Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸರ್ಕಾರಿ ಆಸ್ಪತ್ರೆ, ಶಾಲೆ, ಸಕಾಲ ಸೇವೆಗಳನ್ನು ಜನರಿಗೆ ತಲುಪಿಸಿ- ಕಾರ್ಯಕರ್ತರಿಗೆ ಅಶ್ವಥ್ ನಾರಾಯಣ್ ಸಲಹೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸರ್ಕಾರಿ ಆಸ್ಪತ್ರೆ, ಶಾಲೆ, ಸಕಾಲ ಸೇವೆಗಳನ್ನು ಜನರಿಗೆ ತಲುಪಿಸಿ- ಕಾರ್ಯಕರ್ತರಿಗೆ ಅಶ್ವಥ್ ನಾರಾಯಣ್ ಸಲಹೆ

Bengaluru City

ಸರ್ಕಾರಿ ಆಸ್ಪತ್ರೆ, ಶಾಲೆ, ಸಕಾಲ ಸೇವೆಗಳನ್ನು ಜನರಿಗೆ ತಲುಪಿಸಿ- ಕಾರ್ಯಕರ್ತರಿಗೆ ಅಶ್ವಥ್ ನಾರಾಯಣ್ ಸಲಹೆ

Public TV
Last updated: September 11, 2021 8:09 pm
Public TV
Share
3 Min Read
Ashwath Narayan 3
SHARE

– ಜನರಿಗೆ ಸಹಾಯ ಹಸ್ತ ಚಾಚುವ ಜೊತೆಗೆ ತಳಮಟ್ಟದಿಂದ ಅಭಿಪ್ರಾಯ ಸಂಗ್ರಹ ಅಗತ್ಯ

ಬೆಂಗಳೂರು: ಸರ್ಕಾರಿ ಆಸ್ಪತ್ರೆಗಳು, ಶಾಲೆಗಳು ಹಾಗೂ ಸಕಾಲದಂತಹ ಸೇವೆಗಳನ್ನು ಜನರಿಗೆ ವೈಯಕ್ತಿಕ ಮಟ್ಟದಲ್ಲಿ ಸಿಗುವಂತೆ ಮಾಡಲು ಬಿಜೆಪಿ ಕಾರ್ಯಕರ್ತರು ಗಮನ ಕೊಡಬೇಕು ಎಂದು ಉನ್ನತ ಶಿಕ್ಷಣ ಹಾಗೂ ಐಟಿ, ಬಿಟಿ ಸಚಿವ ಡಾ.ಸಿ.ಎನ್.ಅಶ್ವಥ್ ನಾರಾಯಣ್ ಸಲಹೆ ನೀಡಿದರು.

ಬಿಜೆಪಿಯಿಂದ ಶನಿವಾರ ನಡೆದ ಬೆಂಗಳೂರು ಉತ್ತರ ಜಿಲ್ಲೆಯ ಸಂಘಟನಾತ್ಮಕ ವಿಶೇಷ ಸಭೆಯಲ್ಲಿ ಮಾತನಾಡಿದ ಅವರು, ಆಡಳಿತವನ್ನು ಜನರಿಗೆ ಪರಿಣಾಮಕಾರಿಯಾಗಿ ತಲುಪಿಸುವ ಮೂಲಕ ಬೆಂಗಳೂರು ನಗರದ ಎಲ್ಲ 28 ವಿಧಾನಸಭಾ ಕ್ಷೇತ್ರಗಳಲ್ಲೂ ಬಿಜೆಪಿ ಅಭ್ಯರ್ಥಿಗಳು ಗೆಲ್ಲುವಂತೆ ಮಾಡಬೇಕು. ಸರ್ಕಾರಿ ಆಸ್ಪತ್ರೆಗಳ ಮತ್ತು ಶಾಲೆಗಳ ಗುಣಮಟ್ಟವನ್ನು ಹೆಚ್ಚಿಸಲು ಸರ್ಕಾರ ಹಲವು ಕ್ರಮಗಳನ್ನು ತೆಗೆದುಕೊಂಡಿದೆ. ಆದರೆ ಈ ಬಗ್ಗೆ ಜನರಿಗೆ ಇನ್ನೂ ಸರಿಯಾದ ಮಾಹಿತಿ ಇಲ್ಲವಾಗಿದೆ. ಈ ಕೊರತೆಯನ್ನು ಹೋಗಲಾಡಿಸುವುದು ಹಾಗೂ ಸೌಲಭ್ಯಗಳನ್ನು ಆದಷ್ಟು ಹೆಚ್ಚು ಜನರಿಗೆ ತಲುಪಿಸುವಲ್ಲಿ ಕಾರ್ಯಕರ್ತರು ತೊಡಗಿಸಿಕೊಳ್ಳಬೇಕು ಎಂದರು. ಇದನ್ನೂ ಓದಿ: ರಾಜ್ಯದಲ್ಲಿಂದು 801 ಹೊಸ ಕೊರೊನಾ ಕೇಸ್- 1,142 ಡಿಸ್ಚಾರ್ಜ್, 15 ಸಾವು

ಜನರಿಗೆ ಸೇವೆಗಳನ್ನು ಸುಲಭವಾಗಿ ತಲುಪಿಸಲು ಡಿ.ವಿ.ಸದಾನಂದಗೌಡರು ತಮ್ಮ ಆಡಳಿತಾವಧಿಯಲ್ಲಿ ಸಕಾಲ ಸೇವೆಯನ್ನು ಪರಿಚಯಿಸಿದರು. ಆದರೆ ಇದನ್ನು ಬಳಸಿಕೊಳ್ಳುತ್ತಿರುವವರ ಸಂಖ್ಯೆ ಕಡಿಮೆ ಇದೆ. ಇಂದು ತಂತ್ರಜ್ಞಾನದಿಂದಾಗಿ ಜನರ ಬೆರಳ ತುದಿಗೆ ಆಡಳಿತದ ಸೇವೆಗಳನ್ನು ತಲುಪಿಸಬಹುದಾಗಿದೆ. ಇದಕ್ಕೆ ಪೂರಕವಾಗಿ ಕಾರ್ಯಕರ್ತರು ಜನರೊಂದಿಗೆ ಸಂಪರ್ಕದಲ್ಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮಗಳ ಪ್ರಯೋಜನ ಪಡೆಯುವಂತೆ ಮಾಡಬೇಕು ಎಂದು ತಿಳಿಸಿದರು.

ಜನರು ಖಾತೆ ಮಾಡಿಸುವುದು ಸೇರಿದಂತೆ ಇತರೆ ಸರ್ಕಾರಿ ಕೆಲಸಗಳಿಗೆ ಬ್ರೋಕರ್ ಗಳನ್ನು ಅವಲಂಬಿಸಬೇಕಾದ ಪರಿಸ್ಥಿತಿ ಇಲ್ಲದಂತೆ ಮಾಡಬೇಕು. ಕಾರ್ಯಕರ್ತರು ನಾಯಕರ ಹಿಂದೆ ಓಡಾಡುವುದನ್ನು ಬಿಟ್ಟು ಜನರ ಮಧ್ಯೆ ಇದ್ದು ಕೆಲಸ ಮಾಡಬೇಕು. ಎಲ್ಲಿ ಅಗತ್ಯವೋ ಅಂತಹ ಕಡೆಗಳಲ್ಲಿ ಇದ್ದು ಕೆಲಸಗಳನ್ನು ಮಾಡಬೇಕು ಎಂದರು. ಇದನ್ನೂ ಓದಿ: ರೈತರು, ನೆರೆ ಸಂತ್ರಸ್ತರಿಗೆ ಪರಿಹಾರಕ್ಕೆ ಅಧಿವೇಶನದಲ್ಲಿ ಒತ್ತಾಯ: ಸತೀಶ್ ಜಾರಕಿಹೊಳಿ

ನಗರ ಪ್ರದೇಶಗಳಲ್ಲಿ ಹೆಚ್ಚಿನ ಜನ ಪಡಿತರ ಕಾರ್ಡ್ ನಿಂದ ವಂಚಿತರಾಗಿದ್ದು, ಕಾರ್ಯಕರ್ತರು ಅರ್ಹರಿಗೆ ಕಾರ್ಡ್ ಸಿಗುವಂತೆ ಮುತುವರ್ಜಿ ವಹಿಸಬೇಕು. ಅರ್ಹ ವಸತಿ ರಹಿತರು ಮುಖ್ಯಮಂತ್ರಿಗಳ ಗೃಹ ವಸತಿ ಯೋಜನೆಯಡಿ ಹೆಚ್ಚಿನ ಸಂಖ್ಯೆಯಲ್ಲಿ ಅರ್ಜಿಗಳನ್ನು ಹಾಕುವಂತೆ ಮಾಡಬೇಕು ಎಂದು ಸಲಹೆ ನೀಡಿದರು.

ಕೊರೊನಾ ತಡೆಗಟ್ಟಲು ಸರ್ಕಾರ ಉಚಿತವಾಗಿ ನೀಡುತ್ತಿರುವ ಲಸಿಕೆಯನ್ನು ಹೆಚ್ಚಿನ ಸಂಖ್ಯೆಯಲ್ಲಿ ಜನರಿಗೆ ತಲುಪಿಸುವುದರ ಬಗ್ಗೆಯೂ ಕಾರ್ಯಕರ್ತರು ಒತ್ತು ಕೊಡಬೇಕು. ಅಲ್ಲದೆ ಸರ್ಕಾರದ ಕಾರ್ಯನಿರ್ವಹಣೆ ಬಗ್ಗೆ ವ್ಯವಸ್ಥಿತ ರೀತಿಯಲ್ಲಿ ಅಭಿಪ್ರಾಯ ಸಂಗ್ರಹದ ಕೆಲಸ ಆಗಬೇಕು. ನಾಯಕರ ಕಿವಿಯಲ್ಲಿ ಏನೋ ಹೇಳಿಬಿಟ್ಟರೆ ಅದು ಅಭಿಪ್ರಾಯ ತಿಳಿಸಿದಂತೆ ಆಗುವುದಿಲ್ಲ. ಬೂತ್ ಮಟ್ಟದಿಂದ ಶುರುವಾಗುವ ಅಭಿಪ್ರಾಯ ಸಂಗ್ರಹವನ್ನು ಆಡಳಿತ ನಡೆಸುವವರಿಗೆ ತಲುಪಿಸಲು ಕ್ರಮಬದ್ಧ ವ್ಯವಸ್ಥೆಯನ್ನು ಅನುಸರಿಸಬೇಕು ಎಂದು ಅಶ್ವಥ್ ನಾರಾಯಣ ತಿಳಿಸಿದರು.

ಜನರ ನಂಬಿಕೆಯೇ ಪಕ್ಷದ ಜೀವಾಳ. ಹಣ ಬಲವೊಂದೇ ನಾಯಕತ್ವದ ಮಾನದಂಡ ಆಗಲಾರದು. ಹೊಟ್ಟೆಪಾಡಿಗಾಗಿ ರಾಜಕೀಯ ಮಾಡುವ ಪರಿಸ್ಥಿತಿ ಬರಬಾರದು. ಬದಲಿಗೆ ಉತ್ತಮ ನಾಯಕತ್ವ ಕೊಡುವುದಕ್ಕಾಗಿ ರಾಜಕೀಯ ಕ್ಷೇತ್ರವು ವೇದಿಕೆಯಾಗಬೇಕು. ಈ ಬಗ್ಗೆ ರಾಜಕೀಯ ಮುಖಂಡರಲ್ಲಿ ಮತ್ತು ಕಾರ್ಯಕರ್ತರಲ್ಲಿ ಸ್ಪಷ್ಟತೆ ಇರಬೇಕು ಎಂದರು.

ಬೆಂಗಳೂರು ಉತ್ತರ ಸಂಸದ ಡಿ.ವಿ.ಸದಾನಂದಗೌಡ, ಸಹಕಾರಿ ಸಚಿವ ಎಸ್.ಟಿ.ಸೋಮಶೇಖರ್, ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್, ಅಬಕಾರಿ ಸಚಿವ ಗೋಪಾಲಯ್ಯ, ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್, ಗೋಪಿನಾಥ್ ರೆಡ್ಡಿ, ರಾಜಣ್ಣ, ಮಹಿಳಾ ಮೋರ್ಚಾದ ಅಧ್ಯಕ್ಷೆ ಗೀತಾ ವಿವೇಕಾನಂದ್, ಕಟ್ಟಾ ಸುಬ್ರಹ್ಮಣ್ಯ ನಾಯ್ಡು, ವಿಧಾನ ಪರಿಷತ್ ಸದಸ್ಯ ನಾರಾಯಣ ಸ್ವಾಮಿ, ಮಾಜಿ ಶಾಸಕ ಮುನಿರಾಜು, ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷ ನೆ.ಲ.ನರೇಂದ್ರ ಬಾಬು ಹಾಗೂ ಮತ್ತಿತರರು ಇದ್ದರು.

TAGGED:Ashwath NarayanbengalurubjpPublic TVworkersಅಶ್ವಥ್ ನಾರಾಯಣ್ಕಾರ್ಯಕರ್ತರುಪಬ್ಲಿಕ್ ಟಿವಿಬಿಜೆಪಿಬೆಂಗಳೂರು
Share This Article
Facebook Whatsapp Whatsapp Telegram

Cinema news

Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories

You Might Also Like

fighter jet was destroyed
Latest

24 ಗಂಟೆಗಳಲ್ಲಿ ಅಮೆರಿಕದ ಎರಡು F-35 ಜೆಟ್‌ಗಳನ್ನು ಹೊಡೆದುರುಳಿಸಿದ್ದೇವೆ: ಇರಾನ್‌

Public TV
By Public TV
5 minutes ago
malda hostage shocker mastermind arrested he points to sir protest
Crime

ಪಶ್ಚಿಮ ಬಂಗಾಳ | ನ್ಯಾಯಾಧೀಶರನ್ನು ಒತ್ತೆಯಾಳಾಗಿರಿಸಿಕೊಂಡು ಪ್ರತಿಭಟನೆ – ಮಾಸ್ಟರ್‌ ಮೈಂಡ್‌ ಅಂದರ್‌

Public TV
By Public TV
13 minutes ago
Sheikh Jaber Al Ahmad Al Sabah Sea Bridge in Kuwait
Latest

ಶೀಘ್ರವೇ ಸೌದಿ, ಯುಎಇ ಸೇರಿ 5 ದೇಶಗಳ 8 ದೊಡ್ಡ ಸೇತುವೆಗಳ ಮೇಲೆ ದಾಳಿ – ಇರಾನ್‌ನಿಂದ ಹಿಟ್‌ ಲಿಸ್ಟ್‌ ರಿಲೀಸ್‌

Public TV
By Public TV
33 minutes ago
POCSO Special Court
Bengaluru City

POCSO Act – ಖಾಸಗಿ ಆಸ್ಪತ್ರೆಗಳಿಗೆ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ರಿಲೀಸ್

Public TV
By Public TV
1 hour ago
Chikkaballapura APMC 2
Chikkaballapur

ಟೊಮೆಟೊ ಕೆಜಿ 10 ರೂ., ಕ್ಯಾರೆಟ್‌ 8 ರೂ. – ಚಿಕ್ಕಬಳ್ಳಾಪುರ ಮಾರುಕಟ್ಟೆಯಲ್ಲಿ ತರಕಾರಿಗಳ ಬೆಲೆ ಭಾರೀ ಇಳಿಕೆ

Public TV
By Public TV
1 hour ago
Abhishek Sharma
Cricket

IPL 2026 | ಅಂಪೈರ್‌ ಜೊತೆಗೆ ಕಿತ್ತಾಡಿದ ಅಭಿಷೇಕ್‌ ಶರ್ಮಾಗೆ ಭಾರೀ ದಂಡ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?