Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸರ್ಕಾರಿ ಆಸ್ಪತ್ರೆ, ಶಾಲೆ, ಸಕಾಲ ಸೇವೆಗಳನ್ನು ಜನರಿಗೆ ತಲುಪಿಸಿ- ಕಾರ್ಯಕರ್ತರಿಗೆ ಅಶ್ವಥ್ ನಾರಾಯಣ್ ಸಲಹೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸರ್ಕಾರಿ ಆಸ್ಪತ್ರೆ, ಶಾಲೆ, ಸಕಾಲ ಸೇವೆಗಳನ್ನು ಜನರಿಗೆ ತಲುಪಿಸಿ- ಕಾರ್ಯಕರ್ತರಿಗೆ ಅಶ್ವಥ್ ನಾರಾಯಣ್ ಸಲಹೆ

Bengaluru City

ಸರ್ಕಾರಿ ಆಸ್ಪತ್ರೆ, ಶಾಲೆ, ಸಕಾಲ ಸೇವೆಗಳನ್ನು ಜನರಿಗೆ ತಲುಪಿಸಿ- ಕಾರ್ಯಕರ್ತರಿಗೆ ಅಶ್ವಥ್ ನಾರಾಯಣ್ ಸಲಹೆ

Public TV
Last updated: September 11, 2021 8:09 pm
Public TV
Share
3 Min Read
Ashwath Narayan 3
SHARE

– ಜನರಿಗೆ ಸಹಾಯ ಹಸ್ತ ಚಾಚುವ ಜೊತೆಗೆ ತಳಮಟ್ಟದಿಂದ ಅಭಿಪ್ರಾಯ ಸಂಗ್ರಹ ಅಗತ್ಯ

ಬೆಂಗಳೂರು: ಸರ್ಕಾರಿ ಆಸ್ಪತ್ರೆಗಳು, ಶಾಲೆಗಳು ಹಾಗೂ ಸಕಾಲದಂತಹ ಸೇವೆಗಳನ್ನು ಜನರಿಗೆ ವೈಯಕ್ತಿಕ ಮಟ್ಟದಲ್ಲಿ ಸಿಗುವಂತೆ ಮಾಡಲು ಬಿಜೆಪಿ ಕಾರ್ಯಕರ್ತರು ಗಮನ ಕೊಡಬೇಕು ಎಂದು ಉನ್ನತ ಶಿಕ್ಷಣ ಹಾಗೂ ಐಟಿ, ಬಿಟಿ ಸಚಿವ ಡಾ.ಸಿ.ಎನ್.ಅಶ್ವಥ್ ನಾರಾಯಣ್ ಸಲಹೆ ನೀಡಿದರು.

ಬಿಜೆಪಿಯಿಂದ ಶನಿವಾರ ನಡೆದ ಬೆಂಗಳೂರು ಉತ್ತರ ಜಿಲ್ಲೆಯ ಸಂಘಟನಾತ್ಮಕ ವಿಶೇಷ ಸಭೆಯಲ್ಲಿ ಮಾತನಾಡಿದ ಅವರು, ಆಡಳಿತವನ್ನು ಜನರಿಗೆ ಪರಿಣಾಮಕಾರಿಯಾಗಿ ತಲುಪಿಸುವ ಮೂಲಕ ಬೆಂಗಳೂರು ನಗರದ ಎಲ್ಲ 28 ವಿಧಾನಸಭಾ ಕ್ಷೇತ್ರಗಳಲ್ಲೂ ಬಿಜೆಪಿ ಅಭ್ಯರ್ಥಿಗಳು ಗೆಲ್ಲುವಂತೆ ಮಾಡಬೇಕು. ಸರ್ಕಾರಿ ಆಸ್ಪತ್ರೆಗಳ ಮತ್ತು ಶಾಲೆಗಳ ಗುಣಮಟ್ಟವನ್ನು ಹೆಚ್ಚಿಸಲು ಸರ್ಕಾರ ಹಲವು ಕ್ರಮಗಳನ್ನು ತೆಗೆದುಕೊಂಡಿದೆ. ಆದರೆ ಈ ಬಗ್ಗೆ ಜನರಿಗೆ ಇನ್ನೂ ಸರಿಯಾದ ಮಾಹಿತಿ ಇಲ್ಲವಾಗಿದೆ. ಈ ಕೊರತೆಯನ್ನು ಹೋಗಲಾಡಿಸುವುದು ಹಾಗೂ ಸೌಲಭ್ಯಗಳನ್ನು ಆದಷ್ಟು ಹೆಚ್ಚು ಜನರಿಗೆ ತಲುಪಿಸುವಲ್ಲಿ ಕಾರ್ಯಕರ್ತರು ತೊಡಗಿಸಿಕೊಳ್ಳಬೇಕು ಎಂದರು. ಇದನ್ನೂ ಓದಿ: ರಾಜ್ಯದಲ್ಲಿಂದು 801 ಹೊಸ ಕೊರೊನಾ ಕೇಸ್- 1,142 ಡಿಸ್ಚಾರ್ಜ್, 15 ಸಾವು

ಜನರಿಗೆ ಸೇವೆಗಳನ್ನು ಸುಲಭವಾಗಿ ತಲುಪಿಸಲು ಡಿ.ವಿ.ಸದಾನಂದಗೌಡರು ತಮ್ಮ ಆಡಳಿತಾವಧಿಯಲ್ಲಿ ಸಕಾಲ ಸೇವೆಯನ್ನು ಪರಿಚಯಿಸಿದರು. ಆದರೆ ಇದನ್ನು ಬಳಸಿಕೊಳ್ಳುತ್ತಿರುವವರ ಸಂಖ್ಯೆ ಕಡಿಮೆ ಇದೆ. ಇಂದು ತಂತ್ರಜ್ಞಾನದಿಂದಾಗಿ ಜನರ ಬೆರಳ ತುದಿಗೆ ಆಡಳಿತದ ಸೇವೆಗಳನ್ನು ತಲುಪಿಸಬಹುದಾಗಿದೆ. ಇದಕ್ಕೆ ಪೂರಕವಾಗಿ ಕಾರ್ಯಕರ್ತರು ಜನರೊಂದಿಗೆ ಸಂಪರ್ಕದಲ್ಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮಗಳ ಪ್ರಯೋಜನ ಪಡೆಯುವಂತೆ ಮಾಡಬೇಕು ಎಂದು ತಿಳಿಸಿದರು.

ಜನರು ಖಾತೆ ಮಾಡಿಸುವುದು ಸೇರಿದಂತೆ ಇತರೆ ಸರ್ಕಾರಿ ಕೆಲಸಗಳಿಗೆ ಬ್ರೋಕರ್ ಗಳನ್ನು ಅವಲಂಬಿಸಬೇಕಾದ ಪರಿಸ್ಥಿತಿ ಇಲ್ಲದಂತೆ ಮಾಡಬೇಕು. ಕಾರ್ಯಕರ್ತರು ನಾಯಕರ ಹಿಂದೆ ಓಡಾಡುವುದನ್ನು ಬಿಟ್ಟು ಜನರ ಮಧ್ಯೆ ಇದ್ದು ಕೆಲಸ ಮಾಡಬೇಕು. ಎಲ್ಲಿ ಅಗತ್ಯವೋ ಅಂತಹ ಕಡೆಗಳಲ್ಲಿ ಇದ್ದು ಕೆಲಸಗಳನ್ನು ಮಾಡಬೇಕು ಎಂದರು. ಇದನ್ನೂ ಓದಿ: ರೈತರು, ನೆರೆ ಸಂತ್ರಸ್ತರಿಗೆ ಪರಿಹಾರಕ್ಕೆ ಅಧಿವೇಶನದಲ್ಲಿ ಒತ್ತಾಯ: ಸತೀಶ್ ಜಾರಕಿಹೊಳಿ

ನಗರ ಪ್ರದೇಶಗಳಲ್ಲಿ ಹೆಚ್ಚಿನ ಜನ ಪಡಿತರ ಕಾರ್ಡ್ ನಿಂದ ವಂಚಿತರಾಗಿದ್ದು, ಕಾರ್ಯಕರ್ತರು ಅರ್ಹರಿಗೆ ಕಾರ್ಡ್ ಸಿಗುವಂತೆ ಮುತುವರ್ಜಿ ವಹಿಸಬೇಕು. ಅರ್ಹ ವಸತಿ ರಹಿತರು ಮುಖ್ಯಮಂತ್ರಿಗಳ ಗೃಹ ವಸತಿ ಯೋಜನೆಯಡಿ ಹೆಚ್ಚಿನ ಸಂಖ್ಯೆಯಲ್ಲಿ ಅರ್ಜಿಗಳನ್ನು ಹಾಕುವಂತೆ ಮಾಡಬೇಕು ಎಂದು ಸಲಹೆ ನೀಡಿದರು.

ಕೊರೊನಾ ತಡೆಗಟ್ಟಲು ಸರ್ಕಾರ ಉಚಿತವಾಗಿ ನೀಡುತ್ತಿರುವ ಲಸಿಕೆಯನ್ನು ಹೆಚ್ಚಿನ ಸಂಖ್ಯೆಯಲ್ಲಿ ಜನರಿಗೆ ತಲುಪಿಸುವುದರ ಬಗ್ಗೆಯೂ ಕಾರ್ಯಕರ್ತರು ಒತ್ತು ಕೊಡಬೇಕು. ಅಲ್ಲದೆ ಸರ್ಕಾರದ ಕಾರ್ಯನಿರ್ವಹಣೆ ಬಗ್ಗೆ ವ್ಯವಸ್ಥಿತ ರೀತಿಯಲ್ಲಿ ಅಭಿಪ್ರಾಯ ಸಂಗ್ರಹದ ಕೆಲಸ ಆಗಬೇಕು. ನಾಯಕರ ಕಿವಿಯಲ್ಲಿ ಏನೋ ಹೇಳಿಬಿಟ್ಟರೆ ಅದು ಅಭಿಪ್ರಾಯ ತಿಳಿಸಿದಂತೆ ಆಗುವುದಿಲ್ಲ. ಬೂತ್ ಮಟ್ಟದಿಂದ ಶುರುವಾಗುವ ಅಭಿಪ್ರಾಯ ಸಂಗ್ರಹವನ್ನು ಆಡಳಿತ ನಡೆಸುವವರಿಗೆ ತಲುಪಿಸಲು ಕ್ರಮಬದ್ಧ ವ್ಯವಸ್ಥೆಯನ್ನು ಅನುಸರಿಸಬೇಕು ಎಂದು ಅಶ್ವಥ್ ನಾರಾಯಣ ತಿಳಿಸಿದರು.

ಜನರ ನಂಬಿಕೆಯೇ ಪಕ್ಷದ ಜೀವಾಳ. ಹಣ ಬಲವೊಂದೇ ನಾಯಕತ್ವದ ಮಾನದಂಡ ಆಗಲಾರದು. ಹೊಟ್ಟೆಪಾಡಿಗಾಗಿ ರಾಜಕೀಯ ಮಾಡುವ ಪರಿಸ್ಥಿತಿ ಬರಬಾರದು. ಬದಲಿಗೆ ಉತ್ತಮ ನಾಯಕತ್ವ ಕೊಡುವುದಕ್ಕಾಗಿ ರಾಜಕೀಯ ಕ್ಷೇತ್ರವು ವೇದಿಕೆಯಾಗಬೇಕು. ಈ ಬಗ್ಗೆ ರಾಜಕೀಯ ಮುಖಂಡರಲ್ಲಿ ಮತ್ತು ಕಾರ್ಯಕರ್ತರಲ್ಲಿ ಸ್ಪಷ್ಟತೆ ಇರಬೇಕು ಎಂದರು.

ಬೆಂಗಳೂರು ಉತ್ತರ ಸಂಸದ ಡಿ.ವಿ.ಸದಾನಂದಗೌಡ, ಸಹಕಾರಿ ಸಚಿವ ಎಸ್.ಟಿ.ಸೋಮಶೇಖರ್, ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್, ಅಬಕಾರಿ ಸಚಿವ ಗೋಪಾಲಯ್ಯ, ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್, ಗೋಪಿನಾಥ್ ರೆಡ್ಡಿ, ರಾಜಣ್ಣ, ಮಹಿಳಾ ಮೋರ್ಚಾದ ಅಧ್ಯಕ್ಷೆ ಗೀತಾ ವಿವೇಕಾನಂದ್, ಕಟ್ಟಾ ಸುಬ್ರಹ್ಮಣ್ಯ ನಾಯ್ಡು, ವಿಧಾನ ಪರಿಷತ್ ಸದಸ್ಯ ನಾರಾಯಣ ಸ್ವಾಮಿ, ಮಾಜಿ ಶಾಸಕ ಮುನಿರಾಜು, ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷ ನೆ.ಲ.ನರೇಂದ್ರ ಬಾಬು ಹಾಗೂ ಮತ್ತಿತರರು ಇದ್ದರು.

TAGGED:Ashwath NarayanbengalurubjpPublic TVworkersಅಶ್ವಥ್ ನಾರಾಯಣ್ಕಾರ್ಯಕರ್ತರುಪಬ್ಲಿಕ್ ಟಿವಿಬಿಜೆಪಿಬೆಂಗಳೂರು
Share This Article
Facebook Whatsapp Whatsapp Telegram

Cinema news

Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories
Bhushan Kumar Vivek Agnihotri 2
ಸೆಟ್ಟೇರುತ್ತಿದೆ ʻಆಪರೇಷನ್‌ ಸಿಂಧೂರʼ ಸಿನಿಮಾ – ಭೂಷಣ್ ಕುಮಾರ್, ವಿವೇಕ್ ಅಗ್ನಿಹೋತ್ರಿ ಅಧಿಕೃತ ಘೋಷಣೆ
Bollywood Cinema Latest Main Post National
Zubeen Garg
ಮದ್ಯಪಾನ ಮಾಡಿ ಈಜಲು ತೆರಳಿದ್ದೇ ಗಾಯಕ ಜುಬೀನ್ ಗಾರ್ಗ್ ಸಾವಿಗೆ ಕಾರಣ: ಸಿಂಗಾಪುರ ಕೋರ್ಟ್‌
Bollywood Cinema Court Latest National Top Stories World

You Might Also Like

Ayodhya Ram
Latest

ರಾಮನವಮಿ | ಅಯೋಧ್ಯೆ ಬಾಲರಾಮನ ಹಣೆಯ ಮೇಲೆ ಮೂಡಿದ ʻಸೂರ್ಯ ತಿಲಕʼ

Public TV
By Public TV
10 minutes ago
ಸಾಂದರ್ಭಿಕ ಚಿತ್ರ
Chikkaballapur

ಗ್ಯಾಸ್ ಅಭಾವದ ಮಧ್ಯೆ ಚಿಕ್ಕಬಳ್ಳಾಪುರದಲ್ಲಿ 247 ಸಿಲಿಂಡರ್ ಜಪ್ತಿ

Public TV
By Public TV
15 minutes ago
Iran Israel
Latest

`ಆಪರೇಷನ್ ಟ್ರೂ ಪ್ರಾಮಿಸ್-4′ – ಕದನ ವಿರಾಮ ಮಾತುಕತೆ ನಡುವೆ ಹೊಸ ದಾಳಿ ಆರಂಭಿಸಿದ ಇರಾನ್

Public TV
By Public TV
36 minutes ago
Eshwar Khandre
Bengaluru City

ಜಾರಕಬಂಡೆ ಕಾವಲ್‌ನಲ್ಲಿ ವಾಯುಪಡೆ ವಶದಲ್ಲಿರುವ 444 ಎಕರೆ ಅರಣ್ಯ ಭೂಮಿ – ಮರುವಶಕ್ಕೆ 64ಎ ಪ್ರಕ್ರಿಯೆ: ಖಂಡ್ರೆ ಸೂಚನೆ

Public TV
By Public TV
58 minutes ago
US Israel Joint Strike
Latest

ಇಸ್ರೇಲ್‌ – ಅಮೆರಿಕ vs ಇರಾನ್‌ ದಾಳಿ – ಪ್ರತಿದಾಳಿ; ಒಟ್ಟು 19 ಮಂದಿ ಬಲಿ

Public TV
By Public TV
1 hour ago
DK Shivakumar
Bengaluru City

ತೈಲ ಬೆಲೆ ಏರಿಸುತ್ತಿದೆ, ಕೇಂದ್ರ ಸರ್ಕಾರ ನಮ್ಮನ್ನ ಕೊಲೆ ಮಾಡ್ತಿದೆ: ಡಿಕೆಶಿ ಕಳವಳ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?