ಜಿ.ರಾಧಾ ಹೈಕೋರ್ಟ್‌ಗೆ ದೂರು ನೀಡಿದ್ದರು. ದೂರುದಾರರ ಪರವಾಗಿ ನ್ಯಾಯವಾದಿ ಅರುಣ್ ಶ್ಯಾಮ್ ವಾದಿಸಿದ್ದರು. ನ್ಯಾ. ಸುನಿಲ್‌ ದತ್ ಯಾದವ್ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿ ಈಗ ದಕ್ಷಿಣ ಕನ್ನಡ ಪೊಲೀಸರಿಗೆ ನೋಟಿಸ್‌ ಜಾರಿ ಮಾಡಿದೆ.  ಇದನ್ನೂ ಓದಿ: ಹಿಂದೂ ಕಾರ್ಯಕರ್ತರ ಮನೆ ಮೇಲೆ ರೇಡ್‌ – ದ.ಕ. ಪೊಲೀಸರ ವಿರುದ್ಧವೇ ತನಿಖೆಗೆ NHRC ಆದೇಶ

ಯು.ಜಿ.ರಾಧಾ ಅವರು ಈಗಾಗಲೇ ರಾಜ್ಯ ಪೊಲೀಸ್ ದೂರು ಪ್ರಾಧಿಕಾರ ಹಾಗೂ ರಾಷ್ಟ್ರೀಯ ಮಾನವ ಹಕ್ಕು ಆಯೋಗಕ್ಕೆ ಪ್ರತ್ಯೇಕ ದೂರು ನೀಡಿದ್ದಾರೆ. ಹಿಂದೂ ನಾಯಕರ ಮನೆಗಳಿಗೆ ಮಧ್ಯರಾತ್ರಿ ತೆರಳಿ ಫೋಟೋ ತೆಗೆದು ಜಿಪಿಎಸ್ ಅಪ್‌ಲೋಡ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ರಾಷ್ಟ್ರೀಯ ಮಾನವ ಹಕ್ಕು ಆಯೋಗ ಹಾಗೂ ರಾಜ್ಯ ಪೊಲೀಸ್ ದೂರು ಪ್ರಾಧಿಕಾರ ಜಿಲ್ಲಾ ಎಸ್‌ಪಿಗೆ ನೋಟಿಸ್‌ ಜಾರಿ ಮಾಡಿದೆ.

ಶ್ರೀ ರಾಮ ಶಾಲಾ ಸಂಚಾಲಕ, ವೃತ್ತಿಯಲ್ಲಿ ಔಷಾಧಾಲಯದ ಮಾಲಕರಾದ ಯು.ಜಿ. ರಾಧಾ ಅವರಿಗೆ ಯಾವುದೇ ಅಪರಾಧ ಹಿನ್ನೆಲೆ ಇಲ್ಲ. ಇವರ ವಿರುದ್ಧ ಇಲ್ಲಿಯವರೆಗೆ ಯಾವುದೇ ಪೊಲೀಸ್‌ ಪ್ರಕರಣ ದಾಖಲಾಗಿಲ್ಲ. ಆದರೆ ಜೂ.1 ರಂದು ಅವರ ಔಷಧಾಲಯಕ್ಕೆ ಭೇಟಿ ನೀಡಿ ಫೋಟೋ ತೆಗೆದ ಪೊಲೀಸರು, ಜೂನ್‌ 2ರ ತಡ ರಾತ್ರಿ 11.58 ಕ್ಕೆ ಬಂದು 12.07 ನಿಮಿಷಕ್ಕೆ ನಿರ್ಗಮಿಸಿದ್ದರು. 54 ವರ್ಷದ ರಾಧಾ ಅವರನ್ನು ಮಧ್ಯ ರಾತ್ರಿ ನಿದ್ರೆಯಿಂದ ಎಬ್ಬಿಸಿ ಅವರ ಜೊತೆ ಪೊಟೋ ತೆಗೆದಿದ್ದರು. ಇದನ್ನೂ ಓದಿ: ಮಂಗಳೂರು | ಕಾರು ಅಪಘಾತದಲ್ಲಿ `ಕೈ’ ಮುಖಂಡ ಸೇರಿ ಇಬ್ಬರು ದುರ್ಮರಣ

ಯಾವುದೇ ಲಿಖಿತ ಆದೇಶ ಪತ್ರವಿಲ್ಲ. ಫೋಟೋ ಯಾಕೆ ತೆಗೆದಿದ್ದೀರಿ ಎನ್ನುವುದಕ್ಕೆ ಕಾರಣ ನೀಡಿಲ್ಲ. ಪ್ರಶ್ನಿಸಿದರೆ ಪೊಲೀಸರು ಮೇಲಾಧಿಕಾರಿಗಳ ಆದೇಶ ಎಂಬ ಉತ್ತರ ನೀಡಿದ್ದರು ಎಂದು ಯು.ಜಿ. ರಾಧಾ ಹೇಳಿದ್ದರು.

TAGGED:dakshina kannadakarnatakapolicerssಆರ್‍ಎಸ್‍ಎಸ್ಕರ್ನಾಟಕದಕ್ಷಿಣ ಕನ್ನಡಪೊಲೀಸ್ಯುಜಿ ರಾಧಾ
Share This Article
Facebook Whatsapp Whatsapp Telegram

Cinema news

Salman Khan
ಸಲ್ಮಾನ್ ಖಾನ್ ಅಭಿನಯದ `ಬ್ಯಾಟಲ್ ಆಫ್ ಗಲ್ವಾನ್’ ಈಗ `ಮಾತೃಭೂಮಿ’
Bollywood Cinema Latest Top Stories
Oscars 2026 Michael B Jordan Jessie Buckley
Oscars 2026: ಮೈಕೆಲ್ ಬಿ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ
Cinema Latest Top Stories World
Dhurandhar 2 Trailer
ರಿಲೀಸ್‌ಗೂ ಮುನ್ನವೇ 100 ಕೋಟಿ ಬಾಚಿದ ಧುರಂಧರ್‌-2
Bollywood Cinema Latest Top Stories
chandanavana film critics academy awards
ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಪ್ರಶಸ್ತಿ – ಅತಿ ಹೆಚ್ಚು ನಾಮನಿರ್ದೇಶಿತರು ಯಾರು?
Cinema Latest Sandalwood Top Stories

You Might Also Like

kabul hospital pakistan strike
Latest

ಅಫ್ಘಾನ್‌ ಇತಿಹಾಸದಲ್ಲೇ ಅತ್ಯಂತ ಭೀಕರ: ಕಾಬೂಲ್‌ ಆಸ್ಪತ್ರೆ ಮೇಲೆ ಪಾಕಿಸ್ತಾನ ದಾಳಿ – 400 ಜನರು ಸಾವು

Public TV
By Public TV
10 minutes ago
Iran Israel War
Latest

18ನೇ ದಿನಕ್ಕೆ ಕಾಲಿಟ್ಟ ಯುದ್ಧ – ಇರಾನ್‌ನ 200ಕ್ಕೂ ಹೆಚ್ಚು ಸೇನಾ ನೆಲೆಗಳು ಉಡೀಸ್

Public TV
By Public TV
16 minutes ago
ಸ್ವಾಮಿನಾರಾಯಣ ದೇವಸ್ಥಾನ, ಕ್ಯಾಲಿಫೋರ್ನಿಯಾ
Latest

US ಹಿಂದೂ ದೇವಾಲಯಗಳ ಮೇಲಿನ ದಾಳಿ ಬಗ್ಗೆ ಮಾತನಾಡಲ್ಲ – ಅಮೆರಿಕದ ಸರ್ಕಾರದ USCIRF ವರದಿಗೆ ಭಾರತ ಕಿಡಿ

Public TV
By Public TV
9 hours ago
rain
Bidar

ರಾಜ್ಯದ ಹಲವೆಡೆ ವರುಣನ ಅಬ್ಬರ – ಬಿಸಿಲ ಬೇಗೆಗೆ ಬೆಂದಿದ್ದ ಭೂಮಿಗೆ ತಂಪೆರೆದ ಆಲಿಕಲ್ಲು ಮಳೆ

Public TV
By Public TV
9 hours ago
CM Siddaramaiah
Bengaluru City

ಕುರ್ಚಿ ಕದನದ ಮಧ್ಯೆ ಸಚಿವರಿಗೆ ಸಿಎಂ ಡಿನ್ನರ್‌ – ಭಾಗವಹಿಸಿದ 14 ಮಂದಿ ಯಾರು?

Public TV
By Public TV
10 hours ago
Hassan Students
Districts

ಸೆಕೆಂಡ್‌ ಪಿಯು ಪರೀಕ್ಷೆಯಲ್ಲಿ ರಿಪೀಟರ್ಸ್‌ ಪ್ರಶ್ನೆಪತ್ರಿಕೆ ನೀಡಿ ಯಡವಟ್‌- ವಿದ್ಯಾರ್ಥಿಗಳಿಗೆ ಶಾಕ್‌

Public TV
By Public TV
10 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?