Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಶಾಸಕರ ಸಮಸ್ಯೆ ಕೇಳಲು ನನ್ನ ಮನೆ ಬಾಗಿಲು ಸದಾ ತೆರೆದಿದೆ: ಹೆಚ್‌ಡಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಶಾಸಕರ ಸಮಸ್ಯೆ ಕೇಳಲು ನನ್ನ ಮನೆ ಬಾಗಿಲು ಸದಾ ತೆರೆದಿದೆ: ಹೆಚ್‌ಡಿಕೆ

Districts

ಶಾಸಕರ ಸಮಸ್ಯೆ ಕೇಳಲು ನನ್ನ ಮನೆ ಬಾಗಿಲು ಸದಾ ತೆರೆದಿದೆ: ಹೆಚ್‌ಡಿಕೆ

Public TV
Last updated: October 3, 2021 3:31 pm
Public TV
Share
3 Min Read
jds meeting kumaraswamy e1633254420164
SHARE

ಬಿಡದಿ: ಪಕ್ಷದಲ್ಲಿ ಬೆಳೆದು ಬಿಟ್ಟು ಹೊರಹೋಗಿ ತೆಗಳಿದರೆ ಸುಮ್ಮನಿರಲಾಗದು. ಪಕ್ಷದ ಚೌಕಟ್ಟಿನಲ್ಲಿ ಚರ್ಚೆ ಮಾಡಲು ನಾನು ತಯಾರಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು.

ಬಿಡದಿಯ ತೋಟದಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಅವರು, ಕೆಲ ಶಾಸಕರ ಬಹಿರಂಗ ಹೇಳಿಕೆಗಳಿಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿ, ಪಕ್ಷ ತೊರೆಯುವ ಬಗ್ಗೆ ಕೆಲವರು ಅನಗತ್ಯವಾಗಿ ಗೊಂದಲದ ಹೇಳಿಕೆಗಳನ್ನು ಕೊಡುತ್ತಿದ್ದಾರೆ ಎಂದರು.

jds meeting hd devegowda

ಅವರೇ ಸ್ವತಃ ಗೊಂದಲ ಸೃಷ್ಟಿಸಿಕೊಂಡು ಬಹಿರಂಗ ಹೇಳಿಕೆ ಕೊಡುವುದು ಯಾಕೆ? ನಾಲ್ಕು ಗೋಡೆಗಳ ಮಧ್ಯೆ ಕುಳಿತು ಚರ್ಚಿಸಬಹುದಾದ ವಿಚಾರಗಳನ್ನು ಹೊರಗೆ ಹೇಳುವುದು ಸರಿಯಲ್ಲ. ಏನೇ ಸಮಸ್ಯೆ, ಗೊಂದಲ ಇದ್ದರೂ ಬರಲಿ. ಚರ್ಚೆ ಮಾಡಲು ನಾನು ಸಿದ್ಧ ಇದ್ದೇನೆ. ಯಾರೂ ಪಕ್ಷದ ಸಂಘಟನೆಗೆ ಹೊಡೆತ ಬೀಳುವಂತೆ ನಡೆದುಕೊಳ್ಳಬಾರದು ಎಂದು ಅವರು ಹೇಳಿದರು.

ಯಾರೇ ಶಾಸಕರು ಬಂದರು ಮುಕ್ತವಾಗಿ ನಾನು ಯಾವಾಗಲೂ ಮಾತನಾಡುತ್ತೇನೆ. ಅವರ ಸಮಸ್ಯೆಗಳನ್ನು ಬಗೆಹರಿಸಲು ಸಿದ್ಧನಿದ್ದೇನೆ. ನನ್ನ ಮನೆ ಬಾಗಿಲು ಸದಾ ತೆರೆದಿರುತ್ತದೆ. ಆದರೆ, ಮೂರ್ನಾಲ್ಕು ಜನ ಪಕ್ಷ ತೊರೆಯುವ ಮಾತನ್ನಾಡಿದ್ದಾರೆ. ಅವರ ಕ್ಷೇತ್ರಗಳಲ್ಲಿ ಪರ್ಯಾಯ ಅಭ್ಯರ್ಥಿಗಳನ್ನು ಹುಡುಕಿದ್ದೇವೆ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.

jds meeting 4

ಜೆಡಿಎಸ್ ಪುಟಿದೇಳುತ್ತಿದೆ :
ಜೆಡಿಎಸ್ ಕಾರ್ಯಕರ್ತರ ಪಕ್ಷ. ಅದು ದುರ್ಬಲ ಆಗಿಲ್ಲ. ಆಗುವುದೂ ಇಲ್ಲ. ಪಕ್ಷದ ಕಾರ್ಯಗಾರಗಳು ಯಶಸ್ವಿಯಾಗಿ ನಡೆದಿವೆ. ಪಕ್ಷ ತಳಮಟ್ಟದಿಂದ ಪುಟಿದೇಳುತ್ತಿದೆ ಎಂದ ಅವರು, ಕಾಂಗ್ರೆಸ್ ನಿಂದಲೂ ಸಣ್ಣಪುಟ್ಟ ಜಾತಿಗಳ ಕಾರ್ಯಾಗಾರ ಆಯೋಜನೆ ನಡೆದಿದೆ. ಕೆಲವರು ನಮ್ಮ ಪಕ್ಷ ನಿಷ್ಕ್ರಿಯ ಆಗಿಬಿಟ್ಟಿದೆ ಎಂದುಕೊಂಡಿದ್ದಾರೆ. ಈಗ ಜೆಡಿಎಸ್ ಬಗ್ಗೆ ಕಾಂಗ್ರೆಸ್ ನಾಯಕರಿಗೆ ನಡುಕ ಉಂಟಾಗಿರುವಂತಿದೆ.ಅದೇ ಕಾರಣಕ್ಕೆ ನಮ್ಮಂತೆಯೇ ಕಾರ್ಯಾಗಾರ ಆಯೋಜಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಪಕ್ಷಕ್ಕೆ ತಿರುಗೇಟು ಕೊಟ್ಟರು.

ಯಾರನ್ನೂ ಪಕ್ಷ ಬಿಟ್ಟು ಹೋಗಿ ಅಂತ ನಾನು ಹೇಳಿಲ್ಲ. ಆದರೆ, ಪಕ್ಷ ತ್ಯಜಿಸಿ ಹೋದ ಮೇಲೆ ನಾನೇನು ಮಾಡಲು ಆಗುವುದಿಲ್ಲ. ಈ ಹಿಂದೆ‌ ಕೆಲವರು ಪಕ್ಷದ ಶಕ್ತಿ ಬಳಸಿಕೊಂಡು ಕಾರ್ಯಕರ್ತರನ್ನು ನಡು ನೀರಿನಲ್ಲಿ ಬಿಟ್ಟು ಹೋದರು.ಇವರಿಂದಲೇ ಪಕ್ಷದ ಸಂಘಟನೆ ಹಿಂದೆ ಉಳಿಯಿತು ಎಂದು ಅವರು ಬೇಸರಗೊಂಡರು.

jds meeting 5

ನಿನ್ನೆಯೂ ಒಬ್ಬ ಶಾಸಕರು ಹೇಳುತ್ತಿದ್ರು. ನಾನಾಗಿಯೇ ಪಕ್ಷ ಬಿಟ್ಟು ಹೋಗಲ್ಲ, ನಾಯಕರೇ ಗೊಂದಲ ಸೃಷ್ಟಿ ಮಾಡ್ತಿರೋದು ಅಂದಿದ್ದಾರೆ. ನಾವ್ಯಾಕೆ ಗೊಂದಲ ಸೃಷ್ಟಿ ಮಾಡೋಣ. ಒಳಗೊಳಗೇ ಸಂಚು ರೂಪಿಸಿಕೊಂಡು ನನ್ನ ಮೇಲೆ ಗೂಬೆ ಕೂರಿಸುತ್ತಾರೆ. ಅಧಿಕಾರದ ರುಚಿ ಕಂಡು ನಡುನೀರಲ್ಲಿ ಕಾರ್ಯಕರ್ತರನ್ನು ಬಿಟ್ಟು ಹೋಗ್ತಾರೆ. ನಾಯಕರಿಂದ ಪಕ್ಷ ಅಲ್ಲ, ಕಾರ್ಯಕರ್ತರಿಂದ ಪಕ್ಷ. ಕೆಲವರು ಪಕ್ಷಕ್ಕೆ ಕುತ್ತಿಗೆ ಕುಯ್ದು ಬೆನ್ನಿಗೆ ಚೂರಿ ಹಾಕುತ್ತಿದ್ದಾರೆ ಎಂದರು.

ನಮ್ಮಿಂದ ಯಾವುದೇ ಶಾಸಕರಿಗೆ ಅಪಚಾರವಾಗಿಲ್ಲ. ಪಕ್ಷ‌ ಬಿಡೋರು ಮೊದಲು ಆತ್ಮ ವಿಮರ್ಶೆ ಮಾಡಿಕೊಳ್ಳಲಿ. ನಮ್ಮ ಪಕ್ಷದ ಬಾಗಿಲು ಸದಾ ತೆರೆದಿದೆ. ಯಾವಾಗ ಬೇಕಾದ್ರೂ ಚರ್ಚೆಗೆ ಅವಕಾಶ ಇದೆ ಎಂದು ಅವರು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಮಮತಾಗೆ ಭರ್ಜರಿ ಜಯ – 2024ರಲ್ಲಿ ದೆಹಲಿಯಲ್ಲಿ ನಮ್ಮದೇ ಸರ್ಕಾರ ಎಂದ ಟಿಎಂಸಿ

jds meeting 1

ಕಾರ್ಯಾಗಾರ ಯಶಸ್ವಿ :
ನಾಲ್ಕು ದಿನಗಳ ಕಾರ್ಯಾಗಾರ ಯಶಸ್ವಿಯಾಗಿದೆ. ಕಾಂಗ್ರೆಸ್ ನಾಯಕರು ನಮ್ಮ ಪಕ್ಷದ ಬಗ್ಗೆ ಅಪಪ್ರಚಾರ ನಡೆಸಿದ್ದಾರೆ. ಅದಕ್ಕೆ ಉತ್ತರ ನೀಡಿದ್ದೇನೆ. ಈ ಬಗ್ಗೆ ಮುಸ್ಲಿಂ ಕಾರ್ಯಾಗಾರದಲ್ಲಿ ಮಾತನಾಡುತ್ತೇನೆ. ಎಲ್ಲಾ ಸಮಾಜದವರಿಗೂ ಜೆಡಿಎಸ್ ಗೌರವ ನೀಡುತ್ತಿದೆ. ಈ ಸಮಾಜಕ್ಕೆ ನಾವು ಹಲವಾರು ಕೊಡುಗೆ ನೀಡಿದ್ದೇವೆ. ಮುಂದಿನ ಅಭ್ಯರ್ಥಿಗಳಿಗೆ ಕೆಲಸ ಮಾಡಲು ಸೂಚನೆ ನೀಡಲಾಗಿದೆ ಎಂದರು.

ಅಲ್ಪಸಂಖ್ಯಾತರು ಯಾವ ರೀತಿ ಕೆಲಸ ಮಾಡಬೇಕು ಎಂಬುದನ್ನು ತಿಳಿಸಲಾಗುತ್ತದೆ. ವಿಜಯದಶಮಿ ಹಬ್ಬದ ನಂತರ ಜೆಪಿ ಭವನದಲ್ಲಿ ಜಿಲ್ಲಾವಾರು ಸಭೆ ಮಾಡುತ್ತೇವೆ. ಹದಿನಾರರ ನಂತರ ಎರಡನೇ ಹಂತದ ಕಾರ್ಯಾಗಾರ ಆರಂಭ ಮಾಡುತ್ತೇವೆ. ಎಲ್ಲಾ ಸಮುದಾಯಗಳಿಗೂ ಅವಕಾಶ ಕಲ್ಪಿಸಬೇಕು. ಅವರು ಜನರ ಹತ್ತಿರಕ್ಕೆ ಹೋಗಬೇಕು. ಅಂತವರಿಗೆ ಅವಕಾಶ ನೀಡುತ್ತೇವೆ ಎಂದು ಹೆಚ್ ಡಿಕೆ ತಿಳಿಸಿದರು.

TAGGED:electionshd kumaraswamyjdspoliticsಕಾಂಗ್ರೆಸ್ಕುಮಾರಸ್ವಾಮಿಜೆಡಿಎಸ್ಬಿಡದಿಬೆಂಗಳೂರುರಾಜಕೀಯ
Share This Article
Facebook Whatsapp Whatsapp Telegram

Cinema news

Rishab Shetty
ಕೊಲ್ಲೂರು ಮೂಕಾಂಬಿಕಾ ದೇವಿ ದರ್ಶನ ಪಡೆದ ರಿಷಬ್ ದಂಪತಿ
Cinema Districts Karnataka Latest Sandalwood Top Stories
Rachita Ram
ಪ್ರೇಮಿಗಳ ದಿನದಂದೆ I Love You ಅಂತ ರಚ್ಚು ಪ್ರಪೋಸ್‌ – ಹೇಳಿದ್ದು ಯಾರಿಗೆ?
Bengaluru City Cinema Latest Main Post Sandalwood
ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post

You Might Also Like

mattighatt falls
Districts

ಶಿರಸಿಯ ಮತ್ತಿಘಟ್ಟ ಫಾಲ್ಸ್‌ನಲ್ಲಿ ಮುಳುಗಿ ವಿದ್ಯಾರ್ಥಿ ಸಾವು

Public TV
By Public TV
3 hours ago
Hardik Pandya Suryakumar Yadav
Cricket

ʻThis is for Indiaʼ – ಗೆದ್ದ ಬೆನ್ನಲ್ಲೇ ಸೂರ್ಯ ಮೊದಲ ಮಾತು

Public TV
By Public TV
3 hours ago
India Pakistan
Cricket

ಒಂದೇ ದಿನ ಪಾಕ್‌ ವಿರುದ್ಧ ಎರಡು ಪಂದ್ಯ ಗೆದ್ದ ಭಾರತ 

Public TV
By Public TV
3 hours ago
Tilak Varma Suryakumar Yadav
Cricket

ವಿಶ್ವಕಪ್‌ನಲ್ಲಿ ಪಾಕ್‌ ವಿರುದ್ಧ ಭಾರತಕ್ಕೆ 16-1 ಮುನ್ನಡೆ

Public TV
By Public TV
3 hours ago
MB patil
Districts

ಕಲೆ-ಸಂಸ್ಕೃತಿಗೆ ಬಂಜಾರ ಸಮಾಜದ ಕೊಡುಗೆ ಅಪಾರ: ಎಂ.ಬಿ. ಪಾಟೀಲ್

Public TV
By Public TV
4 hours ago
Team India
Cricket

ಪಾಕ್‌ ವಿರುದ್ಧ ದಾಖಲೆಯ ಜಯ, ಇತಿಹಾಸ ನಿರ್ಮಾಣ – ಸೂಪರ್‌ 8ಕ್ಕೆ ಭಾರತ ಎಂಟ್ರಿ

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?