ಚಂಡೀಗಢ: ಗಣಿಗಾರಿಕೆ ವೇಳೆ ಭೂ ಕುಸಿತವಾಗಿದ್ದು, 10 ರಿಂದ 15 ಮಂದಿ ಸಾವನ್ನಪ್ಪಿರುವ ಶಂಕೆ ಹರಿಯಾಣ ರಾಜ್ಯದ ಭಿವಾನಿ ಜಿಲ್ಲೆಯ ದಡಮ್ನಲ್ಲಿ ನಡೆದಿದೆ.
ಇಂದು ಬೆಳಗ್ಗೆ 8.15ರ ಸುಮಾರಿಗೆ ಗಣಿಗಾರಿಕೆ ನಡೆಯುತ್ತಿದ್ದಾಗ ಭೂ ಕುಸಿತವಾಗಿದೆ. ಈ ಘಟನೆಯಲ್ಲಿ ಗಣಿಗಾರಿಕೆಗೆ ಬಳಸುತ್ತಿದ್ದ ವಾಹನಗಳು ಕೂಡ ಕುಸಿತಗೊಂಡಿರುವ ಭೂಮಿಯ ಅವಶೇಷಗಳ ಅಡಿಯಲ್ಲಿ ಹೂತು ಹೋಗಿವೆ ಎಂದು ಹೇಳಲಾಗುತ್ತಿದೆ.
- Advertisement 2
Incident of a landslide in a mining quarry took place in Haryana’s Bhiwani pic.twitter.com/d7d382RxrC
— ANI (@ANI) January 1, 2022
- Advertisement 3
ಘಟನೆ ವೇಳೆ ಸ್ಥಳದಲ್ಲಿ ನಿಂತಿದ್ದ ಸುಮಾರು 6 ಯಂತ್ರಗಳು ಮತ್ತು ಡಂಪರ್ಗಳು ಹೂತುಹೋಗಿವೆ. 15ಕ್ಕೂ ಹೆಚ್ಚು ಮಂದಿ ಮಣ್ಣಿನಡಿ ಸಲುಕಿ ಜೀವಂತ ಸಮಾಧಿಯಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ: ಹೊಸ ವರ್ಷವನ್ನು ಅದ್ದೂರಿಯಾಗಿ ಆಚರಿಸಿದ ದಕ್ಷಿಣ ಭಾರತದ ಸಿನಿ ತಾರೆಯರು
- Advertisement 4
ಮಾಲಿನ್ಯದ ಹಿನ್ನೆಲೆಯಲ್ಲಿ ಹಸಿರು ನ್ಯಾಯಾಲಯ ವಿಧಿಸಿದ್ದ ಎರಡು ತಿಂಗಳ ನಿಷೇಧವನ್ನು ಗುರುವಾರ ಹಿಂತೆಗೆದುಕೊಳ್ಳಲಾಗಿದ್ದು, ಶುಕ್ರವಾರವಷ್ಟೇ ಗಣಿಗಾರಿಕೆ ಪುನರಾರಂಭವಾಗಿತ್ತು. ಈಗಾಗಲೇ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಆರಂಭವಾಗಿದ್ದು, ಮೃತರ ಬಗ್ಗೆ ಸ್ಥಳೀಯ ಅಧಿಕಾರಿಗಳು ಇನ್ನಷ್ಟೇ ಸ್ಪಷ್ಪನೆ ನೀಡಬೇಕಿದೆ. ಇದನ್ನೂ ಓದಿ: 50 ರೂಪಾಯಿ ಕದ್ದ ಮಗನ ಪ್ರಾಣ ತೆಗೆದ ತಂದೆ