ಉತ್ತರಕನ್ನಡ: ಶಿರಸಿ ತಾಲೂಕಿನ ಬನವಾಸಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕೇಂದ್ರ ಕೌಶಲ್ಯಾಭಿವೃದ್ಧಿ ಸಚಿವ ಅನಂತ ಕುಮಾರ್ ಹೆಗಡೆ ಸ್ಥಳೀಯ ಶಾಸಕರ ವಿರುದ್ಧ ಹರಿಹಾಯ್ದಿದ್ದಾರೆ.
ಇಂದು ಅರಣ್ಯ ಇಲಾಖೆ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಅನಂಕ ಕುಮಾರ ಹೆಗಡೆ ಪಾಲ್ಗೊಂಡಿದ್ದರು. ಈ ವೇಳೆ ಗ್ರಾಮದ ಮಹಿಳೆಯೊಬ್ಬರು ಹಲವು ವರ್ಷಗಳಿಂದ ಬನವಾಸಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ವೈದ್ಯರಿಲ್ಲ, ವೈದ್ಯರನ್ನು ನೇಮಕ ಮಾಡಿಕೊಡಿ ಎಂದು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.
ಮಹಿಳೆಗೆ ಉತ್ತರಿಸುತ್ತಾ ನಿಮ್ಮ ಶಾಸಕರೇನಾದ್ರೂ ಸತ್ತು ಹೋದ್ರ? ಎಂದು ಪ್ರಶ್ನಿಸಿ, ಸ್ಥಳೀಯ ಕಾಂಗ್ರೆಸ್ ಶಾಸಕ ಶಿವರಾಮ ಹೆಬ್ಬಾರ್ ಮೇಲಿನ ಕೋಪವನ್ನು ಕಾರ್ಯಕ್ರಮದಲ್ಲೇ ಹೊರಹಾಕಿದ್ದಾರೆ. ಅಲ್ಲದೇ ಇದು ನನ್ನ ವ್ಯಾಪ್ತಿಗೆ ಬರುವುದಿಲ್ಲ. ಇದು ರಾಜ್ಯ ಸರ್ಕಾರಕ್ಕೆ ಬರುತ್ತದೆ ಎಂದು ತಿಳಿಸಿ ಕದಂಬ ಗಿಡ ನೆಟ್ಟು ಕಾರ್ಯಕ್ರಮದಿಂದ ತೆರಳಿದ್ದಾರೆ.